Homeಕರ್ನಾಟಕ"ಎಎಸ್‌ಐ ವಿರುದ್ಧ ವಿಕಲಾಂಗ ಚೇತನರ ಆಯೋಗ ಸ್ವಯಂಪ್ರೇರಿತ ಕೇಸ್ ದಾಖಲಿಸಲಿ"

“ಎಎಸ್‌ಐ ವಿರುದ್ಧ ವಿಕಲಾಂಗ ಚೇತನರ ಆಯೋಗ ಸ್ವಯಂಪ್ರೇರಿತ ಕೇಸ್ ದಾಖಲಿಸಲಿ”

ವಿಕಲಾಂಗ ಮಹಿಳೆಯ ಮೇಲೆ ಹಲ್ಲೆ ನಡೆಸಿರುವ ಟ್ರಾಫಿಕ್‌ ಪೊಲೀಸ್ ಅಧಿಕಾರಿಯ ವಿರುದ್ಧ ಸುಮೊಟೊ ಪ್ರಕರಣ ದಾಖಲಾಗಬೇಕು ಎಂದು ವಿಕಲಾಂಗ ಚೇತನರ ಪರ ಹೋರಾಡುತ್ತಿರುವ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.

- Advertisement -
- Advertisement -

ವಿಕಲಾಂಗ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿಯ ವಿರುದ್ಧ ಸುಮೊಟೊ (ಸ್ವಯಂಪ್ರೇರಿತ) ಪ್ರಕರಣ ದಾಖಲಿಸಿ ವಿಕಲಾಂಗ ಚೇತನರ ಮೇಲೆ ಆಗುತ್ತಿರುವ ಹಲ್ಲೆಗಳನ್ನು ತಡೆಯಬೇಕು ಎಂದು ವಿಕಲಾಂಗ ಚೇತನರ ಪರ ಹೋರಾಡುತ್ತಿರುವ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.

ಟೋಯಿಂಗ್‌ ವಾಹನದಲ್ಲಿ ಕುಳಿತ್ತಿದ್ದ ಎಎಸ್‌ಐಗೆ ಕಲ್ಲಿನಿಂದ ಹೊಡೆದ ಆರೋಪದ ಮೇಲೆ ವಿಕಲಾಂಗ ಮಹಿಳೆ ಮಂಜುಳಾ ವಿರುದ್ದ ಪ್ರಕರಣವನ್ನೂ ದಾಖಲಿಸಲಾಗಿದೆ. ಅಲ್ಲದೆ ಹಲಸೂರು ಗೇಟ್‌ ಟ್ರಾಫಿಕ್‌ ಪೊಲೀಸ್ ಠಾಣೆಯ ಎಎಸ್‌ಐ ನಾರಾಯಣ್‌  ವಿಕಲಾಂಗ ಮಹಿಳೆಗೆ ಸಾರ್ವಜನಿಕವಾಗಿ ಬೂಟು ಕಾಲಿನಿಂದ ಒದ್ದು ಅವ್ಯಾಚ್ಯ ಪದಗಳಿಂದ ನಿಂದಿಸಿರುವ ವಿಡಿಯೊ ವೈರಲ್ ಆಗಿತ್ತು.

ಎಎಸ್‌ಐ ನೀಡಿದ ದೂರಿನ ಆಧಾರದಲ್ಲಿ ಎಸ್.ಜೆ.ಪಾರ್ಕ್ ಪೊಲೀಸರು ವಿಕಲಾಂಗ ಮಹಿಳೆಯ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಎಎಸ್‌ಐ ನಾರಾಯಣ್‌ ಅವರು ಮಹಿಳೆಗೆ ಥಳಿಸಿರುವ ವಿಡಿಯೊ ವೈರಲ್‌ ಆದ ಬಳಿಕ ಸರ್ಕಾರ ಅವರನ್ನು ಅಮಾನತು ಮಾಡಲಾಗಿದೆ. ಆದರೆ ಅಮಾನತು ಆದ ಮಾತ್ರಕ್ಕೆ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಮುಖಂಡರು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ರಾಜ್ಯ ವಿಕಲಚೇತನರ ರಕ್ಷಣಾ ಸಮಿತಿ ಕಾರ್ಯಾಧ್ಯಕ್ಷರಾದ  ಚಂದ್ರಶೇಖರ್ ಪುಟ್ಟಪ್ಪ, “ನಮ್ಮ ಅಂಗವಿಕಲರ ಆಯುಕ್ತಾಲಯದಲ್ಲಿ ದೂರು ದಾಖಲಿಸುತ್ತಿದ್ದೇನೆ. ಆ ಮಹಿಳೆ ಯಾರು ಎಂಬುದು ನನಗೆ ಪರಿಚಯವಿಲ್ಲ. ಆದರೆ ಮಾಧ್ಯಮಗಳಲ್ಲಿ ಬಂದ ವರದಿಯ ಪ್ರಕಾರ ಮಹಿಳೆ ಅಂಗವಿಕಲರಾಗಿದ್ದಾರೆ. ಇದರ ಪ್ರಕಾರ ಪ್ರಕರಣ ದಾಖಲಾಗಬೇಕು. ರಕ್ಷಕನ ವೇಶದಲ್ಲಿ ಮೃಗೀಯ ವರ್ತನೆ ತೋರಿದ ಅಧಿಕಾರಿಗೆ ಶಿಕ್ಷೆಯಾಗಬೇಕು” ಎಂದರು.

“ಬರೀ ಅಮಾನತು ಮಾಡಿದರೆ ಸಾಲದು, ಸೇವೆಯಿಂದ ವಜಾಗೊಳಿಸಬೇಕು. ಒಬ್ಬರಿಗೆ ಶಿಕ್ಷೆಯಾದರೆ ಹೀಗೆ ವರ್ತಿಸುವವರೆಲ್ಲಾ ಪಾಠ ಕಲಿಯುತ್ತಾರೆ. ಸಮಾಜಕ್ಕೆ ಒಂದು ಸಂದೇಶ ಹೋಗಬೇಕಾಗಿದೆ. ಆ ಮಹಿಳೆಗೆ ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇವೆ. ಸೋಮವಾರ ವಿಕಲಾಂಗ ಚೇತನರ ಆಯುಕ್ತರನ್ನು ಭೇಟಿ ಮಾಡುತ್ತೇನೆ” ಎಂದು ಮಾಹಿತಿ ನೀಡಿದರು.

ಚಂದ್ರಶೇಖರ್ ಪುಟ್ಟಪ್ಪ

‘ಸ್ವಯಂ ಪ್ರೇರಿತ ದೂರು ದಾಖಲಿಸಲು ಒತ್ತಡ ಹಾಕುತ್ತೇವೆ’

ಕರ್ನಾಟಕ ಸರ್ಕಾರಿ, ಅರೆ ಸರ್ಕಾರಿ ಅಂಗವಿಕಲ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಶಿವಪ್ಪ ರಾಥೋಡ್‌‌ ಪ್ರತಿಕ್ರಿಯಿಸಿ, “ಅಂಗವಿಕಲರನ್ನು ಪೊಲೀಸ್ ವಾಹನದಲ್ಲಿ ಕರೆದೊಯ್ಯುವಾಗ ಕೆಲವೊಂದು ನಿಯಮಗಳನ್ನು ಪೊಲೀಸರು ಪಾಲಿಸಬೇಕು. ಈ ಪ್ರಕರಣದಲ್ಲಿ ಅದು ಸಂಪೂರ್ಣ ಉಲ್ಲಂಘನೆಯಾಗಿದೆ. ಸಸ್ಪೆಂಡಾದರೆ ಸಾಲದು. ಅಂಗವಿಕಲರ ನ್ಯಾಯಾಲಯದಲ್ಲಿ ಸುಮೊಟೊ ಕೇಸ್ ದಾಖಲಿಸಲು ವಿಕಲಾಂಗ ಚೇತನರ ಆಯುಕ್ತರ ಮೇಲೆ ಒತ್ತಡ ಹಾಕುತ್ತೇವೆ. ಪೊಲೀಸ್ ಪೇದೆಯಿಂದ ಹಿಡಿದು ಉನ್ನತ ಅಧಿಕಾರಗಳವರೆಗೆ ಅಂಗವಿಕಲರ ಜೊತೆ ಸೌಹಾರ್ದಯುತವಾಗಿ ವರ್ತಿಸಬೇಕು. ಈ ಸಂಬಂಧ ಮೇಲಧಿಕಾರಿಗಳ ಮೂಲಕ ಆದೇಶ ಹೊರಡಿಸುತ್ತೇವೆ” ಎಂದು ತಿಳಿಸಿದರು.

ಶಿವಪ್ಪ ರಾಥೋಡ್‌‌

“ಈಗಾಗಲೆ ಈ ಕುರಿತು ಆದೇಶ ಬಂದಿದೆ. ಪೊಲೀಸ್‌ ಠಾಣೆಗೆ ಬರುವ ಅಂಗವಿಕಲರ ಜೊತೆ ನಮ್ರತೆಯಿಂದ ವರ್ತಿಸಬೇಕು ಎಂದು ಆದೇಶ ಹೇಳುತ್ತದೆ. ಸದರಿ ಪ್ರಕರಣದಲ್ಲಿನ ವಿಕಲಾಂಗ ಮಹಿಳೆ ಏಕೆ ಕಲ್ಲು ತಗೆದುಕೊಂಡು ಹೊಡೆದರು ಎಂಬ ಮಾಹಿತಿ ಇಲ್ಲ. ಕಲ್ಲಿನಲ್ಲಿ ಹೊಡೆಯಬಾರದಿತ್ತು, ಆದರೆ ಹೊಡೆದಿದ್ದಾರೆ. ತಾಳ್ಮೆ ತೆಗೆದುಕೊಳ್ಳಲಾಗದೆ ಹೊಡೆದಿದ್ದಾರೋ, ಮತ್ಯಾವ ಕಾರಣಕ್ಕೆ ಹೊಡೆದಿದ್ದಾರೋ ಗೊತ್ತಿಲ್ಲ. ಹಾಗೇನಾದರೂ ಕಲ್ಲಿನಲ್ಲಿ ಹೊಡೆದಿದ್ದರೆ ಕಾನೂನು ಪ್ರಕಾರ ಕ್ರಮ ಜರುಗಿಸಬಹುದಲ್ಲ. ಇನ್ನೊಬ್ಬರಿಗೆ ಹೊಡೆಯುವ ಅಧಿಕಾರ ಕೊಟ್ಟವರು ಯಾರು? ಅಂಗವಿಕಲ ಮಹಿಳೆಗೆ ತಿಳಿವಳಿಕೆ ಇಲ್ಲದಿರಬಹುದು. ಆದರೆ ತಿಳಿವಳಿಕೆ ಇರುವ ಎಎಸ್‌ಐ ಹೀಗೆ ಮಾಡಬಹುದೇ?” ಎಂದು ಬೇಸರ ವ್ಯಕ್ತಪಡಿಸಿದರು.

“ನಾವು ಪೊಲೀಸರ ವಿರುದ್ಧ ನಿಂತಿಲ್ಲ. ಆದರೆ ಆ ಮಹಿಳೆ ಕಲ್ಲು ತಗೆದುಕೊಂಡು ಹೊಡೆಯಲು ಕಾರಣ ಏನೆಂದು ತಿಳಿಯುತ್ತಿಲ್ಲ. ಇರುವೆ ಕಚ್ಚುವುದು ನಾವು ತುಳಿದಾಗ ಮಾತ್ರ. ಇಲ್ಲದಿದ್ದರೆ ತನ್ನಪಾಡಿಗೆ ತಾನು ಹೋಗುತ್ತಿರುತ್ತಿರುತ್ತದೆ. ಹೀಗಾಗಿ ಅಂಗವಿಕಲ ಮಹಿಳೆಯ ಮಾಹಿತಿಯನ್ನು ನಾವು ಟ್ರೇಸ್ ಮಾಡುತ್ತಿದ್ದೇವೆ. ಮಾನವ ಹಕ್ಕುಗಳ ಆಯೋಗ, ಮಹಿಳಾ ಆಯೋಗ, ಅಂಗವಿಕಲ ಆಯೋಗದವರು ಸುಮೊಟೊ ಪ್ರಕರಣವನ್ನು ಈಗಾಗಲೇ ದಾಖಲಿಸಬೇಕಿತ್ತು. ಆದರೆ ಅದರ ಕುರಿತು ಮಾಹಿತಿಯೇ ಇಲ್ಲ” ಎಂದು ವಿಷಾದಿಸಿದರು.

ಜಯಕರ್ನಾಟಕ ವಿಕಲ ಚೇತನರ ರಕ್ಷಣಾ ವೇದಿಕೆ ಅಧ್ಯಕ್ಷ ರವಿಕುಮಾರ್ ಗದಗಿನ್‌ ಮಾತನಾಡಿ, “ಅಂಗವಿಕಲರ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿವೆ. ಕಲ್ಬುರ್ಗಿಯಲ್ಲಿ ಒಂದು ಪ್ರಕರಣ ನಡೆದಿತ್ತು. ತನಗಾದ ಅನ್ಯಾಯವನ್ನು ಹೇಳಿಕೊಂಡ ವಿಕಲಚೇತನ ವ್ಯಕ್ತಿಯನ್ನು ಪೊಲೀಸರು ಶೋಷಿಸಿದ್ದರು. ಆತನಿಂದ ದುಡ್ಡು ಕಿತ್ತುಕೊಂಡಿದ್ದರು. ಲೋಕಾಯುಕ್ತದಲ್ಲಿ ಈ ಕುರಿತು ಪ್ರಕರಣ ದಾಖಲಿಸಿದ್ದೇನೆ” ಎಂದು ತಿಳಿಸಿದರು. ಜೊತೆಗೆ ತಾವು ನೀಡಿದ ದೂರುಗಳ ಮಾಹಿತಿಯನ್ನೂ ‘ನಾನುಗೌರಿ.ಕಾಂ’ ಜೊತೆ ಹಂಚಿಕೊಂಡರು.

ರವಿಕುಮಾರ್‌ ಗದುಗಿನ್‌

“ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ. ಆ ಮಹಿಳೆಗೆ ನ್ಯಾಯ ದೊರಕಿಸಬೇಕು. ಅಸಹಾಯಕರ ಮೇಲೆ ನೀವೇಕೆ ಶಕ್ತಿ ಪ್ರದರ್ಶನ ಮಾಡುತ್ತಿದ್ದೀರಿ? ಕೂಡಲೇ ಕ್ರಮ ಜರುಗಿಸಬೇಕು. ಸಸ್ಪೆಂಡ್‌ ಮಾಡಿದ ಮಾತ್ರಕ್ಕೆ ಪ್ರಕರಣ ಮುಗಿಯುವುದಿಲ್ಲ” ಎನ್ನುತ್ತಾರೆ ರವಿಕುಮಾರ್‌ ಗದುಗಿನ್‌.


ಇದನ್ನೂ ಓದಿರಿ: ಬೆಂಗಳೂರು: ವಿಕಲಾಂಗ ಮಹಿಳೆಯ ಮೇಲೆ ಟ್ರಾಫಿಕ್‌ ಎಎಸ್‌ಐ ಹಲ್ಲೆ; ಮಹಿಳೆಯ ಮೇಲೆಯೇ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...