Homeಮುಖಪುಟಜೀವ ರಕ್ಷಣೆಯ ಬಳಿಕ ಅತಂತ್ರ ಸ್ಥಿತಿಯಲ್ಲಿ ಸಿಲ್ಕ್ಯಾರ ಸುರಂಗ ಕಾರ್ಮಿಕರು

ಜೀವ ರಕ್ಷಣೆಯ ಬಳಿಕ ಅತಂತ್ರ ಸ್ಥಿತಿಯಲ್ಲಿ ಸಿಲ್ಕ್ಯಾರ ಸುರಂಗ ಕಾರ್ಮಿಕರು

- Advertisement -
- Advertisement -

ಉತ್ತರಾಖಂಡದ ಸಿಲ್ಕ್ಯಾರ ಸುರಂಗದೊಳಗೆ 17 ದಿನಗಳ ಕಾಲ ಒದ್ದಾಡಿ ಹೊರಬಂದ ಕಾರ್ಮಿಕರು ಈಗ ಗೊಂದಲಕ್ಕೆ ಸಿಲುಕಿದ್ದಾರೆ. ದೊಡ್ಡ ದುರಂತದ ಬಳಿಕ ಸುರಂಗ ಕಾಮಗಾರಿ ಸ್ಥಗಿತಗೊಂಡಿದ್ದು, ಕಾರ್ಮಿಕರು ಮನೆಗೆ ಹೋಗಬೇಕಾ? ಕಾಮಗಾರಿ ಸ್ಥಳದಲ್ಲಿಯೇ ಉಳಿಯಬೇಕಾ? ಎಂಬ ಚಿಂತೆಯಲ್ಲಿದ್ದಾರೆ.

“ನಾನು ಮನೆಗೆ ಹೋಗಲು ರಜಾ ಅರ್ಜಿ ಬರೆದಿಟ್ಟಿದ್ದೇನೆ. ಮತ್ತೆ ಯಾವಾಗ ಕೆಲಸ ಪ್ರಾರಂಭವಾಗುತ್ತದೆ ಎಂದು ಗೊತ್ತಿಲ್ಲ. ಕುಟುಂಬಸ್ಥರು ಮನೆಗೆ ಬರುವಂತೆ ಒತ್ತಾಯಿಸುತ್ತಿದ್ದಾರೆ” ಎಂದು ಮೆಷಿನ್ ಆಪರೇಟರ್ ಆಗಿ ಕೆಲಸ ಮಾಡುತ್ತಿರುವ ಬಿಹಾರ ಮೂಲಕ ಕಾರ್ಮಿಕನೊಬ್ಬ ಹೇಳಿದ್ದಾರೆ.

“ಸುರಂಗ ಕೊರೆಯುವ ಕೆಲಸ ಅತ್ಯಂತ ಅಪಾಯಕಾರಿ. ಅದನ್ನು ಬಿಟ್ಟು ಮನೆಗೆ ಬರುವಂತೆ ನನ್ನ ಅಮ್ಮ ಒತ್ತಾಯಿಸಿದ್ದಾರೆ” ಎಂದು ಮತ್ತೊಬ್ಬ ಕಾರ್ಮಿಕ ಹೇಳಿದ್ದಾಗಿ ಟೈಮ್ಸ್ ನೌ ವರದಿ ಮಾಡಿದೆ.

ಸರ್ಕಾರದ ಮೂಲಗಳ ಪ್ರಕಾರ, ಸುರಂಗದ ಸುರಕ್ಷತೆಯ ಪರಿಶೀಲನೆ ನಡೆದ ನಂತರವೇ ಕಾಮಗಾರಿ ಪುನರಾರಂಭವಾಗಲಿದೆ. ಸುರಂಗದ ಮೇಲ್ಬಾಗದಲ್ಲಿ 45 ಮೀಟರ್‌ಗಳಷ್ಟು ರಂಧ್ರ ಕೊರೆಯಲಾಗಿತ್ತು. ತ್ಯಾಜ್ಯಗಳು ಇನ್ನೂ ಸುರಂಗದೊಳಗಡೆ ಇದೆ.

“ನಾವು ಇಲ್ಲಿ ಉಳಿಯಬೇಕಾ? ಮನೆಗೆ ಹೋಗಬೇಕಾ? ಗೊತ್ತಿಲ್ಲ” ಎಂದು ಕಳೆದ ಎರಡು ವರ್ಷಗಳಿಂದ ಸಿಲ್ಕ್ಯಾರ ಸುರಂಗ ಕಾಮಗಾರಿಯಲ್ಲಿ ದುಡಿಯುತ್ತಿರುವ ಒಡಿಶ್ಶಾ ಮೂಲದ ಕಾರ್ಮಿಕ ಹೇಳಿದ್ದಾರೆ.

“ನಾವು ವಿಶ್ರಾಂತಿಗಾಗಿ ಎರಡು ದಿನಗಳ ರಜೆ ಕೇಳಿದ್ದೆವು. ನಮ್ಮ ಕಾಂಟ್ರಾಕ್ಟರ್ ರಜೆ ಕೊಟ್ಟಿದ್ದಾರೆ. ನಾವು ನಮ್ಮ ರಜೆಯನ್ನು ವಿಸ್ತರಣೆ ಮಾಡುವ ಯೋಚನೆಯಲ್ಲಿದ್ದೇವೆ” ಎಂದು ಉತ್ತರ ಪ್ರದೇಶದ ಮತ್ತೊಬ್ಬ ಕಾರ್ಮಿಕ ತಿಳಿಸಿದ್ದಾರೆ.

ವರದಿಗಳ ಪ್ರಕಾರ, ಪ್ರಸ್ತುತ ಸುರಂಗ ಕಾಮಗಾರಿಯ ಕಾರ್ಮಿಕರು, ಅಧಿಕಾರಿಗಳು ಸಿಲ್ಕ್ಯಾರದ ಆಸುಪಾಸಿನ ಅತಿಥಿ ಗೃಹ, ಹೋಮ್ ಸ್ಟೇಗಳಲ್ಲಿ ಉಳಿದುಕೊಂಡಿದ್ದಾರೆ.

ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಮೇಲುಸ್ತುವಾರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಕಳೆದ ನಾಲ್ಕು ವರ್ಷಗಳಿಂದ ಸಿಲ್ಕ್ಯಾರ ಸುರಂಗ ಕಾಮಗಾರಿ ನಡೆಸುತ್ತಿದೆ. ಚಾರ್ ಧಾಮ ರಸ್ತೆ ಕಾಮಗಾರಿಯ ಪ್ರಮುಖ ಭಾಗವಾದ ಸಿಲ್ಕ್ಯಾರ ಸುರಂಗ ಯಮನೋತ್ರಿ ಮತ್ತು ಗಂಗೋತ್ರಿ ನಡುವಿನ 28 ಕಿ.ಮೀ ದೂರವನ್ನು 4 ಕಿ.ಮೀ ಗೆ ಇಳಿಸುವ ಉದ್ದೇಶ ಹೊಂದಿದೆ.

ನವೆಂಬರ್ 12ರಂದು ಸಿಲ್ಕ್ಯಾರ ಸುರಂಗದೊಳಗೆ ಕುಸಿತ ಸಂಭವಿಸಿ 41 ಕಾರ್ಮಿಕರು ಸಿಲುಕಿಕೊಂಡಿದ್ದರು. 17 ದಿನಗಳ ಸತತ ಕಾರ್ಯಾಚರಣೆಯ ಬಳಿಕ ನ.28ರಂದು ಎಲ್ಲಾ ಕಾರ್ಮಿಕರನ್ನು ಸುರಕ್ಷಿತವಾಗಿ ಸುರಂಗದಿಂದ ಹೊರ ತರಲಾಗಿದೆ.ಗ

ಇದನ್ನೂ ಓದಿ : ಜೀವ ರಕ್ಷಣೆಯ ಜೊತೆಗೆ ಸಾಮರಸ್ಯದ ಸಂದೇಶ ಸಾರಿದ ಸಿಲ್ಕ್ಯಾರ ಕಾರ್ಯಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...