Homeಮುಖಪುಟಮುಂದಿನ ಆದೇಶದವರೆಗೆ ಮೂರು ಕೃಷಿ ಕಾನೂನುಗಳ ಜಾರಿಯನ್ನು ಸ್ಥಗಿತಗೊಳಿಸುತ್ತೇವೆ: ಸುಪ್ರೀಂ ಕೋರ್ಟ್‌

ಮುಂದಿನ ಆದೇಶದವರೆಗೆ ಮೂರು ಕೃಷಿ ಕಾನೂನುಗಳ ಜಾರಿಯನ್ನು ಸ್ಥಗಿತಗೊಳಿಸುತ್ತೇವೆ: ಸುಪ್ರೀಂ ಕೋರ್ಟ್‌

ಇದು ಬ್ರೇಕಿಂಗ್ ಸುದ್ದಿ. ಹೆಚ್ಚಿನ ಮಾಹಿತಿಗಳು ಅಪ್‌ಡೇಟ್‌ ಆಗುತ್ತವೆ. ರಿಫ್ರೆಶ್ ಮಾಡಿ

- Advertisement -
- Advertisement -

ಮುಂದಿನ ಆದೇಶದವರೆಗೆ ನಾವು ಮೂರು ಕೃಷಿ ಕಾನೂನುಗಳ ಅನುಷ್ಠಾನವನ್ನು ಸ್ಥಗಿತಗೊಳಿಸಲಿದ್ದೇವೆ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎಸ್‌.ಎ ಬೋಬ್ಡೆ ಹೇಳಿದ್ದಾರೆ.

ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತ ಪ್ರಕರಣದ ತೀರ್ಪು ನೀಡುವ ವೇಳೆ “ನಾವು ಇಲ್ಲಿರುವುದು ಸಮಸ್ಯೆಯನ್ನು ಬಗೆಹರಿಸಲಿಕ್ಕೆ. ಹಾಗಾಗಿ ಪ್ರತಿಭಟನಾಕಾರರು ಮತ್ತು ಕೇಂದ್ರ ಸರ್ಕಾರದ ನಡುವೆ ಮಾತುಕತೆ ನಡೆಸಲು ಸಮಿತಿಯನ್ನು ರಚಿಸುತ್ತೇವೆ” ಎಂದು ಬೋಬ್ಡೆ ತಿಳಿಸಿದ್ದಾರೆ.

ಕೃಷಿ ಅರ್ಥಶಾಸ್ತ್ರಜ್ಞ ಅಶೋಕ್ ಗುಲಾಟಿ, ಹರ್ಸಿಮ್ರತ್ ಮನ್, ಪ್ರಮೋದ್ ಜೋಶಿ ಸೇರಿದಂತೆ ಹಲವು ಜನ ಸಮಿತಿಯಲ್ಲಿರುತ್ತಾರೆ ಎಂದು ಸಿಜೆಐ ನೇತೃತ್ವದ ನ್ಯಾಯಪೀಠ ಉಲ್ಲೇಖಿಸಿದೆ. ಸುಪ್ರೀಂನ ಪೂರ್ಣ ಆದೇಶ ಸಂಜೆಯ ವೇಳೆಗೆ ಲಭ್ಯವಾಗಲಿದೆ.

“ನಾವು ಸಮಸ್ಯೆಯನ್ನು ಬಗೆಹರಿಸಲು ಇಲ್ಲಿದ್ದೇವೆ. ನೀವು ಅನಿರ್ದಿಷ್ಠಾವಧಿ ಪ್ರತಿಭಟನೆ ಮಾಡಲು ಬಯಸಿದರೆ ಮಾಡಿ. ಈ ಸಮಸ್ಯೆಯನ್ನು ಬಗೆಹರಿಸಬೇಕೆಂಬ ನೈಜ ಕಾಳಜಿಯಿರುವವರು ಸಮಿತಿಯಲ್ಲಿರುತ್ತಾರೆ. ಈ ಸಮಿತಿಯು ಕೃಷಿ ಕಾನೂನುಗಳನ್ನು ಅಧ್ಯಯನ ಮಾಡುತ್ತದೆಯೇ ವಿನಾಃ ನಿಮ್ಮನ್ನು ಶಿಕ್ಷಿಸುವುದಿಲ್ಲ ಅಥವಾ ಯಾವುದೇ ಆದೇಶ ನೀಡುವುದಿಲ್ಲ. ನಾವು ಹೋರಾಟನಿರತ ಸಂಘಟನೆಗಳ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಳ್ಳುತ್ತೇವೆ. ಇದರಿಂದ ಕಾಯ್ದೆಗಳ ಬಗ್ಗೆ ಸ್ಪಷ್ಟ ಚಿತ್ರಣ ಸಿಗುತ್ತದೆ” ಎಂದು ಸಿಜೆಐ ಹೇಳಿದ್ದಾರೆ.

ಗೌರವಾನ್ವಿತ ಸುಪ್ರೀಂ ಕೋರ್ಟ್‌ ಕೃಷಿ ಕಾಯ್ದೆಗಳ ಜಾರಿಯನ್ನು ತಡೆಯುವ ಸುಪ್ರೀಂ ಕೋರ್ಟ್‌ ಸಲಹೆಯನ್ನು ಎಲ್ಲ ಸಂಘಟನೆಗಳು ಸ್ವಾಗತ್ತಿಸುತ್ತವೆ. ಆದರೆ ರೈತ ಸಂಘಟನೆಗಳು ಸಾಮೂಹಿಕವಾಗಿ ಹಾಗೂ ವ್ಯಕ್ತಿಗತವಾಗಿ ಸುಪ್ರೀಂ ಕೋರ್ಟ್‌ ನೇಮಿಸಲಿರುವ ಸಮಿತಿಯ ಸಭೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ರೈತ ಮುಖಂಡರ ಹೇಳಿಕೆಯ ಹಿನ್ನೆಲೆಯಲ್ಲಿ ಸಿಜೆಐ ಮೇಲಿನ ಮಾತುಗಳನ್ನಾಡಿದ್ದಾರೆ.

ಗುತ್ತಿಗೆ ಕೃಷಿ ಪದ್ದತಿಯಿಂದ ರೈತರು ಭೂಮಿ ಕಳೆದುಕೊಳ್ಳುವ ಭಯದಲ್ಲಿರುವುದರಿಂದ ಆ ಕಾಯ್ದೆಯ ಜಾರಿಗೆ ಮಧ್ಯಂತರ ತಡೆ ನೀಡುತ್ತಿದ್ದೇವೆ. ನಾವು ಈ ಕಾಯ್ದೆಗಳ ಸಿಂಧುತ್ವದ ಬಗ್ಗೆ ಗಮನವಹಿಸುತ್ತೇವೆ ಜೊತೆಗೆ ಪ್ರತಿಭಟನೆಯಿಂದ ತೊಂದರೆಗೊಳಗಾಗುವ ನಾಗರಿಕರ ಜೀವನ ಮತ್ತು ಅವರ ಆಸ್ತಿಗಳ ಬಗ್ಗೆಯೂ ಕಾಳಜಿ ವಹಿಸುತ್ತೇವೆ. ನಮಗಿರುವ ಅಧಿಕಾರ ಬಳಸಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ನ್ಯಾಯಪೀಠ ಹೇಳಿದೆ.

ಸರ್ಕಾರದ ಪರವಾಗಿ ಹಾಜರಾದ ವಕೀಲ ಹರೀಶ್ ಸಾಳ್ವೆ “ಎಂಎಸ್‌ಪಿ ಕೊನೆಗೊಳ್ಳುವುದಿಲ್ಲ ಹಾಗೂ ಉತ್ತಮ ಗುಣಮಟ್ಟದ ಬೆಳೆ ಬೆಳೆಯಲಾಗದ ರೈತರ ಜಮೀನನ್ನು ಗುತ್ತಿಗೆ ಕೃಷಿಗೆ ತೆಗೆದುಕೊಂಡವರು ಮಾರಲಾಗುವುದಿಲ್ಲ” ಎಂದು ಸ್ಪಷ್ಟನೆ ನೀಡಿದರು.

ಮುಂದುವರಿದು ಈ ವಿಚಾರದ ತೀರ್ಪು ನೀಡುವಾಗ ಇದು ಯಾರಬ್ಬರದೋ ಗೆಲುವು ಎಂದು ಎಂದು ನಿರ್ಧರಿಸಬಾರದು. ಕಾಯ್ದೆಗಳಲ್ಲಿದ್ದ ಕೆಲ ದೋಷಗಳನ್ನು ಸರಿಪಡಿಸಲಾಗುವುದು ಎಂದು ಕರೆಯಬೇಕು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಇದು ನ್ಯಾಯವಂತಿಕೆಯ ಗೆಲುವು ಮಾತ್ರ ಎಂದರು.

ಅಟಾರ್ನಿ ಜನರಲ್ ರವರು ಖಲಿಸ್ತಾನಿ ಚಳವಳಿಗೆ ದೇಣಿಗೆ ಸಂಗ್ರಹಿಸಿದ ಸಿಖ್ಸ್ ಫಾರ್‍ ಜಸ್ಟೀಸ್ ಎಂಬ ಸಂಘಟನೆಯ ಇಲ್ಲಿದೆ ಎಂದು ಬರೆದಿದ್ದೀರಿ. ಅದಕ್ಕೆ ಆಧಾರ ಒದಗಿಸುವಿರಾ ಎಂಬ ಸಿಜೆಐ ಪ್ರಶ್ನೆಗೆ ಹೌದು ಅಫಿಡವಿಟ್ ಸಲ್ಲಿಸುತ್ತೇವೆ ಎಂದಿದ್ದಲ್ಲದೆ ಕಾಯ್ದೆಗೆ ದಕ್ಷಿಣ ಭಾರತದಲ್ಲಿ ಕರ್ನಾಟಕ ಮತ್ತು ಕೇರಳದಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ ಎಂದರು.

ಇದಕ್ಕೆ ಉತ್ತರಿಸಿದ ವಕೀಲ ವಿಲ್ಸನ್ ಕಾಯ್ದೆ ವಿರುದ್ಧ ದೊಡ್ಡ ಪ್ರತಿಭಟನೆಗಳಾಗುತ್ತಿವೆ. ವಿಜಯವಾಡ ಹೊತ್ತಿ ಉರಿಯುತ್ತಿದೆ. ಬೇಕಾದರೆ ನಿಮಗೆ ನಾನು ಚಿತ್ರಗಳನ್ನು ತೋರಿಸುತ್ತೇನೆ. ಅಟಾರ್ನಿ ಜನರಲ್‌ರವರ ಹೇಳಿಕೆ ಸರಿಯಾಗಿಲ್ಲ ಎಂದರು.

ಇನ್ನು ಮಹಿಳೆಯರು, ಮಕ್ಕಳು ಮತ್ತು ವೃದ್ಧರು ಪ್ರತಿಭಟನೆಯಲ್ಲಿ ಭಾಗವಹಿಸುವುದಿಲ್ಲ ಎಂದು ಎಪಿ ಸಿಂಗ್ ಹೇಳಿದ್ದಾರೆ ಎಂದು ಸಿಜೆಐ ಬೋಬ್ಡೆ ಹೇಳಿದ್ದಾರೆ.

ಈ ಕುರಿತು ರೈತ ಮುಖಂಡ ಮತ್ತು ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರಾದ ಯೋಗೇಂದ್ರ ಯಾದವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು “ಎಪಿ ಸಿಂಗ್ ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳುತ್ತಿದ್ದಾರೆ. ಇದನ್ನು ಓದಿದ ನಂತರ ನಾನು ಬಿಕೆಯು ಅಧ್ಯಕ್ಷ ಭಾನು ಅವರೊಂದಿಗೆ ಮಾತನಾಡಿದೆ. ಅವರು ನಿನ್ನೆ ಅಥವಾ ಇಂದು ಎಪಿ ಸಿಂಗ್‌ರವರೊಂದಿಗೆ ಮಾತನಾಡಲಿಲ್ಲ ಮತ್ತು ಅವರ ಸಂಘಟನೆಯು ಮಹಿಳೆಯರು ಮತ್ತು ಹಿರಿಯರನ್ನು ಪ್ರತಿಭಟನೆಯಿಂದ ಹಿಂತಿರುಗಿ ಎಂದು ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ನನಗೆ ದೃಢಪಡಿಸಿದರು” ಎಂದಿದ್ದಾರೆ.

ಇನ್ನು ವಕೀಲರಾದ ದವೆಯವರು ರೈತರು ಟ್ರಾಕ್ಟರ್‌ ರ್ಯಾಲಿಯನ್ನು ಆಯೋಜಿಸುತ್ತಿಲ್ಲ ಎಂದಿದ್ದಾರೆ. ತಮ್ಮ ಕಕ್ಷಿದಾರರು (ರೈತರು) ಸಮಿತಿಯ ಮುಂದೆ ಹಾಜರಾಗಲಿದ್ದಾರೆ ಎಂದಿದ್ದಾರೆ ಎಂದೂ ಸಿಜೆಐ ಹೇಳಿದ್ದಾರೆ.


ಇದನ್ನೂ ಓದಿ: No appeal only Repeal: ರೈತ ಹೋರಾಟದ ಇಂದಿನ ಹ್ಯಾಷ್‌ಟ್ಯಾಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...