Homeಮುಖಪುಟಮುಂದಿನ ಆದೇಶದವರೆಗೆ ಮೂರು ಕೃಷಿ ಕಾನೂನುಗಳ ಜಾರಿಯನ್ನು ಸ್ಥಗಿತಗೊಳಿಸುತ್ತೇವೆ: ಸುಪ್ರೀಂ ಕೋರ್ಟ್‌

ಮುಂದಿನ ಆದೇಶದವರೆಗೆ ಮೂರು ಕೃಷಿ ಕಾನೂನುಗಳ ಜಾರಿಯನ್ನು ಸ್ಥಗಿತಗೊಳಿಸುತ್ತೇವೆ: ಸುಪ್ರೀಂ ಕೋರ್ಟ್‌

ಇದು ಬ್ರೇಕಿಂಗ್ ಸುದ್ದಿ. ಹೆಚ್ಚಿನ ಮಾಹಿತಿಗಳು ಅಪ್‌ಡೇಟ್‌ ಆಗುತ್ತವೆ. ರಿಫ್ರೆಶ್ ಮಾಡಿ

- Advertisement -
- Advertisement -

ಮುಂದಿನ ಆದೇಶದವರೆಗೆ ನಾವು ಮೂರು ಕೃಷಿ ಕಾನೂನುಗಳ ಅನುಷ್ಠಾನವನ್ನು ಸ್ಥಗಿತಗೊಳಿಸಲಿದ್ದೇವೆ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎಸ್‌.ಎ ಬೋಬ್ಡೆ ಹೇಳಿದ್ದಾರೆ.

ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತ ಪ್ರಕರಣದ ತೀರ್ಪು ನೀಡುವ ವೇಳೆ “ನಾವು ಇಲ್ಲಿರುವುದು ಸಮಸ್ಯೆಯನ್ನು ಬಗೆಹರಿಸಲಿಕ್ಕೆ. ಹಾಗಾಗಿ ಪ್ರತಿಭಟನಾಕಾರರು ಮತ್ತು ಕೇಂದ್ರ ಸರ್ಕಾರದ ನಡುವೆ ಮಾತುಕತೆ ನಡೆಸಲು ಸಮಿತಿಯನ್ನು ರಚಿಸುತ್ತೇವೆ” ಎಂದು ಬೋಬ್ಡೆ ತಿಳಿಸಿದ್ದಾರೆ.

ಕೃಷಿ ಅರ್ಥಶಾಸ್ತ್ರಜ್ಞ ಅಶೋಕ್ ಗುಲಾಟಿ, ಹರ್ಸಿಮ್ರತ್ ಮನ್, ಪ್ರಮೋದ್ ಜೋಶಿ ಸೇರಿದಂತೆ ಹಲವು ಜನ ಸಮಿತಿಯಲ್ಲಿರುತ್ತಾರೆ ಎಂದು ಸಿಜೆಐ ನೇತೃತ್ವದ ನ್ಯಾಯಪೀಠ ಉಲ್ಲೇಖಿಸಿದೆ. ಸುಪ್ರೀಂನ ಪೂರ್ಣ ಆದೇಶ ಸಂಜೆಯ ವೇಳೆಗೆ ಲಭ್ಯವಾಗಲಿದೆ.

“ನಾವು ಸಮಸ್ಯೆಯನ್ನು ಬಗೆಹರಿಸಲು ಇಲ್ಲಿದ್ದೇವೆ. ನೀವು ಅನಿರ್ದಿಷ್ಠಾವಧಿ ಪ್ರತಿಭಟನೆ ಮಾಡಲು ಬಯಸಿದರೆ ಮಾಡಿ. ಈ ಸಮಸ್ಯೆಯನ್ನು ಬಗೆಹರಿಸಬೇಕೆಂಬ ನೈಜ ಕಾಳಜಿಯಿರುವವರು ಸಮಿತಿಯಲ್ಲಿರುತ್ತಾರೆ. ಈ ಸಮಿತಿಯು ಕೃಷಿ ಕಾನೂನುಗಳನ್ನು ಅಧ್ಯಯನ ಮಾಡುತ್ತದೆಯೇ ವಿನಾಃ ನಿಮ್ಮನ್ನು ಶಿಕ್ಷಿಸುವುದಿಲ್ಲ ಅಥವಾ ಯಾವುದೇ ಆದೇಶ ನೀಡುವುದಿಲ್ಲ. ನಾವು ಹೋರಾಟನಿರತ ಸಂಘಟನೆಗಳ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಳ್ಳುತ್ತೇವೆ. ಇದರಿಂದ ಕಾಯ್ದೆಗಳ ಬಗ್ಗೆ ಸ್ಪಷ್ಟ ಚಿತ್ರಣ ಸಿಗುತ್ತದೆ” ಎಂದು ಸಿಜೆಐ ಹೇಳಿದ್ದಾರೆ.

ಗೌರವಾನ್ವಿತ ಸುಪ್ರೀಂ ಕೋರ್ಟ್‌ ಕೃಷಿ ಕಾಯ್ದೆಗಳ ಜಾರಿಯನ್ನು ತಡೆಯುವ ಸುಪ್ರೀಂ ಕೋರ್ಟ್‌ ಸಲಹೆಯನ್ನು ಎಲ್ಲ ಸಂಘಟನೆಗಳು ಸ್ವಾಗತ್ತಿಸುತ್ತವೆ. ಆದರೆ ರೈತ ಸಂಘಟನೆಗಳು ಸಾಮೂಹಿಕವಾಗಿ ಹಾಗೂ ವ್ಯಕ್ತಿಗತವಾಗಿ ಸುಪ್ರೀಂ ಕೋರ್ಟ್‌ ನೇಮಿಸಲಿರುವ ಸಮಿತಿಯ ಸಭೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ರೈತ ಮುಖಂಡರ ಹೇಳಿಕೆಯ ಹಿನ್ನೆಲೆಯಲ್ಲಿ ಸಿಜೆಐ ಮೇಲಿನ ಮಾತುಗಳನ್ನಾಡಿದ್ದಾರೆ.

ಗುತ್ತಿಗೆ ಕೃಷಿ ಪದ್ದತಿಯಿಂದ ರೈತರು ಭೂಮಿ ಕಳೆದುಕೊಳ್ಳುವ ಭಯದಲ್ಲಿರುವುದರಿಂದ ಆ ಕಾಯ್ದೆಯ ಜಾರಿಗೆ ಮಧ್ಯಂತರ ತಡೆ ನೀಡುತ್ತಿದ್ದೇವೆ. ನಾವು ಈ ಕಾಯ್ದೆಗಳ ಸಿಂಧುತ್ವದ ಬಗ್ಗೆ ಗಮನವಹಿಸುತ್ತೇವೆ ಜೊತೆಗೆ ಪ್ರತಿಭಟನೆಯಿಂದ ತೊಂದರೆಗೊಳಗಾಗುವ ನಾಗರಿಕರ ಜೀವನ ಮತ್ತು ಅವರ ಆಸ್ತಿಗಳ ಬಗ್ಗೆಯೂ ಕಾಳಜಿ ವಹಿಸುತ್ತೇವೆ. ನಮಗಿರುವ ಅಧಿಕಾರ ಬಳಸಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ನ್ಯಾಯಪೀಠ ಹೇಳಿದೆ.

ಸರ್ಕಾರದ ಪರವಾಗಿ ಹಾಜರಾದ ವಕೀಲ ಹರೀಶ್ ಸಾಳ್ವೆ “ಎಂಎಸ್‌ಪಿ ಕೊನೆಗೊಳ್ಳುವುದಿಲ್ಲ ಹಾಗೂ ಉತ್ತಮ ಗುಣಮಟ್ಟದ ಬೆಳೆ ಬೆಳೆಯಲಾಗದ ರೈತರ ಜಮೀನನ್ನು ಗುತ್ತಿಗೆ ಕೃಷಿಗೆ ತೆಗೆದುಕೊಂಡವರು ಮಾರಲಾಗುವುದಿಲ್ಲ” ಎಂದು ಸ್ಪಷ್ಟನೆ ನೀಡಿದರು.

ಮುಂದುವರಿದು ಈ ವಿಚಾರದ ತೀರ್ಪು ನೀಡುವಾಗ ಇದು ಯಾರಬ್ಬರದೋ ಗೆಲುವು ಎಂದು ಎಂದು ನಿರ್ಧರಿಸಬಾರದು. ಕಾಯ್ದೆಗಳಲ್ಲಿದ್ದ ಕೆಲ ದೋಷಗಳನ್ನು ಸರಿಪಡಿಸಲಾಗುವುದು ಎಂದು ಕರೆಯಬೇಕು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಇದು ನ್ಯಾಯವಂತಿಕೆಯ ಗೆಲುವು ಮಾತ್ರ ಎಂದರು.

ಅಟಾರ್ನಿ ಜನರಲ್ ರವರು ಖಲಿಸ್ತಾನಿ ಚಳವಳಿಗೆ ದೇಣಿಗೆ ಸಂಗ್ರಹಿಸಿದ ಸಿಖ್ಸ್ ಫಾರ್‍ ಜಸ್ಟೀಸ್ ಎಂಬ ಸಂಘಟನೆಯ ಇಲ್ಲಿದೆ ಎಂದು ಬರೆದಿದ್ದೀರಿ. ಅದಕ್ಕೆ ಆಧಾರ ಒದಗಿಸುವಿರಾ ಎಂಬ ಸಿಜೆಐ ಪ್ರಶ್ನೆಗೆ ಹೌದು ಅಫಿಡವಿಟ್ ಸಲ್ಲಿಸುತ್ತೇವೆ ಎಂದಿದ್ದಲ್ಲದೆ ಕಾಯ್ದೆಗೆ ದಕ್ಷಿಣ ಭಾರತದಲ್ಲಿ ಕರ್ನಾಟಕ ಮತ್ತು ಕೇರಳದಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ ಎಂದರು.

ಇದಕ್ಕೆ ಉತ್ತರಿಸಿದ ವಕೀಲ ವಿಲ್ಸನ್ ಕಾಯ್ದೆ ವಿರುದ್ಧ ದೊಡ್ಡ ಪ್ರತಿಭಟನೆಗಳಾಗುತ್ತಿವೆ. ವಿಜಯವಾಡ ಹೊತ್ತಿ ಉರಿಯುತ್ತಿದೆ. ಬೇಕಾದರೆ ನಿಮಗೆ ನಾನು ಚಿತ್ರಗಳನ್ನು ತೋರಿಸುತ್ತೇನೆ. ಅಟಾರ್ನಿ ಜನರಲ್‌ರವರ ಹೇಳಿಕೆ ಸರಿಯಾಗಿಲ್ಲ ಎಂದರು.

ಇನ್ನು ಮಹಿಳೆಯರು, ಮಕ್ಕಳು ಮತ್ತು ವೃದ್ಧರು ಪ್ರತಿಭಟನೆಯಲ್ಲಿ ಭಾಗವಹಿಸುವುದಿಲ್ಲ ಎಂದು ಎಪಿ ಸಿಂಗ್ ಹೇಳಿದ್ದಾರೆ ಎಂದು ಸಿಜೆಐ ಬೋಬ್ಡೆ ಹೇಳಿದ್ದಾರೆ.

ಈ ಕುರಿತು ರೈತ ಮುಖಂಡ ಮತ್ತು ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರಾದ ಯೋಗೇಂದ್ರ ಯಾದವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು “ಎಪಿ ಸಿಂಗ್ ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳುತ್ತಿದ್ದಾರೆ. ಇದನ್ನು ಓದಿದ ನಂತರ ನಾನು ಬಿಕೆಯು ಅಧ್ಯಕ್ಷ ಭಾನು ಅವರೊಂದಿಗೆ ಮಾತನಾಡಿದೆ. ಅವರು ನಿನ್ನೆ ಅಥವಾ ಇಂದು ಎಪಿ ಸಿಂಗ್‌ರವರೊಂದಿಗೆ ಮಾತನಾಡಲಿಲ್ಲ ಮತ್ತು ಅವರ ಸಂಘಟನೆಯು ಮಹಿಳೆಯರು ಮತ್ತು ಹಿರಿಯರನ್ನು ಪ್ರತಿಭಟನೆಯಿಂದ ಹಿಂತಿರುಗಿ ಎಂದು ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ನನಗೆ ದೃಢಪಡಿಸಿದರು” ಎಂದಿದ್ದಾರೆ.

ಇನ್ನು ವಕೀಲರಾದ ದವೆಯವರು ರೈತರು ಟ್ರಾಕ್ಟರ್‌ ರ್ಯಾಲಿಯನ್ನು ಆಯೋಜಿಸುತ್ತಿಲ್ಲ ಎಂದಿದ್ದಾರೆ. ತಮ್ಮ ಕಕ್ಷಿದಾರರು (ರೈತರು) ಸಮಿತಿಯ ಮುಂದೆ ಹಾಜರಾಗಲಿದ್ದಾರೆ ಎಂದಿದ್ದಾರೆ ಎಂದೂ ಸಿಜೆಐ ಹೇಳಿದ್ದಾರೆ.


ಇದನ್ನೂ ಓದಿ: No appeal only Repeal: ರೈತ ಹೋರಾಟದ ಇಂದಿನ ಹ್ಯಾಷ್‌ಟ್ಯಾಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...