Homeಮುಖಪುಟನಿಲ್ಲದ ದೆಹಲಿ ಪಾಲಿಕೆ ಗುದ್ದಾಟ; ಕೈ-ಕೈ ಮಿಲಾಯಿಸಿದ ಬಿಜೆಪಿ-ಎಎಪಿ ಕೌನ್ಸಿಲರ್‌ಗಳು

ನಿಲ್ಲದ ದೆಹಲಿ ಪಾಲಿಕೆ ಗುದ್ದಾಟ; ಕೈ-ಕೈ ಮಿಲಾಯಿಸಿದ ಬಿಜೆಪಿ-ಎಎಪಿ ಕೌನ್ಸಿಲರ್‌ಗಳು

- Advertisement -
- Advertisement -

ದೆಹಲಿಯ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಎಎಪಿ ಮತ್ತು ಬಿಜೆಪಿ ಕೌನ್ಸಿಲರ್‌ಗಳ ನಡುವೆ ಮತ್ತೆ ಘರ್ಷಣೆ ನಡೆದಿದ್ದು ಕೈ-ಕೈ ಮಿಲಾಯಿಸಿದ್ದಾರೆ. ಆರು ಸ್ಥಾಯಿ ಸಮಿತಿ ಸದಸ್ಯರ ಚುನಾವಣೆಯ ಮತ ಎಣಿಕೆ ವೇಳೆ ಈ ಘಟನೆ ನಡೆದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಸ್ಥಾಯಿ ಸಮಿತಿಯು ದೆಹಲಿ ಮಹಾನಗರ ಪಾಲಿಕೆಯಲ್ಲಿ ಪ್ರಬಲ ಪಾತ್ರವನ್ನು ವಹಿಸುವುದರಿಂದ ಇಷ್ಟೊಂದು ಪ್ರಾಮುಖ್ಯತೆ ಪಡೆದಿದೆ. ಯೋಜನೆಗಳಿಗೆ ಆರ್ಥಿಕ ಅನುಮೋದನೆ ನೀಡಲು, ಉಪ ಸಮಿತಿಗಳನ್ನು ನೇಮಿಸಲು ಮತ್ತು ಚರ್ಚೆಗಳನ್ನು ನಡೆಸಲು ಮತ್ತು ನೀತಿಗಳನ್ನು ಅಂತಿಮಗೊಳಿಸಲು ಸಮಿತಿಗೆ ಅಧಿಕಾರವಿದೆ ಹಾಗಾಗಿ ಸ್ಥಾಯಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡುವ ಮತದಾನವು ಎರಡೂ ಪಕ್ಷಗಳಿಗೆ ಮುಖ್ಯವಾಗಿದೆ.

ಶುಕ್ರವಾರ ನಡೆದ ಮತದಾನದಲ್ಲಿ 250 ಕೌನ್ಸಿಲರ್‌ಗಳ ಪೈಕಿ 242 ಜನ ಮತ ಚಲಾಯಿಸಿದ್ದಾರೆ. ಎಂಟು ಕೌನ್ಸಿಲರ್‌ಗಳು – ಮನ್‌ದೀಪ್ ಸಿಂಗ್, ಅರಿಬಾ ಖಾನ್, ನಾಜಿಯಾ ಡ್ಯಾನಿಶ್, ಸಮೀರ್ ಅಹ್ಮದ್, ಶಗುಫ್ತಾ ಚೌಧರಿ ಜುಬೇರ್, ಸಬಿಲಾ ಬೇಗಂ, ನಾಜಿಯಾ ಖಾತೂನ್ ಮತ್ತು ಜರೀಫ್ ತಮ್ಮ ಮತ ಚಲಾಯಿಸಲಿಲ್ಲ ಎಂದು ಎಂದು ನೂತನ ಮೇಯರ್ ಶೆಲ್ಲಿ ಒಬೆರಾಯ್ ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಮೇಯರ್ ಚುನಾವಣೆ: ಎಎಪಿಗೆ ಗೆಲುವು, ಬಿಜೆಪಿಗೆ ಮುಖಭಂಗ

ಈ ನಡುವೆ ಒಬೆರಾಯ್ ಅವರು ಒಂದು ಮತವನ್ನು ಅಸಿಂಧು ಎಂದು ಘೋಷಿಸಿದ್ದಾರೆ. ಇದೇ ಕಾರಣಕ್ಕೆ ಗದ್ದಲ ಗಲಾಟೆ ಪ್ರಾರಂಭವಾಯಿತು, ಇದರಿಂದಾಗಿ ಬಿಜೆಪಿ ಕೌನ್ಸಿಲರ್‌ಗಳು ಮತ ಎಣಿಕೆ ಪ್ರಕ್ರಿಯೆಗೆ ಅಡ್ಡಿಪಡಿಸಿದರು. ಅಷ್ಟಾದರೂ, ಅಸಿಂಧು ಮತವಿಲ್ಲದೆ ಫಲಿತಾಂಶವನ್ನು ಘೋಷಿಸಲಾಗುವುದು ಎಂದು ಮೇಯರ್ ಹೇಳಿದರು.

ಈ ವೇಳೆ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಸದಸ್ಯರು ಪರಸ್ಪರ ಗುದ್ದುವುದು, ಒದೆಯುವುದು ಮತ್ತು ತಳ್ಳುವುದನ್ನು ವೀಡಿಯೊಗಳಲ್ಲಿ ನೋಡಬಹುದು. ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ಒಬ್ಬರು ನೆಲದ ಮೇಲೆ ಬಿದ್ದಿದ್ದಾರೆ. ಬಿಜೆಪಿ ಕೌನ್ಸಿಲರ್ ಮೀನಾಕ್ಷಿ ಶರ್ಮಾ ಅವರು ಆಪ್‌ನ ಯಾರೋ ಹರಿತವಾದ ವಸ್ತುವಿನಿಂದ ಹೊಡೆದಿದ್ದಾರೆ ಎಂದು ಹೇಳಿಕೊಂಡಿದ್ದಾರೆಂದು ಎಎನ್‌ಐ ವರದಿ ಮಾಡಿದೆ.

”ಪುರುಷ ಕೌನ್ಸಿಲರೊಬ್ಬರು ನನ್ನ ಕುತ್ತಿಗೆಯನ್ನು ಮುಟ್ಟಿದರು” ಎಂದು ಶರ್ಮಾ ಹೇಳಿದರು. ಆಕೆ (ಒಬೆರಾಯ್) ದೆಹಲಿಯ ಮೇಯರ್ ಆಗಿದ್ದಾರೋ ಅಥವಾ ಎಎಪಿ ಪಕ್ಷದವಳಾಗಿದ್ದಾಳೋ ಗೊತ್ತಿಲ್ಲ. ಅವಳು ಕೇಜ್ರಿವಾಲ್ ಮತ್ತು ಇತರ ನಾಯಕರ ಆದೇಶದಂತೆ ಕಾರ್ಯನಿರ್ವಹಿಸುತ್ತಾಳೆ ಎಂದು ಶರ್ಮಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಒಂದು ಮತ ಸಿಂಧುವಾಗಿದೆ ಎಂದು ಬಿಜೆಪಿ ಹೇಳಿಕೊಂಡಿದೆ. “ಇದು ಅಮಾನ್ಯವಾಗಿದ್ದರೆ, ನಮ್ಮ ಲೆಕ್ಕಾಚಾರದ ಪ್ರಕಾರ, ಎಎಪಿ ಅಭ್ಯರ್ಥಿ ಗೆಲ್ಲುತ್ತಾರೆ” ಎಂದು ಅಸಿಂಧು ಮತ ಎಂದು ಗುರುತಿಸಿಕೊಂಡಿರುವ ಬಿಜೆಪಿ ಕೌನ್ಸಿಲರ್ ಎನ್‌ಡಿಟಿವಿಗೆ ತಿಳಿಸಿದರು.

”ಬಿಜೆಪಿ ತನ್ನ ಸೋಲನ್ನು ಒಪ್ಪಿಕೊಂಡು ತನ್ನ ಗೂಂಡಾಗಿರಿಯನ್ನು ನಿಲ್ಲಿಸುವ ಸಮಯ ಬಂದಿದೆ” ಎಂದು ಎಎಪಿ ಶಾಸಕ ಅತಿಶಿ ಹೇಳಿದ್ದಾರೆ.

”ಇಂದು ಬಿಜೆಪಿಯು ಮಹಾನಗರ ಪಾಲಿಕೆಯಲ್ಲಿ ಗೂಂಡಾಗಿರಿ ಪ್ರದರ್ಶಸಿದೆ. ಸ್ಥಾಯಿ ಸಮಿತಿ ಚುನಾವಣೆ ನಡೆಯುತ್ತಿತ್ತು. ಮತ ಎಣಿಕೆ ಆರಂಭವಾದಾಗ ಬಿಜೆಪಿ ಸೋಲುವುದು ಗೊತ್ತಾಗುತ್ತಿದ್ದಂತೆ ಗದ್ದಲ ಸೃಷ್ಟಿಸಿತು. ಮೇಯರ್ ಮೇಲೆ ಬಿಜೆಪಿ ಪುರುಷ ಸದಸ್ಯರು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ” ಎಂದು ಅತಿಶಿ ಹೇಳಿದರು.

ಗುರುವಾರ ಕೂಡ ಇದೇ ರೀತಿ ಘಟನೆ ನಡೆದಿತ್ತು. ಎರಡು ಪಕ್ಷಗಳ ಕೌನ್ಸಿಲರ್‌ಗಳು ಪರಸ್ಪರ ನೀರಿನ ಬಾಟಲಿಗಳು ಮತ್ತು ಹಣ್ಣುಗಳನ್ನು ಎಸೆದಿದ್ದಾರೆ. ಸ್ಥಾಯಿ ಸಮಿತಿಯ ಸದಸ್ಯರನ್ನು ಆಯ್ಕೆ ಮಾಡದೆ ಸದನವನ್ನು ಮುಂದೂಡಲಾಗಿತ್ತು.

ಒಬೆರಾಯ್ ಅವರು ಕೌನ್ಸಿಲ್‌ನ ಮೇಯರ್ ಆಗಿ ಆಯ್ಕೆಯಾದ ನಂತರ ದೆಹಲಿಯ ಮಹಾನಗರ ಪಾಲಿಕೆಯಲ್ಲಿ ಶುಕ್ರವಾರದ ಗೊಂದಲ ಉಂಟಾಗುತ್ತದೆ. ಗಮನಾರ್ಹವೆಂದರೆ, ಎಎಪಿ ಮತ್ತು ಬಿಜೆಪಿ ನಡುವಿನ ಸುದೀರ್ಘ ಜಗಳದಿಂದಾಗಿ ಡಿಸೆಂಬರ್‌ನಲ್ಲಿ ನಡೆದ ಪಾಲಿಕೆ ಚುನಾವಣೆಯ ನಂತರ ಮೇಯರ್ ಚುನಾವಣೆಗಳು ಮೂರು ಬಾರಿ ಮುಂದೂಡಲ್ಪಟ್ಟಿತು. ಎಎಪಿಯ ಕೌನ್ಸಿಲರ್‌ಗಳು ಆಲ್ಡರ್‌ಮನ್‌ಗಳಿಗೆ ಮತ ಚಲಾಯಿಸಲು ಅವಕಾಶ ನೀಡುವ ಬಿಜೆಪಿಯ ವಾದವನ್ನು ವಿರೋಧಿಸಿದ್ದರು.

ಸುಪ್ರೀಂ ಕೋರ್ಟ ಫೆಬ್ರವರಿ 18ರಂದು ಎಎಪಿಗೆ ಪ್ರಮುಖ ಪರಿಹಾರ ನೀಡಿತು. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ನ ನಾಮನಿರ್ದೇಶಿತ ಸದಸ್ಯರು ಮೇಯರ್ ಹುದ್ದೆಗೆ ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತು. ಅದಾದನಂತರ ಮೇಯ೬ರ್ ಚುನಾವಣೆ ನಡೆಯಿತು, ಎಎಪಿ ಅಭ್ಯರ್ಥಿ ಗೆಲವು ಸಾಧಿಸಿದರು. ಇದರಿಂದ ಬಿಜೆಪಿ ಭಾರೀ ಮುಖಭಂಗವಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...