Homeಮುಖಪುಟಬಿಡುಗಡೆಯಾಗದ ವಸತಿ ಯೋಜನೆ ಹಣ, ಅಪೂರ್ಣವಾದ ಮನೆಗಳು: ಈಡೇರದ ಗುಡಿಸಲು ಮುಕ್ತ ಭರವಸೆ

ಬಿಡುಗಡೆಯಾಗದ ವಸತಿ ಯೋಜನೆ ಹಣ, ಅಪೂರ್ಣವಾದ ಮನೆಗಳು: ಈಡೇರದ ಗುಡಿಸಲು ಮುಕ್ತ ಭರವಸೆ

ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾದ ಮೇಲೆ ಮಂಜೂರಾಗಿರುವ ಮನೆ ನಿರ್ಮಾಣ ಕಾಮಗಾರಿಗಳು ಸ್ಥಗಿತ ಗೊಂಡಿದ್ದು ವಿವಿಧ ಹಂತದ ನಿರ್ಮಾಣದಲ್ಲೇ ನಿಂತುಹೋಗಿವೆ. ಫಲಾನುಭವಿಗಳಿಗೆ ಹಣ ಬಿಡುಗಡೆಗೊಳಿಸಬೇಕಾದ ಸರ್ಕಾರ ಜವಾಬ್ದಾರಿ ಮತ್ತು ಕರ್ತವ್ಯವನ್ನು ಮರೆತಂತೆ ಕಾಣುತ್ತಿದೆ. 

- Advertisement -
- Advertisement -

ರಾಜ್ಯದಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ಕಾಮಗಾರಿ ಸ್ಥಗಿತಗೊಂಡಿದೆ. ಹಣ ಬಿಡುಗಡೆಯಾಗದೆ ಕಾಮಗಾರಿಗಳು ಅರ್ಧಕ್ಕೆ ನಿಂತುಹೋಗಿವೆ. ಇಂದಿರಾಗಾಂಧೀ ವಸತಿ ಯೋಜನೆ, ಅಟಲ್ ವಸತಿ ಯೋಜನೆ, ರಾಜೀವ್ ಗಾಂಧಿ ವಸತಿ ಯೋಜನೆ ಹೀಗೆ ವಿವಿಧ ವಸತಿ ಯೋಜನೆಗಳಲ್ಲಿ  2019-20ನೇ ಸಾಲಿನಲ್ಲಿ 9 ಲಕ್ಷಕ್ಕೂ ಹೆಚ್ಚು ಮನೆಗಳು ಮಂಜೂರಾಗಿ ಸರ್ಕಾರ ಹಣ ನೀಡದೆ ಮನೆ ನಿರ್ಮಾಣ ಕಾಮಗಾರಿ ಕುಂಠಿತಗೊಂಡಿದೆ. ವಸತಿ ಸಚಿವರು ಮೇ 14ರಂದು ವಾರದಲ್ಲೇ ಹಣ ಬಿಡುಗಡೆ ಮಾಡುವುದಾಗಿ ನೀಡಿದ್ದ ಭರವಸೆ ಮೂರು ತಿಂಗಳು ಕಳೆದರೂ ಈಡೇರಿಲ್ಲ.

ಸಿದ್ದರಾಮಯ್ಯ ಮತ್ತು ಎಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಮಂಜೂರಾಗಿದ್ದ ಮನೆಗಳು ಪೂರ್ಣಗೊಂಡು ಫಲಾನುಭವಿಗಳು ಮಳೆ-ಗಾಳಿ-ಬಿಸಿಲಿನಿಂದ ರಕ್ಷಣೆ ಪಡೆದಿದ್ದಾರೆ. ಆದರೆ ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾದ ಮೇಲೆ ಮಂಜೂರಾಗಿರುವ ಮನೆ ನಿರ್ಮಾಣ ಕಾಮಗಾರಿಗಳು ಸ್ಥಗಿತ ಗೊಂಡಿದ್ದು ವಿವಿಧ ಹಂತದ ನಿರ್ಮಾಣದಲ್ಲೇ ನಿಂತುಹೋಗಿವೆ. ಫಲಾನುಭವಿಗಳಿಗೆ ಹಣ ಬಿಡುಗಡೆಗೊಳಿಸಬೇಕಾದ ಸರ್ಕಾರ ಜವಾಬ್ದಾರಿ ಮತ್ತು ಕರ್ತವ್ಯವನ್ನು ಮರೆತಂತೆ ಕಾಣುತ್ತಿದೆ.

ನಿವೇಶನರಹಿತ ಮತ್ತು ಮನೆರಹಿತ ಬಡವರಿಗೆ ಸೂರು ಕಲ್ಪಿಸುವ ಭರವಸೆ ನೀಡಿದ ಯಡಿಯೂರಪ್ಪ ಸರ್ಕಾರ ಇದೀಗ ಬಾಕಿ ಹಣ ಬಿಡುಗಡೆ ಮಾಡದೆ ಮೌನಕ್ಕೆ ಜಾರಿದೆ. ಹಾಗಾಗಿ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಮನೆ ನಿರ್ಮಾಣ ಕಾಮಗಾರಿಗಳು ಅಪೂರ್ಣಗೊಂಡಿವೆ. ಸರ್ಕಾರ ಹಣ ಬಿಡುಗಡೆ ಮಾಡುತ್ತದೆ. ನಾವು ಮನೆ ಸೇರಿಕೊಳ್ಳುತ್ತೇವೆ ಎಂದು ಹುಮ್ಮಸ್ಸಿನಿಂದ ಮನೆ ಕಟ್ಟಿಸಲು ಮುಂದಾದ ಜನರು ಸಾಲಸೋಲ ಮಾಡಿ ಹಣ ಹೊಂದಿಸಿದ್ದರು. ಆದರೆ ಕಳೆದ ಒಂದು ವರ್ಷದಿಂದ ಕೇವಲ ಪಾಯದ ಹಂತಕ್ಕೆ ಮಾತ್ರ ಹಣ ಬಿಡುಗಡೆ ಆಗಿದೆ ಎಂದು ಆರೋಪಿಸಿದ್ದಾರೆ.

ಫಲಾನುಭವಿಗಳಿಗೆ ನಾಲ್ಕು ಹಂತದಲ್ಲಿ ಹಣ ಬಿಡುಗಡೆ ಮಾಡಲಾಗುತ್ತದೆ. ಪಾಯದ ಹಂತಕ್ಕೆ 43 ಸಾವಿರ ರೂ ಬಿಡುಗಡೆಯಾಗಿದೆ. ಆದರೆ ನಂತರದ ಹಂತಗಳಿಗೆ ಹಣ ಬಿಡುಗಡೆಯಾಗಿಲ್ಲ. ಫಲನುಭವಿಗಳು ಪಾಯ, ಗೋಡೆ, ಮೇಲ್ಛಾವಣೆ, ಮತ್ತು ಮನೆ ಪೂರ್ಣಗೊಳಿಸಲು ಮೊದಲೇ ಹಣ ಸುರಿಯಬೇಕು. ಬಡವರಾಗಿರುವ ಫಲಾನುಭವಿಗಳು ಇದಕ್ಕಾಗಿ ಸಾಲ ಮಾಡಿದ್ದಾರೆ. ಸಾವಿರಾರು ರೂಪಾಯಿ ಸಾಲ ಮಾಡಿ ತಮ್ಮ ಸಾಮರ್ಥ್ಯಕ್ಕೆ ತಕ್ಕಹಾಗೆ ಪಾಯ, ಗೋಡೆ, ಟಾಪ್ ಹಂತದವರೆಗೂ ಮನೆ ನಿರ್ಮಿಸಿಕೊಂಡಿದ್ದಾರೆ. ಸಾಲ ನೀಡಿದವರು ಸಾಲಕ್ಕೆ ಒತ್ತಡ ಹೇರುತ್ತಿದ್ದಾರೆ. ಇದರಿಂದ ಸಾಲ ಪಡೆದವರು ಹಣ ನೀಡಲು ಬೇರೆ ಮಾರ್ಗಗಳೇ ಇಲ್ಲವಾಗಿದೆ.

ಪ್ರತಿ ಮನೆ ನಿರ್ಮಾಣಕ್ಕೂ ರಾಜ್ಯ ಸರ್ಕಾರ 75 ಸಾವಿರ, ಕೇಂದ್ರ ಸರ್ಕಾರ 50 ಸಾವಿರ ಹೀಗೆ ಒಟ್ಟು 1.25 ಲಕ್ಷ ರೂ ಫಲಾನುಭವಿಗೆ ನೀಡುತ್ತದೆ. ಅಂದರೆ ಈ ಹಣವನ್ನು ನಾಲ್ಕು ಹಂತದಲ್ಲಿ ನೀಡಲಾಗುತ್ತದೆ.

ರಾಜ್ಯ ಸರ್ಕಾರ 9.74ಲಕ್ಷ ಮನೆಗಳನ್ನು 10,194 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಇನ್ನೂ ಒಂದು ಹೆಜ್ಞೆ ಮುಂದೆ ಹೋಗಿರುವ ಸಚಿವ ಸೋಮಣ್ಣ ಮತ್ತೆ 1.25 ಲಕ್ಷ ಮನೆಗಳನ್ನು ಮಂಜೂರು ಮಾಡುತ್ತೇವೆ ಎಂದು ಜೂನ್ 1ರಂದು ಹೇಳಿದ್ದರು. ಆದರೆ ಈಗ ಮಂಜೂರು ಮಾಡಿರುವ ಮನೆಗಳೇ ಪೂರ್ಣಗೊಂಡಿಲ್ಲ. ಹಣವೂ ಬಿಡುಗಡೆ ಮಾಡಿಲ್ಲ. ಮತ್ತೆ ಒಂದು ಲಕ್ಷ ಮನೆಗಳಿಗೆ ಹಣ ಎಲ್ಲಿಂದ ತರುತ್ತಾರೆ ಎಂಬ ಪ್ರಶ್ನೆ ಉದ್ಭವಿಸುತ್ತದೆ.

ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ಮನೆಗಳ ನಿರ್ಮಾಣ ಕಾಮಗಾರಿಗೆ 4 ಸಾವಿರ ಕೋಟಿ ಬಿಡುಗಡೆ ಮಾಡುವುದಾಗಿ ಸರ್ಕಾರ ಹೇಳಿತ್ತು. ಸಚಿವ ಸೋಮಣ್ಣನವರು ಮೇ 14, 2020ರಂದು ಪ್ರಜಾವಾಣಿ ಪೋನ್ ಇನ್ ಕಾರ್ಯಕ್ರಮದಲ್ಲಿ ಫಲನುಭವಿಯೊಬ್ಬರ ಕರೆಗೆ ಉತ್ತರಿಸಿ ಇನ್ನೊಂದು ವಾರದಲ್ಲಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಮೂರು ತಿಂಗಳು ಕಳೆದರೂ ಹಣ ಬಿಡುಗಡೆಯಾಗಿಲ್ಲ. ಹಣ ಬಿಡುಗಡೆ ಮಾಡುವ ಭರವಸೆ ದೊರೆಯುತ್ತಿದೆಯೇ ಹೊರತು ಕೊಟ್ಟ ಮಾತನ್ನು ಸರ್ಕಾರ ಉಳಿಸಿಕೊಂಡಿಲ್ಲ ಎಂಬುದು ಜನರ ದೂರು.

ಗ್ರಾಮಗಳನ್ನು ಗುಡಿಸಲು ಮುಕ್ತಗೊಳಿಸುವುದಾಗಿ ಸರ್ಕಾರ ಹೇಳಿತ್ತು. ಆದರೆ ಹಟ್ಟಿಗಳಲ್ಲಿ ಇಂದಿಗೂ ಗುಡಿಸಲು ಮನೆಗಳಲ್ಲೇ ಬಡಕುಟುಂಬಗಳು ವಾಸಿಸುತ್ತಿವೆ. ಗೊಲ್ಲರಹಟ್ಟಿಗಳು, ಹಾಡಿಗಳು, ಆದಿವಾಸಿಗಳು, ಕೊಳಗೇರಿಗಳು ವಾಸಿಸುವ ಪ್ರದೇಶಗಳಲ್ಲಿ ಗುಡಿಸಲುಗಳು ಬಿಟ್ಟರೆ ಇಟ್ಟಿಗೆಯ ಮೆನಗಳನ್ನು ನೋಡುವುದು ಅಪರೂಪ. ಗುಡಿಸಲುಗಳಲ್ಲಿ ವಾಸಿಸುವ ಬಡಕುಟುಂಬಗಳು ಮಳೆಗಾಲದಲ್ಲಿ ಸೋರು ಮನೆಗಳಲ್ಲೇ ಜೀವನ ದೂಡುವಂತಹ ಪರಿಸ್ಥಿತಿ ಇದೆ. ಸರ್ಕಾರದ ವಸತಿ ಯೋಜನೆಗಳು ಇಂಥವರ ಬಾಳಿಗೆ ಆಸರೆ ಆಗುವುದು ಗಗನ ಕುಸುಮವಾಗಿದೆ.

ವಸತಿ ಸಚಿವರು ಹಿಂದಿನ ಸರ್ಕಾರಗಳಲ್ಲಾದ ಲೋಪದೋಷಗಳನ್ನು ಮುಂದುಮಾಡಿಕೊಂಡು ಟೀಕಿಸುವುದು ಬಿಟ್ಟು ನಿಜವಾದ ಫಲನುಭರಿಗಳಿಗೆ ಸೂರು ಕಲ್ಪಿಸುವತ್ತ ಮುಂದಾಗಬೇಕು. ಫಲನುಭವಿಗಳಿಗೆ ಶೀಘ್ರ ಹಣ ಬಿಡುಗಡೆ ಮಾಡಿ ಬಡಕುಟುಂಬಗಳ ನೆರವಿಗೆ ಬರಬೇಕು. ಸಾಲದಲ್ಲಿ ನರಳುತ್ತಿರುವ ಕುಟುಂಬಗಳನ್ನು ಪಾರು ಮಾಡುವ ಕೆಲಸ ಸರ್ಕಾರದಿಂದ ಅಗಬೇಕಾಗಿದೆ.


ಇದನ್ನೂ ಓದಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಪಟ್ಟು: ಬೆಳಗಾವಿ, ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...