Homeಮುಖಪುಟಮುಂದಿನ ಆದೇಶದವರೆಗೆ ಮೂರು ಕೃಷಿ ಕಾನೂನುಗಳ ಜಾರಿಯನ್ನು ಸ್ಥಗಿತಗೊಳಿಸುತ್ತೇವೆ: ಸುಪ್ರೀಂ ಕೋರ್ಟ್‌

ಮುಂದಿನ ಆದೇಶದವರೆಗೆ ಮೂರು ಕೃಷಿ ಕಾನೂನುಗಳ ಜಾರಿಯನ್ನು ಸ್ಥಗಿತಗೊಳಿಸುತ್ತೇವೆ: ಸುಪ್ರೀಂ ಕೋರ್ಟ್‌

ಇದು ಬ್ರೇಕಿಂಗ್ ಸುದ್ದಿ. ಹೆಚ್ಚಿನ ಮಾಹಿತಿಗಳು ಅಪ್‌ಡೇಟ್‌ ಆಗುತ್ತವೆ. ರಿಫ್ರೆಶ್ ಮಾಡಿ

- Advertisement -
- Advertisement -

ಮುಂದಿನ ಆದೇಶದವರೆಗೆ ನಾವು ಮೂರು ಕೃಷಿ ಕಾನೂನುಗಳ ಅನುಷ್ಠಾನವನ್ನು ಸ್ಥಗಿತಗೊಳಿಸಲಿದ್ದೇವೆ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎಸ್‌.ಎ ಬೋಬ್ಡೆ ಹೇಳಿದ್ದಾರೆ.

ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತ ಪ್ರಕರಣದ ತೀರ್ಪು ನೀಡುವ ವೇಳೆ “ನಾವು ಇಲ್ಲಿರುವುದು ಸಮಸ್ಯೆಯನ್ನು ಬಗೆಹರಿಸಲಿಕ್ಕೆ. ಹಾಗಾಗಿ ಪ್ರತಿಭಟನಾಕಾರರು ಮತ್ತು ಕೇಂದ್ರ ಸರ್ಕಾರದ ನಡುವೆ ಮಾತುಕತೆ ನಡೆಸಲು ಸಮಿತಿಯನ್ನು ರಚಿಸುತ್ತೇವೆ” ಎಂದು ಬೋಬ್ಡೆ ತಿಳಿಸಿದ್ದಾರೆ.

ಕೃಷಿ ಅರ್ಥಶಾಸ್ತ್ರಜ್ಞ ಅಶೋಕ್ ಗುಲಾಟಿ, ಹರ್ಸಿಮ್ರತ್ ಮನ್, ಪ್ರಮೋದ್ ಜೋಶಿ ಸೇರಿದಂತೆ ಹಲವು ಜನ ಸಮಿತಿಯಲ್ಲಿರುತ್ತಾರೆ ಎಂದು ಸಿಜೆಐ ನೇತೃತ್ವದ ನ್ಯಾಯಪೀಠ ಉಲ್ಲೇಖಿಸಿದೆ. ಸುಪ್ರೀಂನ ಪೂರ್ಣ ಆದೇಶ ಸಂಜೆಯ ವೇಳೆಗೆ ಲಭ್ಯವಾಗಲಿದೆ.

“ನಾವು ಸಮಸ್ಯೆಯನ್ನು ಬಗೆಹರಿಸಲು ಇಲ್ಲಿದ್ದೇವೆ. ನೀವು ಅನಿರ್ದಿಷ್ಠಾವಧಿ ಪ್ರತಿಭಟನೆ ಮಾಡಲು ಬಯಸಿದರೆ ಮಾಡಿ. ಈ ಸಮಸ್ಯೆಯನ್ನು ಬಗೆಹರಿಸಬೇಕೆಂಬ ನೈಜ ಕಾಳಜಿಯಿರುವವರು ಸಮಿತಿಯಲ್ಲಿರುತ್ತಾರೆ. ಈ ಸಮಿತಿಯು ಕೃಷಿ ಕಾನೂನುಗಳನ್ನು ಅಧ್ಯಯನ ಮಾಡುತ್ತದೆಯೇ ವಿನಾಃ ನಿಮ್ಮನ್ನು ಶಿಕ್ಷಿಸುವುದಿಲ್ಲ ಅಥವಾ ಯಾವುದೇ ಆದೇಶ ನೀಡುವುದಿಲ್ಲ. ನಾವು ಹೋರಾಟನಿರತ ಸಂಘಟನೆಗಳ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಳ್ಳುತ್ತೇವೆ. ಇದರಿಂದ ಕಾಯ್ದೆಗಳ ಬಗ್ಗೆ ಸ್ಪಷ್ಟ ಚಿತ್ರಣ ಸಿಗುತ್ತದೆ” ಎಂದು ಸಿಜೆಐ ಹೇಳಿದ್ದಾರೆ.

ಗೌರವಾನ್ವಿತ ಸುಪ್ರೀಂ ಕೋರ್ಟ್‌ ಕೃಷಿ ಕಾಯ್ದೆಗಳ ಜಾರಿಯನ್ನು ತಡೆಯುವ ಸುಪ್ರೀಂ ಕೋರ್ಟ್‌ ಸಲಹೆಯನ್ನು ಎಲ್ಲ ಸಂಘಟನೆಗಳು ಸ್ವಾಗತ್ತಿಸುತ್ತವೆ. ಆದರೆ ರೈತ ಸಂಘಟನೆಗಳು ಸಾಮೂಹಿಕವಾಗಿ ಹಾಗೂ ವ್ಯಕ್ತಿಗತವಾಗಿ ಸುಪ್ರೀಂ ಕೋರ್ಟ್‌ ನೇಮಿಸಲಿರುವ ಸಮಿತಿಯ ಸಭೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ರೈತ ಮುಖಂಡರ ಹೇಳಿಕೆಯ ಹಿನ್ನೆಲೆಯಲ್ಲಿ ಸಿಜೆಐ ಮೇಲಿನ ಮಾತುಗಳನ್ನಾಡಿದ್ದಾರೆ.

ಗುತ್ತಿಗೆ ಕೃಷಿ ಪದ್ದತಿಯಿಂದ ರೈತರು ಭೂಮಿ ಕಳೆದುಕೊಳ್ಳುವ ಭಯದಲ್ಲಿರುವುದರಿಂದ ಆ ಕಾಯ್ದೆಯ ಜಾರಿಗೆ ಮಧ್ಯಂತರ ತಡೆ ನೀಡುತ್ತಿದ್ದೇವೆ. ನಾವು ಈ ಕಾಯ್ದೆಗಳ ಸಿಂಧುತ್ವದ ಬಗ್ಗೆ ಗಮನವಹಿಸುತ್ತೇವೆ ಜೊತೆಗೆ ಪ್ರತಿಭಟನೆಯಿಂದ ತೊಂದರೆಗೊಳಗಾಗುವ ನಾಗರಿಕರ ಜೀವನ ಮತ್ತು ಅವರ ಆಸ್ತಿಗಳ ಬಗ್ಗೆಯೂ ಕಾಳಜಿ ವಹಿಸುತ್ತೇವೆ. ನಮಗಿರುವ ಅಧಿಕಾರ ಬಳಸಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ನ್ಯಾಯಪೀಠ ಹೇಳಿದೆ.

ಸರ್ಕಾರದ ಪರವಾಗಿ ಹಾಜರಾದ ವಕೀಲ ಹರೀಶ್ ಸಾಳ್ವೆ “ಎಂಎಸ್‌ಪಿ ಕೊನೆಗೊಳ್ಳುವುದಿಲ್ಲ ಹಾಗೂ ಉತ್ತಮ ಗುಣಮಟ್ಟದ ಬೆಳೆ ಬೆಳೆಯಲಾಗದ ರೈತರ ಜಮೀನನ್ನು ಗುತ್ತಿಗೆ ಕೃಷಿಗೆ ತೆಗೆದುಕೊಂಡವರು ಮಾರಲಾಗುವುದಿಲ್ಲ” ಎಂದು ಸ್ಪಷ್ಟನೆ ನೀಡಿದರು.

ಮುಂದುವರಿದು ಈ ವಿಚಾರದ ತೀರ್ಪು ನೀಡುವಾಗ ಇದು ಯಾರಬ್ಬರದೋ ಗೆಲುವು ಎಂದು ಎಂದು ನಿರ್ಧರಿಸಬಾರದು. ಕಾಯ್ದೆಗಳಲ್ಲಿದ್ದ ಕೆಲ ದೋಷಗಳನ್ನು ಸರಿಪಡಿಸಲಾಗುವುದು ಎಂದು ಕರೆಯಬೇಕು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಇದು ನ್ಯಾಯವಂತಿಕೆಯ ಗೆಲುವು ಮಾತ್ರ ಎಂದರು.

ಅಟಾರ್ನಿ ಜನರಲ್ ರವರು ಖಲಿಸ್ತಾನಿ ಚಳವಳಿಗೆ ದೇಣಿಗೆ ಸಂಗ್ರಹಿಸಿದ ಸಿಖ್ಸ್ ಫಾರ್‍ ಜಸ್ಟೀಸ್ ಎಂಬ ಸಂಘಟನೆಯ ಇಲ್ಲಿದೆ ಎಂದು ಬರೆದಿದ್ದೀರಿ. ಅದಕ್ಕೆ ಆಧಾರ ಒದಗಿಸುವಿರಾ ಎಂಬ ಸಿಜೆಐ ಪ್ರಶ್ನೆಗೆ ಹೌದು ಅಫಿಡವಿಟ್ ಸಲ್ಲಿಸುತ್ತೇವೆ ಎಂದಿದ್ದಲ್ಲದೆ ಕಾಯ್ದೆಗೆ ದಕ್ಷಿಣ ಭಾರತದಲ್ಲಿ ಕರ್ನಾಟಕ ಮತ್ತು ಕೇರಳದಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ ಎಂದರು.

ಇದಕ್ಕೆ ಉತ್ತರಿಸಿದ ವಕೀಲ ವಿಲ್ಸನ್ ಕಾಯ್ದೆ ವಿರುದ್ಧ ದೊಡ್ಡ ಪ್ರತಿಭಟನೆಗಳಾಗುತ್ತಿವೆ. ವಿಜಯವಾಡ ಹೊತ್ತಿ ಉರಿಯುತ್ತಿದೆ. ಬೇಕಾದರೆ ನಿಮಗೆ ನಾನು ಚಿತ್ರಗಳನ್ನು ತೋರಿಸುತ್ತೇನೆ. ಅಟಾರ್ನಿ ಜನರಲ್‌ರವರ ಹೇಳಿಕೆ ಸರಿಯಾಗಿಲ್ಲ ಎಂದರು.

ಇನ್ನು ಮಹಿಳೆಯರು, ಮಕ್ಕಳು ಮತ್ತು ವೃದ್ಧರು ಪ್ರತಿಭಟನೆಯಲ್ಲಿ ಭಾಗವಹಿಸುವುದಿಲ್ಲ ಎಂದು ಎಪಿ ಸಿಂಗ್ ಹೇಳಿದ್ದಾರೆ ಎಂದು ಸಿಜೆಐ ಬೋಬ್ಡೆ ಹೇಳಿದ್ದಾರೆ.

ಈ ಕುರಿತು ರೈತ ಮುಖಂಡ ಮತ್ತು ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರಾದ ಯೋಗೇಂದ್ರ ಯಾದವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು “ಎಪಿ ಸಿಂಗ್ ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳುತ್ತಿದ್ದಾರೆ. ಇದನ್ನು ಓದಿದ ನಂತರ ನಾನು ಬಿಕೆಯು ಅಧ್ಯಕ್ಷ ಭಾನು ಅವರೊಂದಿಗೆ ಮಾತನಾಡಿದೆ. ಅವರು ನಿನ್ನೆ ಅಥವಾ ಇಂದು ಎಪಿ ಸಿಂಗ್‌ರವರೊಂದಿಗೆ ಮಾತನಾಡಲಿಲ್ಲ ಮತ್ತು ಅವರ ಸಂಘಟನೆಯು ಮಹಿಳೆಯರು ಮತ್ತು ಹಿರಿಯರನ್ನು ಪ್ರತಿಭಟನೆಯಿಂದ ಹಿಂತಿರುಗಿ ಎಂದು ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ನನಗೆ ದೃಢಪಡಿಸಿದರು” ಎಂದಿದ್ದಾರೆ.

ಇನ್ನು ವಕೀಲರಾದ ದವೆಯವರು ರೈತರು ಟ್ರಾಕ್ಟರ್‌ ರ್ಯಾಲಿಯನ್ನು ಆಯೋಜಿಸುತ್ತಿಲ್ಲ ಎಂದಿದ್ದಾರೆ. ತಮ್ಮ ಕಕ್ಷಿದಾರರು (ರೈತರು) ಸಮಿತಿಯ ಮುಂದೆ ಹಾಜರಾಗಲಿದ್ದಾರೆ ಎಂದಿದ್ದಾರೆ ಎಂದೂ ಸಿಜೆಐ ಹೇಳಿದ್ದಾರೆ.


ಇದನ್ನೂ ಓದಿ: No appeal only Repeal: ರೈತ ಹೋರಾಟದ ಇಂದಿನ ಹ್ಯಾಷ್‌ಟ್ಯಾಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...