Homeಕರ್ನಾಟಕ"ಎಎಸ್‌ಐ ವಿರುದ್ಧ ವಿಕಲಾಂಗ ಚೇತನರ ಆಯೋಗ ಸ್ವಯಂಪ್ರೇರಿತ ಕೇಸ್ ದಾಖಲಿಸಲಿ"

“ಎಎಸ್‌ಐ ವಿರುದ್ಧ ವಿಕಲಾಂಗ ಚೇತನರ ಆಯೋಗ ಸ್ವಯಂಪ್ರೇರಿತ ಕೇಸ್ ದಾಖಲಿಸಲಿ”

ವಿಕಲಾಂಗ ಮಹಿಳೆಯ ಮೇಲೆ ಹಲ್ಲೆ ನಡೆಸಿರುವ ಟ್ರಾಫಿಕ್‌ ಪೊಲೀಸ್ ಅಧಿಕಾರಿಯ ವಿರುದ್ಧ ಸುಮೊಟೊ ಪ್ರಕರಣ ದಾಖಲಾಗಬೇಕು ಎಂದು ವಿಕಲಾಂಗ ಚೇತನರ ಪರ ಹೋರಾಡುತ್ತಿರುವ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.

- Advertisement -
- Advertisement -

ವಿಕಲಾಂಗ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿಯ ವಿರುದ್ಧ ಸುಮೊಟೊ (ಸ್ವಯಂಪ್ರೇರಿತ) ಪ್ರಕರಣ ದಾಖಲಿಸಿ ವಿಕಲಾಂಗ ಚೇತನರ ಮೇಲೆ ಆಗುತ್ತಿರುವ ಹಲ್ಲೆಗಳನ್ನು ತಡೆಯಬೇಕು ಎಂದು ವಿಕಲಾಂಗ ಚೇತನರ ಪರ ಹೋರಾಡುತ್ತಿರುವ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.

ಟೋಯಿಂಗ್‌ ವಾಹನದಲ್ಲಿ ಕುಳಿತ್ತಿದ್ದ ಎಎಸ್‌ಐಗೆ ಕಲ್ಲಿನಿಂದ ಹೊಡೆದ ಆರೋಪದ ಮೇಲೆ ವಿಕಲಾಂಗ ಮಹಿಳೆ ಮಂಜುಳಾ ವಿರುದ್ದ ಪ್ರಕರಣವನ್ನೂ ದಾಖಲಿಸಲಾಗಿದೆ. ಅಲ್ಲದೆ ಹಲಸೂರು ಗೇಟ್‌ ಟ್ರಾಫಿಕ್‌ ಪೊಲೀಸ್ ಠಾಣೆಯ ಎಎಸ್‌ಐ ನಾರಾಯಣ್‌  ವಿಕಲಾಂಗ ಮಹಿಳೆಗೆ ಸಾರ್ವಜನಿಕವಾಗಿ ಬೂಟು ಕಾಲಿನಿಂದ ಒದ್ದು ಅವ್ಯಾಚ್ಯ ಪದಗಳಿಂದ ನಿಂದಿಸಿರುವ ವಿಡಿಯೊ ವೈರಲ್ ಆಗಿತ್ತು.

ಎಎಸ್‌ಐ ನೀಡಿದ ದೂರಿನ ಆಧಾರದಲ್ಲಿ ಎಸ್.ಜೆ.ಪಾರ್ಕ್ ಪೊಲೀಸರು ವಿಕಲಾಂಗ ಮಹಿಳೆಯ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಎಎಸ್‌ಐ ನಾರಾಯಣ್‌ ಅವರು ಮಹಿಳೆಗೆ ಥಳಿಸಿರುವ ವಿಡಿಯೊ ವೈರಲ್‌ ಆದ ಬಳಿಕ ಸರ್ಕಾರ ಅವರನ್ನು ಅಮಾನತು ಮಾಡಲಾಗಿದೆ. ಆದರೆ ಅಮಾನತು ಆದ ಮಾತ್ರಕ್ಕೆ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಮುಖಂಡರು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ರಾಜ್ಯ ವಿಕಲಚೇತನರ ರಕ್ಷಣಾ ಸಮಿತಿ ಕಾರ್ಯಾಧ್ಯಕ್ಷರಾದ  ಚಂದ್ರಶೇಖರ್ ಪುಟ್ಟಪ್ಪ, “ನಮ್ಮ ಅಂಗವಿಕಲರ ಆಯುಕ್ತಾಲಯದಲ್ಲಿ ದೂರು ದಾಖಲಿಸುತ್ತಿದ್ದೇನೆ. ಆ ಮಹಿಳೆ ಯಾರು ಎಂಬುದು ನನಗೆ ಪರಿಚಯವಿಲ್ಲ. ಆದರೆ ಮಾಧ್ಯಮಗಳಲ್ಲಿ ಬಂದ ವರದಿಯ ಪ್ರಕಾರ ಮಹಿಳೆ ಅಂಗವಿಕಲರಾಗಿದ್ದಾರೆ. ಇದರ ಪ್ರಕಾರ ಪ್ರಕರಣ ದಾಖಲಾಗಬೇಕು. ರಕ್ಷಕನ ವೇಶದಲ್ಲಿ ಮೃಗೀಯ ವರ್ತನೆ ತೋರಿದ ಅಧಿಕಾರಿಗೆ ಶಿಕ್ಷೆಯಾಗಬೇಕು” ಎಂದರು.

“ಬರೀ ಅಮಾನತು ಮಾಡಿದರೆ ಸಾಲದು, ಸೇವೆಯಿಂದ ವಜಾಗೊಳಿಸಬೇಕು. ಒಬ್ಬರಿಗೆ ಶಿಕ್ಷೆಯಾದರೆ ಹೀಗೆ ವರ್ತಿಸುವವರೆಲ್ಲಾ ಪಾಠ ಕಲಿಯುತ್ತಾರೆ. ಸಮಾಜಕ್ಕೆ ಒಂದು ಸಂದೇಶ ಹೋಗಬೇಕಾಗಿದೆ. ಆ ಮಹಿಳೆಗೆ ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇವೆ. ಸೋಮವಾರ ವಿಕಲಾಂಗ ಚೇತನರ ಆಯುಕ್ತರನ್ನು ಭೇಟಿ ಮಾಡುತ್ತೇನೆ” ಎಂದು ಮಾಹಿತಿ ನೀಡಿದರು.

ಚಂದ್ರಶೇಖರ್ ಪುಟ್ಟಪ್ಪ

‘ಸ್ವಯಂ ಪ್ರೇರಿತ ದೂರು ದಾಖಲಿಸಲು ಒತ್ತಡ ಹಾಕುತ್ತೇವೆ’

ಕರ್ನಾಟಕ ಸರ್ಕಾರಿ, ಅರೆ ಸರ್ಕಾರಿ ಅಂಗವಿಕಲ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಶಿವಪ್ಪ ರಾಥೋಡ್‌‌ ಪ್ರತಿಕ್ರಿಯಿಸಿ, “ಅಂಗವಿಕಲರನ್ನು ಪೊಲೀಸ್ ವಾಹನದಲ್ಲಿ ಕರೆದೊಯ್ಯುವಾಗ ಕೆಲವೊಂದು ನಿಯಮಗಳನ್ನು ಪೊಲೀಸರು ಪಾಲಿಸಬೇಕು. ಈ ಪ್ರಕರಣದಲ್ಲಿ ಅದು ಸಂಪೂರ್ಣ ಉಲ್ಲಂಘನೆಯಾಗಿದೆ. ಸಸ್ಪೆಂಡಾದರೆ ಸಾಲದು. ಅಂಗವಿಕಲರ ನ್ಯಾಯಾಲಯದಲ್ಲಿ ಸುಮೊಟೊ ಕೇಸ್ ದಾಖಲಿಸಲು ವಿಕಲಾಂಗ ಚೇತನರ ಆಯುಕ್ತರ ಮೇಲೆ ಒತ್ತಡ ಹಾಕುತ್ತೇವೆ. ಪೊಲೀಸ್ ಪೇದೆಯಿಂದ ಹಿಡಿದು ಉನ್ನತ ಅಧಿಕಾರಗಳವರೆಗೆ ಅಂಗವಿಕಲರ ಜೊತೆ ಸೌಹಾರ್ದಯುತವಾಗಿ ವರ್ತಿಸಬೇಕು. ಈ ಸಂಬಂಧ ಮೇಲಧಿಕಾರಿಗಳ ಮೂಲಕ ಆದೇಶ ಹೊರಡಿಸುತ್ತೇವೆ” ಎಂದು ತಿಳಿಸಿದರು.

ಶಿವಪ್ಪ ರಾಥೋಡ್‌‌

“ಈಗಾಗಲೆ ಈ ಕುರಿತು ಆದೇಶ ಬಂದಿದೆ. ಪೊಲೀಸ್‌ ಠಾಣೆಗೆ ಬರುವ ಅಂಗವಿಕಲರ ಜೊತೆ ನಮ್ರತೆಯಿಂದ ವರ್ತಿಸಬೇಕು ಎಂದು ಆದೇಶ ಹೇಳುತ್ತದೆ. ಸದರಿ ಪ್ರಕರಣದಲ್ಲಿನ ವಿಕಲಾಂಗ ಮಹಿಳೆ ಏಕೆ ಕಲ್ಲು ತಗೆದುಕೊಂಡು ಹೊಡೆದರು ಎಂಬ ಮಾಹಿತಿ ಇಲ್ಲ. ಕಲ್ಲಿನಲ್ಲಿ ಹೊಡೆಯಬಾರದಿತ್ತು, ಆದರೆ ಹೊಡೆದಿದ್ದಾರೆ. ತಾಳ್ಮೆ ತೆಗೆದುಕೊಳ್ಳಲಾಗದೆ ಹೊಡೆದಿದ್ದಾರೋ, ಮತ್ಯಾವ ಕಾರಣಕ್ಕೆ ಹೊಡೆದಿದ್ದಾರೋ ಗೊತ್ತಿಲ್ಲ. ಹಾಗೇನಾದರೂ ಕಲ್ಲಿನಲ್ಲಿ ಹೊಡೆದಿದ್ದರೆ ಕಾನೂನು ಪ್ರಕಾರ ಕ್ರಮ ಜರುಗಿಸಬಹುದಲ್ಲ. ಇನ್ನೊಬ್ಬರಿಗೆ ಹೊಡೆಯುವ ಅಧಿಕಾರ ಕೊಟ್ಟವರು ಯಾರು? ಅಂಗವಿಕಲ ಮಹಿಳೆಗೆ ತಿಳಿವಳಿಕೆ ಇಲ್ಲದಿರಬಹುದು. ಆದರೆ ತಿಳಿವಳಿಕೆ ಇರುವ ಎಎಸ್‌ಐ ಹೀಗೆ ಮಾಡಬಹುದೇ?” ಎಂದು ಬೇಸರ ವ್ಯಕ್ತಪಡಿಸಿದರು.

“ನಾವು ಪೊಲೀಸರ ವಿರುದ್ಧ ನಿಂತಿಲ್ಲ. ಆದರೆ ಆ ಮಹಿಳೆ ಕಲ್ಲು ತಗೆದುಕೊಂಡು ಹೊಡೆಯಲು ಕಾರಣ ಏನೆಂದು ತಿಳಿಯುತ್ತಿಲ್ಲ. ಇರುವೆ ಕಚ್ಚುವುದು ನಾವು ತುಳಿದಾಗ ಮಾತ್ರ. ಇಲ್ಲದಿದ್ದರೆ ತನ್ನಪಾಡಿಗೆ ತಾನು ಹೋಗುತ್ತಿರುತ್ತಿರುತ್ತದೆ. ಹೀಗಾಗಿ ಅಂಗವಿಕಲ ಮಹಿಳೆಯ ಮಾಹಿತಿಯನ್ನು ನಾವು ಟ್ರೇಸ್ ಮಾಡುತ್ತಿದ್ದೇವೆ. ಮಾನವ ಹಕ್ಕುಗಳ ಆಯೋಗ, ಮಹಿಳಾ ಆಯೋಗ, ಅಂಗವಿಕಲ ಆಯೋಗದವರು ಸುಮೊಟೊ ಪ್ರಕರಣವನ್ನು ಈಗಾಗಲೇ ದಾಖಲಿಸಬೇಕಿತ್ತು. ಆದರೆ ಅದರ ಕುರಿತು ಮಾಹಿತಿಯೇ ಇಲ್ಲ” ಎಂದು ವಿಷಾದಿಸಿದರು.

ಜಯಕರ್ನಾಟಕ ವಿಕಲ ಚೇತನರ ರಕ್ಷಣಾ ವೇದಿಕೆ ಅಧ್ಯಕ್ಷ ರವಿಕುಮಾರ್ ಗದಗಿನ್‌ ಮಾತನಾಡಿ, “ಅಂಗವಿಕಲರ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿವೆ. ಕಲ್ಬುರ್ಗಿಯಲ್ಲಿ ಒಂದು ಪ್ರಕರಣ ನಡೆದಿತ್ತು. ತನಗಾದ ಅನ್ಯಾಯವನ್ನು ಹೇಳಿಕೊಂಡ ವಿಕಲಚೇತನ ವ್ಯಕ್ತಿಯನ್ನು ಪೊಲೀಸರು ಶೋಷಿಸಿದ್ದರು. ಆತನಿಂದ ದುಡ್ಡು ಕಿತ್ತುಕೊಂಡಿದ್ದರು. ಲೋಕಾಯುಕ್ತದಲ್ಲಿ ಈ ಕುರಿತು ಪ್ರಕರಣ ದಾಖಲಿಸಿದ್ದೇನೆ” ಎಂದು ತಿಳಿಸಿದರು. ಜೊತೆಗೆ ತಾವು ನೀಡಿದ ದೂರುಗಳ ಮಾಹಿತಿಯನ್ನೂ ‘ನಾನುಗೌರಿ.ಕಾಂ’ ಜೊತೆ ಹಂಚಿಕೊಂಡರು.

ರವಿಕುಮಾರ್‌ ಗದುಗಿನ್‌

“ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ. ಆ ಮಹಿಳೆಗೆ ನ್ಯಾಯ ದೊರಕಿಸಬೇಕು. ಅಸಹಾಯಕರ ಮೇಲೆ ನೀವೇಕೆ ಶಕ್ತಿ ಪ್ರದರ್ಶನ ಮಾಡುತ್ತಿದ್ದೀರಿ? ಕೂಡಲೇ ಕ್ರಮ ಜರುಗಿಸಬೇಕು. ಸಸ್ಪೆಂಡ್‌ ಮಾಡಿದ ಮಾತ್ರಕ್ಕೆ ಪ್ರಕರಣ ಮುಗಿಯುವುದಿಲ್ಲ” ಎನ್ನುತ್ತಾರೆ ರವಿಕುಮಾರ್‌ ಗದುಗಿನ್‌.


ಇದನ್ನೂ ಓದಿರಿ: ಬೆಂಗಳೂರು: ವಿಕಲಾಂಗ ಮಹಿಳೆಯ ಮೇಲೆ ಟ್ರಾಫಿಕ್‌ ಎಎಸ್‌ಐ ಹಲ್ಲೆ; ಮಹಿಳೆಯ ಮೇಲೆಯೇ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...