Homeಮುಖಪುಟಬಿಡುಗಡೆಯಾಗದ ವಸತಿ ಯೋಜನೆ ಹಣ, ಅಪೂರ್ಣವಾದ ಮನೆಗಳು: ಈಡೇರದ ಗುಡಿಸಲು ಮುಕ್ತ ಭರವಸೆ

ಬಿಡುಗಡೆಯಾಗದ ವಸತಿ ಯೋಜನೆ ಹಣ, ಅಪೂರ್ಣವಾದ ಮನೆಗಳು: ಈಡೇರದ ಗುಡಿಸಲು ಮುಕ್ತ ಭರವಸೆ

ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾದ ಮೇಲೆ ಮಂಜೂರಾಗಿರುವ ಮನೆ ನಿರ್ಮಾಣ ಕಾಮಗಾರಿಗಳು ಸ್ಥಗಿತ ಗೊಂಡಿದ್ದು ವಿವಿಧ ಹಂತದ ನಿರ್ಮಾಣದಲ್ಲೇ ನಿಂತುಹೋಗಿವೆ. ಫಲಾನುಭವಿಗಳಿಗೆ ಹಣ ಬಿಡುಗಡೆಗೊಳಿಸಬೇಕಾದ ಸರ್ಕಾರ ಜವಾಬ್ದಾರಿ ಮತ್ತು ಕರ್ತವ್ಯವನ್ನು ಮರೆತಂತೆ ಕಾಣುತ್ತಿದೆ. 

- Advertisement -
- Advertisement -

ರಾಜ್ಯದಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ಕಾಮಗಾರಿ ಸ್ಥಗಿತಗೊಂಡಿದೆ. ಹಣ ಬಿಡುಗಡೆಯಾಗದೆ ಕಾಮಗಾರಿಗಳು ಅರ್ಧಕ್ಕೆ ನಿಂತುಹೋಗಿವೆ. ಇಂದಿರಾಗಾಂಧೀ ವಸತಿ ಯೋಜನೆ, ಅಟಲ್ ವಸತಿ ಯೋಜನೆ, ರಾಜೀವ್ ಗಾಂಧಿ ವಸತಿ ಯೋಜನೆ ಹೀಗೆ ವಿವಿಧ ವಸತಿ ಯೋಜನೆಗಳಲ್ಲಿ  2019-20ನೇ ಸಾಲಿನಲ್ಲಿ 9 ಲಕ್ಷಕ್ಕೂ ಹೆಚ್ಚು ಮನೆಗಳು ಮಂಜೂರಾಗಿ ಸರ್ಕಾರ ಹಣ ನೀಡದೆ ಮನೆ ನಿರ್ಮಾಣ ಕಾಮಗಾರಿ ಕುಂಠಿತಗೊಂಡಿದೆ. ವಸತಿ ಸಚಿವರು ಮೇ 14ರಂದು ವಾರದಲ್ಲೇ ಹಣ ಬಿಡುಗಡೆ ಮಾಡುವುದಾಗಿ ನೀಡಿದ್ದ ಭರವಸೆ ಮೂರು ತಿಂಗಳು ಕಳೆದರೂ ಈಡೇರಿಲ್ಲ.

ಸಿದ್ದರಾಮಯ್ಯ ಮತ್ತು ಎಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಮಂಜೂರಾಗಿದ್ದ ಮನೆಗಳು ಪೂರ್ಣಗೊಂಡು ಫಲಾನುಭವಿಗಳು ಮಳೆ-ಗಾಳಿ-ಬಿಸಿಲಿನಿಂದ ರಕ್ಷಣೆ ಪಡೆದಿದ್ದಾರೆ. ಆದರೆ ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾದ ಮೇಲೆ ಮಂಜೂರಾಗಿರುವ ಮನೆ ನಿರ್ಮಾಣ ಕಾಮಗಾರಿಗಳು ಸ್ಥಗಿತ ಗೊಂಡಿದ್ದು ವಿವಿಧ ಹಂತದ ನಿರ್ಮಾಣದಲ್ಲೇ ನಿಂತುಹೋಗಿವೆ. ಫಲಾನುಭವಿಗಳಿಗೆ ಹಣ ಬಿಡುಗಡೆಗೊಳಿಸಬೇಕಾದ ಸರ್ಕಾರ ಜವಾಬ್ದಾರಿ ಮತ್ತು ಕರ್ತವ್ಯವನ್ನು ಮರೆತಂತೆ ಕಾಣುತ್ತಿದೆ.

ನಿವೇಶನರಹಿತ ಮತ್ತು ಮನೆರಹಿತ ಬಡವರಿಗೆ ಸೂರು ಕಲ್ಪಿಸುವ ಭರವಸೆ ನೀಡಿದ ಯಡಿಯೂರಪ್ಪ ಸರ್ಕಾರ ಇದೀಗ ಬಾಕಿ ಹಣ ಬಿಡುಗಡೆ ಮಾಡದೆ ಮೌನಕ್ಕೆ ಜಾರಿದೆ. ಹಾಗಾಗಿ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಮನೆ ನಿರ್ಮಾಣ ಕಾಮಗಾರಿಗಳು ಅಪೂರ್ಣಗೊಂಡಿವೆ. ಸರ್ಕಾರ ಹಣ ಬಿಡುಗಡೆ ಮಾಡುತ್ತದೆ. ನಾವು ಮನೆ ಸೇರಿಕೊಳ್ಳುತ್ತೇವೆ ಎಂದು ಹುಮ್ಮಸ್ಸಿನಿಂದ ಮನೆ ಕಟ್ಟಿಸಲು ಮುಂದಾದ ಜನರು ಸಾಲಸೋಲ ಮಾಡಿ ಹಣ ಹೊಂದಿಸಿದ್ದರು. ಆದರೆ ಕಳೆದ ಒಂದು ವರ್ಷದಿಂದ ಕೇವಲ ಪಾಯದ ಹಂತಕ್ಕೆ ಮಾತ್ರ ಹಣ ಬಿಡುಗಡೆ ಆಗಿದೆ ಎಂದು ಆರೋಪಿಸಿದ್ದಾರೆ.

ಫಲಾನುಭವಿಗಳಿಗೆ ನಾಲ್ಕು ಹಂತದಲ್ಲಿ ಹಣ ಬಿಡುಗಡೆ ಮಾಡಲಾಗುತ್ತದೆ. ಪಾಯದ ಹಂತಕ್ಕೆ 43 ಸಾವಿರ ರೂ ಬಿಡುಗಡೆಯಾಗಿದೆ. ಆದರೆ ನಂತರದ ಹಂತಗಳಿಗೆ ಹಣ ಬಿಡುಗಡೆಯಾಗಿಲ್ಲ. ಫಲನುಭವಿಗಳು ಪಾಯ, ಗೋಡೆ, ಮೇಲ್ಛಾವಣೆ, ಮತ್ತು ಮನೆ ಪೂರ್ಣಗೊಳಿಸಲು ಮೊದಲೇ ಹಣ ಸುರಿಯಬೇಕು. ಬಡವರಾಗಿರುವ ಫಲಾನುಭವಿಗಳು ಇದಕ್ಕಾಗಿ ಸಾಲ ಮಾಡಿದ್ದಾರೆ. ಸಾವಿರಾರು ರೂಪಾಯಿ ಸಾಲ ಮಾಡಿ ತಮ್ಮ ಸಾಮರ್ಥ್ಯಕ್ಕೆ ತಕ್ಕಹಾಗೆ ಪಾಯ, ಗೋಡೆ, ಟಾಪ್ ಹಂತದವರೆಗೂ ಮನೆ ನಿರ್ಮಿಸಿಕೊಂಡಿದ್ದಾರೆ. ಸಾಲ ನೀಡಿದವರು ಸಾಲಕ್ಕೆ ಒತ್ತಡ ಹೇರುತ್ತಿದ್ದಾರೆ. ಇದರಿಂದ ಸಾಲ ಪಡೆದವರು ಹಣ ನೀಡಲು ಬೇರೆ ಮಾರ್ಗಗಳೇ ಇಲ್ಲವಾಗಿದೆ.

ಪ್ರತಿ ಮನೆ ನಿರ್ಮಾಣಕ್ಕೂ ರಾಜ್ಯ ಸರ್ಕಾರ 75 ಸಾವಿರ, ಕೇಂದ್ರ ಸರ್ಕಾರ 50 ಸಾವಿರ ಹೀಗೆ ಒಟ್ಟು 1.25 ಲಕ್ಷ ರೂ ಫಲಾನುಭವಿಗೆ ನೀಡುತ್ತದೆ. ಅಂದರೆ ಈ ಹಣವನ್ನು ನಾಲ್ಕು ಹಂತದಲ್ಲಿ ನೀಡಲಾಗುತ್ತದೆ.

ರಾಜ್ಯ ಸರ್ಕಾರ 9.74ಲಕ್ಷ ಮನೆಗಳನ್ನು 10,194 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಇನ್ನೂ ಒಂದು ಹೆಜ್ಞೆ ಮುಂದೆ ಹೋಗಿರುವ ಸಚಿವ ಸೋಮಣ್ಣ ಮತ್ತೆ 1.25 ಲಕ್ಷ ಮನೆಗಳನ್ನು ಮಂಜೂರು ಮಾಡುತ್ತೇವೆ ಎಂದು ಜೂನ್ 1ರಂದು ಹೇಳಿದ್ದರು. ಆದರೆ ಈಗ ಮಂಜೂರು ಮಾಡಿರುವ ಮನೆಗಳೇ ಪೂರ್ಣಗೊಂಡಿಲ್ಲ. ಹಣವೂ ಬಿಡುಗಡೆ ಮಾಡಿಲ್ಲ. ಮತ್ತೆ ಒಂದು ಲಕ್ಷ ಮನೆಗಳಿಗೆ ಹಣ ಎಲ್ಲಿಂದ ತರುತ್ತಾರೆ ಎಂಬ ಪ್ರಶ್ನೆ ಉದ್ಭವಿಸುತ್ತದೆ.

ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ಮನೆಗಳ ನಿರ್ಮಾಣ ಕಾಮಗಾರಿಗೆ 4 ಸಾವಿರ ಕೋಟಿ ಬಿಡುಗಡೆ ಮಾಡುವುದಾಗಿ ಸರ್ಕಾರ ಹೇಳಿತ್ತು. ಸಚಿವ ಸೋಮಣ್ಣನವರು ಮೇ 14, 2020ರಂದು ಪ್ರಜಾವಾಣಿ ಪೋನ್ ಇನ್ ಕಾರ್ಯಕ್ರಮದಲ್ಲಿ ಫಲನುಭವಿಯೊಬ್ಬರ ಕರೆಗೆ ಉತ್ತರಿಸಿ ಇನ್ನೊಂದು ವಾರದಲ್ಲಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಮೂರು ತಿಂಗಳು ಕಳೆದರೂ ಹಣ ಬಿಡುಗಡೆಯಾಗಿಲ್ಲ. ಹಣ ಬಿಡುಗಡೆ ಮಾಡುವ ಭರವಸೆ ದೊರೆಯುತ್ತಿದೆಯೇ ಹೊರತು ಕೊಟ್ಟ ಮಾತನ್ನು ಸರ್ಕಾರ ಉಳಿಸಿಕೊಂಡಿಲ್ಲ ಎಂಬುದು ಜನರ ದೂರು.

ಗ್ರಾಮಗಳನ್ನು ಗುಡಿಸಲು ಮುಕ್ತಗೊಳಿಸುವುದಾಗಿ ಸರ್ಕಾರ ಹೇಳಿತ್ತು. ಆದರೆ ಹಟ್ಟಿಗಳಲ್ಲಿ ಇಂದಿಗೂ ಗುಡಿಸಲು ಮನೆಗಳಲ್ಲೇ ಬಡಕುಟುಂಬಗಳು ವಾಸಿಸುತ್ತಿವೆ. ಗೊಲ್ಲರಹಟ್ಟಿಗಳು, ಹಾಡಿಗಳು, ಆದಿವಾಸಿಗಳು, ಕೊಳಗೇರಿಗಳು ವಾಸಿಸುವ ಪ್ರದೇಶಗಳಲ್ಲಿ ಗುಡಿಸಲುಗಳು ಬಿಟ್ಟರೆ ಇಟ್ಟಿಗೆಯ ಮೆನಗಳನ್ನು ನೋಡುವುದು ಅಪರೂಪ. ಗುಡಿಸಲುಗಳಲ್ಲಿ ವಾಸಿಸುವ ಬಡಕುಟುಂಬಗಳು ಮಳೆಗಾಲದಲ್ಲಿ ಸೋರು ಮನೆಗಳಲ್ಲೇ ಜೀವನ ದೂಡುವಂತಹ ಪರಿಸ್ಥಿತಿ ಇದೆ. ಸರ್ಕಾರದ ವಸತಿ ಯೋಜನೆಗಳು ಇಂಥವರ ಬಾಳಿಗೆ ಆಸರೆ ಆಗುವುದು ಗಗನ ಕುಸುಮವಾಗಿದೆ.

ವಸತಿ ಸಚಿವರು ಹಿಂದಿನ ಸರ್ಕಾರಗಳಲ್ಲಾದ ಲೋಪದೋಷಗಳನ್ನು ಮುಂದುಮಾಡಿಕೊಂಡು ಟೀಕಿಸುವುದು ಬಿಟ್ಟು ನಿಜವಾದ ಫಲನುಭರಿಗಳಿಗೆ ಸೂರು ಕಲ್ಪಿಸುವತ್ತ ಮುಂದಾಗಬೇಕು. ಫಲನುಭವಿಗಳಿಗೆ ಶೀಘ್ರ ಹಣ ಬಿಡುಗಡೆ ಮಾಡಿ ಬಡಕುಟುಂಬಗಳ ನೆರವಿಗೆ ಬರಬೇಕು. ಸಾಲದಲ್ಲಿ ನರಳುತ್ತಿರುವ ಕುಟುಂಬಗಳನ್ನು ಪಾರು ಮಾಡುವ ಕೆಲಸ ಸರ್ಕಾರದಿಂದ ಅಗಬೇಕಾಗಿದೆ.


ಇದನ್ನೂ ಓದಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಪಟ್ಟು: ಬೆಳಗಾವಿ, ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...