Homeಮುಖಪುಟಬಿಡುಗಡೆಯಾಗದ ವಸತಿ ಯೋಜನೆ ಹಣ, ಅಪೂರ್ಣವಾದ ಮನೆಗಳು: ಈಡೇರದ ಗುಡಿಸಲು ಮುಕ್ತ ಭರವಸೆ

ಬಿಡುಗಡೆಯಾಗದ ವಸತಿ ಯೋಜನೆ ಹಣ, ಅಪೂರ್ಣವಾದ ಮನೆಗಳು: ಈಡೇರದ ಗುಡಿಸಲು ಮುಕ್ತ ಭರವಸೆ

ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾದ ಮೇಲೆ ಮಂಜೂರಾಗಿರುವ ಮನೆ ನಿರ್ಮಾಣ ಕಾಮಗಾರಿಗಳು ಸ್ಥಗಿತ ಗೊಂಡಿದ್ದು ವಿವಿಧ ಹಂತದ ನಿರ್ಮಾಣದಲ್ಲೇ ನಿಂತುಹೋಗಿವೆ. ಫಲಾನುಭವಿಗಳಿಗೆ ಹಣ ಬಿಡುಗಡೆಗೊಳಿಸಬೇಕಾದ ಸರ್ಕಾರ ಜವಾಬ್ದಾರಿ ಮತ್ತು ಕರ್ತವ್ಯವನ್ನು ಮರೆತಂತೆ ಕಾಣುತ್ತಿದೆ. 

- Advertisement -
- Advertisement -

ರಾಜ್ಯದಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ಕಾಮಗಾರಿ ಸ್ಥಗಿತಗೊಂಡಿದೆ. ಹಣ ಬಿಡುಗಡೆಯಾಗದೆ ಕಾಮಗಾರಿಗಳು ಅರ್ಧಕ್ಕೆ ನಿಂತುಹೋಗಿವೆ. ಇಂದಿರಾಗಾಂಧೀ ವಸತಿ ಯೋಜನೆ, ಅಟಲ್ ವಸತಿ ಯೋಜನೆ, ರಾಜೀವ್ ಗಾಂಧಿ ವಸತಿ ಯೋಜನೆ ಹೀಗೆ ವಿವಿಧ ವಸತಿ ಯೋಜನೆಗಳಲ್ಲಿ  2019-20ನೇ ಸಾಲಿನಲ್ಲಿ 9 ಲಕ್ಷಕ್ಕೂ ಹೆಚ್ಚು ಮನೆಗಳು ಮಂಜೂರಾಗಿ ಸರ್ಕಾರ ಹಣ ನೀಡದೆ ಮನೆ ನಿರ್ಮಾಣ ಕಾಮಗಾರಿ ಕುಂಠಿತಗೊಂಡಿದೆ. ವಸತಿ ಸಚಿವರು ಮೇ 14ರಂದು ವಾರದಲ್ಲೇ ಹಣ ಬಿಡುಗಡೆ ಮಾಡುವುದಾಗಿ ನೀಡಿದ್ದ ಭರವಸೆ ಮೂರು ತಿಂಗಳು ಕಳೆದರೂ ಈಡೇರಿಲ್ಲ.

ಸಿದ್ದರಾಮಯ್ಯ ಮತ್ತು ಎಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಮಂಜೂರಾಗಿದ್ದ ಮನೆಗಳು ಪೂರ್ಣಗೊಂಡು ಫಲಾನುಭವಿಗಳು ಮಳೆ-ಗಾಳಿ-ಬಿಸಿಲಿನಿಂದ ರಕ್ಷಣೆ ಪಡೆದಿದ್ದಾರೆ. ಆದರೆ ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾದ ಮೇಲೆ ಮಂಜೂರಾಗಿರುವ ಮನೆ ನಿರ್ಮಾಣ ಕಾಮಗಾರಿಗಳು ಸ್ಥಗಿತ ಗೊಂಡಿದ್ದು ವಿವಿಧ ಹಂತದ ನಿರ್ಮಾಣದಲ್ಲೇ ನಿಂತುಹೋಗಿವೆ. ಫಲಾನುಭವಿಗಳಿಗೆ ಹಣ ಬಿಡುಗಡೆಗೊಳಿಸಬೇಕಾದ ಸರ್ಕಾರ ಜವಾಬ್ದಾರಿ ಮತ್ತು ಕರ್ತವ್ಯವನ್ನು ಮರೆತಂತೆ ಕಾಣುತ್ತಿದೆ.

ನಿವೇಶನರಹಿತ ಮತ್ತು ಮನೆರಹಿತ ಬಡವರಿಗೆ ಸೂರು ಕಲ್ಪಿಸುವ ಭರವಸೆ ನೀಡಿದ ಯಡಿಯೂರಪ್ಪ ಸರ್ಕಾರ ಇದೀಗ ಬಾಕಿ ಹಣ ಬಿಡುಗಡೆ ಮಾಡದೆ ಮೌನಕ್ಕೆ ಜಾರಿದೆ. ಹಾಗಾಗಿ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಮನೆ ನಿರ್ಮಾಣ ಕಾಮಗಾರಿಗಳು ಅಪೂರ್ಣಗೊಂಡಿವೆ. ಸರ್ಕಾರ ಹಣ ಬಿಡುಗಡೆ ಮಾಡುತ್ತದೆ. ನಾವು ಮನೆ ಸೇರಿಕೊಳ್ಳುತ್ತೇವೆ ಎಂದು ಹುಮ್ಮಸ್ಸಿನಿಂದ ಮನೆ ಕಟ್ಟಿಸಲು ಮುಂದಾದ ಜನರು ಸಾಲಸೋಲ ಮಾಡಿ ಹಣ ಹೊಂದಿಸಿದ್ದರು. ಆದರೆ ಕಳೆದ ಒಂದು ವರ್ಷದಿಂದ ಕೇವಲ ಪಾಯದ ಹಂತಕ್ಕೆ ಮಾತ್ರ ಹಣ ಬಿಡುಗಡೆ ಆಗಿದೆ ಎಂದು ಆರೋಪಿಸಿದ್ದಾರೆ.

ಫಲಾನುಭವಿಗಳಿಗೆ ನಾಲ್ಕು ಹಂತದಲ್ಲಿ ಹಣ ಬಿಡುಗಡೆ ಮಾಡಲಾಗುತ್ತದೆ. ಪಾಯದ ಹಂತಕ್ಕೆ 43 ಸಾವಿರ ರೂ ಬಿಡುಗಡೆಯಾಗಿದೆ. ಆದರೆ ನಂತರದ ಹಂತಗಳಿಗೆ ಹಣ ಬಿಡುಗಡೆಯಾಗಿಲ್ಲ. ಫಲನುಭವಿಗಳು ಪಾಯ, ಗೋಡೆ, ಮೇಲ್ಛಾವಣೆ, ಮತ್ತು ಮನೆ ಪೂರ್ಣಗೊಳಿಸಲು ಮೊದಲೇ ಹಣ ಸುರಿಯಬೇಕು. ಬಡವರಾಗಿರುವ ಫಲಾನುಭವಿಗಳು ಇದಕ್ಕಾಗಿ ಸಾಲ ಮಾಡಿದ್ದಾರೆ. ಸಾವಿರಾರು ರೂಪಾಯಿ ಸಾಲ ಮಾಡಿ ತಮ್ಮ ಸಾಮರ್ಥ್ಯಕ್ಕೆ ತಕ್ಕಹಾಗೆ ಪಾಯ, ಗೋಡೆ, ಟಾಪ್ ಹಂತದವರೆಗೂ ಮನೆ ನಿರ್ಮಿಸಿಕೊಂಡಿದ್ದಾರೆ. ಸಾಲ ನೀಡಿದವರು ಸಾಲಕ್ಕೆ ಒತ್ತಡ ಹೇರುತ್ತಿದ್ದಾರೆ. ಇದರಿಂದ ಸಾಲ ಪಡೆದವರು ಹಣ ನೀಡಲು ಬೇರೆ ಮಾರ್ಗಗಳೇ ಇಲ್ಲವಾಗಿದೆ.

ಪ್ರತಿ ಮನೆ ನಿರ್ಮಾಣಕ್ಕೂ ರಾಜ್ಯ ಸರ್ಕಾರ 75 ಸಾವಿರ, ಕೇಂದ್ರ ಸರ್ಕಾರ 50 ಸಾವಿರ ಹೀಗೆ ಒಟ್ಟು 1.25 ಲಕ್ಷ ರೂ ಫಲಾನುಭವಿಗೆ ನೀಡುತ್ತದೆ. ಅಂದರೆ ಈ ಹಣವನ್ನು ನಾಲ್ಕು ಹಂತದಲ್ಲಿ ನೀಡಲಾಗುತ್ತದೆ.

ರಾಜ್ಯ ಸರ್ಕಾರ 9.74ಲಕ್ಷ ಮನೆಗಳನ್ನು 10,194 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಇನ್ನೂ ಒಂದು ಹೆಜ್ಞೆ ಮುಂದೆ ಹೋಗಿರುವ ಸಚಿವ ಸೋಮಣ್ಣ ಮತ್ತೆ 1.25 ಲಕ್ಷ ಮನೆಗಳನ್ನು ಮಂಜೂರು ಮಾಡುತ್ತೇವೆ ಎಂದು ಜೂನ್ 1ರಂದು ಹೇಳಿದ್ದರು. ಆದರೆ ಈಗ ಮಂಜೂರು ಮಾಡಿರುವ ಮನೆಗಳೇ ಪೂರ್ಣಗೊಂಡಿಲ್ಲ. ಹಣವೂ ಬಿಡುಗಡೆ ಮಾಡಿಲ್ಲ. ಮತ್ತೆ ಒಂದು ಲಕ್ಷ ಮನೆಗಳಿಗೆ ಹಣ ಎಲ್ಲಿಂದ ತರುತ್ತಾರೆ ಎಂಬ ಪ್ರಶ್ನೆ ಉದ್ಭವಿಸುತ್ತದೆ.

ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ಮನೆಗಳ ನಿರ್ಮಾಣ ಕಾಮಗಾರಿಗೆ 4 ಸಾವಿರ ಕೋಟಿ ಬಿಡುಗಡೆ ಮಾಡುವುದಾಗಿ ಸರ್ಕಾರ ಹೇಳಿತ್ತು. ಸಚಿವ ಸೋಮಣ್ಣನವರು ಮೇ 14, 2020ರಂದು ಪ್ರಜಾವಾಣಿ ಪೋನ್ ಇನ್ ಕಾರ್ಯಕ್ರಮದಲ್ಲಿ ಫಲನುಭವಿಯೊಬ್ಬರ ಕರೆಗೆ ಉತ್ತರಿಸಿ ಇನ್ನೊಂದು ವಾರದಲ್ಲಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಮೂರು ತಿಂಗಳು ಕಳೆದರೂ ಹಣ ಬಿಡುಗಡೆಯಾಗಿಲ್ಲ. ಹಣ ಬಿಡುಗಡೆ ಮಾಡುವ ಭರವಸೆ ದೊರೆಯುತ್ತಿದೆಯೇ ಹೊರತು ಕೊಟ್ಟ ಮಾತನ್ನು ಸರ್ಕಾರ ಉಳಿಸಿಕೊಂಡಿಲ್ಲ ಎಂಬುದು ಜನರ ದೂರು.

ಗ್ರಾಮಗಳನ್ನು ಗುಡಿಸಲು ಮುಕ್ತಗೊಳಿಸುವುದಾಗಿ ಸರ್ಕಾರ ಹೇಳಿತ್ತು. ಆದರೆ ಹಟ್ಟಿಗಳಲ್ಲಿ ಇಂದಿಗೂ ಗುಡಿಸಲು ಮನೆಗಳಲ್ಲೇ ಬಡಕುಟುಂಬಗಳು ವಾಸಿಸುತ್ತಿವೆ. ಗೊಲ್ಲರಹಟ್ಟಿಗಳು, ಹಾಡಿಗಳು, ಆದಿವಾಸಿಗಳು, ಕೊಳಗೇರಿಗಳು ವಾಸಿಸುವ ಪ್ರದೇಶಗಳಲ್ಲಿ ಗುಡಿಸಲುಗಳು ಬಿಟ್ಟರೆ ಇಟ್ಟಿಗೆಯ ಮೆನಗಳನ್ನು ನೋಡುವುದು ಅಪರೂಪ. ಗುಡಿಸಲುಗಳಲ್ಲಿ ವಾಸಿಸುವ ಬಡಕುಟುಂಬಗಳು ಮಳೆಗಾಲದಲ್ಲಿ ಸೋರು ಮನೆಗಳಲ್ಲೇ ಜೀವನ ದೂಡುವಂತಹ ಪರಿಸ್ಥಿತಿ ಇದೆ. ಸರ್ಕಾರದ ವಸತಿ ಯೋಜನೆಗಳು ಇಂಥವರ ಬಾಳಿಗೆ ಆಸರೆ ಆಗುವುದು ಗಗನ ಕುಸುಮವಾಗಿದೆ.

ವಸತಿ ಸಚಿವರು ಹಿಂದಿನ ಸರ್ಕಾರಗಳಲ್ಲಾದ ಲೋಪದೋಷಗಳನ್ನು ಮುಂದುಮಾಡಿಕೊಂಡು ಟೀಕಿಸುವುದು ಬಿಟ್ಟು ನಿಜವಾದ ಫಲನುಭರಿಗಳಿಗೆ ಸೂರು ಕಲ್ಪಿಸುವತ್ತ ಮುಂದಾಗಬೇಕು. ಫಲನುಭವಿಗಳಿಗೆ ಶೀಘ್ರ ಹಣ ಬಿಡುಗಡೆ ಮಾಡಿ ಬಡಕುಟುಂಬಗಳ ನೆರವಿಗೆ ಬರಬೇಕು. ಸಾಲದಲ್ಲಿ ನರಳುತ್ತಿರುವ ಕುಟುಂಬಗಳನ್ನು ಪಾರು ಮಾಡುವ ಕೆಲಸ ಸರ್ಕಾರದಿಂದ ಅಗಬೇಕಾಗಿದೆ.


ಇದನ್ನೂ ಓದಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಪಟ್ಟು: ಬೆಳಗಾವಿ, ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...