Homeಮುಖಪುಟಜೀವ ರಕ್ಷಣೆಯ ಬಳಿಕ ಅತಂತ್ರ ಸ್ಥಿತಿಯಲ್ಲಿ ಸಿಲ್ಕ್ಯಾರ ಸುರಂಗ ಕಾರ್ಮಿಕರು

ಜೀವ ರಕ್ಷಣೆಯ ಬಳಿಕ ಅತಂತ್ರ ಸ್ಥಿತಿಯಲ್ಲಿ ಸಿಲ್ಕ್ಯಾರ ಸುರಂಗ ಕಾರ್ಮಿಕರು

- Advertisement -
- Advertisement -

ಉತ್ತರಾಖಂಡದ ಸಿಲ್ಕ್ಯಾರ ಸುರಂಗದೊಳಗೆ 17 ದಿನಗಳ ಕಾಲ ಒದ್ದಾಡಿ ಹೊರಬಂದ ಕಾರ್ಮಿಕರು ಈಗ ಗೊಂದಲಕ್ಕೆ ಸಿಲುಕಿದ್ದಾರೆ. ದೊಡ್ಡ ದುರಂತದ ಬಳಿಕ ಸುರಂಗ ಕಾಮಗಾರಿ ಸ್ಥಗಿತಗೊಂಡಿದ್ದು, ಕಾರ್ಮಿಕರು ಮನೆಗೆ ಹೋಗಬೇಕಾ? ಕಾಮಗಾರಿ ಸ್ಥಳದಲ್ಲಿಯೇ ಉಳಿಯಬೇಕಾ? ಎಂಬ ಚಿಂತೆಯಲ್ಲಿದ್ದಾರೆ.

“ನಾನು ಮನೆಗೆ ಹೋಗಲು ರಜಾ ಅರ್ಜಿ ಬರೆದಿಟ್ಟಿದ್ದೇನೆ. ಮತ್ತೆ ಯಾವಾಗ ಕೆಲಸ ಪ್ರಾರಂಭವಾಗುತ್ತದೆ ಎಂದು ಗೊತ್ತಿಲ್ಲ. ಕುಟುಂಬಸ್ಥರು ಮನೆಗೆ ಬರುವಂತೆ ಒತ್ತಾಯಿಸುತ್ತಿದ್ದಾರೆ” ಎಂದು ಮೆಷಿನ್ ಆಪರೇಟರ್ ಆಗಿ ಕೆಲಸ ಮಾಡುತ್ತಿರುವ ಬಿಹಾರ ಮೂಲಕ ಕಾರ್ಮಿಕನೊಬ್ಬ ಹೇಳಿದ್ದಾರೆ.

“ಸುರಂಗ ಕೊರೆಯುವ ಕೆಲಸ ಅತ್ಯಂತ ಅಪಾಯಕಾರಿ. ಅದನ್ನು ಬಿಟ್ಟು ಮನೆಗೆ ಬರುವಂತೆ ನನ್ನ ಅಮ್ಮ ಒತ್ತಾಯಿಸಿದ್ದಾರೆ” ಎಂದು ಮತ್ತೊಬ್ಬ ಕಾರ್ಮಿಕ ಹೇಳಿದ್ದಾಗಿ ಟೈಮ್ಸ್ ನೌ ವರದಿ ಮಾಡಿದೆ.

ಸರ್ಕಾರದ ಮೂಲಗಳ ಪ್ರಕಾರ, ಸುರಂಗದ ಸುರಕ್ಷತೆಯ ಪರಿಶೀಲನೆ ನಡೆದ ನಂತರವೇ ಕಾಮಗಾರಿ ಪುನರಾರಂಭವಾಗಲಿದೆ. ಸುರಂಗದ ಮೇಲ್ಬಾಗದಲ್ಲಿ 45 ಮೀಟರ್‌ಗಳಷ್ಟು ರಂಧ್ರ ಕೊರೆಯಲಾಗಿತ್ತು. ತ್ಯಾಜ್ಯಗಳು ಇನ್ನೂ ಸುರಂಗದೊಳಗಡೆ ಇದೆ.

“ನಾವು ಇಲ್ಲಿ ಉಳಿಯಬೇಕಾ? ಮನೆಗೆ ಹೋಗಬೇಕಾ? ಗೊತ್ತಿಲ್ಲ” ಎಂದು ಕಳೆದ ಎರಡು ವರ್ಷಗಳಿಂದ ಸಿಲ್ಕ್ಯಾರ ಸುರಂಗ ಕಾಮಗಾರಿಯಲ್ಲಿ ದುಡಿಯುತ್ತಿರುವ ಒಡಿಶ್ಶಾ ಮೂಲದ ಕಾರ್ಮಿಕ ಹೇಳಿದ್ದಾರೆ.

“ನಾವು ವಿಶ್ರಾಂತಿಗಾಗಿ ಎರಡು ದಿನಗಳ ರಜೆ ಕೇಳಿದ್ದೆವು. ನಮ್ಮ ಕಾಂಟ್ರಾಕ್ಟರ್ ರಜೆ ಕೊಟ್ಟಿದ್ದಾರೆ. ನಾವು ನಮ್ಮ ರಜೆಯನ್ನು ವಿಸ್ತರಣೆ ಮಾಡುವ ಯೋಚನೆಯಲ್ಲಿದ್ದೇವೆ” ಎಂದು ಉತ್ತರ ಪ್ರದೇಶದ ಮತ್ತೊಬ್ಬ ಕಾರ್ಮಿಕ ತಿಳಿಸಿದ್ದಾರೆ.

ವರದಿಗಳ ಪ್ರಕಾರ, ಪ್ರಸ್ತುತ ಸುರಂಗ ಕಾಮಗಾರಿಯ ಕಾರ್ಮಿಕರು, ಅಧಿಕಾರಿಗಳು ಸಿಲ್ಕ್ಯಾರದ ಆಸುಪಾಸಿನ ಅತಿಥಿ ಗೃಹ, ಹೋಮ್ ಸ್ಟೇಗಳಲ್ಲಿ ಉಳಿದುಕೊಂಡಿದ್ದಾರೆ.

ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಮೇಲುಸ್ತುವಾರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಕಳೆದ ನಾಲ್ಕು ವರ್ಷಗಳಿಂದ ಸಿಲ್ಕ್ಯಾರ ಸುರಂಗ ಕಾಮಗಾರಿ ನಡೆಸುತ್ತಿದೆ. ಚಾರ್ ಧಾಮ ರಸ್ತೆ ಕಾಮಗಾರಿಯ ಪ್ರಮುಖ ಭಾಗವಾದ ಸಿಲ್ಕ್ಯಾರ ಸುರಂಗ ಯಮನೋತ್ರಿ ಮತ್ತು ಗಂಗೋತ್ರಿ ನಡುವಿನ 28 ಕಿ.ಮೀ ದೂರವನ್ನು 4 ಕಿ.ಮೀ ಗೆ ಇಳಿಸುವ ಉದ್ದೇಶ ಹೊಂದಿದೆ.

ನವೆಂಬರ್ 12ರಂದು ಸಿಲ್ಕ್ಯಾರ ಸುರಂಗದೊಳಗೆ ಕುಸಿತ ಸಂಭವಿಸಿ 41 ಕಾರ್ಮಿಕರು ಸಿಲುಕಿಕೊಂಡಿದ್ದರು. 17 ದಿನಗಳ ಸತತ ಕಾರ್ಯಾಚರಣೆಯ ಬಳಿಕ ನ.28ರಂದು ಎಲ್ಲಾ ಕಾರ್ಮಿಕರನ್ನು ಸುರಕ್ಷಿತವಾಗಿ ಸುರಂಗದಿಂದ ಹೊರ ತರಲಾಗಿದೆ.ಗ

ಇದನ್ನೂ ಓದಿ : ಜೀವ ರಕ್ಷಣೆಯ ಜೊತೆಗೆ ಸಾಮರಸ್ಯದ ಸಂದೇಶ ಸಾರಿದ ಸಿಲ್ಕ್ಯಾರ ಕಾರ್ಯಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...