Homeಮುಖಪುಟ'ಅವೈಜ್ಞಾನಿಕ’: ಯುಜಿಸಿಯ ಕರಡು ಪಠ್ಯಕ್ರಮ ನೀತಿ ತಿರಸ್ಕರಿಸಿದ ಕೇರಳ ಸರ್ಕಾರ

‘ಅವೈಜ್ಞಾನಿಕ’: ಯುಜಿಸಿಯ ಕರಡು ಪಠ್ಯಕ್ರಮ ನೀತಿ ತಿರಸ್ಕರಿಸಿದ ಕೇರಳ ಸರ್ಕಾರ

- Advertisement -
- Advertisement -

‘ಭಾರತೀಯ ಜ್ಞಾನ ವ್ಯವಸ್ಥೆಯ ಸೋಗಿನಲ್ಲಿ ನಿರ್ದಿಷ್ಟ ಸಿದ್ದಾಂತದ ವಿಷಯಗಳನ್ನು ಹೇರುವ’ ಬಗ್ಗೆ ಗಂಭೀರ ಕಳವಳಗಳನ್ನು ಉಲ್ಲೇಖಿಸಿ ಕೇರಳ ಸರ್ಕಾರ ವಿಶ್ವವಿದ್ಯಾಲಗಳ ಧನಸಹಾಯ ಆಯೋಗದ (ಯುಜಿಸಿ) ಕರಡು ಪಠ್ಯಕ್ರಮ ನೀತಿಯನ್ನು ತಿರಸ್ಕರಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಶುಕ್ರವಾರ (ಸೆ.26) ವರದಿ ಮಾಡಿದೆ.

ಕಳೆದ ಆಗಸ್ಟ್‌ನಲ್ಲಿ ಯುಜಿಸಿ ಒಂಬತ್ತು ವಿಷಯಗಳಿಗೆ ಕರಡು ನೀತಿಯನ್ನು ಬಿಡುಗಡೆ ಮಾಡಿ ಸಾರ್ವಜನಿಕರಿಂದ ಪ್ರತಿಕ್ರಿಯೆ ಆಹ್ವಾನಿಸಿತ್ತು.

ಯುಜಿಸಿ ಕರಡು ನೀತಿಯು ಹಳೆಯದ್ದು, ಅವೈಜ್ಞಾನಿಕವಾಗಿದೆ ಮತ್ತು ಸಂಘ ಪರಿವಾರದ ಸೈದ್ಧಾಂತಿಕ ಹಿತಾಸಕ್ತಿಗಳ ಪರವಾಗಿದೆ ಎಂದು ಕೇರಳದ ಉನ್ನತ ಶಿಕ್ಷಣ ಸಚಿವೆ ಆರ್ ಬಿಂದು ಹೇಳಿದ್ದಾರೆ.

‘ರಾಮ ರಾಜ್ಯ’ದಂತಹ ವಿಷಯಗಳು—ಅಂದರೆ, ಹಿಂದೂ ದೇವರು ರಾಮನ ಆದರ್ಶಪ್ರಾಯ ಆಡಳಿತ ಎಂಬ ವಿಷಯವನ್ನು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್) ಮತ್ತು ಪರಿಸರ, ಸಾಮಾಜಿಕ ಹಾಗೂ ಆಡಳಿತ (ಇಎಸ್‌ಜಿ) ವಿಷಯಗಳೊಂದಿಗೆ ಸಂಯೋಜಿಸಿರುವುದು ಸಂಘ ಪರಿವಾರದ ಸಿದ್ದಾಂತ ಹೇರಿಕೆಗೆ ಉದಾಹರಣೆ ಎಂದು ಬಿಂದು ತಿಳಿಸಿದ್ದಾರೆ.

“ಇಂತಹ ವಿಷಯಗಳು ನಮ್ಮ ಶೈಕ್ಷಣಿಕ ಸಂಸ್ಥೆಗಳಲ್ಲಿ ಅಸಹಿಷ್ಣುತೆ ಮತ್ತು ಅಶಾಂತಿಗೆ ಕಾರಣವಾಗಬಹುದು” ಎಂದಿದ್ದಾರೆ.

ಅರ್ಥಶಾಸ್ತ್ರಜ್ಞ ಪ್ರಭಾತ್ ಪಟ್ನಾಯಕ್ ಅಧ್ಯಕ್ಷತೆಯ ಕೇರಳ ರಾಜ್ಯ ಸರ್ಕಾರದ ಸಮಿತಿಯು, ಯುಜಿಸಿಯ ಪ್ರಸ್ತಾವಿತ ಕಲಿಕಾ ಫಲಿತಾಂಶ ಆಧಾರಿತ ಪಠ್ಯಕ್ರಮ ನೀತಿಯು ವಿಶ್ವವಿದ್ಯಾಲಯ ಶಿಕ್ಷಣದಿಂದ ನಿರೀಕ್ಷಿಸಲಾದ ಬೌದ್ಧಿಕ ಮತ್ತು ಶಿಸ್ತಿನ ಮಾನದಂಡಗಳನ್ನು ಪೂರೈಸಲು ವಿಫಲವಾಗಿದೆ ಎಂದು ತೀರ್ಮಾನಿಸಿದೆ.

ರಾಜ್ಯ ಸರ್ಕಾರದ ಸಮಿತಿಯಲ್ಲಿ ಇತಿಹಾಸಕಾರ ರೊಮಿಲಾ ಥಾಪರ್ ಮತ್ತು ಕೇರಳ ರಾಜ್ಯ ಉನ್ನತ ಶಿಕ್ಷಣ ಮಂಡಳಿಯ ಉಪಾಧ್ಯಕ್ಷ ರಾಜನ್ ಗುರುಕ್ಕಲ್ ಇದ್ದರು.

ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ವಿವರವಾದ ಆಕ್ಪೇಪವನ್ನು ಸಲ್ಲಿಸಲಾಗಿದ್ದು, ಈ ನೀತಿಯನ್ನು ರಾಜ್ಯದಲ್ಲಿ ಜಾರಿಗೆ ತರುವುದಿಲ್ಲ ಎಂದು ಕೇರಳ ಸರ್ಕಾರ ತಿಳಿಸಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ಗುರುವಾರ ಸಾರ್ವಜನಿಕಗೊಳಿಸಲಾದ ಸಮಿತಿಯ ವರದಿಯಲ್ಲಿ, ಯುಜಿಸಿ ನೀತಿಯು ‘ವಿಶ್ವದ ಯಾವುದೇ ಪ್ರಮುಖ ದೇಶದಲ್ಲಿ ಅಸ್ತಿತ್ವದಲ್ಲಿ ಇಲ್ಲ. ನಮ್ಮ ದೇಶದಲ್ಲಿಯ ಈ  ರೀತಿಯ ನೀತಿಗಳನ್ನು ಇದುವರೆಗೆ ಕಂಡಿಲ್ಲ. ಈ ನೀತಿಯು ವಿಶ್ವವಿದ್ಯಾಲಯಗಳ ಸ್ವಾಯತ್ತತೆಯನ್ನು ಉಲ್ಲಂಘಿಸುತ್ತದೆ ಎಂದು ಹೇಳಲಾಗಿದೆ.

ಯುಜಿಸಿಯ ಕರಡು ಪಠ್ಯಕ್ರಮ ನೀತಿಯ ದಾಖಲೆಯು ಬ್ರಿಟಿಷ್ ಮತ್ತು ಅಮೆರಿಕನ್ ಪಠ್ಯಪುಸ್ತಕಗಳಿಂದ ತೆಗೆದುಕೊಂಡ ವಿವಿಧ ವಿಷಯಗಳ ಸಂಗ್ರಹವಾಗಿದೆ. ಆದರೆ, ಈ ದಾಖಲೆಯು ಭಾರತದ ಇತಿಹಾಸದಲ್ಲಿ ಸಾಮ್ರಾಜ್ಯಶಾಹಿ (ಉದಾಹರಣೆಗೆ, ಬ್ರಿಟಿಷ್ ಆಳ್ವಿಕೆ) ಯ ಶೋಷಣಾತ್ಮಕ ಪಾತ್ರವನ್ನು ಸ್ಪಷ್ಟವಾಗಿ ಗುರುತಿಸುವುದಿಲ್ಲ ಅಥವಾ ಒತ್ತಿಹೇಳುವುದಿಲ್ಲ ಎಂದು ವರದಿಯಲ್ಲಿ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿದೆ.

ಕರಡು ಚೌಕಟ್ಟಿನಲ್ಲಿ ‘ಭಾರತೀಯ ಜ್ಞಾನ ವ್ಯವಸ್ಥೆಯ ಹಿಂದೂ-ವಿಶೇಷತಾವಾದಿ ಗ್ರಹಿಕೆ’ ಯನ್ನು ವರದಿ ಟೀಕಿಸಿದೆ.

ಸಮಿತಿಯ ವಿಶೇಷ ಆಹ್ವಾನಿತರಾಗಿರುವ ಥಾಪರ್, ಈ ನೀತಿಯು ಶೈಕ್ಷಣಿಕ ಗುಣಮಟ್ಟವನ್ನು ದುರ್ಬಲಗೊಳಿಸುತ್ತದೆ ಮತ್ತು ಉನ್ನತ ಶಿಕ್ಷಣವನ್ನು ಕೇವಲ ಕಂಠಪಾಠಕ್ಕೆ ಸೀಮಿತಗೊಳಿಸುವ ಅಪಾಯವಿದೆ ಎಂದು ಎಚ್ಚರಿಸಿದ್ದಾರೆ.

ಕರಡು ನೀತಿಯ ಉದ್ದಕ್ಕೂ ‘ಭಾರತೀಯ ಜ್ಞಾನ ವ್ಯವಸ್ಥೆ’ ಎಂಬ ಪದದ ಅಸ್ಪಷ್ಟ ಬಳಕೆಯನ್ನು ಸಮಿತಿ ವಿರೋಧಿಸಿದೆ. ಯಾವುದೇ ಸ್ಪಷ್ಟ ವ್ಯಾಖ್ಯಾನ ಅಥವಾ ವಿಶ್ಲೇಷಣೆಯನ್ನು ಇದಕ್ಕೆ ಕೊಡಲಾಗಿಲ್ಲ ಎಂದಿದ್ದಾರೆ.

ಕೆಲವು ಗ್ರಂಥಗಳು ಸಂಸ್ಕೃತದಲ್ಲಿ ರಚಿತವಾಗಿದ್ದರೂ ಸಹ, ಕ್ರಿ.ಶ. ಮೊದಲನೆಯ ಮತ್ತು ಎರಡನೆಯ ಸಹಸ್ರಮಾನದ ಆರಂಭದಲ್ಲಿ, ಭಾರತ, ಪಶ್ಚಿಮ ಏಷ್ಯಾ, ಮಧ್ಯ ಏಷ್ಯಾ ಮತ್ತು ಚೀನಾದಾದ್ಯಂತ ಪೂರ್ವ-ವಿಜ್ಞಾನದ (ಪ್ರೊಟೊ-ಸೈನ್ಸ್) ಕುರಿತಾದ ಚಿಂತನೆಗಳು ಗಣನೀಯವಾಗಿ ವಿನಿಮಯವಾಗುತ್ತಿದ್ದವು,” ಎಂದು ಥಾಪರ್ ಹೇಳಿದ್ದು, ಈ ಚಿಂತನೆಗಳಿಗೆ ಭೌಗೋಳಿಕ ಗಡಿಗಳನ್ನು ಅಥವಾ ಧಾರ್ಮಿಕ ಮೂಲವನ್ನು ನಿರ್ದಿಷ್ಟಪಡಿಸಲಾಗದು ಎಂದಿದ್ದಾರೆ.

ಕೇಂದ್ರದಿಂದ ಸಂಸದೀಯ ಸ್ಥಾಯಿ ಸಮಿತಿಗಳ ಅವಧಿ ವಿಸ್ತರಣೆ ಸಾಧ್ಯತೆ: ಶಶಿ ತರೂರ್‌ ಸ್ಥಾನ ಅಬಾಧಿತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...