Homeಮುಖಪುಟನಿಲ್ಲದ ದೆಹಲಿ ಪಾಲಿಕೆ ಗುದ್ದಾಟ; ಕೈ-ಕೈ ಮಿಲಾಯಿಸಿದ ಬಿಜೆಪಿ-ಎಎಪಿ ಕೌನ್ಸಿಲರ್‌ಗಳು

ನಿಲ್ಲದ ದೆಹಲಿ ಪಾಲಿಕೆ ಗುದ್ದಾಟ; ಕೈ-ಕೈ ಮಿಲಾಯಿಸಿದ ಬಿಜೆಪಿ-ಎಎಪಿ ಕೌನ್ಸಿಲರ್‌ಗಳು

- Advertisement -
- Advertisement -

ದೆಹಲಿಯ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಎಎಪಿ ಮತ್ತು ಬಿಜೆಪಿ ಕೌನ್ಸಿಲರ್‌ಗಳ ನಡುವೆ ಮತ್ತೆ ಘರ್ಷಣೆ ನಡೆದಿದ್ದು ಕೈ-ಕೈ ಮಿಲಾಯಿಸಿದ್ದಾರೆ. ಆರು ಸ್ಥಾಯಿ ಸಮಿತಿ ಸದಸ್ಯರ ಚುನಾವಣೆಯ ಮತ ಎಣಿಕೆ ವೇಳೆ ಈ ಘಟನೆ ನಡೆದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಸ್ಥಾಯಿ ಸಮಿತಿಯು ದೆಹಲಿ ಮಹಾನಗರ ಪಾಲಿಕೆಯಲ್ಲಿ ಪ್ರಬಲ ಪಾತ್ರವನ್ನು ವಹಿಸುವುದರಿಂದ ಇಷ್ಟೊಂದು ಪ್ರಾಮುಖ್ಯತೆ ಪಡೆದಿದೆ. ಯೋಜನೆಗಳಿಗೆ ಆರ್ಥಿಕ ಅನುಮೋದನೆ ನೀಡಲು, ಉಪ ಸಮಿತಿಗಳನ್ನು ನೇಮಿಸಲು ಮತ್ತು ಚರ್ಚೆಗಳನ್ನು ನಡೆಸಲು ಮತ್ತು ನೀತಿಗಳನ್ನು ಅಂತಿಮಗೊಳಿಸಲು ಸಮಿತಿಗೆ ಅಧಿಕಾರವಿದೆ ಹಾಗಾಗಿ ಸ್ಥಾಯಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡುವ ಮತದಾನವು ಎರಡೂ ಪಕ್ಷಗಳಿಗೆ ಮುಖ್ಯವಾಗಿದೆ.

ಶುಕ್ರವಾರ ನಡೆದ ಮತದಾನದಲ್ಲಿ 250 ಕೌನ್ಸಿಲರ್‌ಗಳ ಪೈಕಿ 242 ಜನ ಮತ ಚಲಾಯಿಸಿದ್ದಾರೆ. ಎಂಟು ಕೌನ್ಸಿಲರ್‌ಗಳು – ಮನ್‌ದೀಪ್ ಸಿಂಗ್, ಅರಿಬಾ ಖಾನ್, ನಾಜಿಯಾ ಡ್ಯಾನಿಶ್, ಸಮೀರ್ ಅಹ್ಮದ್, ಶಗುಫ್ತಾ ಚೌಧರಿ ಜುಬೇರ್, ಸಬಿಲಾ ಬೇಗಂ, ನಾಜಿಯಾ ಖಾತೂನ್ ಮತ್ತು ಜರೀಫ್ ತಮ್ಮ ಮತ ಚಲಾಯಿಸಲಿಲ್ಲ ಎಂದು ಎಂದು ನೂತನ ಮೇಯರ್ ಶೆಲ್ಲಿ ಒಬೆರಾಯ್ ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಮೇಯರ್ ಚುನಾವಣೆ: ಎಎಪಿಗೆ ಗೆಲುವು, ಬಿಜೆಪಿಗೆ ಮುಖಭಂಗ

ಈ ನಡುವೆ ಒಬೆರಾಯ್ ಅವರು ಒಂದು ಮತವನ್ನು ಅಸಿಂಧು ಎಂದು ಘೋಷಿಸಿದ್ದಾರೆ. ಇದೇ ಕಾರಣಕ್ಕೆ ಗದ್ದಲ ಗಲಾಟೆ ಪ್ರಾರಂಭವಾಯಿತು, ಇದರಿಂದಾಗಿ ಬಿಜೆಪಿ ಕೌನ್ಸಿಲರ್‌ಗಳು ಮತ ಎಣಿಕೆ ಪ್ರಕ್ರಿಯೆಗೆ ಅಡ್ಡಿಪಡಿಸಿದರು. ಅಷ್ಟಾದರೂ, ಅಸಿಂಧು ಮತವಿಲ್ಲದೆ ಫಲಿತಾಂಶವನ್ನು ಘೋಷಿಸಲಾಗುವುದು ಎಂದು ಮೇಯರ್ ಹೇಳಿದರು.

ಈ ವೇಳೆ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಸದಸ್ಯರು ಪರಸ್ಪರ ಗುದ್ದುವುದು, ಒದೆಯುವುದು ಮತ್ತು ತಳ್ಳುವುದನ್ನು ವೀಡಿಯೊಗಳಲ್ಲಿ ನೋಡಬಹುದು. ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ಒಬ್ಬರು ನೆಲದ ಮೇಲೆ ಬಿದ್ದಿದ್ದಾರೆ. ಬಿಜೆಪಿ ಕೌನ್ಸಿಲರ್ ಮೀನಾಕ್ಷಿ ಶರ್ಮಾ ಅವರು ಆಪ್‌ನ ಯಾರೋ ಹರಿತವಾದ ವಸ್ತುವಿನಿಂದ ಹೊಡೆದಿದ್ದಾರೆ ಎಂದು ಹೇಳಿಕೊಂಡಿದ್ದಾರೆಂದು ಎಎನ್‌ಐ ವರದಿ ಮಾಡಿದೆ.

”ಪುರುಷ ಕೌನ್ಸಿಲರೊಬ್ಬರು ನನ್ನ ಕುತ್ತಿಗೆಯನ್ನು ಮುಟ್ಟಿದರು” ಎಂದು ಶರ್ಮಾ ಹೇಳಿದರು. ಆಕೆ (ಒಬೆರಾಯ್) ದೆಹಲಿಯ ಮೇಯರ್ ಆಗಿದ್ದಾರೋ ಅಥವಾ ಎಎಪಿ ಪಕ್ಷದವಳಾಗಿದ್ದಾಳೋ ಗೊತ್ತಿಲ್ಲ. ಅವಳು ಕೇಜ್ರಿವಾಲ್ ಮತ್ತು ಇತರ ನಾಯಕರ ಆದೇಶದಂತೆ ಕಾರ್ಯನಿರ್ವಹಿಸುತ್ತಾಳೆ ಎಂದು ಶರ್ಮಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಒಂದು ಮತ ಸಿಂಧುವಾಗಿದೆ ಎಂದು ಬಿಜೆಪಿ ಹೇಳಿಕೊಂಡಿದೆ. “ಇದು ಅಮಾನ್ಯವಾಗಿದ್ದರೆ, ನಮ್ಮ ಲೆಕ್ಕಾಚಾರದ ಪ್ರಕಾರ, ಎಎಪಿ ಅಭ್ಯರ್ಥಿ ಗೆಲ್ಲುತ್ತಾರೆ” ಎಂದು ಅಸಿಂಧು ಮತ ಎಂದು ಗುರುತಿಸಿಕೊಂಡಿರುವ ಬಿಜೆಪಿ ಕೌನ್ಸಿಲರ್ ಎನ್‌ಡಿಟಿವಿಗೆ ತಿಳಿಸಿದರು.

”ಬಿಜೆಪಿ ತನ್ನ ಸೋಲನ್ನು ಒಪ್ಪಿಕೊಂಡು ತನ್ನ ಗೂಂಡಾಗಿರಿಯನ್ನು ನಿಲ್ಲಿಸುವ ಸಮಯ ಬಂದಿದೆ” ಎಂದು ಎಎಪಿ ಶಾಸಕ ಅತಿಶಿ ಹೇಳಿದ್ದಾರೆ.

”ಇಂದು ಬಿಜೆಪಿಯು ಮಹಾನಗರ ಪಾಲಿಕೆಯಲ್ಲಿ ಗೂಂಡಾಗಿರಿ ಪ್ರದರ್ಶಸಿದೆ. ಸ್ಥಾಯಿ ಸಮಿತಿ ಚುನಾವಣೆ ನಡೆಯುತ್ತಿತ್ತು. ಮತ ಎಣಿಕೆ ಆರಂಭವಾದಾಗ ಬಿಜೆಪಿ ಸೋಲುವುದು ಗೊತ್ತಾಗುತ್ತಿದ್ದಂತೆ ಗದ್ದಲ ಸೃಷ್ಟಿಸಿತು. ಮೇಯರ್ ಮೇಲೆ ಬಿಜೆಪಿ ಪುರುಷ ಸದಸ್ಯರು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ” ಎಂದು ಅತಿಶಿ ಹೇಳಿದರು.

ಗುರುವಾರ ಕೂಡ ಇದೇ ರೀತಿ ಘಟನೆ ನಡೆದಿತ್ತು. ಎರಡು ಪಕ್ಷಗಳ ಕೌನ್ಸಿಲರ್‌ಗಳು ಪರಸ್ಪರ ನೀರಿನ ಬಾಟಲಿಗಳು ಮತ್ತು ಹಣ್ಣುಗಳನ್ನು ಎಸೆದಿದ್ದಾರೆ. ಸ್ಥಾಯಿ ಸಮಿತಿಯ ಸದಸ್ಯರನ್ನು ಆಯ್ಕೆ ಮಾಡದೆ ಸದನವನ್ನು ಮುಂದೂಡಲಾಗಿತ್ತು.

ಒಬೆರಾಯ್ ಅವರು ಕೌನ್ಸಿಲ್‌ನ ಮೇಯರ್ ಆಗಿ ಆಯ್ಕೆಯಾದ ನಂತರ ದೆಹಲಿಯ ಮಹಾನಗರ ಪಾಲಿಕೆಯಲ್ಲಿ ಶುಕ್ರವಾರದ ಗೊಂದಲ ಉಂಟಾಗುತ್ತದೆ. ಗಮನಾರ್ಹವೆಂದರೆ, ಎಎಪಿ ಮತ್ತು ಬಿಜೆಪಿ ನಡುವಿನ ಸುದೀರ್ಘ ಜಗಳದಿಂದಾಗಿ ಡಿಸೆಂಬರ್‌ನಲ್ಲಿ ನಡೆದ ಪಾಲಿಕೆ ಚುನಾವಣೆಯ ನಂತರ ಮೇಯರ್ ಚುನಾವಣೆಗಳು ಮೂರು ಬಾರಿ ಮುಂದೂಡಲ್ಪಟ್ಟಿತು. ಎಎಪಿಯ ಕೌನ್ಸಿಲರ್‌ಗಳು ಆಲ್ಡರ್‌ಮನ್‌ಗಳಿಗೆ ಮತ ಚಲಾಯಿಸಲು ಅವಕಾಶ ನೀಡುವ ಬಿಜೆಪಿಯ ವಾದವನ್ನು ವಿರೋಧಿಸಿದ್ದರು.

ಸುಪ್ರೀಂ ಕೋರ್ಟ ಫೆಬ್ರವರಿ 18ರಂದು ಎಎಪಿಗೆ ಪ್ರಮುಖ ಪರಿಹಾರ ನೀಡಿತು. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ನ ನಾಮನಿರ್ದೇಶಿತ ಸದಸ್ಯರು ಮೇಯರ್ ಹುದ್ದೆಗೆ ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತು. ಅದಾದನಂತರ ಮೇಯ೬ರ್ ಚುನಾವಣೆ ನಡೆಯಿತು, ಎಎಪಿ ಅಭ್ಯರ್ಥಿ ಗೆಲವು ಸಾಧಿಸಿದರು. ಇದರಿಂದ ಬಿಜೆಪಿ ಭಾರೀ ಮುಖಭಂಗವಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...