Homeಮುಖಪುಟಪಂಜಾಬ್ ಕಾಂಗ್ರೆಸ್‌ನಲ್ಲಿ ಬಗೆಹರಿಯದ ಭಿನ್ನಮತ - ಹೈಕಮಾಂಡ್ ಅಂಗಳಕ್ಕೆ ಸಮಸ್ಯೆ

ಪಂಜಾಬ್ ಕಾಂಗ್ರೆಸ್‌ನಲ್ಲಿ ಬಗೆಹರಿಯದ ಭಿನ್ನಮತ – ಹೈಕಮಾಂಡ್ ಅಂಗಳಕ್ಕೆ ಸಮಸ್ಯೆ

- Advertisement -
- Advertisement -

ಪಂಜಾಬ್‌ನಲ್ಲಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮತ್ತು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ನಡುವಿನ ಸಂಬಂಧದಲ್ಲಿ ಸಾಕಷ್ಟು ಬಿರುಕು ಮೂಡಿದೆ. ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್  ಹಾಗೂ ಶಾಸಕ ನವಜೋತ್ ಸಿಂಗ್ ಸಿಧು ದೀರ್ಘ ಸಮಯದಿಂದ  ಪರಸ್ಪರ ಬಹಿರಂಗ ಆರೊಪಗಳಲ್ಲಿ ತೊಡಗಿದ್ದಾರೆ. ಈಗ ಸಿಧು ಮತ್ತು ಕ್ಯಾಪ್ಟನ್ ನಡುವಿನ ವಾಗ್ಯುದ್ದ ತಾರಕ್ಕೇರಿದ್ದು ಭಿನ್ನಮತದ ಸಮಸ್ಯೆ ದೆಹಲಿಯ ಅಂಗಳವನ್ನು ತಲುಪಿದೆ.

ಪಂಜಾಬ್ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳಿರುವಾಗ ಪಕ್ಷದಲ್ಲಿನ ಭಿನ್ನಮತ ಕಾಂಗ್ರೆಸ್‌ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಕಾಂಗ್ರೆಸ್‌ ಹೈಕಮಾಂಡ್ ಭಿನ್ನಮತ ಶಮನಕ್ಕಾಗಿ ಅನೇಕ ಪ್ರಯತ್ನಗಳನ್ನು ಮಾಡುತ್ತಿದ್ದರೂ ಪಂಜಾಬ್ ಕಾಂಗ್ರೆಸ್‌ನ ಪರಿಸ್ಥಿತಿ ಮಾತ್ರ ಬಗೆಹರಿದಿಲ್ಲ. ಕಳೆದವಾರ ಕಾಂಗ್ರೆಸ್‌ ಅಧ್ಯಕ್ಷೆ ಸೊನಿಯಾಗಾಂಧಿ ಅವರು ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರನ್ನು ದೆಹಲಿಗೆ ಕರೆಸಿಕೊಂಡು ಪಕ್ಷದಲ್ಲಿನ ಅಸಮಾಧಾನವನ್ನು ತಣ್ಣಗೆ ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಇದೆಲ್ಲ ಬೆಳವಣಿಗೆಗಳ ನಂತರವೂ ಅಮರಿಂದರ್ ಸಿಂಗ್ ಮತ್ತು ಸಿಧು ನಡುವಿನ ಭಿನ್ನಮತ ತಣ್ಣಗಾದಂತೆ ಕಾಣುತ್ತಿಲ್ಲ. ಇಂದು ಮತ್ತೊಮ್ಮೆ ನವಜೋತ್ ಸಿಂಗ್ ಸಿಧು ಅವರು ಕ್ಯಾಪ್ಟನ್ ಅಮರಿಂದರ್ ಸಿಂಗ್ ವಿರುದ್ಧ ಪರೊಕ್ಷವಾಗಿ ದಾಳಿ ನಡೆಸಿದ್ದಾರೆ.

ಇಂದು ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಮೂರು ಜನರ ಕಾಂಗ್ರೆಸ್‌ ನಾಯಕರ ಸಮಿತಿಯನ್ನು ಭೇಟಿಯಾಗಲು ಅಮರಿಂದರ್ ಸಿಂಗ್ ದೆಹಲಿಗೆ ಭೇಟಿ ನೀಡಿದ್ದಾರೆ. ಈ ಸಮಿತಿ ಮುಂದೆ ಅಮರಿಂದರ್ ಸಿಂಗ್ ಪಂಜಾಬ್‌ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ವಿವರಿಸಲಿದ್ದಾರೆ.

ಇದರ ನಡುವೆ ಸರಣಿ ಟ್ವೀಟ್‌ಗಳನ್ನು ಮಾಡಿರುವ ನವಜ್ಯೋತ್‌ ಸಿಂಗ್ ಸಿಧು ಪಂಜಾಬ್‌ನಲ್ಲಿ ಎರಡು ಕುಟುಂಬಗಳು ಮಾತ್ರ ಅಧಿಕಾರದ ಲಾಭವನ್ನು ಪಡೆಯುತ್ತಿವೆ ಎಂದು ಹೆಳುವ ಮುಲಕ ಕ್ಯಾಪ್ಟನ್ ಅಮರಿಂದರ್ ಸಿಂಗ್ ವಿರುದ್ಧ ಪರೋಕ್ಷವಾದ ಆರೊಪವನ್ನು ಮಾಡಿದ್ದಾರೆ.

2019 ರಲ್ಲಿ ನವಜೋತ್ ಸಿಂಗ್‌ ಸಿಧು ಅವರು ಕ್ಯಾಪ್ಟನ್ ಅಮರಿಂದರ್ ಸಿಂಗ್ ಸಚಿವ ಸಂಪುಟದಿಂದ ಹೊರಬಿದ್ದ ಗಳಿಗೆಯಿಂದಲೇ ಆರಂಭವಾದ ಸಿಧು ಮತ್ತು ಕ್ಯಾಪ್ಟನ್ ನಡುವಿನ ಮನಸ್ತಾಪ ಈಗ ತಿವ್ರ ಸ್ವರೂಪವನ್ನು ಪಡೆದುಕೊಂಡಿದೆ. 117 ಜನ ಶಾಸಕರನ್ನು ಹೊಂದಿರುವ ಪಂಜಾಬ್‌ ಕಾಂಗ್ರೆಸ್‌ನಲ್ಲಿ 73 ಜನರು ತಮ್ಮ ಪರವಾಗಿದ್ದಾರೆ. ತಾವು ಪಕ್ಷದಲ್ಲಿ ಯಾವುದೇ ಬಂಡಾಯ ಚಟುವಟಿಕೆಗಳನ್ನು ನಡೆಸುತ್ತಿಲ್ಲ. ಬದಲಾಗಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಅವರು ದಿನನಿತ್ಯ ಒಂದೊಂದು ಹೊಸ ಸುಳ್ಳುಗಳನ್ನು ಹೇಳುತ್ತಾರೆ ಎಂದು ಸಿಧು ಆರೋಪಿಸಿದ್ದಾರೆ.

ಇದರ ನಡುವೆ ನವಜೋತ್ ಸಿಂಗ್ ಸಿಧು ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಕಾಂಗ್ರೆಸ್‌ ಹೈಕಮಾಂಡ್ ಸೂಚಿಸಿದ್ದು ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಿ ಬಂಡಾಯವನ್ನು ಶಮನಗೊಳಿಸಿಕೊಳ್ಳುವಂತೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಮುಂದೆ ಪರಿಹಾರ ಮಾರ್ಗೋಪಾಯಗಳನ್ನು ಇಟ್ಟಿದೆ. ಆದರೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ನವಜೋತ್ ಸಿಂಗ್ ಸಿಧು ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಮತ್ತು ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಲು ಸಿದ್ಧರಿಲ್ಲ ಎಂದು ಮೂಲಗಳು ತಿಳಿಸಿವೆ.

ಚುನಾವಣೆಯ ಸಂದರ್ಭದಲ್ಲಿ ಮಾತ್ರ ಸಿಧು ಅವರನ್ನು ಅಮರಿಂದರ್ ಸಿಂಗ್ ಕರೆಯುತ್ತಾರೆ. ಪ್ರಚಾರ ಸಭೆಗಳಿಗೆ ಮಾತ್ರ ನವಜೋತ್ ಸಿಂಗ್ ಸಿಧು ಬೇಕು. ಅದರೆ ಸರ್ಕಾರ ನಡೆಸುವ ಸಂದರ್ಭದಲ್ಲಿ ಮಾತ್ರ ಸಿಧು ಮಾತಿಗೆ ಕ್ಯಾಪ್ಟನ್ ಯಾವ ಬೆಲೆಯನ್ನು ನೀಡುವುದಿಲ್ಲ. ತಮ್ಮನ್ನು ಒಂದು ರೀತಿಯಲ್ಲಿ ಪ್ರಚಾರಕ್ಕೆ ಮಾತ್ರ ಬಳಸಿಕೊಳ್ಳಲಾಗುತ್ತಿದೆ ಎಂದು ಸಿಧು ಕ್ಯಾಪ್ಟನ್ ಅಮರಿಂದರ್ ಸಿಂಗ್ ವಿರುದ್ಧ ಆರೋಪಿಸಿದ್ದಾರೆ.

ಸದ್ಯ ಅಮರಿಂದರ್ ಸಿಂಗ್ ದೆಹಲಿಯಲ್ಲಿ ಇದ್ದು ಹೈಕಮಾಂಡ್ ನಾಯಕರ ಭೇಟಿಯ ನಂತರ ನವಜೋತ್ ಸಿಂಗ್ ವಿಚಾರದಲ್ಲಿ ಅಮರಿಂದರ್ ಸಿಂಗ್‌ ನಿಲುವುಗಳು ಬದಲಾಗುವ ಸಾಧ್ಯತೆಗಳಿವೆ. ಕಳೆದವಾರ ದೆಹಲಿ ಭೇಟಿಯ ನಂತರ ಅಮರಿಂದರ್ ಸಿಂಗ್ ನವಜೋತ್ ಸಿಂಗ್ ಸಿದ್ಧು ಅವರಿಗೆ ಸೂಕ್ತ ಸ್ಥಾನಮಾನವನ್ನು ನೀಡಲು ಕೆಲವು ಕ್ರಮಗಳನ್ನು ಕೈಗೊಂಡಿದ್ದರು. ಅದರೆ ಸಿದ್ದು ಅವರ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಒಪ್ಪಿರಲಿಲ್ಲ. ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಹೈಕಮಾಂಡ್ ಭೇಟಿ ಪಂಜಾಬ್‌ ಕಾಂಗ್ರೆಸ್‌ನ ಸಮಸ್ಯೆಗಳನ್ನು ಬಗೆಹರಿಸಲಿದೆಯೇ? ಅಥವಾ ಭಿನ್ನಮತಗಳು ಹೀಗೆ ಮುಂದುವರಿಯಲಿವೆಯೇ ಎಂಬುದರ ಕುರಿತು ಸದ್ಯಕ್ಕೆ ಏನನ್ನೂ ಹೇಳಲು ಸಾಧ್ಯವಿಲ್ಲ.


ಇದನ್ನೂ ಓದಿ : ಪತ್ರಕರ್ತೆ ರಾಣಾ ಅಯ್ಯೂಬ್ ಅವರ ಬಂಧನಕ್ಕೆ ಬಾಂಬೆ ಹೈಕೋರ್ಟ್‌ನಿಂದ 4 ವಾರಗಳ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...