Homeಮುಖಪುಟಮುಂದಿನ ಆದೇಶದವರೆಗೆ ಮೂರು ಕೃಷಿ ಕಾನೂನುಗಳ ಜಾರಿಯನ್ನು ಸ್ಥಗಿತಗೊಳಿಸುತ್ತೇವೆ: ಸುಪ್ರೀಂ ಕೋರ್ಟ್‌

ಮುಂದಿನ ಆದೇಶದವರೆಗೆ ಮೂರು ಕೃಷಿ ಕಾನೂನುಗಳ ಜಾರಿಯನ್ನು ಸ್ಥಗಿತಗೊಳಿಸುತ್ತೇವೆ: ಸುಪ್ರೀಂ ಕೋರ್ಟ್‌

ಇದು ಬ್ರೇಕಿಂಗ್ ಸುದ್ದಿ. ಹೆಚ್ಚಿನ ಮಾಹಿತಿಗಳು ಅಪ್‌ಡೇಟ್‌ ಆಗುತ್ತವೆ. ರಿಫ್ರೆಶ್ ಮಾಡಿ

- Advertisement -
- Advertisement -

ಮುಂದಿನ ಆದೇಶದವರೆಗೆ ನಾವು ಮೂರು ಕೃಷಿ ಕಾನೂನುಗಳ ಅನುಷ್ಠಾನವನ್ನು ಸ್ಥಗಿತಗೊಳಿಸಲಿದ್ದೇವೆ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎಸ್‌.ಎ ಬೋಬ್ಡೆ ಹೇಳಿದ್ದಾರೆ.

ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತ ಪ್ರಕರಣದ ತೀರ್ಪು ನೀಡುವ ವೇಳೆ “ನಾವು ಇಲ್ಲಿರುವುದು ಸಮಸ್ಯೆಯನ್ನು ಬಗೆಹರಿಸಲಿಕ್ಕೆ. ಹಾಗಾಗಿ ಪ್ರತಿಭಟನಾಕಾರರು ಮತ್ತು ಕೇಂದ್ರ ಸರ್ಕಾರದ ನಡುವೆ ಮಾತುಕತೆ ನಡೆಸಲು ಸಮಿತಿಯನ್ನು ರಚಿಸುತ್ತೇವೆ” ಎಂದು ಬೋಬ್ಡೆ ತಿಳಿಸಿದ್ದಾರೆ.

ಕೃಷಿ ಅರ್ಥಶಾಸ್ತ್ರಜ್ಞ ಅಶೋಕ್ ಗುಲಾಟಿ, ಹರ್ಸಿಮ್ರತ್ ಮನ್, ಪ್ರಮೋದ್ ಜೋಶಿ ಸೇರಿದಂತೆ ಹಲವು ಜನ ಸಮಿತಿಯಲ್ಲಿರುತ್ತಾರೆ ಎಂದು ಸಿಜೆಐ ನೇತೃತ್ವದ ನ್ಯಾಯಪೀಠ ಉಲ್ಲೇಖಿಸಿದೆ. ಸುಪ್ರೀಂನ ಪೂರ್ಣ ಆದೇಶ ಸಂಜೆಯ ವೇಳೆಗೆ ಲಭ್ಯವಾಗಲಿದೆ.

“ನಾವು ಸಮಸ್ಯೆಯನ್ನು ಬಗೆಹರಿಸಲು ಇಲ್ಲಿದ್ದೇವೆ. ನೀವು ಅನಿರ್ದಿಷ್ಠಾವಧಿ ಪ್ರತಿಭಟನೆ ಮಾಡಲು ಬಯಸಿದರೆ ಮಾಡಿ. ಈ ಸಮಸ್ಯೆಯನ್ನು ಬಗೆಹರಿಸಬೇಕೆಂಬ ನೈಜ ಕಾಳಜಿಯಿರುವವರು ಸಮಿತಿಯಲ್ಲಿರುತ್ತಾರೆ. ಈ ಸಮಿತಿಯು ಕೃಷಿ ಕಾನೂನುಗಳನ್ನು ಅಧ್ಯಯನ ಮಾಡುತ್ತದೆಯೇ ವಿನಾಃ ನಿಮ್ಮನ್ನು ಶಿಕ್ಷಿಸುವುದಿಲ್ಲ ಅಥವಾ ಯಾವುದೇ ಆದೇಶ ನೀಡುವುದಿಲ್ಲ. ನಾವು ಹೋರಾಟನಿರತ ಸಂಘಟನೆಗಳ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಳ್ಳುತ್ತೇವೆ. ಇದರಿಂದ ಕಾಯ್ದೆಗಳ ಬಗ್ಗೆ ಸ್ಪಷ್ಟ ಚಿತ್ರಣ ಸಿಗುತ್ತದೆ” ಎಂದು ಸಿಜೆಐ ಹೇಳಿದ್ದಾರೆ.

ಗೌರವಾನ್ವಿತ ಸುಪ್ರೀಂ ಕೋರ್ಟ್‌ ಕೃಷಿ ಕಾಯ್ದೆಗಳ ಜಾರಿಯನ್ನು ತಡೆಯುವ ಸುಪ್ರೀಂ ಕೋರ್ಟ್‌ ಸಲಹೆಯನ್ನು ಎಲ್ಲ ಸಂಘಟನೆಗಳು ಸ್ವಾಗತ್ತಿಸುತ್ತವೆ. ಆದರೆ ರೈತ ಸಂಘಟನೆಗಳು ಸಾಮೂಹಿಕವಾಗಿ ಹಾಗೂ ವ್ಯಕ್ತಿಗತವಾಗಿ ಸುಪ್ರೀಂ ಕೋರ್ಟ್‌ ನೇಮಿಸಲಿರುವ ಸಮಿತಿಯ ಸಭೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ರೈತ ಮುಖಂಡರ ಹೇಳಿಕೆಯ ಹಿನ್ನೆಲೆಯಲ್ಲಿ ಸಿಜೆಐ ಮೇಲಿನ ಮಾತುಗಳನ್ನಾಡಿದ್ದಾರೆ.

ಗುತ್ತಿಗೆ ಕೃಷಿ ಪದ್ದತಿಯಿಂದ ರೈತರು ಭೂಮಿ ಕಳೆದುಕೊಳ್ಳುವ ಭಯದಲ್ಲಿರುವುದರಿಂದ ಆ ಕಾಯ್ದೆಯ ಜಾರಿಗೆ ಮಧ್ಯಂತರ ತಡೆ ನೀಡುತ್ತಿದ್ದೇವೆ. ನಾವು ಈ ಕಾಯ್ದೆಗಳ ಸಿಂಧುತ್ವದ ಬಗ್ಗೆ ಗಮನವಹಿಸುತ್ತೇವೆ ಜೊತೆಗೆ ಪ್ರತಿಭಟನೆಯಿಂದ ತೊಂದರೆಗೊಳಗಾಗುವ ನಾಗರಿಕರ ಜೀವನ ಮತ್ತು ಅವರ ಆಸ್ತಿಗಳ ಬಗ್ಗೆಯೂ ಕಾಳಜಿ ವಹಿಸುತ್ತೇವೆ. ನಮಗಿರುವ ಅಧಿಕಾರ ಬಳಸಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ನ್ಯಾಯಪೀಠ ಹೇಳಿದೆ.

ಸರ್ಕಾರದ ಪರವಾಗಿ ಹಾಜರಾದ ವಕೀಲ ಹರೀಶ್ ಸಾಳ್ವೆ “ಎಂಎಸ್‌ಪಿ ಕೊನೆಗೊಳ್ಳುವುದಿಲ್ಲ ಹಾಗೂ ಉತ್ತಮ ಗುಣಮಟ್ಟದ ಬೆಳೆ ಬೆಳೆಯಲಾಗದ ರೈತರ ಜಮೀನನ್ನು ಗುತ್ತಿಗೆ ಕೃಷಿಗೆ ತೆಗೆದುಕೊಂಡವರು ಮಾರಲಾಗುವುದಿಲ್ಲ” ಎಂದು ಸ್ಪಷ್ಟನೆ ನೀಡಿದರು.

ಮುಂದುವರಿದು ಈ ವಿಚಾರದ ತೀರ್ಪು ನೀಡುವಾಗ ಇದು ಯಾರಬ್ಬರದೋ ಗೆಲುವು ಎಂದು ಎಂದು ನಿರ್ಧರಿಸಬಾರದು. ಕಾಯ್ದೆಗಳಲ್ಲಿದ್ದ ಕೆಲ ದೋಷಗಳನ್ನು ಸರಿಪಡಿಸಲಾಗುವುದು ಎಂದು ಕರೆಯಬೇಕು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಇದು ನ್ಯಾಯವಂತಿಕೆಯ ಗೆಲುವು ಮಾತ್ರ ಎಂದರು.

ಅಟಾರ್ನಿ ಜನರಲ್ ರವರು ಖಲಿಸ್ತಾನಿ ಚಳವಳಿಗೆ ದೇಣಿಗೆ ಸಂಗ್ರಹಿಸಿದ ಸಿಖ್ಸ್ ಫಾರ್‍ ಜಸ್ಟೀಸ್ ಎಂಬ ಸಂಘಟನೆಯ ಇಲ್ಲಿದೆ ಎಂದು ಬರೆದಿದ್ದೀರಿ. ಅದಕ್ಕೆ ಆಧಾರ ಒದಗಿಸುವಿರಾ ಎಂಬ ಸಿಜೆಐ ಪ್ರಶ್ನೆಗೆ ಹೌದು ಅಫಿಡವಿಟ್ ಸಲ್ಲಿಸುತ್ತೇವೆ ಎಂದಿದ್ದಲ್ಲದೆ ಕಾಯ್ದೆಗೆ ದಕ್ಷಿಣ ಭಾರತದಲ್ಲಿ ಕರ್ನಾಟಕ ಮತ್ತು ಕೇರಳದಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ ಎಂದರು.

ಇದಕ್ಕೆ ಉತ್ತರಿಸಿದ ವಕೀಲ ವಿಲ್ಸನ್ ಕಾಯ್ದೆ ವಿರುದ್ಧ ದೊಡ್ಡ ಪ್ರತಿಭಟನೆಗಳಾಗುತ್ತಿವೆ. ವಿಜಯವಾಡ ಹೊತ್ತಿ ಉರಿಯುತ್ತಿದೆ. ಬೇಕಾದರೆ ನಿಮಗೆ ನಾನು ಚಿತ್ರಗಳನ್ನು ತೋರಿಸುತ್ತೇನೆ. ಅಟಾರ್ನಿ ಜನರಲ್‌ರವರ ಹೇಳಿಕೆ ಸರಿಯಾಗಿಲ್ಲ ಎಂದರು.

ಇನ್ನು ಮಹಿಳೆಯರು, ಮಕ್ಕಳು ಮತ್ತು ವೃದ್ಧರು ಪ್ರತಿಭಟನೆಯಲ್ಲಿ ಭಾಗವಹಿಸುವುದಿಲ್ಲ ಎಂದು ಎಪಿ ಸಿಂಗ್ ಹೇಳಿದ್ದಾರೆ ಎಂದು ಸಿಜೆಐ ಬೋಬ್ಡೆ ಹೇಳಿದ್ದಾರೆ.

ಈ ಕುರಿತು ರೈತ ಮುಖಂಡ ಮತ್ತು ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರಾದ ಯೋಗೇಂದ್ರ ಯಾದವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು “ಎಪಿ ಸಿಂಗ್ ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳುತ್ತಿದ್ದಾರೆ. ಇದನ್ನು ಓದಿದ ನಂತರ ನಾನು ಬಿಕೆಯು ಅಧ್ಯಕ್ಷ ಭಾನು ಅವರೊಂದಿಗೆ ಮಾತನಾಡಿದೆ. ಅವರು ನಿನ್ನೆ ಅಥವಾ ಇಂದು ಎಪಿ ಸಿಂಗ್‌ರವರೊಂದಿಗೆ ಮಾತನಾಡಲಿಲ್ಲ ಮತ್ತು ಅವರ ಸಂಘಟನೆಯು ಮಹಿಳೆಯರು ಮತ್ತು ಹಿರಿಯರನ್ನು ಪ್ರತಿಭಟನೆಯಿಂದ ಹಿಂತಿರುಗಿ ಎಂದು ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ನನಗೆ ದೃಢಪಡಿಸಿದರು” ಎಂದಿದ್ದಾರೆ.

ಇನ್ನು ವಕೀಲರಾದ ದವೆಯವರು ರೈತರು ಟ್ರಾಕ್ಟರ್‌ ರ್ಯಾಲಿಯನ್ನು ಆಯೋಜಿಸುತ್ತಿಲ್ಲ ಎಂದಿದ್ದಾರೆ. ತಮ್ಮ ಕಕ್ಷಿದಾರರು (ರೈತರು) ಸಮಿತಿಯ ಮುಂದೆ ಹಾಜರಾಗಲಿದ್ದಾರೆ ಎಂದಿದ್ದಾರೆ ಎಂದೂ ಸಿಜೆಐ ಹೇಳಿದ್ದಾರೆ.


ಇದನ್ನೂ ಓದಿ: No appeal only Repeal: ರೈತ ಹೋರಾಟದ ಇಂದಿನ ಹ್ಯಾಷ್‌ಟ್ಯಾಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...