Homeಮುಖಪುಟನಿಲ್ಲದ ದೆಹಲಿ ಪಾಲಿಕೆ ಗುದ್ದಾಟ; ಕೈ-ಕೈ ಮಿಲಾಯಿಸಿದ ಬಿಜೆಪಿ-ಎಎಪಿ ಕೌನ್ಸಿಲರ್‌ಗಳು

ನಿಲ್ಲದ ದೆಹಲಿ ಪಾಲಿಕೆ ಗುದ್ದಾಟ; ಕೈ-ಕೈ ಮಿಲಾಯಿಸಿದ ಬಿಜೆಪಿ-ಎಎಪಿ ಕೌನ್ಸಿಲರ್‌ಗಳು

- Advertisement -
- Advertisement -

ದೆಹಲಿಯ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಎಎಪಿ ಮತ್ತು ಬಿಜೆಪಿ ಕೌನ್ಸಿಲರ್‌ಗಳ ನಡುವೆ ಮತ್ತೆ ಘರ್ಷಣೆ ನಡೆದಿದ್ದು ಕೈ-ಕೈ ಮಿಲಾಯಿಸಿದ್ದಾರೆ. ಆರು ಸ್ಥಾಯಿ ಸಮಿತಿ ಸದಸ್ಯರ ಚುನಾವಣೆಯ ಮತ ಎಣಿಕೆ ವೇಳೆ ಈ ಘಟನೆ ನಡೆದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಸ್ಥಾಯಿ ಸಮಿತಿಯು ದೆಹಲಿ ಮಹಾನಗರ ಪಾಲಿಕೆಯಲ್ಲಿ ಪ್ರಬಲ ಪಾತ್ರವನ್ನು ವಹಿಸುವುದರಿಂದ ಇಷ್ಟೊಂದು ಪ್ರಾಮುಖ್ಯತೆ ಪಡೆದಿದೆ. ಯೋಜನೆಗಳಿಗೆ ಆರ್ಥಿಕ ಅನುಮೋದನೆ ನೀಡಲು, ಉಪ ಸಮಿತಿಗಳನ್ನು ನೇಮಿಸಲು ಮತ್ತು ಚರ್ಚೆಗಳನ್ನು ನಡೆಸಲು ಮತ್ತು ನೀತಿಗಳನ್ನು ಅಂತಿಮಗೊಳಿಸಲು ಸಮಿತಿಗೆ ಅಧಿಕಾರವಿದೆ ಹಾಗಾಗಿ ಸ್ಥಾಯಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡುವ ಮತದಾನವು ಎರಡೂ ಪಕ್ಷಗಳಿಗೆ ಮುಖ್ಯವಾಗಿದೆ.

ಶುಕ್ರವಾರ ನಡೆದ ಮತದಾನದಲ್ಲಿ 250 ಕೌನ್ಸಿಲರ್‌ಗಳ ಪೈಕಿ 242 ಜನ ಮತ ಚಲಾಯಿಸಿದ್ದಾರೆ. ಎಂಟು ಕೌನ್ಸಿಲರ್‌ಗಳು – ಮನ್‌ದೀಪ್ ಸಿಂಗ್, ಅರಿಬಾ ಖಾನ್, ನಾಜಿಯಾ ಡ್ಯಾನಿಶ್, ಸಮೀರ್ ಅಹ್ಮದ್, ಶಗುಫ್ತಾ ಚೌಧರಿ ಜುಬೇರ್, ಸಬಿಲಾ ಬೇಗಂ, ನಾಜಿಯಾ ಖಾತೂನ್ ಮತ್ತು ಜರೀಫ್ ತಮ್ಮ ಮತ ಚಲಾಯಿಸಲಿಲ್ಲ ಎಂದು ಎಂದು ನೂತನ ಮೇಯರ್ ಶೆಲ್ಲಿ ಒಬೆರಾಯ್ ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಮೇಯರ್ ಚುನಾವಣೆ: ಎಎಪಿಗೆ ಗೆಲುವು, ಬಿಜೆಪಿಗೆ ಮುಖಭಂಗ

ಈ ನಡುವೆ ಒಬೆರಾಯ್ ಅವರು ಒಂದು ಮತವನ್ನು ಅಸಿಂಧು ಎಂದು ಘೋಷಿಸಿದ್ದಾರೆ. ಇದೇ ಕಾರಣಕ್ಕೆ ಗದ್ದಲ ಗಲಾಟೆ ಪ್ರಾರಂಭವಾಯಿತು, ಇದರಿಂದಾಗಿ ಬಿಜೆಪಿ ಕೌನ್ಸಿಲರ್‌ಗಳು ಮತ ಎಣಿಕೆ ಪ್ರಕ್ರಿಯೆಗೆ ಅಡ್ಡಿಪಡಿಸಿದರು. ಅಷ್ಟಾದರೂ, ಅಸಿಂಧು ಮತವಿಲ್ಲದೆ ಫಲಿತಾಂಶವನ್ನು ಘೋಷಿಸಲಾಗುವುದು ಎಂದು ಮೇಯರ್ ಹೇಳಿದರು.

ಈ ವೇಳೆ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಸದಸ್ಯರು ಪರಸ್ಪರ ಗುದ್ದುವುದು, ಒದೆಯುವುದು ಮತ್ತು ತಳ್ಳುವುದನ್ನು ವೀಡಿಯೊಗಳಲ್ಲಿ ನೋಡಬಹುದು. ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ಒಬ್ಬರು ನೆಲದ ಮೇಲೆ ಬಿದ್ದಿದ್ದಾರೆ. ಬಿಜೆಪಿ ಕೌನ್ಸಿಲರ್ ಮೀನಾಕ್ಷಿ ಶರ್ಮಾ ಅವರು ಆಪ್‌ನ ಯಾರೋ ಹರಿತವಾದ ವಸ್ತುವಿನಿಂದ ಹೊಡೆದಿದ್ದಾರೆ ಎಂದು ಹೇಳಿಕೊಂಡಿದ್ದಾರೆಂದು ಎಎನ್‌ಐ ವರದಿ ಮಾಡಿದೆ.

”ಪುರುಷ ಕೌನ್ಸಿಲರೊಬ್ಬರು ನನ್ನ ಕುತ್ತಿಗೆಯನ್ನು ಮುಟ್ಟಿದರು” ಎಂದು ಶರ್ಮಾ ಹೇಳಿದರು. ಆಕೆ (ಒಬೆರಾಯ್) ದೆಹಲಿಯ ಮೇಯರ್ ಆಗಿದ್ದಾರೋ ಅಥವಾ ಎಎಪಿ ಪಕ್ಷದವಳಾಗಿದ್ದಾಳೋ ಗೊತ್ತಿಲ್ಲ. ಅವಳು ಕೇಜ್ರಿವಾಲ್ ಮತ್ತು ಇತರ ನಾಯಕರ ಆದೇಶದಂತೆ ಕಾರ್ಯನಿರ್ವಹಿಸುತ್ತಾಳೆ ಎಂದು ಶರ್ಮಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಒಂದು ಮತ ಸಿಂಧುವಾಗಿದೆ ಎಂದು ಬಿಜೆಪಿ ಹೇಳಿಕೊಂಡಿದೆ. “ಇದು ಅಮಾನ್ಯವಾಗಿದ್ದರೆ, ನಮ್ಮ ಲೆಕ್ಕಾಚಾರದ ಪ್ರಕಾರ, ಎಎಪಿ ಅಭ್ಯರ್ಥಿ ಗೆಲ್ಲುತ್ತಾರೆ” ಎಂದು ಅಸಿಂಧು ಮತ ಎಂದು ಗುರುತಿಸಿಕೊಂಡಿರುವ ಬಿಜೆಪಿ ಕೌನ್ಸಿಲರ್ ಎನ್‌ಡಿಟಿವಿಗೆ ತಿಳಿಸಿದರು.

”ಬಿಜೆಪಿ ತನ್ನ ಸೋಲನ್ನು ಒಪ್ಪಿಕೊಂಡು ತನ್ನ ಗೂಂಡಾಗಿರಿಯನ್ನು ನಿಲ್ಲಿಸುವ ಸಮಯ ಬಂದಿದೆ” ಎಂದು ಎಎಪಿ ಶಾಸಕ ಅತಿಶಿ ಹೇಳಿದ್ದಾರೆ.

”ಇಂದು ಬಿಜೆಪಿಯು ಮಹಾನಗರ ಪಾಲಿಕೆಯಲ್ಲಿ ಗೂಂಡಾಗಿರಿ ಪ್ರದರ್ಶಸಿದೆ. ಸ್ಥಾಯಿ ಸಮಿತಿ ಚುನಾವಣೆ ನಡೆಯುತ್ತಿತ್ತು. ಮತ ಎಣಿಕೆ ಆರಂಭವಾದಾಗ ಬಿಜೆಪಿ ಸೋಲುವುದು ಗೊತ್ತಾಗುತ್ತಿದ್ದಂತೆ ಗದ್ದಲ ಸೃಷ್ಟಿಸಿತು. ಮೇಯರ್ ಮೇಲೆ ಬಿಜೆಪಿ ಪುರುಷ ಸದಸ್ಯರು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ” ಎಂದು ಅತಿಶಿ ಹೇಳಿದರು.

ಗುರುವಾರ ಕೂಡ ಇದೇ ರೀತಿ ಘಟನೆ ನಡೆದಿತ್ತು. ಎರಡು ಪಕ್ಷಗಳ ಕೌನ್ಸಿಲರ್‌ಗಳು ಪರಸ್ಪರ ನೀರಿನ ಬಾಟಲಿಗಳು ಮತ್ತು ಹಣ್ಣುಗಳನ್ನು ಎಸೆದಿದ್ದಾರೆ. ಸ್ಥಾಯಿ ಸಮಿತಿಯ ಸದಸ್ಯರನ್ನು ಆಯ್ಕೆ ಮಾಡದೆ ಸದನವನ್ನು ಮುಂದೂಡಲಾಗಿತ್ತು.

ಒಬೆರಾಯ್ ಅವರು ಕೌನ್ಸಿಲ್‌ನ ಮೇಯರ್ ಆಗಿ ಆಯ್ಕೆಯಾದ ನಂತರ ದೆಹಲಿಯ ಮಹಾನಗರ ಪಾಲಿಕೆಯಲ್ಲಿ ಶುಕ್ರವಾರದ ಗೊಂದಲ ಉಂಟಾಗುತ್ತದೆ. ಗಮನಾರ್ಹವೆಂದರೆ, ಎಎಪಿ ಮತ್ತು ಬಿಜೆಪಿ ನಡುವಿನ ಸುದೀರ್ಘ ಜಗಳದಿಂದಾಗಿ ಡಿಸೆಂಬರ್‌ನಲ್ಲಿ ನಡೆದ ಪಾಲಿಕೆ ಚುನಾವಣೆಯ ನಂತರ ಮೇಯರ್ ಚುನಾವಣೆಗಳು ಮೂರು ಬಾರಿ ಮುಂದೂಡಲ್ಪಟ್ಟಿತು. ಎಎಪಿಯ ಕೌನ್ಸಿಲರ್‌ಗಳು ಆಲ್ಡರ್‌ಮನ್‌ಗಳಿಗೆ ಮತ ಚಲಾಯಿಸಲು ಅವಕಾಶ ನೀಡುವ ಬಿಜೆಪಿಯ ವಾದವನ್ನು ವಿರೋಧಿಸಿದ್ದರು.

ಸುಪ್ರೀಂ ಕೋರ್ಟ ಫೆಬ್ರವರಿ 18ರಂದು ಎಎಪಿಗೆ ಪ್ರಮುಖ ಪರಿಹಾರ ನೀಡಿತು. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ನ ನಾಮನಿರ್ದೇಶಿತ ಸದಸ್ಯರು ಮೇಯರ್ ಹುದ್ದೆಗೆ ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತು. ಅದಾದನಂತರ ಮೇಯ೬ರ್ ಚುನಾವಣೆ ನಡೆಯಿತು, ಎಎಪಿ ಅಭ್ಯರ್ಥಿ ಗೆಲವು ಸಾಧಿಸಿದರು. ಇದರಿಂದ ಬಿಜೆಪಿ ಭಾರೀ ಮುಖಭಂಗವಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...