Homeಪುಸ್ತಕ ವಿಮರ್ಶೆಗಾಂಧೀಜಿಗೆ ಪ್ರಭಾವ ಬೀರಿದ ಪುಸ್ತಕ ಜಾನ್ ರಸ್ಕಿನ್‌ರ ’ಅನ್‍ಟು ದಿಸ್ ಲಾಸ್ಟ್’ ಬಗ್ಗೆ

ಗಾಂಧೀಜಿಗೆ ಪ್ರಭಾವ ಬೀರಿದ ಪುಸ್ತಕ ಜಾನ್ ರಸ್ಕಿನ್‌ರ ’ಅನ್‍ಟು ದಿಸ್ ಲಾಸ್ಟ್’ ಬಗ್ಗೆ

- Advertisement -
- Advertisement -

ಗಾಂಧೀಜಿಗೆ ಸರ್ವೋದಯವಾಗಿ ಕಂಡ ಜಾನ್ ರಸ್ಕಿನ್ ಅವರ ಅನ್ಟು ದಿಸ್ ಲಾಸ್ಟ್ ಶಿರೋಬರಹದ ಬೇರು ಬೈಬಲ್ಲಿನ ಒಬ್ಬ ಉದಾರ ಮನದ ಮಾಲಿಕನ ದೃಷ್ಟಾಂತದಲ್ಲಿದೆ. ಸ್ವರ್ಗ ಸಾಮ್ರಾಜ್ಯದ ರೂಪಕವನ್ನು ಅರ್ಥೈಸಲು ಯೇಸು ಹೇಳುವ ಕತೆ.

ದ್ರಾಕ್ಷಿತೋಟದ ಯಜಮಾನ ಕೂಲಿಯಾಳುಗಳಿಗೆ ದಿನಕ್ಕೆ ಒಂದು ಬೆಳ್ಳಿ ನಾಣ್ಯದಂತೆ ಗೊತ್ತು ಮಾಡಿ ಕೆಲಸಕ್ಕೆ ಕಳುಹಿಸುತ್ತಾನೆ. ತೋಟದೊಡೆಯ ಕೆಲಸವಿಲ್ಲದೇ ಇರುವ ಇತರರನ್ನೂ ಕಂಡು ತಡವಾಗಿದ್ದರೂ ಅವರನ್ನೂ ಕೂಲಿಗೆ ಕಳುಹಿಸುತ್ತಾನೆ. ಅದೇ ರೀತಿಯಲ್ಲಿ ಇನ್ನೂ ದಿನದ ಕೊನೆಯ ಭಾಗದಲ್ಲಿ ಬಂದು ಸೇರಿಕೊಂಡವರಿಗೆಲ್ಲಾ ಕೆಲಸಕ್ಕೆ ಸೇರಿಸಿಕೊಳ್ಳುತ್ತಾನೆ. ಸಂಜೆ ಎಲ್ಲರೂ ಹೊರಡುವಾಗ ಎಲ್ಲರಿಗೂ ಸಮನಾಗಿ ಒಂದು ಬೆಳ್ಳಿ ನಾಣ್ಯದ ಕೂಲಿಯೇ ಸಿಗುತ್ತದೆ. ಮೊದಲು ಕೆಲಸಕ್ಕೆ ಬಂದವರು ಮೊದಲು, ನಡುವೆ ಮತ್ತು ಕೊನೆಗೆ ಬಂದವರೆಲ್ಲರಿಗೂ ಒಂದೇ ಸರಿಸಮ ಕೂಲಿ ಎಂದು ಗೊಣಗಿದಾಗ ತೋಟದೊಡೆಯ ಹೇಳುತ್ತಾನೆ.

“ನಿನಗೆ ಅನ್ಯಾಯ ಮಾಡಲಿಲ್ಲ. ಒಪ್ಪಂದದ ಪ್ರಕಾರ ನಿನಗೆ ನಿನ್ನ ಬೆಳ್ಳಿನಾಣ್ಯ ಸಿಕ್ಕಿದೆ. ನಿನಗೆ ಕೊಟ್ಟಷ್ಟನ್ನು ಈ ಕಟ್ಟಕಡೆಯವನಿಗೂ ಕೊಡುವುದು ನನ್ನ ಇಷ್ಟ. ನನ್ನ ಔದಾರ್ಯ ಕಂಡು ನಿನಗೇಕೆ ಅಸೂಯೆ?”

ಈ ಕಟ್ಟ ಕಡೆಯವನಿಗೆ ಎನ್ನುವುದೇ “ಅನ್ ಟು ದಿಸ್ ಲಾಸ್ಟ್.”

ನ್ಯಾಯ ಮತ್ತು ಪ್ರಾಮಾಣಿಕತೆಗಳೆಂಬ ಮೌಲ್ಯಾಧಾರದಲ್ಲಿ ಸಂಪತ್ತನ್ನು ವ್ಯಾಖ್ಯಾನಿಸುವ ರಸ್ಕಿನ್ ಗಾಂಧಿ ಮತ್ತು ಟಾಲ್‌ ಸ್ಟಾಯ್‌ ಒಳಗೊಂಡಂತೆ ಅನೇಕಾನೇಕರನ್ನು ತಮ್ಮ ಬರಹದ ಮೂಲಕ ಪ್ರಭಾವಿಸಿದ್ದರು. ಹಾಗೆಯೇ ಅವರನ್ನು ಬಂಡವಾಳಶಾಹಿಯನ್ನು ಪ್ರತಿನಿಧಿಸುವವರು ವಿರೋಧಿಸುತ್ತಿದ್ದರು. ಸೃಷ್ಟಿಯ ಸಂರಚನೆಯಲ್ಲಿ ಕೈಗಾರಿಕೆಗಳ ಆಡಳಿತಯಂತ್ರಗಳು ಮತ್ತು ಬಂಡವಾಳಶಾಹಿಯು ಹೇಗೆ ಅಮಾನ್ಯವಾಗುತ್ತದೆ ಎಂಬ ಅರಿವನ್ನೂ ಈ ಕೃತಿಯಲ್ಲಿ ಉಸುರಿದ್ದರು.

ಎಲ್ಲಾ ಕೆಲಸಗಳನ್ನೂ ಗೌರವಿಸುತ್ತಾ ಕೊಟ್ಟೆಲ್ಲಾ ಕೆಲಸಗಳಿಗೆ ಸಮವಾಗಿ ಸಂದಾಯ ಮಾಡಬೇಕೆನ್ನುವ ರಸ್ಕಿನ್ ಪ್ರತಿಯೊಬ್ಬರನ್ನೂ ಕುಶಲಿಗಳನ್ನಾಗಿ, ವಿದ್ಯಾವಂತರನ್ನಾಗಿ ರೂಪಿಸುವುದು ಸರಕಾರದ ಕೆಲಸವೆನ್ನುತ್ತಾರೆ. ಅವರ ಆದರ್ಶವೆಂದರೆ; ಯಜಮಾನನು ತನ್ನ ಮಗನನ್ನು ವಿದ್ಯಾವಂತನನ್ನಾಗಿ, ಹಣವಂತನನ್ನಾಗಿ ಆಸ್ಥೆಯಿಂದ ರೂಪಿಸುವಂತೆ ತನ್ನ ಕೆಲಸಗಾರರನ್ನೂ ರೂಪಿಸಬೇಕು.

ಮತ್ತೊಬ್ಬರನ್ನು ಬಳಸಿಕೊಳ್ಳುತ್ತಾ ತಾನು ಸಿರಿವಂತನಾಗುವುದು ಪಾಪದ ಕೆಲಸ. ಅದು ಸರಕಾರದ ಆರ್ಥಿಕತೆಗೂ ಅನ್ಯಾಯ. ತನ್ನ ನೆರೆಯವನನ್ನು ಬಡತನಕ್ಕೆ ದೂಡುತ್ತಾ ತನ್ನನ್ನು ಶ್ರೀಮಂತಗೊಳಿಸಿಕೊಳ್ಳುವ ಯಾವುದೇ ವಿಧಾನ ಅನ್ಯಾಯ. ತಾನೊಬ್ಬ ಸಿರಿವಂತನಾಗಿ ಬಡ ಸಮಾಜದಲ್ಲಿರುವುದು ಮೌಲ್ಯಹೀನ. ಹಾಗಾಗಿ ಸಂಪತ್ತು ಎಂಬುದು ನ್ಯಾಯದ ಆಧಾರದಲ್ಲಿರಬೇಕು. ಇತರರ ದುಡಿಮೆಯಿಂದ ತಾನು ಶ್ರೀಮಂತನಾಗುವುದು ಶೀಲವಲ್ಲ.

ರಾಷ್ಟ್ರೀಯ ಸಂಪತ್ತೆನ್ನುವುದು ಕೆಲವು ಜನರ ಒಟ್ಟುಗೂಡಿಸಿದ ಸಂಪತ್ತಾಗಬಾರದು. ರಾಷ್ಟ್ರದ ಎಲ್ಲಾ ಜನರ ವಿದ್ಯಾರ್ಹತೆ, ಪ್ರತಿಭೆ, ದುಡಿಮೆಗಳಿಂದ ಕ್ರೋಢೀಕರಿಸಿರುವಂತಹ ಸಂಪತ್ತಾಗಬೇಕು. ವ್ಯಕ್ತಿಗತವಾಗಿ ಶ್ರೀಮಂತರಾಗಿರುವವರಿಂದ ಸಮಾಜಕ್ಕೆ ಎಂತಹ ಕೊಡುಗೆ ದೊರಕುತ್ತದೆ!

ವಾಣಿಜ್ಯ ವ್ಯವಹಾರವು ನ್ಯಾಯಸಮ್ಮತವಾಗಿಯೇ ನಡೆಯಬೇಕು. ಏಕೆಂದರೆ ಸೃಷ್ಟಿಯ ವ್ಯವಹಾರಗಳಲ್ಲಿ ತಾರತಮ್ಯವಿಲ್ಲ. ಅದೇರೀತಿ ನ್ಯಾಯದ ಪ್ರಜ್ಞೆಯಿಂದ ಆರ್ಥಿಕ ವ್ಯವಹಾರಗಳೂ ನಡೆಯಬೇಕು. ಆರ್ಥಿಕತೆಯೂ ಕೆಲವು ಜನರ ಕೈಯೊಡೆತನದಲ್ಲಿರದೇ ಸಹಜೀವಿಗಳೆಲ್ಲ ಸರಣಿಯಲ್ಲಿ ವ್ಯಾಪ್ತವಾಗಿ ಪ್ರಾಪ್ತಿಯಲ್ಲಿರಬೇಕು. ರಸ್ಕಿನ್ ಹೇಳುವಂತೆ ಯಾರುಯಾರನ್ನೂ ಕಡೆಯಾಗಿ ನೋಡಬಾರದು, ಯಾರು ಯಾರಿಗೂ ಗುಲಾಮರಾಗಿರಕೂಡದು. ಕೆಲವು ಜನರ ಕೈಯೊಡೆತನದಲ್ಲಿರುವ ಸಂಪತ್ತು ಹಲವು ಜನರನ್ನು ಬಡತನಕ್ಕೆ ದೂಡುತ್ತದೆ.

ರಸ್ಕಿನ್ ಧ್ವನಿಸುವುದಿಷ್ಟೇ, ಜೀವನಕ್ಕೆ ಆಧಾರವಾಗುವುದೋ ಅದೇ ಮೌಲ್ಯ. ಹಣ, ಬೆಲೆ, ಉತ್ಪಾದನೆ ಯಾವುದಾದರೂ ಜೀವಿಗಳ ಜೀವನಕ್ಕೆ ಆಧಾರವಾಗುವುದಾದರೆ ಮಾತ್ರವೇ ಅವು ಮೌಲ್ಯ. ಉಪಯೋಗಿಸದ ಸಂಪತ್ತನ್ನು ಶೇಖರಿಸಿಟ್ಟುಕೊಳ್ಳುವುದು ಸಿರಿವಂತಿಕೆಯ ರೋಗ. ಉತ್ಪಾದನೆಗಳು ಹಣವನ್ನು ಸೃಷ್ಟಿಸುವ ಆಧಾರದಲ್ಲಾಗದೇ ಬಳಕೆಯ ಆಧಾರದಲ್ಲಾದರೆ ಅದು ಉಪಯುಕ್ತ ಮತ್ತು ಮೌಲ್ಯಾಧಾರಿತವಾದ ಪ್ರಗತಿ.

ರಸ್ಕಿನ್‍ರವರ ಆರ್ಥಿಕ ತತ್ವ, ಜೀವನಕ್ಕೆ ಹೊರತಾದ ಸಂಪತ್ತಿಲ್ಲ. ಪ್ರೀತಿ, ಆನಂದ, ಅಭಿಮಾನ ಎಲ್ಲವನ್ನೂ ಒಳಗೊಳ್ಳುವ ಶಕ್ತಿಯೇ ಜೀವನವಾಗಿರುವಾಗ ದೇಶದ ಸರ್ಕಾರವೂ ಕೂಡಾ ಘನತೆಯ ಮತ್ತು ಸಂತೋಷದ ಮನುಷ್ಯರನ್ನು ತನ್ನ ನೆಲದಲ್ಲಿ ರೂಪಿಸಬೇಕು. ಇತರರ ಮರ್ಜಿಯಲ್ಲಿ ದೈನೇಸಿಯಿಂದ ಬದುಕುವಂತಹ ಪರಾವಲಂಬಿಗಳನ್ನಾಗಿ ಮಾಡುವುದಲ್ಲ.

ಇದೇ ರಸ್ಕಿನ್ನನ್ನಿಂದ ಗಾಂಧೀಜಿ ಗ್ರಹಿಸಿದ ಸರ್ವೋದಯ ತತ್ವ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...