Homeಮುಖಪುಟಇಸ್ರೇಲ್‌- ಪ್ಯಾಲೆಸ್ತೀನ್‌ ಸಂಘರ್ಷ ತಡೆಗೆ ನಿರ್ಣಯ ಅಂಗೀಕರಿಸಲು ಯುಎನ್ ಭದ್ರತಾ ಮಂಡಳಿ ವಿಫಲ

ಇಸ್ರೇಲ್‌- ಪ್ಯಾಲೆಸ್ತೀನ್‌ ಸಂಘರ್ಷ ತಡೆಗೆ ನಿರ್ಣಯ ಅಂಗೀಕರಿಸಲು ಯುಎನ್ ಭದ್ರತಾ ಮಂಡಳಿ ವಿಫಲ

- Advertisement -
- Advertisement -

ಗಾಝಾ ಪಟ್ಟಿಯಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧವನ್ನು ಕೊನೆಗೊಳಿಸುವ ಸಲುವಾಗಿ ಯುಎನ್ ಭದ್ರತಾ ಮಂಡಳಿಯು ಕರಡು ನಿರ್ಣಯವನ್ನು ಅಂಗೀಕರಿಸಲು ಮತ್ತೊಮ್ಮೆ ವಿಫಲವಾಗಿದೆ.

ಸೋಮವಾರ ಎನ್ ಭದ್ರತಾ ಮಂಡಳಿ ಸಭೆಯಲ್ಲಿ 2 ಗಂಟೆಗಳ ಕಾಲ ಚರ್ಚೆಗಳು ನಡೆದಿದ್ದು, ಆದರೂ ಭಿನ್ನಾಭಿಪ್ರಾಯಗಳು ಮುಂದುವರಿದಿದೆ. ಕೌನ್ಸಿಲ್‌ನ ಸದಸ್ಯರು ಕದನ ವಿರಾಮಕ್ಕೆ ಒತ್ತಾಯಿಸಿದ್ದು, ಅಗತ್ಯವಿರುವ ಸಹಾಯವನ್ನು ನೀಡಿ ಗಾಝಾದಲ್ಲಿ ಹೆಚ್ಚಿನ ನಾಗರಿಕರ ಸಾವುಗಳನ್ನು ತಡೆಯಲು ಒತ್ತಾಯಿಸಿದ್ದಾರೆ.

ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರೆಸ್ ಅವರು ಸುದ್ದಿಗಾರರ ಜೊತೆ ಮಾತನಾಡಿದ್ದು, ಗಾಝಾದಲ್ಲಿ ತಕ್ಷಣದ ಕದನ ವಿರಾಮಕ್ಕೆ ಆಗ್ರಹಿಸಿದ್ದಾರೆ. ನಾಗರಿಕರ ರಕ್ಷಣೆ ಕುರಿತ ಅಂತರಾಷ್ಟ್ರೀಯ ಮಾನವೀಯ ಕಾನೂನನ್ನು ಸ್ಪಷ್ಟವಾಗಿ ಉಲ್ಲಂಘಿಸಲಾಗುತ್ತಿದೆ ಎಂದು ಗುಟೆರೆಸ್ ಹೇಳಿದ್ದಾರೆ.

ಭದ್ರತಾ ಮಂಡಳಿಯ 10 ಶಾಶ್ವತವಲ್ಲದ ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿರುವ E-10 ರಾಷ್ಟ್ರಗಳು ನಿರ್ಣಯವನ್ನು ಮುಂದಿಟ್ಟಿದ್ದಾರೆ. ಆದರೆ ಖಾಯಂ ಕೌನ್ಸಿಲ್ ಸದಸ್ಯರು ವೀಟೋ ಅಧಿಕಾರವನ್ನು ಹೊಂದಿರುವ US ಮತ್ತು UK UNSC ಅಧಿವೇಶನದಲ್ಲಿ ಸೋಮವಾರ ಇದನ್ನು ವಿರೋಧಿಸಿದರು.

ಈ ಹಂತದಲ್ಲಿ ಯಾವುದೇ ಒಪ್ಪಂದವಿಲ್ಲ ಎಂದು ರಾಬರ್ಟ್ ವುಡ್ ಹೇಳಿದರು. ಆದರೆ ಇಲ್ಲಿ ಮಾನವೀಯ ನೆರವಿಗೆ ತಡೆ ನೀಡಿರುವ ಬಗ್ಗೆ ಚರ್ಚೆಗಳು ನಡೆದಿವೆ ಎಂದು ಒಪ್ಪಿಕೊಂಡರು. ಅದು ಸ್ವೀಕಾರಾರ್ಹವೇ ಎಂಬ ಬಗ್ಗೆ ಭದ್ರತಾ ಮಂಡಳಿಯಲ್ಲಿ ಭಿನ್ನಾಭಿಪ್ರಾಯವಿದೆ ಎಂದು ಅವರು ಹೇಳಿದರು.

ಚೀನಾದ ಯುಎನ್ ರಾಯಭಾರಿ ಜುನ್ ಜಾಂಗ್ ಅವರು ಗಾಝಾಕ್ಕೆ ಮಾನವೀಯ ನೆರವು ತಲುಪಿಸಲು ಅನುಕೂಲವಾಗುವಂತೆ ತುರ್ತು ಕದನ ವಿರಾಮಕ್ಕೆ ಕರೆ ನೀಡಿದ್ದಾರೆ. ನಾವು ಮಾತನಾಡುತ್ತಿರುವಂತೆ ಪ್ಯಾಲೆಸ್ತೀನ್‌ ನಾಗರಿಕರು ಕೊಲ್ಲಲ್ಪಡುತ್ತಿದ್ದಾರೆ. ಹಲವಾರು ಅಧಿಕಾರಿಗಳು ಈಗಾಗಲೇ ಹೇಳಿದಂತೆ ಗಾಝಾ, ಮಕ್ಕಳ ಸ್ಮಶಾನವಾಗುತ್ತಿದೆ. ಯಾರೂ ಸುರಕ್ಷಿತವಾಗಿಲ್ಲ ಎಂದು ಚೀನಾ ರಾಯಭಾರಿಯನ್ನು ಉಲ್ಲೇಖಿಸಿ ಸಿಎನ್‌ಎನ್ ವರದಿ ಮಾಡಿದೆ.

ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ರಾಯಭಾರಿ ಲಾನಾ ಝಕಿ ನುಸ್ಸೆಬೆಹ್, ಇಸ್ರೇಲ್ ಮೇಲೆ ಹಮಾಸ್ ನಡೆಸಿದ ಅ.7ರ ದಾಳಿಯನ್ನು ನಾವು ಖಂಡಿಸುತ್ತೇವೆ. ಗಾಝಾ ಪಟ್ಟಿಯ ಮೇಲೆ ಇಸ್ರೇಲ್ ನಡೆಸಿದ ವಿವೇಚನಾರಹಿತ ದಾಳಿಯನ್ನು ಕೂಡ ನಾವು ಖಂಡಿಸುತ್ತೇವೆ. ಎಲ್ಲಾ ಒತ್ತೆಯಾಳುಗಳನ್ನು ತಕ್ಷಣದ ಮತ್ತು ಬೇಷರತ್ತಾಗಿ ಬಿಡುಗಡೆ ಮಾಡಬೇಕೆಂದು ನಾವು ಆಗ್ರಹಿಸುತ್ತೇವೆ ಜೊತೆಗೆ ಸುರಕ್ಷತೆ, ಯೋಗಕ್ಷೇಮ ಮತ್ತು ಅಂತರಾಷ್ಟ್ರೀಯ ಕಾನೂನಿಗೆ ಅನುಗುಣವಾಗಿ ಮಾನವೀಯ ನೆರವು ನೀಡುತ್ತೇವೆ ಎಂದು ನುಸ್ಸೆಬೆಹ್ ಹೇಳಿದರು.

ಮಕ್ಕಳನ್ನು ಕೊಲ್ಲುವುದು ಮತ್ತು ಅಂಗವಿಕಲಗೊಳಿಸುವುದು, ಶಾಲೆಗಳು ಮತ್ತು ಆಸ್ಪತ್ರೆಗಳು ಮತ್ತು ಗಾಝಾ ಪಟ್ಟಿಯ ಮೇಲಿನ ದಾಳಿ ನಡೆಸುವುದು, ಮಕ್ಕಳಿಗೆ ಮಾನವೀಯ ಸಹಾಯ ನೀಡುವುದನ್ನು ತಡೆಯುವುದು  ಅತ್ಯಂತ ಗಂಭೀರ ಕಾನೂನುಗಳ ಉಲ್ಲಂಘನೆಗಳಾಗಿವೆ ಎಂದು ಹೇಳಿದ್ದಾರೆ. ಸಭೆಯಲ್ಲಿ ಯುಎನ್ ಅಧಿಕಾರಿಗಳು ಈ ಪ್ರದೇಶದಲ್ಲಿನ ಭೀಕರ ಪರಿಸ್ಥಿತಿಯ ಬಗ್ಗೆ ಭದ್ರತಾ ಮಂಡಳಿಗೆ ವಿವರಿಸಿದ್ದರು.

ಇದನ್ನು ಓದಿ: ಅಲಿಘರ್ ನಗರದ ಹೆಸರು ಹರಿಘರ್ ಎಂದು ಬದಲಾಯಿಸಲು ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...