Homeಮುಖಪುಟನೋಂದಣಿಯಾಗದ ಮದರಸಾಗಳಿಗೆ ದಿನಕ್ಕೆ ₹10,000 ದಂಡ ವಿಧಿಸಿದ ಆದಿತ್ಯನಾಥ್ ಸರ್ಕಾರ

ನೋಂದಣಿಯಾಗದ ಮದರಸಾಗಳಿಗೆ ದಿನಕ್ಕೆ ₹10,000 ದಂಡ ವಿಧಿಸಿದ ಆದಿತ್ಯನಾಥ್ ಸರ್ಕಾರ

- Advertisement -
- Advertisement -

ಮುಜಾಫರ್‌ನಗರದಲ್ಲಿ ನೋಂದಣಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ಮದರಸಾಗಳು ದಿನಕ್ಕೆ ₹10,000 ದಂಡ ತೆರಬೇಕಾಗುತ್ತದೆ ಎಂದು ಉತ್ತರ ಪ್ರದೇಶದ ಮೂಲ ಶಿಕ್ಷಣ ಇಲಾಖೆ ನೋಟಿಸ್ ಜಾರಿ ಮಾಡಿದೆ.

ಸರಿಯಾದ ದಾಖಲಾತಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ಹತ್ತಕ್ಕೂ ಹೆಚ್ಚು ಮದರಸಾಗಳಿಗೆ ಮೂಲ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ನೋಟಿಸ್ ಜಾರಿ ಮಾಡಿದ್ದು, ಸೂಕ್ತ ದಾಖಲೆಗಳನ್ನು ನೀಡುವಂತೆ ಸೂಚಿಸಿದೆ.

ಉತ್ತರ ಪ್ರದೇಶದಲ್ಲಿ ಸುಮಾರು 24,000 ಮದರಸಾಗಳಿವೆ, ಅವುಗಳಲ್ಲಿ 16,000 ಮಾನ್ಯತೆ ಪಡೆದಿದ್ದು ಇನ್ನು 8,000 ಮದರಸಾಗಳು ಮಾನ್ಯತೆ ಪಡೆದಿಲ್ಲ ಎಂದು ಅಧಿಕಾರಿಗಳ ತಿಳಿಸಿದ್ದಾರೆ.

ನೋಟಿಸ್ ನೀಡಿರುವ ಮದರಸಾಗಳಿಗೆ ಆದೇಶ ಬಂದ ಮೂರು ದಿನಗಳೊಳಗೆ ಸೂಕ್ತ ದಾಖಲೆಗಳನ್ನು ನೀಡುವಂತೆ ಅಥವಾ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

”ಮದರಸಾಗಳು ಮಾನ್ಯತೆ ಇಲ್ಲದೆ ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದರೆ ದಿನಕ್ಕೆ ₹10,000 ದಂಡ ವಿಧಿಸಲಾಗುವುದು” ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಮುಜಾಫರ್‌ನಗರ ಮೂಲ ಶಿಕ್ಷಾ ಅಧಿಕಾರಿ (ಬಿಎಸ್‌ಎ) ಶುಭಂ ಶುಕ್ಲಾ ಅವರು, ”ಇಲ್ಲಿ ನಡೆಯುತ್ತಿರುವ ನೂರಕ್ಕೂ ಹೆಚ್ಚು ಮದರಸಾಗಳು ಜಿಲ್ಲೆಯಲ್ಲಿ ನೋಂದಣಿ ಅಥವಾ ಮಾನ್ಯತೆ ಹೊಂದಿಲ್ಲ ಮತ್ತು ನಿಯಮಾವಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಜಿಲ್ಲಾ ಅಲ್ಪಸಂಖ್ಯಾತ ಇಲಾಖೆ ತಮ್ಮ ಕಚೇರಿಗೆ ಮಾಹಿತಿ ನೀಡಿದೆ ಎಂದು ಅವರು ಹೇಳಿದ್ದಾರೆ.

ಮದರಸಾಗಳಿಗೆ ಶಿಕ್ಷಣ ಇಲಾಖೆಯ ನೀಡಿದ ನೋಟಿಸ್‌ನ್ನು “ಕಾನೂನುಬಾಹಿರ” ಎಂದು ಭಾರತೀಯ ಮುಸ್ಲಿಮರ ಸಂಘಟನೆಯಾದ ಜಮಿಯತ್ ಉಲಾಮಾ-ಇ-ಹಿಂದ್ ಹೇಳಿದೆ.

ಜಮಿಯತ್ ಉಲೇಮಾ-ಎ-ಹಿಂದ್‌ನ ಉತ್ತರ ಪ್ರದೇಶ ಘಟಕದ ಕಾರ್ಯದರ್ಶಿ ಮೌಲಾನಾ ಝಾಕಿರ್ ಹುಸೇನ್ ಮಾತನಾಡಿ, ”ರಾಜ್ಯದಲ್ಲಿ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಲು ಅಕ್ರಮ ನೋಟಿಸ್‌ಗಳನ್ನು ನೀಡುವ ಮೂಲಕ ಕಿರುಕುಳ ನೀಡಲಾಗುತ್ತಿದೆ” ಎಂದು ಹೇಳಿದರು.

”ಮದರಸಾಗಳು ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ನೀಡುತ್ತಿದ್ದು, ದಿನಕ್ಕೆ ₹ 10,000 ದಂಡವನ್ನು ಪಾವತಿಸಲು ಸಾಧ್ಯವಾಗುವುದಿಲ್ಲ” ಎಂದು ಹುಸೇನ್ ಹೇಳಿದರು.

”ರಾಜ್ಯದ ಸುಮಾರು 4,000 ಮದರಸಾಗಳನ್ನು ವಿದೇಶಿ ಹಣದಿಂದ ನಡೆಸಲಾಗುತ್ತಿದೆ ಎಂದು ಲಕ್ನೋದ ಹಿರಿಯ ಅಧಿಕಾರಿಯೊಬ್ಬರು ಆರೋಪ ಮಾಡಿದ್ದಾರೆ.

”4,000 ಮದರಸಾಗಳನ್ನು ತನಿಖೆ ಮಾಡಲು ರಾಜ್ಯ ಸರ್ಕಾರವು ಮೂರು ಸದಸ್ಯರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ, ಅವುಗಳಲ್ಲಿ ಹೆಚ್ಚಿನವು ಇಂಡೋ-ನೇಪಾಳ ಗಡಿಯಿಂದ ಬರುವ ಹಣದಿಂದ ನಡೆಯುತ್ತಿವೆ, ಅವು ವಿದೇಶದಿಂದ ಹಣವನ್ನು ಪಡೆಯುತ್ತಿವೆ” ಎಂದು ಅಧಿಕಾರಿ ತಿಳಿಸಿದ್ದಾರೆ.

”ಅವರು ಪಡೆದ ಹಣವನ್ನು ಭಯೋತ್ಪಾದನೆ ಅಥವಾ ಬಲವಂತದ ಧಾರ್ಮಿಕ ಮತಾಂತರದಂತಹ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಿಗೆ ಬಳಸಲಾಗಿದೆಯೇ ಎಂದು ಎಸ್‌ಐಟಿ ಪರಿಶೀಲಿಸುತ್ತದೆ” ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ರಕ್ತ ವರ್ಗಾವಣೆಯ ನಂತರ 14 ಮಕ್ಕಳಿಗೆ ಎಚ್‌ಐವಿ, ಹೆಪಟೈಟಿಸ್ ಸೋಂಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾನೂನುಬಾಹಿರ ಹತ್ಯೆ ಆರೋಪ : ಸಿಆರ್‌ಪಿಎಫ್ ಅಧಿಕಾರಿಗೆ ಶೌರ್ಯ ಚಕ್ರ ನೀಡಿರುವುದನ್ನು ಖಂಡಿಸಿದ ಕುಕಿ-ಝೋ ಗುಂಪುಗಳು

ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಅಧಿಕಾರಿಯೊಬ್ಬರು ತಮ್ಮ ಸಮುದಾಯದ ಹತ್ತು ಪುರುಷರ "ಕಾನೂನುಬಾಹಿರ ಹತ್ಯೆ"ಯಲ್ಲಿ ಭಾಗಿಯಾಗಿದ್ದಾರೆ ಎಂದು ಮಣಿಪುರದ ಕುಕಿ-ಝೋ ಸಂಘಟನೆಗಳು ಸೋಮವಾರ (ಜ.26) ಆರೋಪಿಸಿದ್ದು, ಆ ಅಧಿಕಾರಿಗೆ ಶೌರ್ಯ ಚಕ್ರ...

ಉತ್ತರ ಪ್ರದೇಶ: ಸೋನಭದ್ರಾದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು 

ಸೋನಭದ್ರ: ರಾಯ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸಿಕ್ರವಾರ್ ಗ್ರಾಮದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ಸೋಮವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಕ್ರಾವರ್ ಗ್ರಾಮದ ಪಂಚಾಯತ್ ಕಟ್ಟಡದ ಬಳಿ...

ಬುಡಕಟ್ಟು ರೈತರ ಬೃಹತ್ ಮೆರವಣಿಗೆ: ಬೇಡಿಕೆಗಳ ಕುರಿತು ಸಿಪಿಐ(ಎಂ)-ಎಐಕೆಎಸ್ ನಿಯೋಗದೊಂದಿಗೆ ಮುಖ್ಯಮಂತ್ರಿ ಫಡ್ನವೀಸ್ ಮಾತುಕತೆ

ಬಾಕಿ ಇರುವ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಪಿಐ(ಎಂ)-ಎಐಕೆಎಸ್ ನೇತೃತ್ವದಲ್ಲಿ ನಾಸಿಕ್‌ನಿಂದ ಮುಂಬೈಗೆ ಸಾವಿರಾರು ರೈತರು ಮತ್ತು ಬುಡಕಟ್ಟು ನಿವಾಸಿಗಳು ನಡೆಸಿದ ದೀರ್ಘ ಮೆರವಣಿಗೆ ಇಂದು ಜನವರಿ 27 ರಂದು ಮುಂಬೈನ ಮಂತ್ರಾಲಯ...

‘ಭಾರತದಲ್ಲಿ ಬಿಜೆಪಿ ದಾಳಿಯನ್ನು ಎದುರಿಸಲು ‘ದೀದಿ’ಗೆ ಮಾತ್ರ ಸಾಧ್ಯ’: ಅಖಿಲೇಶ್ ಯಾದವ್ 

ಕೋಲ್ಕತ್ತಾ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಂಗಳವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ "ಬಿಜೆಪಿಯ ದಾಳಿಯನ್ನು ಎದುರಿಸುವಲ್ಲಿನ ಧೈರ್ಯ"ಕ್ಕಾಗಿ ಟಿಎಂಸಿ ಮುಖ್ಯಸ್ಥೆಯನ್ನು ಶ್ಲಾಘಿಸಿದ್ದಾರೆ. ಉತ್ತರ ಪ್ರದೇಶದ ಮಾಜಿ...

ಬದರಿನಾಥ್-ಕೇದಾರನಾಥ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ ಸಾಧ್ಯತೆ

ಉತ್ತರಾಖಂಡದ ಹಿಮಾಲಯದ ಮಡಿಲಲ್ಲಿ ನೆಲೆಗೊಂಡಿರುವ ಶತಮಾನಗಳಷ್ಟು ಹಳೆಯದಾದ ಬದರಿನಾಥ್ ಮತ್ತು ಕೇದಾರನಾಥ ದೇವಾಲಯಗಳಿಗೆ ಶೀಘ್ರದಲ್ಲೇ ಹಿಂದೂಗಳಿಗೆ ಮಾತ್ರ ಪ್ರವೇಶ ಅನುಮತಿಸಬಹುದು. ಚಾರ್ ಧಾಮ್ ತೀರ್ಥಯಾತ್ರೆಯ ಭಾಗವಾಗಿರುವ ಎರಡು ದೇವಾಲಯಗಳಿಗೆ ಹಿಂದೂಯೇತರರನ್ನು ಪ್ರವೇಶಿಸುವುದನ್ನು ನಿಷೇಧಿಸಲಾಗುವುದು...

ವಿಬಿ-ಜಿ ರಾಮ್ ಜಿ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತಿದ್ದು, ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳವಾರ (ಜ.27) ಬೆಂಗಳೂರಿನ ಫ್ರೀಡಂ...

ಯುಸಿಸಿಯಲ್ಲಿ 18 ಬದಲಾವಣೆ ಮಾಡಿದ ಉತ್ತರಾಖಂಡ್ ಸರ್ಕಾರ; ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಜಾರಿಗೆ

ವಿವಾಹ, ವಿಚ್ಛೇದನ, ಲಿವ್-ಇನ್ ಸಂಬಂಧಗಳು ಮತ್ತು ಉತ್ತರಾಧಿಕಾರಕ್ಕೆ ಸಂಬಂಧಿಸಿದ ನಿಯಮಗಳನ್ನು ಬಿಗಿಗೊಳಿಸುವ ಗುರಿಯನ್ನು ಹೊಂದಿರುವ ಸುಮಾರು ಹದಿನೆಂಟು ಬದಲಾವಣೆಗಳನ್ನು ಪರಿಚಯಿಸುವ ಮೂಲಕ ಏಕರೂಪ ನಾಗರಿಕ ಸಂಹಿತೆಯ ಹಲವಾರು ನಿಬಂಧನೆಗಳನ್ನು ಮಾರ್ಪಡಿಸಲು ಉತ್ತರಾಖಂಡ ಸರ್ಕಾರ...

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಮಹಾತ್ಮಗಾಂಧಿ ಹೆಸರು: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಮಹಾತ್ಮ ಗಾಂಧಿಯವರ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕೇಂದ್ರ ಸರ್ಕಾರ ನರೇಗಾ ಬದಲಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ದ ಬೆಂಗಳೂರಿನ ಸ್ವಾತಂತ್ರ್ಯ...

ಜಾರ್ಖಂಡ್‌ನ ಗಿರಿದಿಹ್‌ನಲ್ಲಿ ಇಬ್ಬರು ಬುಡಕಟ್ಟು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ

ಗಿರಿದಿಹ್: ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯಲ್ಲಿ ಇಬ್ಬರು ಬುಡಕಟ್ಟು ಹುಡುಗಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭಾನುವಾರ ರಾತ್ರಿ ಪಿರ್ತಾಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ಹರ್ಲಾದಿಹ್ ಪ್ರದೇಶದಲ್ಲಿ ಈ ಘಟನೆ...

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ : ಪ್ರಬಲ ಜಾತಿಯವರಿಂದ ತೀವ್ರ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯನ್ನು ಉತ್ತೇಜಿಸುವ ಉದ್ದೇಶದಿಂದ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಪ್ರಬಲ ಜಾತಿಯವರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಹೊಸ ನಿಯಮಗಳ 'ಜಾತಿ ಆಧಾರಿತ ತಾರತಮ್ಯ' ಎಂಬುವುದರ...