Homeಕರ್ನಾಟಕ"ಎಎಸ್‌ಐ ವಿರುದ್ಧ ವಿಕಲಾಂಗ ಚೇತನರ ಆಯೋಗ ಸ್ವಯಂಪ್ರೇರಿತ ಕೇಸ್ ದಾಖಲಿಸಲಿ"

“ಎಎಸ್‌ಐ ವಿರುದ್ಧ ವಿಕಲಾಂಗ ಚೇತನರ ಆಯೋಗ ಸ್ವಯಂಪ್ರೇರಿತ ಕೇಸ್ ದಾಖಲಿಸಲಿ”

ವಿಕಲಾಂಗ ಮಹಿಳೆಯ ಮೇಲೆ ಹಲ್ಲೆ ನಡೆಸಿರುವ ಟ್ರಾಫಿಕ್‌ ಪೊಲೀಸ್ ಅಧಿಕಾರಿಯ ವಿರುದ್ಧ ಸುಮೊಟೊ ಪ್ರಕರಣ ದಾಖಲಾಗಬೇಕು ಎಂದು ವಿಕಲಾಂಗ ಚೇತನರ ಪರ ಹೋರಾಡುತ್ತಿರುವ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.

- Advertisement -
- Advertisement -

ವಿಕಲಾಂಗ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿಯ ವಿರುದ್ಧ ಸುಮೊಟೊ (ಸ್ವಯಂಪ್ರೇರಿತ) ಪ್ರಕರಣ ದಾಖಲಿಸಿ ವಿಕಲಾಂಗ ಚೇತನರ ಮೇಲೆ ಆಗುತ್ತಿರುವ ಹಲ್ಲೆಗಳನ್ನು ತಡೆಯಬೇಕು ಎಂದು ವಿಕಲಾಂಗ ಚೇತನರ ಪರ ಹೋರಾಡುತ್ತಿರುವ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.

ಟೋಯಿಂಗ್‌ ವಾಹನದಲ್ಲಿ ಕುಳಿತ್ತಿದ್ದ ಎಎಸ್‌ಐಗೆ ಕಲ್ಲಿನಿಂದ ಹೊಡೆದ ಆರೋಪದ ಮೇಲೆ ವಿಕಲಾಂಗ ಮಹಿಳೆ ಮಂಜುಳಾ ವಿರುದ್ದ ಪ್ರಕರಣವನ್ನೂ ದಾಖಲಿಸಲಾಗಿದೆ. ಅಲ್ಲದೆ ಹಲಸೂರು ಗೇಟ್‌ ಟ್ರಾಫಿಕ್‌ ಪೊಲೀಸ್ ಠಾಣೆಯ ಎಎಸ್‌ಐ ನಾರಾಯಣ್‌  ವಿಕಲಾಂಗ ಮಹಿಳೆಗೆ ಸಾರ್ವಜನಿಕವಾಗಿ ಬೂಟು ಕಾಲಿನಿಂದ ಒದ್ದು ಅವ್ಯಾಚ್ಯ ಪದಗಳಿಂದ ನಿಂದಿಸಿರುವ ವಿಡಿಯೊ ವೈರಲ್ ಆಗಿತ್ತು.

ಎಎಸ್‌ಐ ನೀಡಿದ ದೂರಿನ ಆಧಾರದಲ್ಲಿ ಎಸ್.ಜೆ.ಪಾರ್ಕ್ ಪೊಲೀಸರು ವಿಕಲಾಂಗ ಮಹಿಳೆಯ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಎಎಸ್‌ಐ ನಾರಾಯಣ್‌ ಅವರು ಮಹಿಳೆಗೆ ಥಳಿಸಿರುವ ವಿಡಿಯೊ ವೈರಲ್‌ ಆದ ಬಳಿಕ ಸರ್ಕಾರ ಅವರನ್ನು ಅಮಾನತು ಮಾಡಲಾಗಿದೆ. ಆದರೆ ಅಮಾನತು ಆದ ಮಾತ್ರಕ್ಕೆ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಮುಖಂಡರು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ರಾಜ್ಯ ವಿಕಲಚೇತನರ ರಕ್ಷಣಾ ಸಮಿತಿ ಕಾರ್ಯಾಧ್ಯಕ್ಷರಾದ  ಚಂದ್ರಶೇಖರ್ ಪುಟ್ಟಪ್ಪ, “ನಮ್ಮ ಅಂಗವಿಕಲರ ಆಯುಕ್ತಾಲಯದಲ್ಲಿ ದೂರು ದಾಖಲಿಸುತ್ತಿದ್ದೇನೆ. ಆ ಮಹಿಳೆ ಯಾರು ಎಂಬುದು ನನಗೆ ಪರಿಚಯವಿಲ್ಲ. ಆದರೆ ಮಾಧ್ಯಮಗಳಲ್ಲಿ ಬಂದ ವರದಿಯ ಪ್ರಕಾರ ಮಹಿಳೆ ಅಂಗವಿಕಲರಾಗಿದ್ದಾರೆ. ಇದರ ಪ್ರಕಾರ ಪ್ರಕರಣ ದಾಖಲಾಗಬೇಕು. ರಕ್ಷಕನ ವೇಶದಲ್ಲಿ ಮೃಗೀಯ ವರ್ತನೆ ತೋರಿದ ಅಧಿಕಾರಿಗೆ ಶಿಕ್ಷೆಯಾಗಬೇಕು” ಎಂದರು.

“ಬರೀ ಅಮಾನತು ಮಾಡಿದರೆ ಸಾಲದು, ಸೇವೆಯಿಂದ ವಜಾಗೊಳಿಸಬೇಕು. ಒಬ್ಬರಿಗೆ ಶಿಕ್ಷೆಯಾದರೆ ಹೀಗೆ ವರ್ತಿಸುವವರೆಲ್ಲಾ ಪಾಠ ಕಲಿಯುತ್ತಾರೆ. ಸಮಾಜಕ್ಕೆ ಒಂದು ಸಂದೇಶ ಹೋಗಬೇಕಾಗಿದೆ. ಆ ಮಹಿಳೆಗೆ ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇವೆ. ಸೋಮವಾರ ವಿಕಲಾಂಗ ಚೇತನರ ಆಯುಕ್ತರನ್ನು ಭೇಟಿ ಮಾಡುತ್ತೇನೆ” ಎಂದು ಮಾಹಿತಿ ನೀಡಿದರು.

ಚಂದ್ರಶೇಖರ್ ಪುಟ್ಟಪ್ಪ

‘ಸ್ವಯಂ ಪ್ರೇರಿತ ದೂರು ದಾಖಲಿಸಲು ಒತ್ತಡ ಹಾಕುತ್ತೇವೆ’

ಕರ್ನಾಟಕ ಸರ್ಕಾರಿ, ಅರೆ ಸರ್ಕಾರಿ ಅಂಗವಿಕಲ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಶಿವಪ್ಪ ರಾಥೋಡ್‌‌ ಪ್ರತಿಕ್ರಿಯಿಸಿ, “ಅಂಗವಿಕಲರನ್ನು ಪೊಲೀಸ್ ವಾಹನದಲ್ಲಿ ಕರೆದೊಯ್ಯುವಾಗ ಕೆಲವೊಂದು ನಿಯಮಗಳನ್ನು ಪೊಲೀಸರು ಪಾಲಿಸಬೇಕು. ಈ ಪ್ರಕರಣದಲ್ಲಿ ಅದು ಸಂಪೂರ್ಣ ಉಲ್ಲಂಘನೆಯಾಗಿದೆ. ಸಸ್ಪೆಂಡಾದರೆ ಸಾಲದು. ಅಂಗವಿಕಲರ ನ್ಯಾಯಾಲಯದಲ್ಲಿ ಸುಮೊಟೊ ಕೇಸ್ ದಾಖಲಿಸಲು ವಿಕಲಾಂಗ ಚೇತನರ ಆಯುಕ್ತರ ಮೇಲೆ ಒತ್ತಡ ಹಾಕುತ್ತೇವೆ. ಪೊಲೀಸ್ ಪೇದೆಯಿಂದ ಹಿಡಿದು ಉನ್ನತ ಅಧಿಕಾರಗಳವರೆಗೆ ಅಂಗವಿಕಲರ ಜೊತೆ ಸೌಹಾರ್ದಯುತವಾಗಿ ವರ್ತಿಸಬೇಕು. ಈ ಸಂಬಂಧ ಮೇಲಧಿಕಾರಿಗಳ ಮೂಲಕ ಆದೇಶ ಹೊರಡಿಸುತ್ತೇವೆ” ಎಂದು ತಿಳಿಸಿದರು.

ಶಿವಪ್ಪ ರಾಥೋಡ್‌‌

“ಈಗಾಗಲೆ ಈ ಕುರಿತು ಆದೇಶ ಬಂದಿದೆ. ಪೊಲೀಸ್‌ ಠಾಣೆಗೆ ಬರುವ ಅಂಗವಿಕಲರ ಜೊತೆ ನಮ್ರತೆಯಿಂದ ವರ್ತಿಸಬೇಕು ಎಂದು ಆದೇಶ ಹೇಳುತ್ತದೆ. ಸದರಿ ಪ್ರಕರಣದಲ್ಲಿನ ವಿಕಲಾಂಗ ಮಹಿಳೆ ಏಕೆ ಕಲ್ಲು ತಗೆದುಕೊಂಡು ಹೊಡೆದರು ಎಂಬ ಮಾಹಿತಿ ಇಲ್ಲ. ಕಲ್ಲಿನಲ್ಲಿ ಹೊಡೆಯಬಾರದಿತ್ತು, ಆದರೆ ಹೊಡೆದಿದ್ದಾರೆ. ತಾಳ್ಮೆ ತೆಗೆದುಕೊಳ್ಳಲಾಗದೆ ಹೊಡೆದಿದ್ದಾರೋ, ಮತ್ಯಾವ ಕಾರಣಕ್ಕೆ ಹೊಡೆದಿದ್ದಾರೋ ಗೊತ್ತಿಲ್ಲ. ಹಾಗೇನಾದರೂ ಕಲ್ಲಿನಲ್ಲಿ ಹೊಡೆದಿದ್ದರೆ ಕಾನೂನು ಪ್ರಕಾರ ಕ್ರಮ ಜರುಗಿಸಬಹುದಲ್ಲ. ಇನ್ನೊಬ್ಬರಿಗೆ ಹೊಡೆಯುವ ಅಧಿಕಾರ ಕೊಟ್ಟವರು ಯಾರು? ಅಂಗವಿಕಲ ಮಹಿಳೆಗೆ ತಿಳಿವಳಿಕೆ ಇಲ್ಲದಿರಬಹುದು. ಆದರೆ ತಿಳಿವಳಿಕೆ ಇರುವ ಎಎಸ್‌ಐ ಹೀಗೆ ಮಾಡಬಹುದೇ?” ಎಂದು ಬೇಸರ ವ್ಯಕ್ತಪಡಿಸಿದರು.

“ನಾವು ಪೊಲೀಸರ ವಿರುದ್ಧ ನಿಂತಿಲ್ಲ. ಆದರೆ ಆ ಮಹಿಳೆ ಕಲ್ಲು ತಗೆದುಕೊಂಡು ಹೊಡೆಯಲು ಕಾರಣ ಏನೆಂದು ತಿಳಿಯುತ್ತಿಲ್ಲ. ಇರುವೆ ಕಚ್ಚುವುದು ನಾವು ತುಳಿದಾಗ ಮಾತ್ರ. ಇಲ್ಲದಿದ್ದರೆ ತನ್ನಪಾಡಿಗೆ ತಾನು ಹೋಗುತ್ತಿರುತ್ತಿರುತ್ತದೆ. ಹೀಗಾಗಿ ಅಂಗವಿಕಲ ಮಹಿಳೆಯ ಮಾಹಿತಿಯನ್ನು ನಾವು ಟ್ರೇಸ್ ಮಾಡುತ್ತಿದ್ದೇವೆ. ಮಾನವ ಹಕ್ಕುಗಳ ಆಯೋಗ, ಮಹಿಳಾ ಆಯೋಗ, ಅಂಗವಿಕಲ ಆಯೋಗದವರು ಸುಮೊಟೊ ಪ್ರಕರಣವನ್ನು ಈಗಾಗಲೇ ದಾಖಲಿಸಬೇಕಿತ್ತು. ಆದರೆ ಅದರ ಕುರಿತು ಮಾಹಿತಿಯೇ ಇಲ್ಲ” ಎಂದು ವಿಷಾದಿಸಿದರು.

ಜಯಕರ್ನಾಟಕ ವಿಕಲ ಚೇತನರ ರಕ್ಷಣಾ ವೇದಿಕೆ ಅಧ್ಯಕ್ಷ ರವಿಕುಮಾರ್ ಗದಗಿನ್‌ ಮಾತನಾಡಿ, “ಅಂಗವಿಕಲರ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿವೆ. ಕಲ್ಬುರ್ಗಿಯಲ್ಲಿ ಒಂದು ಪ್ರಕರಣ ನಡೆದಿತ್ತು. ತನಗಾದ ಅನ್ಯಾಯವನ್ನು ಹೇಳಿಕೊಂಡ ವಿಕಲಚೇತನ ವ್ಯಕ್ತಿಯನ್ನು ಪೊಲೀಸರು ಶೋಷಿಸಿದ್ದರು. ಆತನಿಂದ ದುಡ್ಡು ಕಿತ್ತುಕೊಂಡಿದ್ದರು. ಲೋಕಾಯುಕ್ತದಲ್ಲಿ ಈ ಕುರಿತು ಪ್ರಕರಣ ದಾಖಲಿಸಿದ್ದೇನೆ” ಎಂದು ತಿಳಿಸಿದರು. ಜೊತೆಗೆ ತಾವು ನೀಡಿದ ದೂರುಗಳ ಮಾಹಿತಿಯನ್ನೂ ‘ನಾನುಗೌರಿ.ಕಾಂ’ ಜೊತೆ ಹಂಚಿಕೊಂಡರು.

ರವಿಕುಮಾರ್‌ ಗದುಗಿನ್‌

“ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ. ಆ ಮಹಿಳೆಗೆ ನ್ಯಾಯ ದೊರಕಿಸಬೇಕು. ಅಸಹಾಯಕರ ಮೇಲೆ ನೀವೇಕೆ ಶಕ್ತಿ ಪ್ರದರ್ಶನ ಮಾಡುತ್ತಿದ್ದೀರಿ? ಕೂಡಲೇ ಕ್ರಮ ಜರುಗಿಸಬೇಕು. ಸಸ್ಪೆಂಡ್‌ ಮಾಡಿದ ಮಾತ್ರಕ್ಕೆ ಪ್ರಕರಣ ಮುಗಿಯುವುದಿಲ್ಲ” ಎನ್ನುತ್ತಾರೆ ರವಿಕುಮಾರ್‌ ಗದುಗಿನ್‌.


ಇದನ್ನೂ ಓದಿರಿ: ಬೆಂಗಳೂರು: ವಿಕಲಾಂಗ ಮಹಿಳೆಯ ಮೇಲೆ ಟ್ರಾಫಿಕ್‌ ಎಎಸ್‌ಐ ಹಲ್ಲೆ; ಮಹಿಳೆಯ ಮೇಲೆಯೇ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...