Homeಮುಖಪುಟಜೀವ ರಕ್ಷಣೆಯ ಬಳಿಕ ಅತಂತ್ರ ಸ್ಥಿತಿಯಲ್ಲಿ ಸಿಲ್ಕ್ಯಾರ ಸುರಂಗ ಕಾರ್ಮಿಕರು

ಜೀವ ರಕ್ಷಣೆಯ ಬಳಿಕ ಅತಂತ್ರ ಸ್ಥಿತಿಯಲ್ಲಿ ಸಿಲ್ಕ್ಯಾರ ಸುರಂಗ ಕಾರ್ಮಿಕರು

- Advertisement -
- Advertisement -

ಉತ್ತರಾಖಂಡದ ಸಿಲ್ಕ್ಯಾರ ಸುರಂಗದೊಳಗೆ 17 ದಿನಗಳ ಕಾಲ ಒದ್ದಾಡಿ ಹೊರಬಂದ ಕಾರ್ಮಿಕರು ಈಗ ಗೊಂದಲಕ್ಕೆ ಸಿಲುಕಿದ್ದಾರೆ. ದೊಡ್ಡ ದುರಂತದ ಬಳಿಕ ಸುರಂಗ ಕಾಮಗಾರಿ ಸ್ಥಗಿತಗೊಂಡಿದ್ದು, ಕಾರ್ಮಿಕರು ಮನೆಗೆ ಹೋಗಬೇಕಾ? ಕಾಮಗಾರಿ ಸ್ಥಳದಲ್ಲಿಯೇ ಉಳಿಯಬೇಕಾ? ಎಂಬ ಚಿಂತೆಯಲ್ಲಿದ್ದಾರೆ.

“ನಾನು ಮನೆಗೆ ಹೋಗಲು ರಜಾ ಅರ್ಜಿ ಬರೆದಿಟ್ಟಿದ್ದೇನೆ. ಮತ್ತೆ ಯಾವಾಗ ಕೆಲಸ ಪ್ರಾರಂಭವಾಗುತ್ತದೆ ಎಂದು ಗೊತ್ತಿಲ್ಲ. ಕುಟುಂಬಸ್ಥರು ಮನೆಗೆ ಬರುವಂತೆ ಒತ್ತಾಯಿಸುತ್ತಿದ್ದಾರೆ” ಎಂದು ಮೆಷಿನ್ ಆಪರೇಟರ್ ಆಗಿ ಕೆಲಸ ಮಾಡುತ್ತಿರುವ ಬಿಹಾರ ಮೂಲಕ ಕಾರ್ಮಿಕನೊಬ್ಬ ಹೇಳಿದ್ದಾರೆ.

“ಸುರಂಗ ಕೊರೆಯುವ ಕೆಲಸ ಅತ್ಯಂತ ಅಪಾಯಕಾರಿ. ಅದನ್ನು ಬಿಟ್ಟು ಮನೆಗೆ ಬರುವಂತೆ ನನ್ನ ಅಮ್ಮ ಒತ್ತಾಯಿಸಿದ್ದಾರೆ” ಎಂದು ಮತ್ತೊಬ್ಬ ಕಾರ್ಮಿಕ ಹೇಳಿದ್ದಾಗಿ ಟೈಮ್ಸ್ ನೌ ವರದಿ ಮಾಡಿದೆ.

ಸರ್ಕಾರದ ಮೂಲಗಳ ಪ್ರಕಾರ, ಸುರಂಗದ ಸುರಕ್ಷತೆಯ ಪರಿಶೀಲನೆ ನಡೆದ ನಂತರವೇ ಕಾಮಗಾರಿ ಪುನರಾರಂಭವಾಗಲಿದೆ. ಸುರಂಗದ ಮೇಲ್ಬಾಗದಲ್ಲಿ 45 ಮೀಟರ್‌ಗಳಷ್ಟು ರಂಧ್ರ ಕೊರೆಯಲಾಗಿತ್ತು. ತ್ಯಾಜ್ಯಗಳು ಇನ್ನೂ ಸುರಂಗದೊಳಗಡೆ ಇದೆ.

“ನಾವು ಇಲ್ಲಿ ಉಳಿಯಬೇಕಾ? ಮನೆಗೆ ಹೋಗಬೇಕಾ? ಗೊತ್ತಿಲ್ಲ” ಎಂದು ಕಳೆದ ಎರಡು ವರ್ಷಗಳಿಂದ ಸಿಲ್ಕ್ಯಾರ ಸುರಂಗ ಕಾಮಗಾರಿಯಲ್ಲಿ ದುಡಿಯುತ್ತಿರುವ ಒಡಿಶ್ಶಾ ಮೂಲದ ಕಾರ್ಮಿಕ ಹೇಳಿದ್ದಾರೆ.

“ನಾವು ವಿಶ್ರಾಂತಿಗಾಗಿ ಎರಡು ದಿನಗಳ ರಜೆ ಕೇಳಿದ್ದೆವು. ನಮ್ಮ ಕಾಂಟ್ರಾಕ್ಟರ್ ರಜೆ ಕೊಟ್ಟಿದ್ದಾರೆ. ನಾವು ನಮ್ಮ ರಜೆಯನ್ನು ವಿಸ್ತರಣೆ ಮಾಡುವ ಯೋಚನೆಯಲ್ಲಿದ್ದೇವೆ” ಎಂದು ಉತ್ತರ ಪ್ರದೇಶದ ಮತ್ತೊಬ್ಬ ಕಾರ್ಮಿಕ ತಿಳಿಸಿದ್ದಾರೆ.

ವರದಿಗಳ ಪ್ರಕಾರ, ಪ್ರಸ್ತುತ ಸುರಂಗ ಕಾಮಗಾರಿಯ ಕಾರ್ಮಿಕರು, ಅಧಿಕಾರಿಗಳು ಸಿಲ್ಕ್ಯಾರದ ಆಸುಪಾಸಿನ ಅತಿಥಿ ಗೃಹ, ಹೋಮ್ ಸ್ಟೇಗಳಲ್ಲಿ ಉಳಿದುಕೊಂಡಿದ್ದಾರೆ.

ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಮೇಲುಸ್ತುವಾರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಕಳೆದ ನಾಲ್ಕು ವರ್ಷಗಳಿಂದ ಸಿಲ್ಕ್ಯಾರ ಸುರಂಗ ಕಾಮಗಾರಿ ನಡೆಸುತ್ತಿದೆ. ಚಾರ್ ಧಾಮ ರಸ್ತೆ ಕಾಮಗಾರಿಯ ಪ್ರಮುಖ ಭಾಗವಾದ ಸಿಲ್ಕ್ಯಾರ ಸುರಂಗ ಯಮನೋತ್ರಿ ಮತ್ತು ಗಂಗೋತ್ರಿ ನಡುವಿನ 28 ಕಿ.ಮೀ ದೂರವನ್ನು 4 ಕಿ.ಮೀ ಗೆ ಇಳಿಸುವ ಉದ್ದೇಶ ಹೊಂದಿದೆ.

ನವೆಂಬರ್ 12ರಂದು ಸಿಲ್ಕ್ಯಾರ ಸುರಂಗದೊಳಗೆ ಕುಸಿತ ಸಂಭವಿಸಿ 41 ಕಾರ್ಮಿಕರು ಸಿಲುಕಿಕೊಂಡಿದ್ದರು. 17 ದಿನಗಳ ಸತತ ಕಾರ್ಯಾಚರಣೆಯ ಬಳಿಕ ನ.28ರಂದು ಎಲ್ಲಾ ಕಾರ್ಮಿಕರನ್ನು ಸುರಕ್ಷಿತವಾಗಿ ಸುರಂಗದಿಂದ ಹೊರ ತರಲಾಗಿದೆ.ಗ

ಇದನ್ನೂ ಓದಿ : ಜೀವ ರಕ್ಷಣೆಯ ಜೊತೆಗೆ ಸಾಮರಸ್ಯದ ಸಂದೇಶ ಸಾರಿದ ಸಿಲ್ಕ್ಯಾರ ಕಾರ್ಯಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...

“ಆರೆಸ್ಸೆಸ್‌ ದೇಶಕ್ಕೆ ವಂಚಿಸುತ್ತಿದೆ” -ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಆರೆಸ್ಸೆಸ್‌ ಕುರಿತು ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿರುವ ಗ್ರಾಮೀಣಾಭಿವೃದ್ದಿ ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತೊಮ್ಮೆ ಆರೆಸ್ಸೆಸ್‌ ದೇಶದ ಆರ್ಥಿಕತೆಗೆ ವಂಚಿಸುತ್ತಿದೆ ಎಂದು ಆರೋಪಿಸಿ ಟ್ವೀಟ್‌ ಮಾಡಿದ್ದಾರೆ. ಪ್ರಿಯಾಂಕ್‌ ಖರ್ಗೆ ಟ್ವೀಟ್‌...

‘ನರೇಗಾ’ ಹೆಸರು ಬದಲಾವಣೆ, ಕೆಲಸದ ದಿನಗಳು ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ)ಯನ್ನು 'ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ' ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಶುಕ್ರವಾರ (ಡಿಸೆಂಬರ್ 12) ಅನುಮೋದನೆ ನೀಡಿದೆ. ಸರ್ಕಾರ...

ಅಖ್ಲಾಕ್‌ ಗುಂಪು ಹತ್ಯೆ ಪ್ರಕರಣ: ಬಿಜೆಪಿ ಸರ್ಕಾರದಿಂದ ಆರೋಪಿಗಳ ಆರೋಪ ಹಿಂಪಡೆಯಲು ಅರ್ಜಿ ಸಲ್ಲಿಕೆ

2015ರಲ್ಲಿ ಮಹಮ್ಮದ್‌ ಅಖ್ಲಾಕ್‌ ತನ್ನ ಮನೆಯಲ್ಲಿ ದನ ಮಾಂಸ ಶೇಖರಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಗುಂಪು ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ದೇಶದೆಲ್ಲೆಡೆ ಗುಂಪು ಹಲ್ಲೆಗಳ ವಿರುದ್ದ (ಮಾಬ್‌ ಲಿಂಚಿಂಗ್‌)...