Homeಮುಖಪುಟಮಣಿಪುರದಲ್ಲಿ ನಿಲ್ಲದ ಹಿಂಸಾಚಾರ: ಕೇಂದ್ರ ಸಚಿವ ಆರ್‌ಕೆ ರಂಜನ್ ಸಿಂಗ್ ಮನೆ ಮೇಲೆ ದಾಳಿ

ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ: ಕೇಂದ್ರ ಸಚಿವ ಆರ್‌ಕೆ ರಂಜನ್ ಸಿಂಗ್ ಮನೆ ಮೇಲೆ ದಾಳಿ

- Advertisement -
- Advertisement -

ಕಳೆದ ಕೆಲ ದಿನಗಳಿಂದ ಈಶಾನ್ಯ ರಾಜ್ಯ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ಮುಂದುವರೆದಿದ್ದು, ಗುರುವಾರ ಕೇಂದ್ರ ವಿದೇಶಾಂಗ ಮತ್ತು ಶಿಕ್ಷಣ ರಾಜ್ಯ ಸಚಿವ ಆರ್‌ಕೆ ರಂಜನ್ ಸಿಂಗ್ ಅವರ ಮನೆಯ ಮೇಲೆ ಗುಂಪೊಂದು ದಾಳಿ ಮಾಡಿದೆ ಎಂದು ಇಂಫಾಲ್ ಫ್ರೀ ಪ್ರೆಸ್ ವರದಿ ಮಾಡಿದೆ.

ಬುಧವಾರ ಮತ್ತೊಂದು ಹಿಂಸಾಚಾರದ ಘಟನೆ ನಡೆಯಿತು ಅದರಲ್ಲಿ ಓರ್ವ ಸಾವಿಗೀಡಾಗಿದ್ದು ಇಬ್ಬರಿಗೆ ಗಾಯಗಳಾಗಿದ್ದವು. ಈ ಘಟನೆ ಬೆನ್ನಲ್ಲೇ ಇಂಫಾಲ್ ಪೂರ್ವ ಜಿಲ್ಲೆಯ ಬಿಜೆಪಿ ಸಂಸದರ ಮನೆಗೆ ಗುರುವಾರ ರಾತ್ರಿ 8.30 ರ ಸುಮಾರಿಗೆ ಗುಂಪೊಂದು ನುಗ್ಗಿದೆ.

ಬುಧವಾರ ಬೆಳಿಗ್ಗೆ ಉಗ್ರರು ಗುಂಡಿನ ದಾಳಿ ನಡೆಸಿದಾಗ ವ್ಯಕ್ತಿ ಬಲಿಯಾಗಿದ್ದಾನೆ. ಹತ್ಯೆಗೀಡಾದ ವ್ಯಕ್ತಿಯನ್ನು ಚುರಾಚಂದ್‌ಪುರದ ಥೆಂಗ್ರಾ ಲೈರಾಕ್‌ನ ತೋಯಿಜಮ್ ಚಂದ್ರಮಣಿ ಸಿಂಗ್ ಎಂದು ಗುರುತಿಸಲಾಗಿದೆ. ಅವರು ಮೊಯಿರಾಂಗ್‌ನ ನಿರಾಶ್ರಿತ ಶಿಬಿರದಲ್ಲಿ ತಂಗಿದ್ದರು ಎಂದು ವರದಿಯಾಗಿದೆ.

ಬಿಷ್ಣುಪುರ್ ಜಿಲ್ಲೆಯಲ್ಲೂ ಉದ್ವಿಗ್ನತೆ ಭುಗಿಲೆದ್ದಿದೆ. ರಾಜ್ಯ ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದಾಸ್ ಕೊಂತೌಜಮ್ ಅವರ ಮನೆಯನ್ನು ಧ್ವಂಸಗೊಳಿಸಲಾಗಿದೆ. ಬುಧವಾರ ಸಂಜೆ ನಿಂಗ್‌ತೌಖೋಂಗ್ ಪಟ್ಟಣದಲ್ಲಿರುವ ಸಚಿವರ ನಿವಾಸಕ್ಕೆ ಗುಂಪೊಂದು ನುಗ್ಗಿತು. ಘಟನೆ ನಡೆದಾಗ ಸ್ವತಃ ಸಚಿವರಾಗಲೀ ಅವರ ಕುಟುಂಬದವರಾಗಲೀ ಮನೆಯಲ್ಲಿ ಇರಲಿಲ್ಲ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ತಿಳಿಸಿದೆ.

ಬಿಷ್ಣುಪುರ್ ಜಿಲ್ಲೆಯಲ್ಲಿ ಮತ್ತೆ ಅನಿರ್ದಿಷ್ಟ ಕರ್ಫ್ಯೂ ವಿಧಿಸಲಾಗಿದೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ. ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಕರ್ಫ್ಯೂವನ್ನೂ ನಾಲ್ಕು ಗಂಟೆಗಳ ಕಾಲ ಮುಂದುವರಿಸಲಾಗಿದೆ.

ಗುರುವಾರ, ಬಹುಮಟ್ಟಿಗೆ ಮೈತಿ ಸಮುದಾಯದ ನೇತೃತ್ವದ ಗುಂಪು ಬುಧವಾರದ ಅಶಾಂತಿಯ ವಿರುದ್ಧ ತಮ್ಮ ಕೋಪವನ್ನು ವ್ಯಕ್ತಪಡಿಸಲು ಸಿಂಗ್ ಅವರ ಮನೆಯ ಮೇಲೆ ದಾಳಿ ಮಾಡಿದೆ ಎಂದು ದಿ ಪ್ರಿಂಟ್ ವರದಿ ಮಾಡಿದೆ. ಕೇಂದ್ರ ಸಚಿವರು ಕೂಡ ಮೈತಿ ಸಮುದಾಯಕ್ಕೆ ಸೇರಿದವರು.

ಇದನ್ನೂ ಓದಿ: ಮಣಿಪುರ; ಮತ್ತೆ ಉದ್ವಿಗ್ನತೆ, ಗುಂಡಿನ ದಾಳಿಗೆ ವ್ಯಕ್ತಿ ಬಲಿ

ದಾಳಿಯ ವೇಳೆ ಸಿಂಗ್ ತಮ್ಮ ನಿವಾಸದಲ್ಲಿದ್ದರು. ಗುಂಪು ಅವರ ಮನೆಗೆ ಕಲ್ಲು ಎಸೆದ ನಂತರ, ಭದ್ರತಾ ಪಡೆಗಳು ಅವರನ್ನು ಚದುರಿಸಲು ಅಶ್ರುವಾಯು ಶೆಲ್‌ಗಳನ್ನು ಬಳಸಿದರು.

ಒಂದು ದಿನದ ಹಿಂದೆ, ರಾಜ್ಯ ಸಚಿವ ಗೋವಿಂದಸ್ ಕೊಂತೌಜಮ್ ಅವರ ಸ್ವಂತ ಕ್ಷೇತ್ರವಾದ ಬಿಷ್ಣುಪುರದ ನಿಂಗ್‌ತೌಖೋಂಗ್ ಬಜಾರ್ ಪ್ರದೇಶದಲ್ಲಿ ಗುಂಪೊಂದು ಅವರ ಮನೆಗೆ ಧ್ವಂಸಗೊಳಿಸಿತ್ತು.

ಮೇ 3 ರಿಂದ ಈಶಾನ್ಯ ರಾಜ್ಯದಿಂದ ಹಲವಾರು ಹಿಂಸಾಚಾರದ ಘಟನೆಗಳು ವರದಿಯಾಗಿವೆ, ಮೇ 3 ರಿಂದ ಮಣಿಪುರದ ಎಲ್ಲಾ ಬುಡಕಟ್ಟು ವಿದ್ಯಾರ್ಥಿಗಳ ಒಕ್ಕೂಟವು ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿಸಬೇಕೆಂಬ ಬಹುಸಂಖ್ಯಾತ ಮೈತಿ ಸಮುದಾಯದ ಬೇಡಿಕೆಯನ್ನು ವಿರೋಧಿಸಿ ಸಾವಿರಾರು ಮಂದಿ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಪ್ರತಿಭಟನಾಕಾರರಲ್ಲಿ ಮಣಿಪುರದ ದೊಡ್ಡ ಬುಡಕಟ್ಟು ಸಮುದಾಯಗಳಲ್ಲಿ ಒಂದಾದ ಕುಕಿಗಳು ಸೇರಿದ್ದಾರೆ. ಅವರು ರಾಜ್ಯ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದಾರೆ. ಘರ್ಷಣೆಯಲ್ಲಿ ಕನಿಷ್ಠ 74 ಜನರು ಸಾವನ್ನಪ್ಪಿದ್ದಾರೆ ಮತ್ತು 35,000 ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ.

ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಣಿಪುರದ ನಾಗರಿಕರನ್ನು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ ಮತ್ತು ರಾಜ್ಯದ ಎಲ್ಲಾ ಸಮುದಾಯಗಳಿಗೂ ನ್ಯಾಯ ನೀಡಲಾಗುವುದು ಎಂದು ಹೇಳಿದರು. ಸದ್ಯದಲ್ಲೇ ರಾಜ್ಯಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುವುದಾಗಿಯೂ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...