Homeಕರ್ನಾಟಕ"ಎಎಸ್‌ಐ ವಿರುದ್ಧ ವಿಕಲಾಂಗ ಚೇತನರ ಆಯೋಗ ಸ್ವಯಂಪ್ರೇರಿತ ಕೇಸ್ ದಾಖಲಿಸಲಿ"

“ಎಎಸ್‌ಐ ವಿರುದ್ಧ ವಿಕಲಾಂಗ ಚೇತನರ ಆಯೋಗ ಸ್ವಯಂಪ್ರೇರಿತ ಕೇಸ್ ದಾಖಲಿಸಲಿ”

ವಿಕಲಾಂಗ ಮಹಿಳೆಯ ಮೇಲೆ ಹಲ್ಲೆ ನಡೆಸಿರುವ ಟ್ರಾಫಿಕ್‌ ಪೊಲೀಸ್ ಅಧಿಕಾರಿಯ ವಿರುದ್ಧ ಸುಮೊಟೊ ಪ್ರಕರಣ ದಾಖಲಾಗಬೇಕು ಎಂದು ವಿಕಲಾಂಗ ಚೇತನರ ಪರ ಹೋರಾಡುತ್ತಿರುವ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.

- Advertisement -
- Advertisement -

ವಿಕಲಾಂಗ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿಯ ವಿರುದ್ಧ ಸುಮೊಟೊ (ಸ್ವಯಂಪ್ರೇರಿತ) ಪ್ರಕರಣ ದಾಖಲಿಸಿ ವಿಕಲಾಂಗ ಚೇತನರ ಮೇಲೆ ಆಗುತ್ತಿರುವ ಹಲ್ಲೆಗಳನ್ನು ತಡೆಯಬೇಕು ಎಂದು ವಿಕಲಾಂಗ ಚೇತನರ ಪರ ಹೋರಾಡುತ್ತಿರುವ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.

ಟೋಯಿಂಗ್‌ ವಾಹನದಲ್ಲಿ ಕುಳಿತ್ತಿದ್ದ ಎಎಸ್‌ಐಗೆ ಕಲ್ಲಿನಿಂದ ಹೊಡೆದ ಆರೋಪದ ಮೇಲೆ ವಿಕಲಾಂಗ ಮಹಿಳೆ ಮಂಜುಳಾ ವಿರುದ್ದ ಪ್ರಕರಣವನ್ನೂ ದಾಖಲಿಸಲಾಗಿದೆ. ಅಲ್ಲದೆ ಹಲಸೂರು ಗೇಟ್‌ ಟ್ರಾಫಿಕ್‌ ಪೊಲೀಸ್ ಠಾಣೆಯ ಎಎಸ್‌ಐ ನಾರಾಯಣ್‌  ವಿಕಲಾಂಗ ಮಹಿಳೆಗೆ ಸಾರ್ವಜನಿಕವಾಗಿ ಬೂಟು ಕಾಲಿನಿಂದ ಒದ್ದು ಅವ್ಯಾಚ್ಯ ಪದಗಳಿಂದ ನಿಂದಿಸಿರುವ ವಿಡಿಯೊ ವೈರಲ್ ಆಗಿತ್ತು.

ಎಎಸ್‌ಐ ನೀಡಿದ ದೂರಿನ ಆಧಾರದಲ್ಲಿ ಎಸ್.ಜೆ.ಪಾರ್ಕ್ ಪೊಲೀಸರು ವಿಕಲಾಂಗ ಮಹಿಳೆಯ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಎಎಸ್‌ಐ ನಾರಾಯಣ್‌ ಅವರು ಮಹಿಳೆಗೆ ಥಳಿಸಿರುವ ವಿಡಿಯೊ ವೈರಲ್‌ ಆದ ಬಳಿಕ ಸರ್ಕಾರ ಅವರನ್ನು ಅಮಾನತು ಮಾಡಲಾಗಿದೆ. ಆದರೆ ಅಮಾನತು ಆದ ಮಾತ್ರಕ್ಕೆ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಮುಖಂಡರು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ರಾಜ್ಯ ವಿಕಲಚೇತನರ ರಕ್ಷಣಾ ಸಮಿತಿ ಕಾರ್ಯಾಧ್ಯಕ್ಷರಾದ  ಚಂದ್ರಶೇಖರ್ ಪುಟ್ಟಪ್ಪ, “ನಮ್ಮ ಅಂಗವಿಕಲರ ಆಯುಕ್ತಾಲಯದಲ್ಲಿ ದೂರು ದಾಖಲಿಸುತ್ತಿದ್ದೇನೆ. ಆ ಮಹಿಳೆ ಯಾರು ಎಂಬುದು ನನಗೆ ಪರಿಚಯವಿಲ್ಲ. ಆದರೆ ಮಾಧ್ಯಮಗಳಲ್ಲಿ ಬಂದ ವರದಿಯ ಪ್ರಕಾರ ಮಹಿಳೆ ಅಂಗವಿಕಲರಾಗಿದ್ದಾರೆ. ಇದರ ಪ್ರಕಾರ ಪ್ರಕರಣ ದಾಖಲಾಗಬೇಕು. ರಕ್ಷಕನ ವೇಶದಲ್ಲಿ ಮೃಗೀಯ ವರ್ತನೆ ತೋರಿದ ಅಧಿಕಾರಿಗೆ ಶಿಕ್ಷೆಯಾಗಬೇಕು” ಎಂದರು.

“ಬರೀ ಅಮಾನತು ಮಾಡಿದರೆ ಸಾಲದು, ಸೇವೆಯಿಂದ ವಜಾಗೊಳಿಸಬೇಕು. ಒಬ್ಬರಿಗೆ ಶಿಕ್ಷೆಯಾದರೆ ಹೀಗೆ ವರ್ತಿಸುವವರೆಲ್ಲಾ ಪಾಠ ಕಲಿಯುತ್ತಾರೆ. ಸಮಾಜಕ್ಕೆ ಒಂದು ಸಂದೇಶ ಹೋಗಬೇಕಾಗಿದೆ. ಆ ಮಹಿಳೆಗೆ ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇವೆ. ಸೋಮವಾರ ವಿಕಲಾಂಗ ಚೇತನರ ಆಯುಕ್ತರನ್ನು ಭೇಟಿ ಮಾಡುತ್ತೇನೆ” ಎಂದು ಮಾಹಿತಿ ನೀಡಿದರು.

ಚಂದ್ರಶೇಖರ್ ಪುಟ್ಟಪ್ಪ

‘ಸ್ವಯಂ ಪ್ರೇರಿತ ದೂರು ದಾಖಲಿಸಲು ಒತ್ತಡ ಹಾಕುತ್ತೇವೆ’

ಕರ್ನಾಟಕ ಸರ್ಕಾರಿ, ಅರೆ ಸರ್ಕಾರಿ ಅಂಗವಿಕಲ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಶಿವಪ್ಪ ರಾಥೋಡ್‌‌ ಪ್ರತಿಕ್ರಿಯಿಸಿ, “ಅಂಗವಿಕಲರನ್ನು ಪೊಲೀಸ್ ವಾಹನದಲ್ಲಿ ಕರೆದೊಯ್ಯುವಾಗ ಕೆಲವೊಂದು ನಿಯಮಗಳನ್ನು ಪೊಲೀಸರು ಪಾಲಿಸಬೇಕು. ಈ ಪ್ರಕರಣದಲ್ಲಿ ಅದು ಸಂಪೂರ್ಣ ಉಲ್ಲಂಘನೆಯಾಗಿದೆ. ಸಸ್ಪೆಂಡಾದರೆ ಸಾಲದು. ಅಂಗವಿಕಲರ ನ್ಯಾಯಾಲಯದಲ್ಲಿ ಸುಮೊಟೊ ಕೇಸ್ ದಾಖಲಿಸಲು ವಿಕಲಾಂಗ ಚೇತನರ ಆಯುಕ್ತರ ಮೇಲೆ ಒತ್ತಡ ಹಾಕುತ್ತೇವೆ. ಪೊಲೀಸ್ ಪೇದೆಯಿಂದ ಹಿಡಿದು ಉನ್ನತ ಅಧಿಕಾರಗಳವರೆಗೆ ಅಂಗವಿಕಲರ ಜೊತೆ ಸೌಹಾರ್ದಯುತವಾಗಿ ವರ್ತಿಸಬೇಕು. ಈ ಸಂಬಂಧ ಮೇಲಧಿಕಾರಿಗಳ ಮೂಲಕ ಆದೇಶ ಹೊರಡಿಸುತ್ತೇವೆ” ಎಂದು ತಿಳಿಸಿದರು.

ಶಿವಪ್ಪ ರಾಥೋಡ್‌‌

“ಈಗಾಗಲೆ ಈ ಕುರಿತು ಆದೇಶ ಬಂದಿದೆ. ಪೊಲೀಸ್‌ ಠಾಣೆಗೆ ಬರುವ ಅಂಗವಿಕಲರ ಜೊತೆ ನಮ್ರತೆಯಿಂದ ವರ್ತಿಸಬೇಕು ಎಂದು ಆದೇಶ ಹೇಳುತ್ತದೆ. ಸದರಿ ಪ್ರಕರಣದಲ್ಲಿನ ವಿಕಲಾಂಗ ಮಹಿಳೆ ಏಕೆ ಕಲ್ಲು ತಗೆದುಕೊಂಡು ಹೊಡೆದರು ಎಂಬ ಮಾಹಿತಿ ಇಲ್ಲ. ಕಲ್ಲಿನಲ್ಲಿ ಹೊಡೆಯಬಾರದಿತ್ತು, ಆದರೆ ಹೊಡೆದಿದ್ದಾರೆ. ತಾಳ್ಮೆ ತೆಗೆದುಕೊಳ್ಳಲಾಗದೆ ಹೊಡೆದಿದ್ದಾರೋ, ಮತ್ಯಾವ ಕಾರಣಕ್ಕೆ ಹೊಡೆದಿದ್ದಾರೋ ಗೊತ್ತಿಲ್ಲ. ಹಾಗೇನಾದರೂ ಕಲ್ಲಿನಲ್ಲಿ ಹೊಡೆದಿದ್ದರೆ ಕಾನೂನು ಪ್ರಕಾರ ಕ್ರಮ ಜರುಗಿಸಬಹುದಲ್ಲ. ಇನ್ನೊಬ್ಬರಿಗೆ ಹೊಡೆಯುವ ಅಧಿಕಾರ ಕೊಟ್ಟವರು ಯಾರು? ಅಂಗವಿಕಲ ಮಹಿಳೆಗೆ ತಿಳಿವಳಿಕೆ ಇಲ್ಲದಿರಬಹುದು. ಆದರೆ ತಿಳಿವಳಿಕೆ ಇರುವ ಎಎಸ್‌ಐ ಹೀಗೆ ಮಾಡಬಹುದೇ?” ಎಂದು ಬೇಸರ ವ್ಯಕ್ತಪಡಿಸಿದರು.

“ನಾವು ಪೊಲೀಸರ ವಿರುದ್ಧ ನಿಂತಿಲ್ಲ. ಆದರೆ ಆ ಮಹಿಳೆ ಕಲ್ಲು ತಗೆದುಕೊಂಡು ಹೊಡೆಯಲು ಕಾರಣ ಏನೆಂದು ತಿಳಿಯುತ್ತಿಲ್ಲ. ಇರುವೆ ಕಚ್ಚುವುದು ನಾವು ತುಳಿದಾಗ ಮಾತ್ರ. ಇಲ್ಲದಿದ್ದರೆ ತನ್ನಪಾಡಿಗೆ ತಾನು ಹೋಗುತ್ತಿರುತ್ತಿರುತ್ತದೆ. ಹೀಗಾಗಿ ಅಂಗವಿಕಲ ಮಹಿಳೆಯ ಮಾಹಿತಿಯನ್ನು ನಾವು ಟ್ರೇಸ್ ಮಾಡುತ್ತಿದ್ದೇವೆ. ಮಾನವ ಹಕ್ಕುಗಳ ಆಯೋಗ, ಮಹಿಳಾ ಆಯೋಗ, ಅಂಗವಿಕಲ ಆಯೋಗದವರು ಸುಮೊಟೊ ಪ್ರಕರಣವನ್ನು ಈಗಾಗಲೇ ದಾಖಲಿಸಬೇಕಿತ್ತು. ಆದರೆ ಅದರ ಕುರಿತು ಮಾಹಿತಿಯೇ ಇಲ್ಲ” ಎಂದು ವಿಷಾದಿಸಿದರು.

ಜಯಕರ್ನಾಟಕ ವಿಕಲ ಚೇತನರ ರಕ್ಷಣಾ ವೇದಿಕೆ ಅಧ್ಯಕ್ಷ ರವಿಕುಮಾರ್ ಗದಗಿನ್‌ ಮಾತನಾಡಿ, “ಅಂಗವಿಕಲರ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿವೆ. ಕಲ್ಬುರ್ಗಿಯಲ್ಲಿ ಒಂದು ಪ್ರಕರಣ ನಡೆದಿತ್ತು. ತನಗಾದ ಅನ್ಯಾಯವನ್ನು ಹೇಳಿಕೊಂಡ ವಿಕಲಚೇತನ ವ್ಯಕ್ತಿಯನ್ನು ಪೊಲೀಸರು ಶೋಷಿಸಿದ್ದರು. ಆತನಿಂದ ದುಡ್ಡು ಕಿತ್ತುಕೊಂಡಿದ್ದರು. ಲೋಕಾಯುಕ್ತದಲ್ಲಿ ಈ ಕುರಿತು ಪ್ರಕರಣ ದಾಖಲಿಸಿದ್ದೇನೆ” ಎಂದು ತಿಳಿಸಿದರು. ಜೊತೆಗೆ ತಾವು ನೀಡಿದ ದೂರುಗಳ ಮಾಹಿತಿಯನ್ನೂ ‘ನಾನುಗೌರಿ.ಕಾಂ’ ಜೊತೆ ಹಂಚಿಕೊಂಡರು.

ರವಿಕುಮಾರ್‌ ಗದುಗಿನ್‌

“ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ. ಆ ಮಹಿಳೆಗೆ ನ್ಯಾಯ ದೊರಕಿಸಬೇಕು. ಅಸಹಾಯಕರ ಮೇಲೆ ನೀವೇಕೆ ಶಕ್ತಿ ಪ್ರದರ್ಶನ ಮಾಡುತ್ತಿದ್ದೀರಿ? ಕೂಡಲೇ ಕ್ರಮ ಜರುಗಿಸಬೇಕು. ಸಸ್ಪೆಂಡ್‌ ಮಾಡಿದ ಮಾತ್ರಕ್ಕೆ ಪ್ರಕರಣ ಮುಗಿಯುವುದಿಲ್ಲ” ಎನ್ನುತ್ತಾರೆ ರವಿಕುಮಾರ್‌ ಗದುಗಿನ್‌.


ಇದನ್ನೂ ಓದಿರಿ: ಬೆಂಗಳೂರು: ವಿಕಲಾಂಗ ಮಹಿಳೆಯ ಮೇಲೆ ಟ್ರಾಫಿಕ್‌ ಎಎಸ್‌ಐ ಹಲ್ಲೆ; ಮಹಿಳೆಯ ಮೇಲೆಯೇ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...