Homeಮುಖಪುಟಇಸ್ರೇಲ್‌- ಪ್ಯಾಲೆಸ್ತೀನ್‌ ಸಂಘರ್ಷ ತಡೆಗೆ ನಿರ್ಣಯ ಅಂಗೀಕರಿಸಲು ಯುಎನ್ ಭದ್ರತಾ ಮಂಡಳಿ ವಿಫಲ

ಇಸ್ರೇಲ್‌- ಪ್ಯಾಲೆಸ್ತೀನ್‌ ಸಂಘರ್ಷ ತಡೆಗೆ ನಿರ್ಣಯ ಅಂಗೀಕರಿಸಲು ಯುಎನ್ ಭದ್ರತಾ ಮಂಡಳಿ ವಿಫಲ

- Advertisement -
- Advertisement -

ಗಾಝಾ ಪಟ್ಟಿಯಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧವನ್ನು ಕೊನೆಗೊಳಿಸುವ ಸಲುವಾಗಿ ಯುಎನ್ ಭದ್ರತಾ ಮಂಡಳಿಯು ಕರಡು ನಿರ್ಣಯವನ್ನು ಅಂಗೀಕರಿಸಲು ಮತ್ತೊಮ್ಮೆ ವಿಫಲವಾಗಿದೆ.

ಸೋಮವಾರ ಎನ್ ಭದ್ರತಾ ಮಂಡಳಿ ಸಭೆಯಲ್ಲಿ 2 ಗಂಟೆಗಳ ಕಾಲ ಚರ್ಚೆಗಳು ನಡೆದಿದ್ದು, ಆದರೂ ಭಿನ್ನಾಭಿಪ್ರಾಯಗಳು ಮುಂದುವರಿದಿದೆ. ಕೌನ್ಸಿಲ್‌ನ ಸದಸ್ಯರು ಕದನ ವಿರಾಮಕ್ಕೆ ಒತ್ತಾಯಿಸಿದ್ದು, ಅಗತ್ಯವಿರುವ ಸಹಾಯವನ್ನು ನೀಡಿ ಗಾಝಾದಲ್ಲಿ ಹೆಚ್ಚಿನ ನಾಗರಿಕರ ಸಾವುಗಳನ್ನು ತಡೆಯಲು ಒತ್ತಾಯಿಸಿದ್ದಾರೆ.

ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರೆಸ್ ಅವರು ಸುದ್ದಿಗಾರರ ಜೊತೆ ಮಾತನಾಡಿದ್ದು, ಗಾಝಾದಲ್ಲಿ ತಕ್ಷಣದ ಕದನ ವಿರಾಮಕ್ಕೆ ಆಗ್ರಹಿಸಿದ್ದಾರೆ. ನಾಗರಿಕರ ರಕ್ಷಣೆ ಕುರಿತ ಅಂತರಾಷ್ಟ್ರೀಯ ಮಾನವೀಯ ಕಾನೂನನ್ನು ಸ್ಪಷ್ಟವಾಗಿ ಉಲ್ಲಂಘಿಸಲಾಗುತ್ತಿದೆ ಎಂದು ಗುಟೆರೆಸ್ ಹೇಳಿದ್ದಾರೆ.

ಭದ್ರತಾ ಮಂಡಳಿಯ 10 ಶಾಶ್ವತವಲ್ಲದ ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿರುವ E-10 ರಾಷ್ಟ್ರಗಳು ನಿರ್ಣಯವನ್ನು ಮುಂದಿಟ್ಟಿದ್ದಾರೆ. ಆದರೆ ಖಾಯಂ ಕೌನ್ಸಿಲ್ ಸದಸ್ಯರು ವೀಟೋ ಅಧಿಕಾರವನ್ನು ಹೊಂದಿರುವ US ಮತ್ತು UK UNSC ಅಧಿವೇಶನದಲ್ಲಿ ಸೋಮವಾರ ಇದನ್ನು ವಿರೋಧಿಸಿದರು.

ಈ ಹಂತದಲ್ಲಿ ಯಾವುದೇ ಒಪ್ಪಂದವಿಲ್ಲ ಎಂದು ರಾಬರ್ಟ್ ವುಡ್ ಹೇಳಿದರು. ಆದರೆ ಇಲ್ಲಿ ಮಾನವೀಯ ನೆರವಿಗೆ ತಡೆ ನೀಡಿರುವ ಬಗ್ಗೆ ಚರ್ಚೆಗಳು ನಡೆದಿವೆ ಎಂದು ಒಪ್ಪಿಕೊಂಡರು. ಅದು ಸ್ವೀಕಾರಾರ್ಹವೇ ಎಂಬ ಬಗ್ಗೆ ಭದ್ರತಾ ಮಂಡಳಿಯಲ್ಲಿ ಭಿನ್ನಾಭಿಪ್ರಾಯವಿದೆ ಎಂದು ಅವರು ಹೇಳಿದರು.

ಚೀನಾದ ಯುಎನ್ ರಾಯಭಾರಿ ಜುನ್ ಜಾಂಗ್ ಅವರು ಗಾಝಾಕ್ಕೆ ಮಾನವೀಯ ನೆರವು ತಲುಪಿಸಲು ಅನುಕೂಲವಾಗುವಂತೆ ತುರ್ತು ಕದನ ವಿರಾಮಕ್ಕೆ ಕರೆ ನೀಡಿದ್ದಾರೆ. ನಾವು ಮಾತನಾಡುತ್ತಿರುವಂತೆ ಪ್ಯಾಲೆಸ್ತೀನ್‌ ನಾಗರಿಕರು ಕೊಲ್ಲಲ್ಪಡುತ್ತಿದ್ದಾರೆ. ಹಲವಾರು ಅಧಿಕಾರಿಗಳು ಈಗಾಗಲೇ ಹೇಳಿದಂತೆ ಗಾಝಾ, ಮಕ್ಕಳ ಸ್ಮಶಾನವಾಗುತ್ತಿದೆ. ಯಾರೂ ಸುರಕ್ಷಿತವಾಗಿಲ್ಲ ಎಂದು ಚೀನಾ ರಾಯಭಾರಿಯನ್ನು ಉಲ್ಲೇಖಿಸಿ ಸಿಎನ್‌ಎನ್ ವರದಿ ಮಾಡಿದೆ.

ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ರಾಯಭಾರಿ ಲಾನಾ ಝಕಿ ನುಸ್ಸೆಬೆಹ್, ಇಸ್ರೇಲ್ ಮೇಲೆ ಹಮಾಸ್ ನಡೆಸಿದ ಅ.7ರ ದಾಳಿಯನ್ನು ನಾವು ಖಂಡಿಸುತ್ತೇವೆ. ಗಾಝಾ ಪಟ್ಟಿಯ ಮೇಲೆ ಇಸ್ರೇಲ್ ನಡೆಸಿದ ವಿವೇಚನಾರಹಿತ ದಾಳಿಯನ್ನು ಕೂಡ ನಾವು ಖಂಡಿಸುತ್ತೇವೆ. ಎಲ್ಲಾ ಒತ್ತೆಯಾಳುಗಳನ್ನು ತಕ್ಷಣದ ಮತ್ತು ಬೇಷರತ್ತಾಗಿ ಬಿಡುಗಡೆ ಮಾಡಬೇಕೆಂದು ನಾವು ಆಗ್ರಹಿಸುತ್ತೇವೆ ಜೊತೆಗೆ ಸುರಕ್ಷತೆ, ಯೋಗಕ್ಷೇಮ ಮತ್ತು ಅಂತರಾಷ್ಟ್ರೀಯ ಕಾನೂನಿಗೆ ಅನುಗುಣವಾಗಿ ಮಾನವೀಯ ನೆರವು ನೀಡುತ್ತೇವೆ ಎಂದು ನುಸ್ಸೆಬೆಹ್ ಹೇಳಿದರು.

ಮಕ್ಕಳನ್ನು ಕೊಲ್ಲುವುದು ಮತ್ತು ಅಂಗವಿಕಲಗೊಳಿಸುವುದು, ಶಾಲೆಗಳು ಮತ್ತು ಆಸ್ಪತ್ರೆಗಳು ಮತ್ತು ಗಾಝಾ ಪಟ್ಟಿಯ ಮೇಲಿನ ದಾಳಿ ನಡೆಸುವುದು, ಮಕ್ಕಳಿಗೆ ಮಾನವೀಯ ಸಹಾಯ ನೀಡುವುದನ್ನು ತಡೆಯುವುದು  ಅತ್ಯಂತ ಗಂಭೀರ ಕಾನೂನುಗಳ ಉಲ್ಲಂಘನೆಗಳಾಗಿವೆ ಎಂದು ಹೇಳಿದ್ದಾರೆ. ಸಭೆಯಲ್ಲಿ ಯುಎನ್ ಅಧಿಕಾರಿಗಳು ಈ ಪ್ರದೇಶದಲ್ಲಿನ ಭೀಕರ ಪರಿಸ್ಥಿತಿಯ ಬಗ್ಗೆ ಭದ್ರತಾ ಮಂಡಳಿಗೆ ವಿವರಿಸಿದ್ದರು.

ಇದನ್ನು ಓದಿ: ಅಲಿಘರ್ ನಗರದ ಹೆಸರು ಹರಿಘರ್ ಎಂದು ಬದಲಾಯಿಸಲು ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...