Homeಮುಖಪುಟನಿಲ್ಲದ ದೆಹಲಿ ಪಾಲಿಕೆ ಗುದ್ದಾಟ; ಕೈ-ಕೈ ಮಿಲಾಯಿಸಿದ ಬಿಜೆಪಿ-ಎಎಪಿ ಕೌನ್ಸಿಲರ್‌ಗಳು

ನಿಲ್ಲದ ದೆಹಲಿ ಪಾಲಿಕೆ ಗುದ್ದಾಟ; ಕೈ-ಕೈ ಮಿಲಾಯಿಸಿದ ಬಿಜೆಪಿ-ಎಎಪಿ ಕೌನ್ಸಿಲರ್‌ಗಳು

- Advertisement -
- Advertisement -

ದೆಹಲಿಯ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಎಎಪಿ ಮತ್ತು ಬಿಜೆಪಿ ಕೌನ್ಸಿಲರ್‌ಗಳ ನಡುವೆ ಮತ್ತೆ ಘರ್ಷಣೆ ನಡೆದಿದ್ದು ಕೈ-ಕೈ ಮಿಲಾಯಿಸಿದ್ದಾರೆ. ಆರು ಸ್ಥಾಯಿ ಸಮಿತಿ ಸದಸ್ಯರ ಚುನಾವಣೆಯ ಮತ ಎಣಿಕೆ ವೇಳೆ ಈ ಘಟನೆ ನಡೆದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಸ್ಥಾಯಿ ಸಮಿತಿಯು ದೆಹಲಿ ಮಹಾನಗರ ಪಾಲಿಕೆಯಲ್ಲಿ ಪ್ರಬಲ ಪಾತ್ರವನ್ನು ವಹಿಸುವುದರಿಂದ ಇಷ್ಟೊಂದು ಪ್ರಾಮುಖ್ಯತೆ ಪಡೆದಿದೆ. ಯೋಜನೆಗಳಿಗೆ ಆರ್ಥಿಕ ಅನುಮೋದನೆ ನೀಡಲು, ಉಪ ಸಮಿತಿಗಳನ್ನು ನೇಮಿಸಲು ಮತ್ತು ಚರ್ಚೆಗಳನ್ನು ನಡೆಸಲು ಮತ್ತು ನೀತಿಗಳನ್ನು ಅಂತಿಮಗೊಳಿಸಲು ಸಮಿತಿಗೆ ಅಧಿಕಾರವಿದೆ ಹಾಗಾಗಿ ಸ್ಥಾಯಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡುವ ಮತದಾನವು ಎರಡೂ ಪಕ್ಷಗಳಿಗೆ ಮುಖ್ಯವಾಗಿದೆ.

ಶುಕ್ರವಾರ ನಡೆದ ಮತದಾನದಲ್ಲಿ 250 ಕೌನ್ಸಿಲರ್‌ಗಳ ಪೈಕಿ 242 ಜನ ಮತ ಚಲಾಯಿಸಿದ್ದಾರೆ. ಎಂಟು ಕೌನ್ಸಿಲರ್‌ಗಳು – ಮನ್‌ದೀಪ್ ಸಿಂಗ್, ಅರಿಬಾ ಖಾನ್, ನಾಜಿಯಾ ಡ್ಯಾನಿಶ್, ಸಮೀರ್ ಅಹ್ಮದ್, ಶಗುಫ್ತಾ ಚೌಧರಿ ಜುಬೇರ್, ಸಬಿಲಾ ಬೇಗಂ, ನಾಜಿಯಾ ಖಾತೂನ್ ಮತ್ತು ಜರೀಫ್ ತಮ್ಮ ಮತ ಚಲಾಯಿಸಲಿಲ್ಲ ಎಂದು ಎಂದು ನೂತನ ಮೇಯರ್ ಶೆಲ್ಲಿ ಒಬೆರಾಯ್ ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಮೇಯರ್ ಚುನಾವಣೆ: ಎಎಪಿಗೆ ಗೆಲುವು, ಬಿಜೆಪಿಗೆ ಮುಖಭಂಗ

ಈ ನಡುವೆ ಒಬೆರಾಯ್ ಅವರು ಒಂದು ಮತವನ್ನು ಅಸಿಂಧು ಎಂದು ಘೋಷಿಸಿದ್ದಾರೆ. ಇದೇ ಕಾರಣಕ್ಕೆ ಗದ್ದಲ ಗಲಾಟೆ ಪ್ರಾರಂಭವಾಯಿತು, ಇದರಿಂದಾಗಿ ಬಿಜೆಪಿ ಕೌನ್ಸಿಲರ್‌ಗಳು ಮತ ಎಣಿಕೆ ಪ್ರಕ್ರಿಯೆಗೆ ಅಡ್ಡಿಪಡಿಸಿದರು. ಅಷ್ಟಾದರೂ, ಅಸಿಂಧು ಮತವಿಲ್ಲದೆ ಫಲಿತಾಂಶವನ್ನು ಘೋಷಿಸಲಾಗುವುದು ಎಂದು ಮೇಯರ್ ಹೇಳಿದರು.

ಈ ವೇಳೆ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಸದಸ್ಯರು ಪರಸ್ಪರ ಗುದ್ದುವುದು, ಒದೆಯುವುದು ಮತ್ತು ತಳ್ಳುವುದನ್ನು ವೀಡಿಯೊಗಳಲ್ಲಿ ನೋಡಬಹುದು. ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ಒಬ್ಬರು ನೆಲದ ಮೇಲೆ ಬಿದ್ದಿದ್ದಾರೆ. ಬಿಜೆಪಿ ಕೌನ್ಸಿಲರ್ ಮೀನಾಕ್ಷಿ ಶರ್ಮಾ ಅವರು ಆಪ್‌ನ ಯಾರೋ ಹರಿತವಾದ ವಸ್ತುವಿನಿಂದ ಹೊಡೆದಿದ್ದಾರೆ ಎಂದು ಹೇಳಿಕೊಂಡಿದ್ದಾರೆಂದು ಎಎನ್‌ಐ ವರದಿ ಮಾಡಿದೆ.

”ಪುರುಷ ಕೌನ್ಸಿಲರೊಬ್ಬರು ನನ್ನ ಕುತ್ತಿಗೆಯನ್ನು ಮುಟ್ಟಿದರು” ಎಂದು ಶರ್ಮಾ ಹೇಳಿದರು. ಆಕೆ (ಒಬೆರಾಯ್) ದೆಹಲಿಯ ಮೇಯರ್ ಆಗಿದ್ದಾರೋ ಅಥವಾ ಎಎಪಿ ಪಕ್ಷದವಳಾಗಿದ್ದಾಳೋ ಗೊತ್ತಿಲ್ಲ. ಅವಳು ಕೇಜ್ರಿವಾಲ್ ಮತ್ತು ಇತರ ನಾಯಕರ ಆದೇಶದಂತೆ ಕಾರ್ಯನಿರ್ವಹಿಸುತ್ತಾಳೆ ಎಂದು ಶರ್ಮಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಒಂದು ಮತ ಸಿಂಧುವಾಗಿದೆ ಎಂದು ಬಿಜೆಪಿ ಹೇಳಿಕೊಂಡಿದೆ. “ಇದು ಅಮಾನ್ಯವಾಗಿದ್ದರೆ, ನಮ್ಮ ಲೆಕ್ಕಾಚಾರದ ಪ್ರಕಾರ, ಎಎಪಿ ಅಭ್ಯರ್ಥಿ ಗೆಲ್ಲುತ್ತಾರೆ” ಎಂದು ಅಸಿಂಧು ಮತ ಎಂದು ಗುರುತಿಸಿಕೊಂಡಿರುವ ಬಿಜೆಪಿ ಕೌನ್ಸಿಲರ್ ಎನ್‌ಡಿಟಿವಿಗೆ ತಿಳಿಸಿದರು.

”ಬಿಜೆಪಿ ತನ್ನ ಸೋಲನ್ನು ಒಪ್ಪಿಕೊಂಡು ತನ್ನ ಗೂಂಡಾಗಿರಿಯನ್ನು ನಿಲ್ಲಿಸುವ ಸಮಯ ಬಂದಿದೆ” ಎಂದು ಎಎಪಿ ಶಾಸಕ ಅತಿಶಿ ಹೇಳಿದ್ದಾರೆ.

”ಇಂದು ಬಿಜೆಪಿಯು ಮಹಾನಗರ ಪಾಲಿಕೆಯಲ್ಲಿ ಗೂಂಡಾಗಿರಿ ಪ್ರದರ್ಶಸಿದೆ. ಸ್ಥಾಯಿ ಸಮಿತಿ ಚುನಾವಣೆ ನಡೆಯುತ್ತಿತ್ತು. ಮತ ಎಣಿಕೆ ಆರಂಭವಾದಾಗ ಬಿಜೆಪಿ ಸೋಲುವುದು ಗೊತ್ತಾಗುತ್ತಿದ್ದಂತೆ ಗದ್ದಲ ಸೃಷ್ಟಿಸಿತು. ಮೇಯರ್ ಮೇಲೆ ಬಿಜೆಪಿ ಪುರುಷ ಸದಸ್ಯರು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ” ಎಂದು ಅತಿಶಿ ಹೇಳಿದರು.

ಗುರುವಾರ ಕೂಡ ಇದೇ ರೀತಿ ಘಟನೆ ನಡೆದಿತ್ತು. ಎರಡು ಪಕ್ಷಗಳ ಕೌನ್ಸಿಲರ್‌ಗಳು ಪರಸ್ಪರ ನೀರಿನ ಬಾಟಲಿಗಳು ಮತ್ತು ಹಣ್ಣುಗಳನ್ನು ಎಸೆದಿದ್ದಾರೆ. ಸ್ಥಾಯಿ ಸಮಿತಿಯ ಸದಸ್ಯರನ್ನು ಆಯ್ಕೆ ಮಾಡದೆ ಸದನವನ್ನು ಮುಂದೂಡಲಾಗಿತ್ತು.

ಒಬೆರಾಯ್ ಅವರು ಕೌನ್ಸಿಲ್‌ನ ಮೇಯರ್ ಆಗಿ ಆಯ್ಕೆಯಾದ ನಂತರ ದೆಹಲಿಯ ಮಹಾನಗರ ಪಾಲಿಕೆಯಲ್ಲಿ ಶುಕ್ರವಾರದ ಗೊಂದಲ ಉಂಟಾಗುತ್ತದೆ. ಗಮನಾರ್ಹವೆಂದರೆ, ಎಎಪಿ ಮತ್ತು ಬಿಜೆಪಿ ನಡುವಿನ ಸುದೀರ್ಘ ಜಗಳದಿಂದಾಗಿ ಡಿಸೆಂಬರ್‌ನಲ್ಲಿ ನಡೆದ ಪಾಲಿಕೆ ಚುನಾವಣೆಯ ನಂತರ ಮೇಯರ್ ಚುನಾವಣೆಗಳು ಮೂರು ಬಾರಿ ಮುಂದೂಡಲ್ಪಟ್ಟಿತು. ಎಎಪಿಯ ಕೌನ್ಸಿಲರ್‌ಗಳು ಆಲ್ಡರ್‌ಮನ್‌ಗಳಿಗೆ ಮತ ಚಲಾಯಿಸಲು ಅವಕಾಶ ನೀಡುವ ಬಿಜೆಪಿಯ ವಾದವನ್ನು ವಿರೋಧಿಸಿದ್ದರು.

ಸುಪ್ರೀಂ ಕೋರ್ಟ ಫೆಬ್ರವರಿ 18ರಂದು ಎಎಪಿಗೆ ಪ್ರಮುಖ ಪರಿಹಾರ ನೀಡಿತು. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ನ ನಾಮನಿರ್ದೇಶಿತ ಸದಸ್ಯರು ಮೇಯರ್ ಹುದ್ದೆಗೆ ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತು. ಅದಾದನಂತರ ಮೇಯ೬ರ್ ಚುನಾವಣೆ ನಡೆಯಿತು, ಎಎಪಿ ಅಭ್ಯರ್ಥಿ ಗೆಲವು ಸಾಧಿಸಿದರು. ಇದರಿಂದ ಬಿಜೆಪಿ ಭಾರೀ ಮುಖಭಂಗವಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...