Homeಮುಖಪುಟನಿಲ್ಲದ ದೆಹಲಿ ಪಾಲಿಕೆ ಗುದ್ದಾಟ; ಕೈ-ಕೈ ಮಿಲಾಯಿಸಿದ ಬಿಜೆಪಿ-ಎಎಪಿ ಕೌನ್ಸಿಲರ್‌ಗಳು

ನಿಲ್ಲದ ದೆಹಲಿ ಪಾಲಿಕೆ ಗುದ್ದಾಟ; ಕೈ-ಕೈ ಮಿಲಾಯಿಸಿದ ಬಿಜೆಪಿ-ಎಎಪಿ ಕೌನ್ಸಿಲರ್‌ಗಳು

- Advertisement -
- Advertisement -

ದೆಹಲಿಯ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಎಎಪಿ ಮತ್ತು ಬಿಜೆಪಿ ಕೌನ್ಸಿಲರ್‌ಗಳ ನಡುವೆ ಮತ್ತೆ ಘರ್ಷಣೆ ನಡೆದಿದ್ದು ಕೈ-ಕೈ ಮಿಲಾಯಿಸಿದ್ದಾರೆ. ಆರು ಸ್ಥಾಯಿ ಸಮಿತಿ ಸದಸ್ಯರ ಚುನಾವಣೆಯ ಮತ ಎಣಿಕೆ ವೇಳೆ ಈ ಘಟನೆ ನಡೆದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಸ್ಥಾಯಿ ಸಮಿತಿಯು ದೆಹಲಿ ಮಹಾನಗರ ಪಾಲಿಕೆಯಲ್ಲಿ ಪ್ರಬಲ ಪಾತ್ರವನ್ನು ವಹಿಸುವುದರಿಂದ ಇಷ್ಟೊಂದು ಪ್ರಾಮುಖ್ಯತೆ ಪಡೆದಿದೆ. ಯೋಜನೆಗಳಿಗೆ ಆರ್ಥಿಕ ಅನುಮೋದನೆ ನೀಡಲು, ಉಪ ಸಮಿತಿಗಳನ್ನು ನೇಮಿಸಲು ಮತ್ತು ಚರ್ಚೆಗಳನ್ನು ನಡೆಸಲು ಮತ್ತು ನೀತಿಗಳನ್ನು ಅಂತಿಮಗೊಳಿಸಲು ಸಮಿತಿಗೆ ಅಧಿಕಾರವಿದೆ ಹಾಗಾಗಿ ಸ್ಥಾಯಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡುವ ಮತದಾನವು ಎರಡೂ ಪಕ್ಷಗಳಿಗೆ ಮುಖ್ಯವಾಗಿದೆ.

ಶುಕ್ರವಾರ ನಡೆದ ಮತದಾನದಲ್ಲಿ 250 ಕೌನ್ಸಿಲರ್‌ಗಳ ಪೈಕಿ 242 ಜನ ಮತ ಚಲಾಯಿಸಿದ್ದಾರೆ. ಎಂಟು ಕೌನ್ಸಿಲರ್‌ಗಳು – ಮನ್‌ದೀಪ್ ಸಿಂಗ್, ಅರಿಬಾ ಖಾನ್, ನಾಜಿಯಾ ಡ್ಯಾನಿಶ್, ಸಮೀರ್ ಅಹ್ಮದ್, ಶಗುಫ್ತಾ ಚೌಧರಿ ಜುಬೇರ್, ಸಬಿಲಾ ಬೇಗಂ, ನಾಜಿಯಾ ಖಾತೂನ್ ಮತ್ತು ಜರೀಫ್ ತಮ್ಮ ಮತ ಚಲಾಯಿಸಲಿಲ್ಲ ಎಂದು ಎಂದು ನೂತನ ಮೇಯರ್ ಶೆಲ್ಲಿ ಒಬೆರಾಯ್ ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಮೇಯರ್ ಚುನಾವಣೆ: ಎಎಪಿಗೆ ಗೆಲುವು, ಬಿಜೆಪಿಗೆ ಮುಖಭಂಗ

ಈ ನಡುವೆ ಒಬೆರಾಯ್ ಅವರು ಒಂದು ಮತವನ್ನು ಅಸಿಂಧು ಎಂದು ಘೋಷಿಸಿದ್ದಾರೆ. ಇದೇ ಕಾರಣಕ್ಕೆ ಗದ್ದಲ ಗಲಾಟೆ ಪ್ರಾರಂಭವಾಯಿತು, ಇದರಿಂದಾಗಿ ಬಿಜೆಪಿ ಕೌನ್ಸಿಲರ್‌ಗಳು ಮತ ಎಣಿಕೆ ಪ್ರಕ್ರಿಯೆಗೆ ಅಡ್ಡಿಪಡಿಸಿದರು. ಅಷ್ಟಾದರೂ, ಅಸಿಂಧು ಮತವಿಲ್ಲದೆ ಫಲಿತಾಂಶವನ್ನು ಘೋಷಿಸಲಾಗುವುದು ಎಂದು ಮೇಯರ್ ಹೇಳಿದರು.

ಈ ವೇಳೆ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಸದಸ್ಯರು ಪರಸ್ಪರ ಗುದ್ದುವುದು, ಒದೆಯುವುದು ಮತ್ತು ತಳ್ಳುವುದನ್ನು ವೀಡಿಯೊಗಳಲ್ಲಿ ನೋಡಬಹುದು. ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ಒಬ್ಬರು ನೆಲದ ಮೇಲೆ ಬಿದ್ದಿದ್ದಾರೆ. ಬಿಜೆಪಿ ಕೌನ್ಸಿಲರ್ ಮೀನಾಕ್ಷಿ ಶರ್ಮಾ ಅವರು ಆಪ್‌ನ ಯಾರೋ ಹರಿತವಾದ ವಸ್ತುವಿನಿಂದ ಹೊಡೆದಿದ್ದಾರೆ ಎಂದು ಹೇಳಿಕೊಂಡಿದ್ದಾರೆಂದು ಎಎನ್‌ಐ ವರದಿ ಮಾಡಿದೆ.

”ಪುರುಷ ಕೌನ್ಸಿಲರೊಬ್ಬರು ನನ್ನ ಕುತ್ತಿಗೆಯನ್ನು ಮುಟ್ಟಿದರು” ಎಂದು ಶರ್ಮಾ ಹೇಳಿದರು. ಆಕೆ (ಒಬೆರಾಯ್) ದೆಹಲಿಯ ಮೇಯರ್ ಆಗಿದ್ದಾರೋ ಅಥವಾ ಎಎಪಿ ಪಕ್ಷದವಳಾಗಿದ್ದಾಳೋ ಗೊತ್ತಿಲ್ಲ. ಅವಳು ಕೇಜ್ರಿವಾಲ್ ಮತ್ತು ಇತರ ನಾಯಕರ ಆದೇಶದಂತೆ ಕಾರ್ಯನಿರ್ವಹಿಸುತ್ತಾಳೆ ಎಂದು ಶರ್ಮಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಒಂದು ಮತ ಸಿಂಧುವಾಗಿದೆ ಎಂದು ಬಿಜೆಪಿ ಹೇಳಿಕೊಂಡಿದೆ. “ಇದು ಅಮಾನ್ಯವಾಗಿದ್ದರೆ, ನಮ್ಮ ಲೆಕ್ಕಾಚಾರದ ಪ್ರಕಾರ, ಎಎಪಿ ಅಭ್ಯರ್ಥಿ ಗೆಲ್ಲುತ್ತಾರೆ” ಎಂದು ಅಸಿಂಧು ಮತ ಎಂದು ಗುರುತಿಸಿಕೊಂಡಿರುವ ಬಿಜೆಪಿ ಕೌನ್ಸಿಲರ್ ಎನ್‌ಡಿಟಿವಿಗೆ ತಿಳಿಸಿದರು.

”ಬಿಜೆಪಿ ತನ್ನ ಸೋಲನ್ನು ಒಪ್ಪಿಕೊಂಡು ತನ್ನ ಗೂಂಡಾಗಿರಿಯನ್ನು ನಿಲ್ಲಿಸುವ ಸಮಯ ಬಂದಿದೆ” ಎಂದು ಎಎಪಿ ಶಾಸಕ ಅತಿಶಿ ಹೇಳಿದ್ದಾರೆ.

”ಇಂದು ಬಿಜೆಪಿಯು ಮಹಾನಗರ ಪಾಲಿಕೆಯಲ್ಲಿ ಗೂಂಡಾಗಿರಿ ಪ್ರದರ್ಶಸಿದೆ. ಸ್ಥಾಯಿ ಸಮಿತಿ ಚುನಾವಣೆ ನಡೆಯುತ್ತಿತ್ತು. ಮತ ಎಣಿಕೆ ಆರಂಭವಾದಾಗ ಬಿಜೆಪಿ ಸೋಲುವುದು ಗೊತ್ತಾಗುತ್ತಿದ್ದಂತೆ ಗದ್ದಲ ಸೃಷ್ಟಿಸಿತು. ಮೇಯರ್ ಮೇಲೆ ಬಿಜೆಪಿ ಪುರುಷ ಸದಸ್ಯರು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ” ಎಂದು ಅತಿಶಿ ಹೇಳಿದರು.

ಗುರುವಾರ ಕೂಡ ಇದೇ ರೀತಿ ಘಟನೆ ನಡೆದಿತ್ತು. ಎರಡು ಪಕ್ಷಗಳ ಕೌನ್ಸಿಲರ್‌ಗಳು ಪರಸ್ಪರ ನೀರಿನ ಬಾಟಲಿಗಳು ಮತ್ತು ಹಣ್ಣುಗಳನ್ನು ಎಸೆದಿದ್ದಾರೆ. ಸ್ಥಾಯಿ ಸಮಿತಿಯ ಸದಸ್ಯರನ್ನು ಆಯ್ಕೆ ಮಾಡದೆ ಸದನವನ್ನು ಮುಂದೂಡಲಾಗಿತ್ತು.

ಒಬೆರಾಯ್ ಅವರು ಕೌನ್ಸಿಲ್‌ನ ಮೇಯರ್ ಆಗಿ ಆಯ್ಕೆಯಾದ ನಂತರ ದೆಹಲಿಯ ಮಹಾನಗರ ಪಾಲಿಕೆಯಲ್ಲಿ ಶುಕ್ರವಾರದ ಗೊಂದಲ ಉಂಟಾಗುತ್ತದೆ. ಗಮನಾರ್ಹವೆಂದರೆ, ಎಎಪಿ ಮತ್ತು ಬಿಜೆಪಿ ನಡುವಿನ ಸುದೀರ್ಘ ಜಗಳದಿಂದಾಗಿ ಡಿಸೆಂಬರ್‌ನಲ್ಲಿ ನಡೆದ ಪಾಲಿಕೆ ಚುನಾವಣೆಯ ನಂತರ ಮೇಯರ್ ಚುನಾವಣೆಗಳು ಮೂರು ಬಾರಿ ಮುಂದೂಡಲ್ಪಟ್ಟಿತು. ಎಎಪಿಯ ಕೌನ್ಸಿಲರ್‌ಗಳು ಆಲ್ಡರ್‌ಮನ್‌ಗಳಿಗೆ ಮತ ಚಲಾಯಿಸಲು ಅವಕಾಶ ನೀಡುವ ಬಿಜೆಪಿಯ ವಾದವನ್ನು ವಿರೋಧಿಸಿದ್ದರು.

ಸುಪ್ರೀಂ ಕೋರ್ಟ ಫೆಬ್ರವರಿ 18ರಂದು ಎಎಪಿಗೆ ಪ್ರಮುಖ ಪರಿಹಾರ ನೀಡಿತು. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ನ ನಾಮನಿರ್ದೇಶಿತ ಸದಸ್ಯರು ಮೇಯರ್ ಹುದ್ದೆಗೆ ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತು. ಅದಾದನಂತರ ಮೇಯ೬ರ್ ಚುನಾವಣೆ ನಡೆಯಿತು, ಎಎಪಿ ಅಭ್ಯರ್ಥಿ ಗೆಲವು ಸಾಧಿಸಿದರು. ಇದರಿಂದ ಬಿಜೆಪಿ ಭಾರೀ ಮುಖಭಂಗವಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...