Homeಮುಖಪುಟ'ಅವೈಜ್ಞಾನಿಕ’: ಯುಜಿಸಿಯ ಕರಡು ಪಠ್ಯಕ್ರಮ ನೀತಿ ತಿರಸ್ಕರಿಸಿದ ಕೇರಳ ಸರ್ಕಾರ

‘ಅವೈಜ್ಞಾನಿಕ’: ಯುಜಿಸಿಯ ಕರಡು ಪಠ್ಯಕ್ರಮ ನೀತಿ ತಿರಸ್ಕರಿಸಿದ ಕೇರಳ ಸರ್ಕಾರ

- Advertisement -
- Advertisement -

‘ಭಾರತೀಯ ಜ್ಞಾನ ವ್ಯವಸ್ಥೆಯ ಸೋಗಿನಲ್ಲಿ ನಿರ್ದಿಷ್ಟ ಸಿದ್ದಾಂತದ ವಿಷಯಗಳನ್ನು ಹೇರುವ’ ಬಗ್ಗೆ ಗಂಭೀರ ಕಳವಳಗಳನ್ನು ಉಲ್ಲೇಖಿಸಿ ಕೇರಳ ಸರ್ಕಾರ ವಿಶ್ವವಿದ್ಯಾಲಗಳ ಧನಸಹಾಯ ಆಯೋಗದ (ಯುಜಿಸಿ) ಕರಡು ಪಠ್ಯಕ್ರಮ ನೀತಿಯನ್ನು ತಿರಸ್ಕರಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಶುಕ್ರವಾರ (ಸೆ.26) ವರದಿ ಮಾಡಿದೆ.

ಕಳೆದ ಆಗಸ್ಟ್‌ನಲ್ಲಿ ಯುಜಿಸಿ ಒಂಬತ್ತು ವಿಷಯಗಳಿಗೆ ಕರಡು ನೀತಿಯನ್ನು ಬಿಡುಗಡೆ ಮಾಡಿ ಸಾರ್ವಜನಿಕರಿಂದ ಪ್ರತಿಕ್ರಿಯೆ ಆಹ್ವಾನಿಸಿತ್ತು.

ಯುಜಿಸಿ ಕರಡು ನೀತಿಯು ಹಳೆಯದ್ದು, ಅವೈಜ್ಞಾನಿಕವಾಗಿದೆ ಮತ್ತು ಸಂಘ ಪರಿವಾರದ ಸೈದ್ಧಾಂತಿಕ ಹಿತಾಸಕ್ತಿಗಳ ಪರವಾಗಿದೆ ಎಂದು ಕೇರಳದ ಉನ್ನತ ಶಿಕ್ಷಣ ಸಚಿವೆ ಆರ್ ಬಿಂದು ಹೇಳಿದ್ದಾರೆ.

‘ರಾಮ ರಾಜ್ಯ’ದಂತಹ ವಿಷಯಗಳು—ಅಂದರೆ, ಹಿಂದೂ ದೇವರು ರಾಮನ ಆದರ್ಶಪ್ರಾಯ ಆಡಳಿತ ಎಂಬ ವಿಷಯವನ್ನು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್) ಮತ್ತು ಪರಿಸರ, ಸಾಮಾಜಿಕ ಹಾಗೂ ಆಡಳಿತ (ಇಎಸ್‌ಜಿ) ವಿಷಯಗಳೊಂದಿಗೆ ಸಂಯೋಜಿಸಿರುವುದು ಸಂಘ ಪರಿವಾರದ ಸಿದ್ದಾಂತ ಹೇರಿಕೆಗೆ ಉದಾಹರಣೆ ಎಂದು ಬಿಂದು ತಿಳಿಸಿದ್ದಾರೆ.

“ಇಂತಹ ವಿಷಯಗಳು ನಮ್ಮ ಶೈಕ್ಷಣಿಕ ಸಂಸ್ಥೆಗಳಲ್ಲಿ ಅಸಹಿಷ್ಣುತೆ ಮತ್ತು ಅಶಾಂತಿಗೆ ಕಾರಣವಾಗಬಹುದು” ಎಂದಿದ್ದಾರೆ.

ಅರ್ಥಶಾಸ್ತ್ರಜ್ಞ ಪ್ರಭಾತ್ ಪಟ್ನಾಯಕ್ ಅಧ್ಯಕ್ಷತೆಯ ಕೇರಳ ರಾಜ್ಯ ಸರ್ಕಾರದ ಸಮಿತಿಯು, ಯುಜಿಸಿಯ ಪ್ರಸ್ತಾವಿತ ಕಲಿಕಾ ಫಲಿತಾಂಶ ಆಧಾರಿತ ಪಠ್ಯಕ್ರಮ ನೀತಿಯು ವಿಶ್ವವಿದ್ಯಾಲಯ ಶಿಕ್ಷಣದಿಂದ ನಿರೀಕ್ಷಿಸಲಾದ ಬೌದ್ಧಿಕ ಮತ್ತು ಶಿಸ್ತಿನ ಮಾನದಂಡಗಳನ್ನು ಪೂರೈಸಲು ವಿಫಲವಾಗಿದೆ ಎಂದು ತೀರ್ಮಾನಿಸಿದೆ.

ರಾಜ್ಯ ಸರ್ಕಾರದ ಸಮಿತಿಯಲ್ಲಿ ಇತಿಹಾಸಕಾರ ರೊಮಿಲಾ ಥಾಪರ್ ಮತ್ತು ಕೇರಳ ರಾಜ್ಯ ಉನ್ನತ ಶಿಕ್ಷಣ ಮಂಡಳಿಯ ಉಪಾಧ್ಯಕ್ಷ ರಾಜನ್ ಗುರುಕ್ಕಲ್ ಇದ್ದರು.

ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ವಿವರವಾದ ಆಕ್ಪೇಪವನ್ನು ಸಲ್ಲಿಸಲಾಗಿದ್ದು, ಈ ನೀತಿಯನ್ನು ರಾಜ್ಯದಲ್ಲಿ ಜಾರಿಗೆ ತರುವುದಿಲ್ಲ ಎಂದು ಕೇರಳ ಸರ್ಕಾರ ತಿಳಿಸಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ಗುರುವಾರ ಸಾರ್ವಜನಿಕಗೊಳಿಸಲಾದ ಸಮಿತಿಯ ವರದಿಯಲ್ಲಿ, ಯುಜಿಸಿ ನೀತಿಯು ‘ವಿಶ್ವದ ಯಾವುದೇ ಪ್ರಮುಖ ದೇಶದಲ್ಲಿ ಅಸ್ತಿತ್ವದಲ್ಲಿ ಇಲ್ಲ. ನಮ್ಮ ದೇಶದಲ್ಲಿಯ ಈ  ರೀತಿಯ ನೀತಿಗಳನ್ನು ಇದುವರೆಗೆ ಕಂಡಿಲ್ಲ. ಈ ನೀತಿಯು ವಿಶ್ವವಿದ್ಯಾಲಯಗಳ ಸ್ವಾಯತ್ತತೆಯನ್ನು ಉಲ್ಲಂಘಿಸುತ್ತದೆ ಎಂದು ಹೇಳಲಾಗಿದೆ.

ಯುಜಿಸಿಯ ಕರಡು ಪಠ್ಯಕ್ರಮ ನೀತಿಯ ದಾಖಲೆಯು ಬ್ರಿಟಿಷ್ ಮತ್ತು ಅಮೆರಿಕನ್ ಪಠ್ಯಪುಸ್ತಕಗಳಿಂದ ತೆಗೆದುಕೊಂಡ ವಿವಿಧ ವಿಷಯಗಳ ಸಂಗ್ರಹವಾಗಿದೆ. ಆದರೆ, ಈ ದಾಖಲೆಯು ಭಾರತದ ಇತಿಹಾಸದಲ್ಲಿ ಸಾಮ್ರಾಜ್ಯಶಾಹಿ (ಉದಾಹರಣೆಗೆ, ಬ್ರಿಟಿಷ್ ಆಳ್ವಿಕೆ) ಯ ಶೋಷಣಾತ್ಮಕ ಪಾತ್ರವನ್ನು ಸ್ಪಷ್ಟವಾಗಿ ಗುರುತಿಸುವುದಿಲ್ಲ ಅಥವಾ ಒತ್ತಿಹೇಳುವುದಿಲ್ಲ ಎಂದು ವರದಿಯಲ್ಲಿ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿದೆ.

ಕರಡು ಚೌಕಟ್ಟಿನಲ್ಲಿ ‘ಭಾರತೀಯ ಜ್ಞಾನ ವ್ಯವಸ್ಥೆಯ ಹಿಂದೂ-ವಿಶೇಷತಾವಾದಿ ಗ್ರಹಿಕೆ’ ಯನ್ನು ವರದಿ ಟೀಕಿಸಿದೆ.

ಸಮಿತಿಯ ವಿಶೇಷ ಆಹ್ವಾನಿತರಾಗಿರುವ ಥಾಪರ್, ಈ ನೀತಿಯು ಶೈಕ್ಷಣಿಕ ಗುಣಮಟ್ಟವನ್ನು ದುರ್ಬಲಗೊಳಿಸುತ್ತದೆ ಮತ್ತು ಉನ್ನತ ಶಿಕ್ಷಣವನ್ನು ಕೇವಲ ಕಂಠಪಾಠಕ್ಕೆ ಸೀಮಿತಗೊಳಿಸುವ ಅಪಾಯವಿದೆ ಎಂದು ಎಚ್ಚರಿಸಿದ್ದಾರೆ.

ಕರಡು ನೀತಿಯ ಉದ್ದಕ್ಕೂ ‘ಭಾರತೀಯ ಜ್ಞಾನ ವ್ಯವಸ್ಥೆ’ ಎಂಬ ಪದದ ಅಸ್ಪಷ್ಟ ಬಳಕೆಯನ್ನು ಸಮಿತಿ ವಿರೋಧಿಸಿದೆ. ಯಾವುದೇ ಸ್ಪಷ್ಟ ವ್ಯಾಖ್ಯಾನ ಅಥವಾ ವಿಶ್ಲೇಷಣೆಯನ್ನು ಇದಕ್ಕೆ ಕೊಡಲಾಗಿಲ್ಲ ಎಂದಿದ್ದಾರೆ.

ಕೆಲವು ಗ್ರಂಥಗಳು ಸಂಸ್ಕೃತದಲ್ಲಿ ರಚಿತವಾಗಿದ್ದರೂ ಸಹ, ಕ್ರಿ.ಶ. ಮೊದಲನೆಯ ಮತ್ತು ಎರಡನೆಯ ಸಹಸ್ರಮಾನದ ಆರಂಭದಲ್ಲಿ, ಭಾರತ, ಪಶ್ಚಿಮ ಏಷ್ಯಾ, ಮಧ್ಯ ಏಷ್ಯಾ ಮತ್ತು ಚೀನಾದಾದ್ಯಂತ ಪೂರ್ವ-ವಿಜ್ಞಾನದ (ಪ್ರೊಟೊ-ಸೈನ್ಸ್) ಕುರಿತಾದ ಚಿಂತನೆಗಳು ಗಣನೀಯವಾಗಿ ವಿನಿಮಯವಾಗುತ್ತಿದ್ದವು,” ಎಂದು ಥಾಪರ್ ಹೇಳಿದ್ದು, ಈ ಚಿಂತನೆಗಳಿಗೆ ಭೌಗೋಳಿಕ ಗಡಿಗಳನ್ನು ಅಥವಾ ಧಾರ್ಮಿಕ ಮೂಲವನ್ನು ನಿರ್ದಿಷ್ಟಪಡಿಸಲಾಗದು ಎಂದಿದ್ದಾರೆ.

ಕೇಂದ್ರದಿಂದ ಸಂಸದೀಯ ಸ್ಥಾಯಿ ಸಮಿತಿಗಳ ಅವಧಿ ವಿಸ್ತರಣೆ ಸಾಧ್ಯತೆ: ಶಶಿ ತರೂರ್‌ ಸ್ಥಾನ ಅಬಾಧಿತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...