Homeಮುಖಪುಟ'ಅವೈಜ್ಞಾನಿಕ’: ಯುಜಿಸಿಯ ಕರಡು ಪಠ್ಯಕ್ರಮ ನೀತಿ ತಿರಸ್ಕರಿಸಿದ ಕೇರಳ ಸರ್ಕಾರ

‘ಅವೈಜ್ಞಾನಿಕ’: ಯುಜಿಸಿಯ ಕರಡು ಪಠ್ಯಕ್ರಮ ನೀತಿ ತಿರಸ್ಕರಿಸಿದ ಕೇರಳ ಸರ್ಕಾರ

- Advertisement -
- Advertisement -

‘ಭಾರತೀಯ ಜ್ಞಾನ ವ್ಯವಸ್ಥೆಯ ಸೋಗಿನಲ್ಲಿ ನಿರ್ದಿಷ್ಟ ಸಿದ್ದಾಂತದ ವಿಷಯಗಳನ್ನು ಹೇರುವ’ ಬಗ್ಗೆ ಗಂಭೀರ ಕಳವಳಗಳನ್ನು ಉಲ್ಲೇಖಿಸಿ ಕೇರಳ ಸರ್ಕಾರ ವಿಶ್ವವಿದ್ಯಾಲಗಳ ಧನಸಹಾಯ ಆಯೋಗದ (ಯುಜಿಸಿ) ಕರಡು ಪಠ್ಯಕ್ರಮ ನೀತಿಯನ್ನು ತಿರಸ್ಕರಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಶುಕ್ರವಾರ (ಸೆ.26) ವರದಿ ಮಾಡಿದೆ.

ಕಳೆದ ಆಗಸ್ಟ್‌ನಲ್ಲಿ ಯುಜಿಸಿ ಒಂಬತ್ತು ವಿಷಯಗಳಿಗೆ ಕರಡು ನೀತಿಯನ್ನು ಬಿಡುಗಡೆ ಮಾಡಿ ಸಾರ್ವಜನಿಕರಿಂದ ಪ್ರತಿಕ್ರಿಯೆ ಆಹ್ವಾನಿಸಿತ್ತು.

ಯುಜಿಸಿ ಕರಡು ನೀತಿಯು ಹಳೆಯದ್ದು, ಅವೈಜ್ಞಾನಿಕವಾಗಿದೆ ಮತ್ತು ಸಂಘ ಪರಿವಾರದ ಸೈದ್ಧಾಂತಿಕ ಹಿತಾಸಕ್ತಿಗಳ ಪರವಾಗಿದೆ ಎಂದು ಕೇರಳದ ಉನ್ನತ ಶಿಕ್ಷಣ ಸಚಿವೆ ಆರ್ ಬಿಂದು ಹೇಳಿದ್ದಾರೆ.

‘ರಾಮ ರಾಜ್ಯ’ದಂತಹ ವಿಷಯಗಳು—ಅಂದರೆ, ಹಿಂದೂ ದೇವರು ರಾಮನ ಆದರ್ಶಪ್ರಾಯ ಆಡಳಿತ ಎಂಬ ವಿಷಯವನ್ನು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್) ಮತ್ತು ಪರಿಸರ, ಸಾಮಾಜಿಕ ಹಾಗೂ ಆಡಳಿತ (ಇಎಸ್‌ಜಿ) ವಿಷಯಗಳೊಂದಿಗೆ ಸಂಯೋಜಿಸಿರುವುದು ಸಂಘ ಪರಿವಾರದ ಸಿದ್ದಾಂತ ಹೇರಿಕೆಗೆ ಉದಾಹರಣೆ ಎಂದು ಬಿಂದು ತಿಳಿಸಿದ್ದಾರೆ.

“ಇಂತಹ ವಿಷಯಗಳು ನಮ್ಮ ಶೈಕ್ಷಣಿಕ ಸಂಸ್ಥೆಗಳಲ್ಲಿ ಅಸಹಿಷ್ಣುತೆ ಮತ್ತು ಅಶಾಂತಿಗೆ ಕಾರಣವಾಗಬಹುದು” ಎಂದಿದ್ದಾರೆ.

ಅರ್ಥಶಾಸ್ತ್ರಜ್ಞ ಪ್ರಭಾತ್ ಪಟ್ನಾಯಕ್ ಅಧ್ಯಕ್ಷತೆಯ ಕೇರಳ ರಾಜ್ಯ ಸರ್ಕಾರದ ಸಮಿತಿಯು, ಯುಜಿಸಿಯ ಪ್ರಸ್ತಾವಿತ ಕಲಿಕಾ ಫಲಿತಾಂಶ ಆಧಾರಿತ ಪಠ್ಯಕ್ರಮ ನೀತಿಯು ವಿಶ್ವವಿದ್ಯಾಲಯ ಶಿಕ್ಷಣದಿಂದ ನಿರೀಕ್ಷಿಸಲಾದ ಬೌದ್ಧಿಕ ಮತ್ತು ಶಿಸ್ತಿನ ಮಾನದಂಡಗಳನ್ನು ಪೂರೈಸಲು ವಿಫಲವಾಗಿದೆ ಎಂದು ತೀರ್ಮಾನಿಸಿದೆ.

ರಾಜ್ಯ ಸರ್ಕಾರದ ಸಮಿತಿಯಲ್ಲಿ ಇತಿಹಾಸಕಾರ ರೊಮಿಲಾ ಥಾಪರ್ ಮತ್ತು ಕೇರಳ ರಾಜ್ಯ ಉನ್ನತ ಶಿಕ್ಷಣ ಮಂಡಳಿಯ ಉಪಾಧ್ಯಕ್ಷ ರಾಜನ್ ಗುರುಕ್ಕಲ್ ಇದ್ದರು.

ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ವಿವರವಾದ ಆಕ್ಪೇಪವನ್ನು ಸಲ್ಲಿಸಲಾಗಿದ್ದು, ಈ ನೀತಿಯನ್ನು ರಾಜ್ಯದಲ್ಲಿ ಜಾರಿಗೆ ತರುವುದಿಲ್ಲ ಎಂದು ಕೇರಳ ಸರ್ಕಾರ ತಿಳಿಸಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ಗುರುವಾರ ಸಾರ್ವಜನಿಕಗೊಳಿಸಲಾದ ಸಮಿತಿಯ ವರದಿಯಲ್ಲಿ, ಯುಜಿಸಿ ನೀತಿಯು ‘ವಿಶ್ವದ ಯಾವುದೇ ಪ್ರಮುಖ ದೇಶದಲ್ಲಿ ಅಸ್ತಿತ್ವದಲ್ಲಿ ಇಲ್ಲ. ನಮ್ಮ ದೇಶದಲ್ಲಿಯ ಈ  ರೀತಿಯ ನೀತಿಗಳನ್ನು ಇದುವರೆಗೆ ಕಂಡಿಲ್ಲ. ಈ ನೀತಿಯು ವಿಶ್ವವಿದ್ಯಾಲಯಗಳ ಸ್ವಾಯತ್ತತೆಯನ್ನು ಉಲ್ಲಂಘಿಸುತ್ತದೆ ಎಂದು ಹೇಳಲಾಗಿದೆ.

ಯುಜಿಸಿಯ ಕರಡು ಪಠ್ಯಕ್ರಮ ನೀತಿಯ ದಾಖಲೆಯು ಬ್ರಿಟಿಷ್ ಮತ್ತು ಅಮೆರಿಕನ್ ಪಠ್ಯಪುಸ್ತಕಗಳಿಂದ ತೆಗೆದುಕೊಂಡ ವಿವಿಧ ವಿಷಯಗಳ ಸಂಗ್ರಹವಾಗಿದೆ. ಆದರೆ, ಈ ದಾಖಲೆಯು ಭಾರತದ ಇತಿಹಾಸದಲ್ಲಿ ಸಾಮ್ರಾಜ್ಯಶಾಹಿ (ಉದಾಹರಣೆಗೆ, ಬ್ರಿಟಿಷ್ ಆಳ್ವಿಕೆ) ಯ ಶೋಷಣಾತ್ಮಕ ಪಾತ್ರವನ್ನು ಸ್ಪಷ್ಟವಾಗಿ ಗುರುತಿಸುವುದಿಲ್ಲ ಅಥವಾ ಒತ್ತಿಹೇಳುವುದಿಲ್ಲ ಎಂದು ವರದಿಯಲ್ಲಿ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿದೆ.

ಕರಡು ಚೌಕಟ್ಟಿನಲ್ಲಿ ‘ಭಾರತೀಯ ಜ್ಞಾನ ವ್ಯವಸ್ಥೆಯ ಹಿಂದೂ-ವಿಶೇಷತಾವಾದಿ ಗ್ರಹಿಕೆ’ ಯನ್ನು ವರದಿ ಟೀಕಿಸಿದೆ.

ಸಮಿತಿಯ ವಿಶೇಷ ಆಹ್ವಾನಿತರಾಗಿರುವ ಥಾಪರ್, ಈ ನೀತಿಯು ಶೈಕ್ಷಣಿಕ ಗುಣಮಟ್ಟವನ್ನು ದುರ್ಬಲಗೊಳಿಸುತ್ತದೆ ಮತ್ತು ಉನ್ನತ ಶಿಕ್ಷಣವನ್ನು ಕೇವಲ ಕಂಠಪಾಠಕ್ಕೆ ಸೀಮಿತಗೊಳಿಸುವ ಅಪಾಯವಿದೆ ಎಂದು ಎಚ್ಚರಿಸಿದ್ದಾರೆ.

ಕರಡು ನೀತಿಯ ಉದ್ದಕ್ಕೂ ‘ಭಾರತೀಯ ಜ್ಞಾನ ವ್ಯವಸ್ಥೆ’ ಎಂಬ ಪದದ ಅಸ್ಪಷ್ಟ ಬಳಕೆಯನ್ನು ಸಮಿತಿ ವಿರೋಧಿಸಿದೆ. ಯಾವುದೇ ಸ್ಪಷ್ಟ ವ್ಯಾಖ್ಯಾನ ಅಥವಾ ವಿಶ್ಲೇಷಣೆಯನ್ನು ಇದಕ್ಕೆ ಕೊಡಲಾಗಿಲ್ಲ ಎಂದಿದ್ದಾರೆ.

ಕೆಲವು ಗ್ರಂಥಗಳು ಸಂಸ್ಕೃತದಲ್ಲಿ ರಚಿತವಾಗಿದ್ದರೂ ಸಹ, ಕ್ರಿ.ಶ. ಮೊದಲನೆಯ ಮತ್ತು ಎರಡನೆಯ ಸಹಸ್ರಮಾನದ ಆರಂಭದಲ್ಲಿ, ಭಾರತ, ಪಶ್ಚಿಮ ಏಷ್ಯಾ, ಮಧ್ಯ ಏಷ್ಯಾ ಮತ್ತು ಚೀನಾದಾದ್ಯಂತ ಪೂರ್ವ-ವಿಜ್ಞಾನದ (ಪ್ರೊಟೊ-ಸೈನ್ಸ್) ಕುರಿತಾದ ಚಿಂತನೆಗಳು ಗಣನೀಯವಾಗಿ ವಿನಿಮಯವಾಗುತ್ತಿದ್ದವು,” ಎಂದು ಥಾಪರ್ ಹೇಳಿದ್ದು, ಈ ಚಿಂತನೆಗಳಿಗೆ ಭೌಗೋಳಿಕ ಗಡಿಗಳನ್ನು ಅಥವಾ ಧಾರ್ಮಿಕ ಮೂಲವನ್ನು ನಿರ್ದಿಷ್ಟಪಡಿಸಲಾಗದು ಎಂದಿದ್ದಾರೆ.

ಕೇಂದ್ರದಿಂದ ಸಂಸದೀಯ ಸ್ಥಾಯಿ ಸಮಿತಿಗಳ ಅವಧಿ ವಿಸ್ತರಣೆ ಸಾಧ್ಯತೆ: ಶಶಿ ತರೂರ್‌ ಸ್ಥಾನ ಅಬಾಧಿತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...