Homeಮುಖಪುಟ'ಅವೈಜ್ಞಾನಿಕ’: ಯುಜಿಸಿಯ ಕರಡು ಪಠ್ಯಕ್ರಮ ನೀತಿ ತಿರಸ್ಕರಿಸಿದ ಕೇರಳ ಸರ್ಕಾರ

‘ಅವೈಜ್ಞಾನಿಕ’: ಯುಜಿಸಿಯ ಕರಡು ಪಠ್ಯಕ್ರಮ ನೀತಿ ತಿರಸ್ಕರಿಸಿದ ಕೇರಳ ಸರ್ಕಾರ

- Advertisement -
- Advertisement -

‘ಭಾರತೀಯ ಜ್ಞಾನ ವ್ಯವಸ್ಥೆಯ ಸೋಗಿನಲ್ಲಿ ನಿರ್ದಿಷ್ಟ ಸಿದ್ದಾಂತದ ವಿಷಯಗಳನ್ನು ಹೇರುವ’ ಬಗ್ಗೆ ಗಂಭೀರ ಕಳವಳಗಳನ್ನು ಉಲ್ಲೇಖಿಸಿ ಕೇರಳ ಸರ್ಕಾರ ವಿಶ್ವವಿದ್ಯಾಲಗಳ ಧನಸಹಾಯ ಆಯೋಗದ (ಯುಜಿಸಿ) ಕರಡು ಪಠ್ಯಕ್ರಮ ನೀತಿಯನ್ನು ತಿರಸ್ಕರಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಶುಕ್ರವಾರ (ಸೆ.26) ವರದಿ ಮಾಡಿದೆ.

ಕಳೆದ ಆಗಸ್ಟ್‌ನಲ್ಲಿ ಯುಜಿಸಿ ಒಂಬತ್ತು ವಿಷಯಗಳಿಗೆ ಕರಡು ನೀತಿಯನ್ನು ಬಿಡುಗಡೆ ಮಾಡಿ ಸಾರ್ವಜನಿಕರಿಂದ ಪ್ರತಿಕ್ರಿಯೆ ಆಹ್ವಾನಿಸಿತ್ತು.

ಯುಜಿಸಿ ಕರಡು ನೀತಿಯು ಹಳೆಯದ್ದು, ಅವೈಜ್ಞಾನಿಕವಾಗಿದೆ ಮತ್ತು ಸಂಘ ಪರಿವಾರದ ಸೈದ್ಧಾಂತಿಕ ಹಿತಾಸಕ್ತಿಗಳ ಪರವಾಗಿದೆ ಎಂದು ಕೇರಳದ ಉನ್ನತ ಶಿಕ್ಷಣ ಸಚಿವೆ ಆರ್ ಬಿಂದು ಹೇಳಿದ್ದಾರೆ.

‘ರಾಮ ರಾಜ್ಯ’ದಂತಹ ವಿಷಯಗಳು—ಅಂದರೆ, ಹಿಂದೂ ದೇವರು ರಾಮನ ಆದರ್ಶಪ್ರಾಯ ಆಡಳಿತ ಎಂಬ ವಿಷಯವನ್ನು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್) ಮತ್ತು ಪರಿಸರ, ಸಾಮಾಜಿಕ ಹಾಗೂ ಆಡಳಿತ (ಇಎಸ್‌ಜಿ) ವಿಷಯಗಳೊಂದಿಗೆ ಸಂಯೋಜಿಸಿರುವುದು ಸಂಘ ಪರಿವಾರದ ಸಿದ್ದಾಂತ ಹೇರಿಕೆಗೆ ಉದಾಹರಣೆ ಎಂದು ಬಿಂದು ತಿಳಿಸಿದ್ದಾರೆ.

“ಇಂತಹ ವಿಷಯಗಳು ನಮ್ಮ ಶೈಕ್ಷಣಿಕ ಸಂಸ್ಥೆಗಳಲ್ಲಿ ಅಸಹಿಷ್ಣುತೆ ಮತ್ತು ಅಶಾಂತಿಗೆ ಕಾರಣವಾಗಬಹುದು” ಎಂದಿದ್ದಾರೆ.

ಅರ್ಥಶಾಸ್ತ್ರಜ್ಞ ಪ್ರಭಾತ್ ಪಟ್ನಾಯಕ್ ಅಧ್ಯಕ್ಷತೆಯ ಕೇರಳ ರಾಜ್ಯ ಸರ್ಕಾರದ ಸಮಿತಿಯು, ಯುಜಿಸಿಯ ಪ್ರಸ್ತಾವಿತ ಕಲಿಕಾ ಫಲಿತಾಂಶ ಆಧಾರಿತ ಪಠ್ಯಕ್ರಮ ನೀತಿಯು ವಿಶ್ವವಿದ್ಯಾಲಯ ಶಿಕ್ಷಣದಿಂದ ನಿರೀಕ್ಷಿಸಲಾದ ಬೌದ್ಧಿಕ ಮತ್ತು ಶಿಸ್ತಿನ ಮಾನದಂಡಗಳನ್ನು ಪೂರೈಸಲು ವಿಫಲವಾಗಿದೆ ಎಂದು ತೀರ್ಮಾನಿಸಿದೆ.

ರಾಜ್ಯ ಸರ್ಕಾರದ ಸಮಿತಿಯಲ್ಲಿ ಇತಿಹಾಸಕಾರ ರೊಮಿಲಾ ಥಾಪರ್ ಮತ್ತು ಕೇರಳ ರಾಜ್ಯ ಉನ್ನತ ಶಿಕ್ಷಣ ಮಂಡಳಿಯ ಉಪಾಧ್ಯಕ್ಷ ರಾಜನ್ ಗುರುಕ್ಕಲ್ ಇದ್ದರು.

ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ವಿವರವಾದ ಆಕ್ಪೇಪವನ್ನು ಸಲ್ಲಿಸಲಾಗಿದ್ದು, ಈ ನೀತಿಯನ್ನು ರಾಜ್ಯದಲ್ಲಿ ಜಾರಿಗೆ ತರುವುದಿಲ್ಲ ಎಂದು ಕೇರಳ ಸರ್ಕಾರ ತಿಳಿಸಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ಗುರುವಾರ ಸಾರ್ವಜನಿಕಗೊಳಿಸಲಾದ ಸಮಿತಿಯ ವರದಿಯಲ್ಲಿ, ಯುಜಿಸಿ ನೀತಿಯು ‘ವಿಶ್ವದ ಯಾವುದೇ ಪ್ರಮುಖ ದೇಶದಲ್ಲಿ ಅಸ್ತಿತ್ವದಲ್ಲಿ ಇಲ್ಲ. ನಮ್ಮ ದೇಶದಲ್ಲಿಯ ಈ  ರೀತಿಯ ನೀತಿಗಳನ್ನು ಇದುವರೆಗೆ ಕಂಡಿಲ್ಲ. ಈ ನೀತಿಯು ವಿಶ್ವವಿದ್ಯಾಲಯಗಳ ಸ್ವಾಯತ್ತತೆಯನ್ನು ಉಲ್ಲಂಘಿಸುತ್ತದೆ ಎಂದು ಹೇಳಲಾಗಿದೆ.

ಯುಜಿಸಿಯ ಕರಡು ಪಠ್ಯಕ್ರಮ ನೀತಿಯ ದಾಖಲೆಯು ಬ್ರಿಟಿಷ್ ಮತ್ತು ಅಮೆರಿಕನ್ ಪಠ್ಯಪುಸ್ತಕಗಳಿಂದ ತೆಗೆದುಕೊಂಡ ವಿವಿಧ ವಿಷಯಗಳ ಸಂಗ್ರಹವಾಗಿದೆ. ಆದರೆ, ಈ ದಾಖಲೆಯು ಭಾರತದ ಇತಿಹಾಸದಲ್ಲಿ ಸಾಮ್ರಾಜ್ಯಶಾಹಿ (ಉದಾಹರಣೆಗೆ, ಬ್ರಿಟಿಷ್ ಆಳ್ವಿಕೆ) ಯ ಶೋಷಣಾತ್ಮಕ ಪಾತ್ರವನ್ನು ಸ್ಪಷ್ಟವಾಗಿ ಗುರುತಿಸುವುದಿಲ್ಲ ಅಥವಾ ಒತ್ತಿಹೇಳುವುದಿಲ್ಲ ಎಂದು ವರದಿಯಲ್ಲಿ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿದೆ.

ಕರಡು ಚೌಕಟ್ಟಿನಲ್ಲಿ ‘ಭಾರತೀಯ ಜ್ಞಾನ ವ್ಯವಸ್ಥೆಯ ಹಿಂದೂ-ವಿಶೇಷತಾವಾದಿ ಗ್ರಹಿಕೆ’ ಯನ್ನು ವರದಿ ಟೀಕಿಸಿದೆ.

ಸಮಿತಿಯ ವಿಶೇಷ ಆಹ್ವಾನಿತರಾಗಿರುವ ಥಾಪರ್, ಈ ನೀತಿಯು ಶೈಕ್ಷಣಿಕ ಗುಣಮಟ್ಟವನ್ನು ದುರ್ಬಲಗೊಳಿಸುತ್ತದೆ ಮತ್ತು ಉನ್ನತ ಶಿಕ್ಷಣವನ್ನು ಕೇವಲ ಕಂಠಪಾಠಕ್ಕೆ ಸೀಮಿತಗೊಳಿಸುವ ಅಪಾಯವಿದೆ ಎಂದು ಎಚ್ಚರಿಸಿದ್ದಾರೆ.

ಕರಡು ನೀತಿಯ ಉದ್ದಕ್ಕೂ ‘ಭಾರತೀಯ ಜ್ಞಾನ ವ್ಯವಸ್ಥೆ’ ಎಂಬ ಪದದ ಅಸ್ಪಷ್ಟ ಬಳಕೆಯನ್ನು ಸಮಿತಿ ವಿರೋಧಿಸಿದೆ. ಯಾವುದೇ ಸ್ಪಷ್ಟ ವ್ಯಾಖ್ಯಾನ ಅಥವಾ ವಿಶ್ಲೇಷಣೆಯನ್ನು ಇದಕ್ಕೆ ಕೊಡಲಾಗಿಲ್ಲ ಎಂದಿದ್ದಾರೆ.

ಕೆಲವು ಗ್ರಂಥಗಳು ಸಂಸ್ಕೃತದಲ್ಲಿ ರಚಿತವಾಗಿದ್ದರೂ ಸಹ, ಕ್ರಿ.ಶ. ಮೊದಲನೆಯ ಮತ್ತು ಎರಡನೆಯ ಸಹಸ್ರಮಾನದ ಆರಂಭದಲ್ಲಿ, ಭಾರತ, ಪಶ್ಚಿಮ ಏಷ್ಯಾ, ಮಧ್ಯ ಏಷ್ಯಾ ಮತ್ತು ಚೀನಾದಾದ್ಯಂತ ಪೂರ್ವ-ವಿಜ್ಞಾನದ (ಪ್ರೊಟೊ-ಸೈನ್ಸ್) ಕುರಿತಾದ ಚಿಂತನೆಗಳು ಗಣನೀಯವಾಗಿ ವಿನಿಮಯವಾಗುತ್ತಿದ್ದವು,” ಎಂದು ಥಾಪರ್ ಹೇಳಿದ್ದು, ಈ ಚಿಂತನೆಗಳಿಗೆ ಭೌಗೋಳಿಕ ಗಡಿಗಳನ್ನು ಅಥವಾ ಧಾರ್ಮಿಕ ಮೂಲವನ್ನು ನಿರ್ದಿಷ್ಟಪಡಿಸಲಾಗದು ಎಂದಿದ್ದಾರೆ.

ಕೇಂದ್ರದಿಂದ ಸಂಸದೀಯ ಸ್ಥಾಯಿ ಸಮಿತಿಗಳ ಅವಧಿ ವಿಸ್ತರಣೆ ಸಾಧ್ಯತೆ: ಶಶಿ ತರೂರ್‌ ಸ್ಥಾನ ಅಬಾಧಿತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...