Homeಮುಖಪುಟಮಣಿಪುರದಲ್ಲಿ ನಿಲ್ಲದ ಹಿಂಸಾಚಾರ: ಕೇಂದ್ರ ಸಚಿವ ಆರ್‌ಕೆ ರಂಜನ್ ಸಿಂಗ್ ಮನೆ ಮೇಲೆ ದಾಳಿ

ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ: ಕೇಂದ್ರ ಸಚಿವ ಆರ್‌ಕೆ ರಂಜನ್ ಸಿಂಗ್ ಮನೆ ಮೇಲೆ ದಾಳಿ

- Advertisement -
- Advertisement -

ಕಳೆದ ಕೆಲ ದಿನಗಳಿಂದ ಈಶಾನ್ಯ ರಾಜ್ಯ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ಮುಂದುವರೆದಿದ್ದು, ಗುರುವಾರ ಕೇಂದ್ರ ವಿದೇಶಾಂಗ ಮತ್ತು ಶಿಕ್ಷಣ ರಾಜ್ಯ ಸಚಿವ ಆರ್‌ಕೆ ರಂಜನ್ ಸಿಂಗ್ ಅವರ ಮನೆಯ ಮೇಲೆ ಗುಂಪೊಂದು ದಾಳಿ ಮಾಡಿದೆ ಎಂದು ಇಂಫಾಲ್ ಫ್ರೀ ಪ್ರೆಸ್ ವರದಿ ಮಾಡಿದೆ.

ಬುಧವಾರ ಮತ್ತೊಂದು ಹಿಂಸಾಚಾರದ ಘಟನೆ ನಡೆಯಿತು ಅದರಲ್ಲಿ ಓರ್ವ ಸಾವಿಗೀಡಾಗಿದ್ದು ಇಬ್ಬರಿಗೆ ಗಾಯಗಳಾಗಿದ್ದವು. ಈ ಘಟನೆ ಬೆನ್ನಲ್ಲೇ ಇಂಫಾಲ್ ಪೂರ್ವ ಜಿಲ್ಲೆಯ ಬಿಜೆಪಿ ಸಂಸದರ ಮನೆಗೆ ಗುರುವಾರ ರಾತ್ರಿ 8.30 ರ ಸುಮಾರಿಗೆ ಗುಂಪೊಂದು ನುಗ್ಗಿದೆ.

ಬುಧವಾರ ಬೆಳಿಗ್ಗೆ ಉಗ್ರರು ಗುಂಡಿನ ದಾಳಿ ನಡೆಸಿದಾಗ ವ್ಯಕ್ತಿ ಬಲಿಯಾಗಿದ್ದಾನೆ. ಹತ್ಯೆಗೀಡಾದ ವ್ಯಕ್ತಿಯನ್ನು ಚುರಾಚಂದ್‌ಪುರದ ಥೆಂಗ್ರಾ ಲೈರಾಕ್‌ನ ತೋಯಿಜಮ್ ಚಂದ್ರಮಣಿ ಸಿಂಗ್ ಎಂದು ಗುರುತಿಸಲಾಗಿದೆ. ಅವರು ಮೊಯಿರಾಂಗ್‌ನ ನಿರಾಶ್ರಿತ ಶಿಬಿರದಲ್ಲಿ ತಂಗಿದ್ದರು ಎಂದು ವರದಿಯಾಗಿದೆ.

ಬಿಷ್ಣುಪುರ್ ಜಿಲ್ಲೆಯಲ್ಲೂ ಉದ್ವಿಗ್ನತೆ ಭುಗಿಲೆದ್ದಿದೆ. ರಾಜ್ಯ ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದಾಸ್ ಕೊಂತೌಜಮ್ ಅವರ ಮನೆಯನ್ನು ಧ್ವಂಸಗೊಳಿಸಲಾಗಿದೆ. ಬುಧವಾರ ಸಂಜೆ ನಿಂಗ್‌ತೌಖೋಂಗ್ ಪಟ್ಟಣದಲ್ಲಿರುವ ಸಚಿವರ ನಿವಾಸಕ್ಕೆ ಗುಂಪೊಂದು ನುಗ್ಗಿತು. ಘಟನೆ ನಡೆದಾಗ ಸ್ವತಃ ಸಚಿವರಾಗಲೀ ಅವರ ಕುಟುಂಬದವರಾಗಲೀ ಮನೆಯಲ್ಲಿ ಇರಲಿಲ್ಲ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ತಿಳಿಸಿದೆ.

ಬಿಷ್ಣುಪುರ್ ಜಿಲ್ಲೆಯಲ್ಲಿ ಮತ್ತೆ ಅನಿರ್ದಿಷ್ಟ ಕರ್ಫ್ಯೂ ವಿಧಿಸಲಾಗಿದೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ. ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಕರ್ಫ್ಯೂವನ್ನೂ ನಾಲ್ಕು ಗಂಟೆಗಳ ಕಾಲ ಮುಂದುವರಿಸಲಾಗಿದೆ.

ಗುರುವಾರ, ಬಹುಮಟ್ಟಿಗೆ ಮೈತಿ ಸಮುದಾಯದ ನೇತೃತ್ವದ ಗುಂಪು ಬುಧವಾರದ ಅಶಾಂತಿಯ ವಿರುದ್ಧ ತಮ್ಮ ಕೋಪವನ್ನು ವ್ಯಕ್ತಪಡಿಸಲು ಸಿಂಗ್ ಅವರ ಮನೆಯ ಮೇಲೆ ದಾಳಿ ಮಾಡಿದೆ ಎಂದು ದಿ ಪ್ರಿಂಟ್ ವರದಿ ಮಾಡಿದೆ. ಕೇಂದ್ರ ಸಚಿವರು ಕೂಡ ಮೈತಿ ಸಮುದಾಯಕ್ಕೆ ಸೇರಿದವರು.

ಇದನ್ನೂ ಓದಿ: ಮಣಿಪುರ; ಮತ್ತೆ ಉದ್ವಿಗ್ನತೆ, ಗುಂಡಿನ ದಾಳಿಗೆ ವ್ಯಕ್ತಿ ಬಲಿ

ದಾಳಿಯ ವೇಳೆ ಸಿಂಗ್ ತಮ್ಮ ನಿವಾಸದಲ್ಲಿದ್ದರು. ಗುಂಪು ಅವರ ಮನೆಗೆ ಕಲ್ಲು ಎಸೆದ ನಂತರ, ಭದ್ರತಾ ಪಡೆಗಳು ಅವರನ್ನು ಚದುರಿಸಲು ಅಶ್ರುವಾಯು ಶೆಲ್‌ಗಳನ್ನು ಬಳಸಿದರು.

ಒಂದು ದಿನದ ಹಿಂದೆ, ರಾಜ್ಯ ಸಚಿವ ಗೋವಿಂದಸ್ ಕೊಂತೌಜಮ್ ಅವರ ಸ್ವಂತ ಕ್ಷೇತ್ರವಾದ ಬಿಷ್ಣುಪುರದ ನಿಂಗ್‌ತೌಖೋಂಗ್ ಬಜಾರ್ ಪ್ರದೇಶದಲ್ಲಿ ಗುಂಪೊಂದು ಅವರ ಮನೆಗೆ ಧ್ವಂಸಗೊಳಿಸಿತ್ತು.

ಮೇ 3 ರಿಂದ ಈಶಾನ್ಯ ರಾಜ್ಯದಿಂದ ಹಲವಾರು ಹಿಂಸಾಚಾರದ ಘಟನೆಗಳು ವರದಿಯಾಗಿವೆ, ಮೇ 3 ರಿಂದ ಮಣಿಪುರದ ಎಲ್ಲಾ ಬುಡಕಟ್ಟು ವಿದ್ಯಾರ್ಥಿಗಳ ಒಕ್ಕೂಟವು ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿಸಬೇಕೆಂಬ ಬಹುಸಂಖ್ಯಾತ ಮೈತಿ ಸಮುದಾಯದ ಬೇಡಿಕೆಯನ್ನು ವಿರೋಧಿಸಿ ಸಾವಿರಾರು ಮಂದಿ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಪ್ರತಿಭಟನಾಕಾರರಲ್ಲಿ ಮಣಿಪುರದ ದೊಡ್ಡ ಬುಡಕಟ್ಟು ಸಮುದಾಯಗಳಲ್ಲಿ ಒಂದಾದ ಕುಕಿಗಳು ಸೇರಿದ್ದಾರೆ. ಅವರು ರಾಜ್ಯ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದಾರೆ. ಘರ್ಷಣೆಯಲ್ಲಿ ಕನಿಷ್ಠ 74 ಜನರು ಸಾವನ್ನಪ್ಪಿದ್ದಾರೆ ಮತ್ತು 35,000 ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ.

ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಣಿಪುರದ ನಾಗರಿಕರನ್ನು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ ಮತ್ತು ರಾಜ್ಯದ ಎಲ್ಲಾ ಸಮುದಾಯಗಳಿಗೂ ನ್ಯಾಯ ನೀಡಲಾಗುವುದು ಎಂದು ಹೇಳಿದರು. ಸದ್ಯದಲ್ಲೇ ರಾಜ್ಯಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುವುದಾಗಿಯೂ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...