Homeಮುಖಪುಟಬಿಡುಗಡೆಯಾಗದ ವಸತಿ ಯೋಜನೆ ಹಣ, ಅಪೂರ್ಣವಾದ ಮನೆಗಳು: ಈಡೇರದ ಗುಡಿಸಲು ಮುಕ್ತ ಭರವಸೆ

ಬಿಡುಗಡೆಯಾಗದ ವಸತಿ ಯೋಜನೆ ಹಣ, ಅಪೂರ್ಣವಾದ ಮನೆಗಳು: ಈಡೇರದ ಗುಡಿಸಲು ಮುಕ್ತ ಭರವಸೆ

ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾದ ಮೇಲೆ ಮಂಜೂರಾಗಿರುವ ಮನೆ ನಿರ್ಮಾಣ ಕಾಮಗಾರಿಗಳು ಸ್ಥಗಿತ ಗೊಂಡಿದ್ದು ವಿವಿಧ ಹಂತದ ನಿರ್ಮಾಣದಲ್ಲೇ ನಿಂತುಹೋಗಿವೆ. ಫಲಾನುಭವಿಗಳಿಗೆ ಹಣ ಬಿಡುಗಡೆಗೊಳಿಸಬೇಕಾದ ಸರ್ಕಾರ ಜವಾಬ್ದಾರಿ ಮತ್ತು ಕರ್ತವ್ಯವನ್ನು ಮರೆತಂತೆ ಕಾಣುತ್ತಿದೆ. 

- Advertisement -
- Advertisement -

ರಾಜ್ಯದಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ಕಾಮಗಾರಿ ಸ್ಥಗಿತಗೊಂಡಿದೆ. ಹಣ ಬಿಡುಗಡೆಯಾಗದೆ ಕಾಮಗಾರಿಗಳು ಅರ್ಧಕ್ಕೆ ನಿಂತುಹೋಗಿವೆ. ಇಂದಿರಾಗಾಂಧೀ ವಸತಿ ಯೋಜನೆ, ಅಟಲ್ ವಸತಿ ಯೋಜನೆ, ರಾಜೀವ್ ಗಾಂಧಿ ವಸತಿ ಯೋಜನೆ ಹೀಗೆ ವಿವಿಧ ವಸತಿ ಯೋಜನೆಗಳಲ್ಲಿ  2019-20ನೇ ಸಾಲಿನಲ್ಲಿ 9 ಲಕ್ಷಕ್ಕೂ ಹೆಚ್ಚು ಮನೆಗಳು ಮಂಜೂರಾಗಿ ಸರ್ಕಾರ ಹಣ ನೀಡದೆ ಮನೆ ನಿರ್ಮಾಣ ಕಾಮಗಾರಿ ಕುಂಠಿತಗೊಂಡಿದೆ. ವಸತಿ ಸಚಿವರು ಮೇ 14ರಂದು ವಾರದಲ್ಲೇ ಹಣ ಬಿಡುಗಡೆ ಮಾಡುವುದಾಗಿ ನೀಡಿದ್ದ ಭರವಸೆ ಮೂರು ತಿಂಗಳು ಕಳೆದರೂ ಈಡೇರಿಲ್ಲ.

ಸಿದ್ದರಾಮಯ್ಯ ಮತ್ತು ಎಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಮಂಜೂರಾಗಿದ್ದ ಮನೆಗಳು ಪೂರ್ಣಗೊಂಡು ಫಲಾನುಭವಿಗಳು ಮಳೆ-ಗಾಳಿ-ಬಿಸಿಲಿನಿಂದ ರಕ್ಷಣೆ ಪಡೆದಿದ್ದಾರೆ. ಆದರೆ ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾದ ಮೇಲೆ ಮಂಜೂರಾಗಿರುವ ಮನೆ ನಿರ್ಮಾಣ ಕಾಮಗಾರಿಗಳು ಸ್ಥಗಿತ ಗೊಂಡಿದ್ದು ವಿವಿಧ ಹಂತದ ನಿರ್ಮಾಣದಲ್ಲೇ ನಿಂತುಹೋಗಿವೆ. ಫಲಾನುಭವಿಗಳಿಗೆ ಹಣ ಬಿಡುಗಡೆಗೊಳಿಸಬೇಕಾದ ಸರ್ಕಾರ ಜವಾಬ್ದಾರಿ ಮತ್ತು ಕರ್ತವ್ಯವನ್ನು ಮರೆತಂತೆ ಕಾಣುತ್ತಿದೆ.

ನಿವೇಶನರಹಿತ ಮತ್ತು ಮನೆರಹಿತ ಬಡವರಿಗೆ ಸೂರು ಕಲ್ಪಿಸುವ ಭರವಸೆ ನೀಡಿದ ಯಡಿಯೂರಪ್ಪ ಸರ್ಕಾರ ಇದೀಗ ಬಾಕಿ ಹಣ ಬಿಡುಗಡೆ ಮಾಡದೆ ಮೌನಕ್ಕೆ ಜಾರಿದೆ. ಹಾಗಾಗಿ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಮನೆ ನಿರ್ಮಾಣ ಕಾಮಗಾರಿಗಳು ಅಪೂರ್ಣಗೊಂಡಿವೆ. ಸರ್ಕಾರ ಹಣ ಬಿಡುಗಡೆ ಮಾಡುತ್ತದೆ. ನಾವು ಮನೆ ಸೇರಿಕೊಳ್ಳುತ್ತೇವೆ ಎಂದು ಹುಮ್ಮಸ್ಸಿನಿಂದ ಮನೆ ಕಟ್ಟಿಸಲು ಮುಂದಾದ ಜನರು ಸಾಲಸೋಲ ಮಾಡಿ ಹಣ ಹೊಂದಿಸಿದ್ದರು. ಆದರೆ ಕಳೆದ ಒಂದು ವರ್ಷದಿಂದ ಕೇವಲ ಪಾಯದ ಹಂತಕ್ಕೆ ಮಾತ್ರ ಹಣ ಬಿಡುಗಡೆ ಆಗಿದೆ ಎಂದು ಆರೋಪಿಸಿದ್ದಾರೆ.

ಫಲಾನುಭವಿಗಳಿಗೆ ನಾಲ್ಕು ಹಂತದಲ್ಲಿ ಹಣ ಬಿಡುಗಡೆ ಮಾಡಲಾಗುತ್ತದೆ. ಪಾಯದ ಹಂತಕ್ಕೆ 43 ಸಾವಿರ ರೂ ಬಿಡುಗಡೆಯಾಗಿದೆ. ಆದರೆ ನಂತರದ ಹಂತಗಳಿಗೆ ಹಣ ಬಿಡುಗಡೆಯಾಗಿಲ್ಲ. ಫಲನುಭವಿಗಳು ಪಾಯ, ಗೋಡೆ, ಮೇಲ್ಛಾವಣೆ, ಮತ್ತು ಮನೆ ಪೂರ್ಣಗೊಳಿಸಲು ಮೊದಲೇ ಹಣ ಸುರಿಯಬೇಕು. ಬಡವರಾಗಿರುವ ಫಲಾನುಭವಿಗಳು ಇದಕ್ಕಾಗಿ ಸಾಲ ಮಾಡಿದ್ದಾರೆ. ಸಾವಿರಾರು ರೂಪಾಯಿ ಸಾಲ ಮಾಡಿ ತಮ್ಮ ಸಾಮರ್ಥ್ಯಕ್ಕೆ ತಕ್ಕಹಾಗೆ ಪಾಯ, ಗೋಡೆ, ಟಾಪ್ ಹಂತದವರೆಗೂ ಮನೆ ನಿರ್ಮಿಸಿಕೊಂಡಿದ್ದಾರೆ. ಸಾಲ ನೀಡಿದವರು ಸಾಲಕ್ಕೆ ಒತ್ತಡ ಹೇರುತ್ತಿದ್ದಾರೆ. ಇದರಿಂದ ಸಾಲ ಪಡೆದವರು ಹಣ ನೀಡಲು ಬೇರೆ ಮಾರ್ಗಗಳೇ ಇಲ್ಲವಾಗಿದೆ.

ಪ್ರತಿ ಮನೆ ನಿರ್ಮಾಣಕ್ಕೂ ರಾಜ್ಯ ಸರ್ಕಾರ 75 ಸಾವಿರ, ಕೇಂದ್ರ ಸರ್ಕಾರ 50 ಸಾವಿರ ಹೀಗೆ ಒಟ್ಟು 1.25 ಲಕ್ಷ ರೂ ಫಲಾನುಭವಿಗೆ ನೀಡುತ್ತದೆ. ಅಂದರೆ ಈ ಹಣವನ್ನು ನಾಲ್ಕು ಹಂತದಲ್ಲಿ ನೀಡಲಾಗುತ್ತದೆ.

ರಾಜ್ಯ ಸರ್ಕಾರ 9.74ಲಕ್ಷ ಮನೆಗಳನ್ನು 10,194 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಇನ್ನೂ ಒಂದು ಹೆಜ್ಞೆ ಮುಂದೆ ಹೋಗಿರುವ ಸಚಿವ ಸೋಮಣ್ಣ ಮತ್ತೆ 1.25 ಲಕ್ಷ ಮನೆಗಳನ್ನು ಮಂಜೂರು ಮಾಡುತ್ತೇವೆ ಎಂದು ಜೂನ್ 1ರಂದು ಹೇಳಿದ್ದರು. ಆದರೆ ಈಗ ಮಂಜೂರು ಮಾಡಿರುವ ಮನೆಗಳೇ ಪೂರ್ಣಗೊಂಡಿಲ್ಲ. ಹಣವೂ ಬಿಡುಗಡೆ ಮಾಡಿಲ್ಲ. ಮತ್ತೆ ಒಂದು ಲಕ್ಷ ಮನೆಗಳಿಗೆ ಹಣ ಎಲ್ಲಿಂದ ತರುತ್ತಾರೆ ಎಂಬ ಪ್ರಶ್ನೆ ಉದ್ಭವಿಸುತ್ತದೆ.

ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ಮನೆಗಳ ನಿರ್ಮಾಣ ಕಾಮಗಾರಿಗೆ 4 ಸಾವಿರ ಕೋಟಿ ಬಿಡುಗಡೆ ಮಾಡುವುದಾಗಿ ಸರ್ಕಾರ ಹೇಳಿತ್ತು. ಸಚಿವ ಸೋಮಣ್ಣನವರು ಮೇ 14, 2020ರಂದು ಪ್ರಜಾವಾಣಿ ಪೋನ್ ಇನ್ ಕಾರ್ಯಕ್ರಮದಲ್ಲಿ ಫಲನುಭವಿಯೊಬ್ಬರ ಕರೆಗೆ ಉತ್ತರಿಸಿ ಇನ್ನೊಂದು ವಾರದಲ್ಲಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಮೂರು ತಿಂಗಳು ಕಳೆದರೂ ಹಣ ಬಿಡುಗಡೆಯಾಗಿಲ್ಲ. ಹಣ ಬಿಡುಗಡೆ ಮಾಡುವ ಭರವಸೆ ದೊರೆಯುತ್ತಿದೆಯೇ ಹೊರತು ಕೊಟ್ಟ ಮಾತನ್ನು ಸರ್ಕಾರ ಉಳಿಸಿಕೊಂಡಿಲ್ಲ ಎಂಬುದು ಜನರ ದೂರು.

ಗ್ರಾಮಗಳನ್ನು ಗುಡಿಸಲು ಮುಕ್ತಗೊಳಿಸುವುದಾಗಿ ಸರ್ಕಾರ ಹೇಳಿತ್ತು. ಆದರೆ ಹಟ್ಟಿಗಳಲ್ಲಿ ಇಂದಿಗೂ ಗುಡಿಸಲು ಮನೆಗಳಲ್ಲೇ ಬಡಕುಟುಂಬಗಳು ವಾಸಿಸುತ್ತಿವೆ. ಗೊಲ್ಲರಹಟ್ಟಿಗಳು, ಹಾಡಿಗಳು, ಆದಿವಾಸಿಗಳು, ಕೊಳಗೇರಿಗಳು ವಾಸಿಸುವ ಪ್ರದೇಶಗಳಲ್ಲಿ ಗುಡಿಸಲುಗಳು ಬಿಟ್ಟರೆ ಇಟ್ಟಿಗೆಯ ಮೆನಗಳನ್ನು ನೋಡುವುದು ಅಪರೂಪ. ಗುಡಿಸಲುಗಳಲ್ಲಿ ವಾಸಿಸುವ ಬಡಕುಟುಂಬಗಳು ಮಳೆಗಾಲದಲ್ಲಿ ಸೋರು ಮನೆಗಳಲ್ಲೇ ಜೀವನ ದೂಡುವಂತಹ ಪರಿಸ್ಥಿತಿ ಇದೆ. ಸರ್ಕಾರದ ವಸತಿ ಯೋಜನೆಗಳು ಇಂಥವರ ಬಾಳಿಗೆ ಆಸರೆ ಆಗುವುದು ಗಗನ ಕುಸುಮವಾಗಿದೆ.

ವಸತಿ ಸಚಿವರು ಹಿಂದಿನ ಸರ್ಕಾರಗಳಲ್ಲಾದ ಲೋಪದೋಷಗಳನ್ನು ಮುಂದುಮಾಡಿಕೊಂಡು ಟೀಕಿಸುವುದು ಬಿಟ್ಟು ನಿಜವಾದ ಫಲನುಭರಿಗಳಿಗೆ ಸೂರು ಕಲ್ಪಿಸುವತ್ತ ಮುಂದಾಗಬೇಕು. ಫಲನುಭವಿಗಳಿಗೆ ಶೀಘ್ರ ಹಣ ಬಿಡುಗಡೆ ಮಾಡಿ ಬಡಕುಟುಂಬಗಳ ನೆರವಿಗೆ ಬರಬೇಕು. ಸಾಲದಲ್ಲಿ ನರಳುತ್ತಿರುವ ಕುಟುಂಬಗಳನ್ನು ಪಾರು ಮಾಡುವ ಕೆಲಸ ಸರ್ಕಾರದಿಂದ ಅಗಬೇಕಾಗಿದೆ.


ಇದನ್ನೂ ಓದಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಪಟ್ಟು: ಬೆಳಗಾವಿ, ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...