Homeಮುಖಪುಟಬಿಡುಗಡೆಯಾಗದ ವಸತಿ ಯೋಜನೆ ಹಣ, ಅಪೂರ್ಣವಾದ ಮನೆಗಳು: ಈಡೇರದ ಗುಡಿಸಲು ಮುಕ್ತ ಭರವಸೆ

ಬಿಡುಗಡೆಯಾಗದ ವಸತಿ ಯೋಜನೆ ಹಣ, ಅಪೂರ್ಣವಾದ ಮನೆಗಳು: ಈಡೇರದ ಗುಡಿಸಲು ಮುಕ್ತ ಭರವಸೆ

ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾದ ಮೇಲೆ ಮಂಜೂರಾಗಿರುವ ಮನೆ ನಿರ್ಮಾಣ ಕಾಮಗಾರಿಗಳು ಸ್ಥಗಿತ ಗೊಂಡಿದ್ದು ವಿವಿಧ ಹಂತದ ನಿರ್ಮಾಣದಲ್ಲೇ ನಿಂತುಹೋಗಿವೆ. ಫಲಾನುಭವಿಗಳಿಗೆ ಹಣ ಬಿಡುಗಡೆಗೊಳಿಸಬೇಕಾದ ಸರ್ಕಾರ ಜವಾಬ್ದಾರಿ ಮತ್ತು ಕರ್ತವ್ಯವನ್ನು ಮರೆತಂತೆ ಕಾಣುತ್ತಿದೆ. 

- Advertisement -
- Advertisement -

ರಾಜ್ಯದಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ಕಾಮಗಾರಿ ಸ್ಥಗಿತಗೊಂಡಿದೆ. ಹಣ ಬಿಡುಗಡೆಯಾಗದೆ ಕಾಮಗಾರಿಗಳು ಅರ್ಧಕ್ಕೆ ನಿಂತುಹೋಗಿವೆ. ಇಂದಿರಾಗಾಂಧೀ ವಸತಿ ಯೋಜನೆ, ಅಟಲ್ ವಸತಿ ಯೋಜನೆ, ರಾಜೀವ್ ಗಾಂಧಿ ವಸತಿ ಯೋಜನೆ ಹೀಗೆ ವಿವಿಧ ವಸತಿ ಯೋಜನೆಗಳಲ್ಲಿ  2019-20ನೇ ಸಾಲಿನಲ್ಲಿ 9 ಲಕ್ಷಕ್ಕೂ ಹೆಚ್ಚು ಮನೆಗಳು ಮಂಜೂರಾಗಿ ಸರ್ಕಾರ ಹಣ ನೀಡದೆ ಮನೆ ನಿರ್ಮಾಣ ಕಾಮಗಾರಿ ಕುಂಠಿತಗೊಂಡಿದೆ. ವಸತಿ ಸಚಿವರು ಮೇ 14ರಂದು ವಾರದಲ್ಲೇ ಹಣ ಬಿಡುಗಡೆ ಮಾಡುವುದಾಗಿ ನೀಡಿದ್ದ ಭರವಸೆ ಮೂರು ತಿಂಗಳು ಕಳೆದರೂ ಈಡೇರಿಲ್ಲ.

ಸಿದ್ದರಾಮಯ್ಯ ಮತ್ತು ಎಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಮಂಜೂರಾಗಿದ್ದ ಮನೆಗಳು ಪೂರ್ಣಗೊಂಡು ಫಲಾನುಭವಿಗಳು ಮಳೆ-ಗಾಳಿ-ಬಿಸಿಲಿನಿಂದ ರಕ್ಷಣೆ ಪಡೆದಿದ್ದಾರೆ. ಆದರೆ ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾದ ಮೇಲೆ ಮಂಜೂರಾಗಿರುವ ಮನೆ ನಿರ್ಮಾಣ ಕಾಮಗಾರಿಗಳು ಸ್ಥಗಿತ ಗೊಂಡಿದ್ದು ವಿವಿಧ ಹಂತದ ನಿರ್ಮಾಣದಲ್ಲೇ ನಿಂತುಹೋಗಿವೆ. ಫಲಾನುಭವಿಗಳಿಗೆ ಹಣ ಬಿಡುಗಡೆಗೊಳಿಸಬೇಕಾದ ಸರ್ಕಾರ ಜವಾಬ್ದಾರಿ ಮತ್ತು ಕರ್ತವ್ಯವನ್ನು ಮರೆತಂತೆ ಕಾಣುತ್ತಿದೆ.

ನಿವೇಶನರಹಿತ ಮತ್ತು ಮನೆರಹಿತ ಬಡವರಿಗೆ ಸೂರು ಕಲ್ಪಿಸುವ ಭರವಸೆ ನೀಡಿದ ಯಡಿಯೂರಪ್ಪ ಸರ್ಕಾರ ಇದೀಗ ಬಾಕಿ ಹಣ ಬಿಡುಗಡೆ ಮಾಡದೆ ಮೌನಕ್ಕೆ ಜಾರಿದೆ. ಹಾಗಾಗಿ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಮನೆ ನಿರ್ಮಾಣ ಕಾಮಗಾರಿಗಳು ಅಪೂರ್ಣಗೊಂಡಿವೆ. ಸರ್ಕಾರ ಹಣ ಬಿಡುಗಡೆ ಮಾಡುತ್ತದೆ. ನಾವು ಮನೆ ಸೇರಿಕೊಳ್ಳುತ್ತೇವೆ ಎಂದು ಹುಮ್ಮಸ್ಸಿನಿಂದ ಮನೆ ಕಟ್ಟಿಸಲು ಮುಂದಾದ ಜನರು ಸಾಲಸೋಲ ಮಾಡಿ ಹಣ ಹೊಂದಿಸಿದ್ದರು. ಆದರೆ ಕಳೆದ ಒಂದು ವರ್ಷದಿಂದ ಕೇವಲ ಪಾಯದ ಹಂತಕ್ಕೆ ಮಾತ್ರ ಹಣ ಬಿಡುಗಡೆ ಆಗಿದೆ ಎಂದು ಆರೋಪಿಸಿದ್ದಾರೆ.

ಫಲಾನುಭವಿಗಳಿಗೆ ನಾಲ್ಕು ಹಂತದಲ್ಲಿ ಹಣ ಬಿಡುಗಡೆ ಮಾಡಲಾಗುತ್ತದೆ. ಪಾಯದ ಹಂತಕ್ಕೆ 43 ಸಾವಿರ ರೂ ಬಿಡುಗಡೆಯಾಗಿದೆ. ಆದರೆ ನಂತರದ ಹಂತಗಳಿಗೆ ಹಣ ಬಿಡುಗಡೆಯಾಗಿಲ್ಲ. ಫಲನುಭವಿಗಳು ಪಾಯ, ಗೋಡೆ, ಮೇಲ್ಛಾವಣೆ, ಮತ್ತು ಮನೆ ಪೂರ್ಣಗೊಳಿಸಲು ಮೊದಲೇ ಹಣ ಸುರಿಯಬೇಕು. ಬಡವರಾಗಿರುವ ಫಲಾನುಭವಿಗಳು ಇದಕ್ಕಾಗಿ ಸಾಲ ಮಾಡಿದ್ದಾರೆ. ಸಾವಿರಾರು ರೂಪಾಯಿ ಸಾಲ ಮಾಡಿ ತಮ್ಮ ಸಾಮರ್ಥ್ಯಕ್ಕೆ ತಕ್ಕಹಾಗೆ ಪಾಯ, ಗೋಡೆ, ಟಾಪ್ ಹಂತದವರೆಗೂ ಮನೆ ನಿರ್ಮಿಸಿಕೊಂಡಿದ್ದಾರೆ. ಸಾಲ ನೀಡಿದವರು ಸಾಲಕ್ಕೆ ಒತ್ತಡ ಹೇರುತ್ತಿದ್ದಾರೆ. ಇದರಿಂದ ಸಾಲ ಪಡೆದವರು ಹಣ ನೀಡಲು ಬೇರೆ ಮಾರ್ಗಗಳೇ ಇಲ್ಲವಾಗಿದೆ.

ಪ್ರತಿ ಮನೆ ನಿರ್ಮಾಣಕ್ಕೂ ರಾಜ್ಯ ಸರ್ಕಾರ 75 ಸಾವಿರ, ಕೇಂದ್ರ ಸರ್ಕಾರ 50 ಸಾವಿರ ಹೀಗೆ ಒಟ್ಟು 1.25 ಲಕ್ಷ ರೂ ಫಲಾನುಭವಿಗೆ ನೀಡುತ್ತದೆ. ಅಂದರೆ ಈ ಹಣವನ್ನು ನಾಲ್ಕು ಹಂತದಲ್ಲಿ ನೀಡಲಾಗುತ್ತದೆ.

ರಾಜ್ಯ ಸರ್ಕಾರ 9.74ಲಕ್ಷ ಮನೆಗಳನ್ನು 10,194 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಇನ್ನೂ ಒಂದು ಹೆಜ್ಞೆ ಮುಂದೆ ಹೋಗಿರುವ ಸಚಿವ ಸೋಮಣ್ಣ ಮತ್ತೆ 1.25 ಲಕ್ಷ ಮನೆಗಳನ್ನು ಮಂಜೂರು ಮಾಡುತ್ತೇವೆ ಎಂದು ಜೂನ್ 1ರಂದು ಹೇಳಿದ್ದರು. ಆದರೆ ಈಗ ಮಂಜೂರು ಮಾಡಿರುವ ಮನೆಗಳೇ ಪೂರ್ಣಗೊಂಡಿಲ್ಲ. ಹಣವೂ ಬಿಡುಗಡೆ ಮಾಡಿಲ್ಲ. ಮತ್ತೆ ಒಂದು ಲಕ್ಷ ಮನೆಗಳಿಗೆ ಹಣ ಎಲ್ಲಿಂದ ತರುತ್ತಾರೆ ಎಂಬ ಪ್ರಶ್ನೆ ಉದ್ಭವಿಸುತ್ತದೆ.

ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ಮನೆಗಳ ನಿರ್ಮಾಣ ಕಾಮಗಾರಿಗೆ 4 ಸಾವಿರ ಕೋಟಿ ಬಿಡುಗಡೆ ಮಾಡುವುದಾಗಿ ಸರ್ಕಾರ ಹೇಳಿತ್ತು. ಸಚಿವ ಸೋಮಣ್ಣನವರು ಮೇ 14, 2020ರಂದು ಪ್ರಜಾವಾಣಿ ಪೋನ್ ಇನ್ ಕಾರ್ಯಕ್ರಮದಲ್ಲಿ ಫಲನುಭವಿಯೊಬ್ಬರ ಕರೆಗೆ ಉತ್ತರಿಸಿ ಇನ್ನೊಂದು ವಾರದಲ್ಲಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಮೂರು ತಿಂಗಳು ಕಳೆದರೂ ಹಣ ಬಿಡುಗಡೆಯಾಗಿಲ್ಲ. ಹಣ ಬಿಡುಗಡೆ ಮಾಡುವ ಭರವಸೆ ದೊರೆಯುತ್ತಿದೆಯೇ ಹೊರತು ಕೊಟ್ಟ ಮಾತನ್ನು ಸರ್ಕಾರ ಉಳಿಸಿಕೊಂಡಿಲ್ಲ ಎಂಬುದು ಜನರ ದೂರು.

ಗ್ರಾಮಗಳನ್ನು ಗುಡಿಸಲು ಮುಕ್ತಗೊಳಿಸುವುದಾಗಿ ಸರ್ಕಾರ ಹೇಳಿತ್ತು. ಆದರೆ ಹಟ್ಟಿಗಳಲ್ಲಿ ಇಂದಿಗೂ ಗುಡಿಸಲು ಮನೆಗಳಲ್ಲೇ ಬಡಕುಟುಂಬಗಳು ವಾಸಿಸುತ್ತಿವೆ. ಗೊಲ್ಲರಹಟ್ಟಿಗಳು, ಹಾಡಿಗಳು, ಆದಿವಾಸಿಗಳು, ಕೊಳಗೇರಿಗಳು ವಾಸಿಸುವ ಪ್ರದೇಶಗಳಲ್ಲಿ ಗುಡಿಸಲುಗಳು ಬಿಟ್ಟರೆ ಇಟ್ಟಿಗೆಯ ಮೆನಗಳನ್ನು ನೋಡುವುದು ಅಪರೂಪ. ಗುಡಿಸಲುಗಳಲ್ಲಿ ವಾಸಿಸುವ ಬಡಕುಟುಂಬಗಳು ಮಳೆಗಾಲದಲ್ಲಿ ಸೋರು ಮನೆಗಳಲ್ಲೇ ಜೀವನ ದೂಡುವಂತಹ ಪರಿಸ್ಥಿತಿ ಇದೆ. ಸರ್ಕಾರದ ವಸತಿ ಯೋಜನೆಗಳು ಇಂಥವರ ಬಾಳಿಗೆ ಆಸರೆ ಆಗುವುದು ಗಗನ ಕುಸುಮವಾಗಿದೆ.

ವಸತಿ ಸಚಿವರು ಹಿಂದಿನ ಸರ್ಕಾರಗಳಲ್ಲಾದ ಲೋಪದೋಷಗಳನ್ನು ಮುಂದುಮಾಡಿಕೊಂಡು ಟೀಕಿಸುವುದು ಬಿಟ್ಟು ನಿಜವಾದ ಫಲನುಭರಿಗಳಿಗೆ ಸೂರು ಕಲ್ಪಿಸುವತ್ತ ಮುಂದಾಗಬೇಕು. ಫಲನುಭವಿಗಳಿಗೆ ಶೀಘ್ರ ಹಣ ಬಿಡುಗಡೆ ಮಾಡಿ ಬಡಕುಟುಂಬಗಳ ನೆರವಿಗೆ ಬರಬೇಕು. ಸಾಲದಲ್ಲಿ ನರಳುತ್ತಿರುವ ಕುಟುಂಬಗಳನ್ನು ಪಾರು ಮಾಡುವ ಕೆಲಸ ಸರ್ಕಾರದಿಂದ ಅಗಬೇಕಾಗಿದೆ.


ಇದನ್ನೂ ಓದಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಪಟ್ಟು: ಬೆಳಗಾವಿ, ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...