Homeಪುಸ್ತಕ ವಿಮರ್ಶೆಗಾಂಧೀಜಿಗೆ ಪ್ರಭಾವ ಬೀರಿದ ಪುಸ್ತಕ ಜಾನ್ ರಸ್ಕಿನ್‌ರ ’ಅನ್‍ಟು ದಿಸ್ ಲಾಸ್ಟ್’ ಬಗ್ಗೆ

ಗಾಂಧೀಜಿಗೆ ಪ್ರಭಾವ ಬೀರಿದ ಪುಸ್ತಕ ಜಾನ್ ರಸ್ಕಿನ್‌ರ ’ಅನ್‍ಟು ದಿಸ್ ಲಾಸ್ಟ್’ ಬಗ್ಗೆ

- Advertisement -
- Advertisement -

ಗಾಂಧೀಜಿಗೆ ಸರ್ವೋದಯವಾಗಿ ಕಂಡ ಜಾನ್ ರಸ್ಕಿನ್ ಅವರ ಅನ್ಟು ದಿಸ್ ಲಾಸ್ಟ್ ಶಿರೋಬರಹದ ಬೇರು ಬೈಬಲ್ಲಿನ ಒಬ್ಬ ಉದಾರ ಮನದ ಮಾಲಿಕನ ದೃಷ್ಟಾಂತದಲ್ಲಿದೆ. ಸ್ವರ್ಗ ಸಾಮ್ರಾಜ್ಯದ ರೂಪಕವನ್ನು ಅರ್ಥೈಸಲು ಯೇಸು ಹೇಳುವ ಕತೆ.

ದ್ರಾಕ್ಷಿತೋಟದ ಯಜಮಾನ ಕೂಲಿಯಾಳುಗಳಿಗೆ ದಿನಕ್ಕೆ ಒಂದು ಬೆಳ್ಳಿ ನಾಣ್ಯದಂತೆ ಗೊತ್ತು ಮಾಡಿ ಕೆಲಸಕ್ಕೆ ಕಳುಹಿಸುತ್ತಾನೆ. ತೋಟದೊಡೆಯ ಕೆಲಸವಿಲ್ಲದೇ ಇರುವ ಇತರರನ್ನೂ ಕಂಡು ತಡವಾಗಿದ್ದರೂ ಅವರನ್ನೂ ಕೂಲಿಗೆ ಕಳುಹಿಸುತ್ತಾನೆ. ಅದೇ ರೀತಿಯಲ್ಲಿ ಇನ್ನೂ ದಿನದ ಕೊನೆಯ ಭಾಗದಲ್ಲಿ ಬಂದು ಸೇರಿಕೊಂಡವರಿಗೆಲ್ಲಾ ಕೆಲಸಕ್ಕೆ ಸೇರಿಸಿಕೊಳ್ಳುತ್ತಾನೆ. ಸಂಜೆ ಎಲ್ಲರೂ ಹೊರಡುವಾಗ ಎಲ್ಲರಿಗೂ ಸಮನಾಗಿ ಒಂದು ಬೆಳ್ಳಿ ನಾಣ್ಯದ ಕೂಲಿಯೇ ಸಿಗುತ್ತದೆ. ಮೊದಲು ಕೆಲಸಕ್ಕೆ ಬಂದವರು ಮೊದಲು, ನಡುವೆ ಮತ್ತು ಕೊನೆಗೆ ಬಂದವರೆಲ್ಲರಿಗೂ ಒಂದೇ ಸರಿಸಮ ಕೂಲಿ ಎಂದು ಗೊಣಗಿದಾಗ ತೋಟದೊಡೆಯ ಹೇಳುತ್ತಾನೆ.

“ನಿನಗೆ ಅನ್ಯಾಯ ಮಾಡಲಿಲ್ಲ. ಒಪ್ಪಂದದ ಪ್ರಕಾರ ನಿನಗೆ ನಿನ್ನ ಬೆಳ್ಳಿನಾಣ್ಯ ಸಿಕ್ಕಿದೆ. ನಿನಗೆ ಕೊಟ್ಟಷ್ಟನ್ನು ಈ ಕಟ್ಟಕಡೆಯವನಿಗೂ ಕೊಡುವುದು ನನ್ನ ಇಷ್ಟ. ನನ್ನ ಔದಾರ್ಯ ಕಂಡು ನಿನಗೇಕೆ ಅಸೂಯೆ?”

ಈ ಕಟ್ಟ ಕಡೆಯವನಿಗೆ ಎನ್ನುವುದೇ “ಅನ್ ಟು ದಿಸ್ ಲಾಸ್ಟ್.”

ನ್ಯಾಯ ಮತ್ತು ಪ್ರಾಮಾಣಿಕತೆಗಳೆಂಬ ಮೌಲ್ಯಾಧಾರದಲ್ಲಿ ಸಂಪತ್ತನ್ನು ವ್ಯಾಖ್ಯಾನಿಸುವ ರಸ್ಕಿನ್ ಗಾಂಧಿ ಮತ್ತು ಟಾಲ್‌ ಸ್ಟಾಯ್‌ ಒಳಗೊಂಡಂತೆ ಅನೇಕಾನೇಕರನ್ನು ತಮ್ಮ ಬರಹದ ಮೂಲಕ ಪ್ರಭಾವಿಸಿದ್ದರು. ಹಾಗೆಯೇ ಅವರನ್ನು ಬಂಡವಾಳಶಾಹಿಯನ್ನು ಪ್ರತಿನಿಧಿಸುವವರು ವಿರೋಧಿಸುತ್ತಿದ್ದರು. ಸೃಷ್ಟಿಯ ಸಂರಚನೆಯಲ್ಲಿ ಕೈಗಾರಿಕೆಗಳ ಆಡಳಿತಯಂತ್ರಗಳು ಮತ್ತು ಬಂಡವಾಳಶಾಹಿಯು ಹೇಗೆ ಅಮಾನ್ಯವಾಗುತ್ತದೆ ಎಂಬ ಅರಿವನ್ನೂ ಈ ಕೃತಿಯಲ್ಲಿ ಉಸುರಿದ್ದರು.

ಎಲ್ಲಾ ಕೆಲಸಗಳನ್ನೂ ಗೌರವಿಸುತ್ತಾ ಕೊಟ್ಟೆಲ್ಲಾ ಕೆಲಸಗಳಿಗೆ ಸಮವಾಗಿ ಸಂದಾಯ ಮಾಡಬೇಕೆನ್ನುವ ರಸ್ಕಿನ್ ಪ್ರತಿಯೊಬ್ಬರನ್ನೂ ಕುಶಲಿಗಳನ್ನಾಗಿ, ವಿದ್ಯಾವಂತರನ್ನಾಗಿ ರೂಪಿಸುವುದು ಸರಕಾರದ ಕೆಲಸವೆನ್ನುತ್ತಾರೆ. ಅವರ ಆದರ್ಶವೆಂದರೆ; ಯಜಮಾನನು ತನ್ನ ಮಗನನ್ನು ವಿದ್ಯಾವಂತನನ್ನಾಗಿ, ಹಣವಂತನನ್ನಾಗಿ ಆಸ್ಥೆಯಿಂದ ರೂಪಿಸುವಂತೆ ತನ್ನ ಕೆಲಸಗಾರರನ್ನೂ ರೂಪಿಸಬೇಕು.

ಮತ್ತೊಬ್ಬರನ್ನು ಬಳಸಿಕೊಳ್ಳುತ್ತಾ ತಾನು ಸಿರಿವಂತನಾಗುವುದು ಪಾಪದ ಕೆಲಸ. ಅದು ಸರಕಾರದ ಆರ್ಥಿಕತೆಗೂ ಅನ್ಯಾಯ. ತನ್ನ ನೆರೆಯವನನ್ನು ಬಡತನಕ್ಕೆ ದೂಡುತ್ತಾ ತನ್ನನ್ನು ಶ್ರೀಮಂತಗೊಳಿಸಿಕೊಳ್ಳುವ ಯಾವುದೇ ವಿಧಾನ ಅನ್ಯಾಯ. ತಾನೊಬ್ಬ ಸಿರಿವಂತನಾಗಿ ಬಡ ಸಮಾಜದಲ್ಲಿರುವುದು ಮೌಲ್ಯಹೀನ. ಹಾಗಾಗಿ ಸಂಪತ್ತು ಎಂಬುದು ನ್ಯಾಯದ ಆಧಾರದಲ್ಲಿರಬೇಕು. ಇತರರ ದುಡಿಮೆಯಿಂದ ತಾನು ಶ್ರೀಮಂತನಾಗುವುದು ಶೀಲವಲ್ಲ.

ರಾಷ್ಟ್ರೀಯ ಸಂಪತ್ತೆನ್ನುವುದು ಕೆಲವು ಜನರ ಒಟ್ಟುಗೂಡಿಸಿದ ಸಂಪತ್ತಾಗಬಾರದು. ರಾಷ್ಟ್ರದ ಎಲ್ಲಾ ಜನರ ವಿದ್ಯಾರ್ಹತೆ, ಪ್ರತಿಭೆ, ದುಡಿಮೆಗಳಿಂದ ಕ್ರೋಢೀಕರಿಸಿರುವಂತಹ ಸಂಪತ್ತಾಗಬೇಕು. ವ್ಯಕ್ತಿಗತವಾಗಿ ಶ್ರೀಮಂತರಾಗಿರುವವರಿಂದ ಸಮಾಜಕ್ಕೆ ಎಂತಹ ಕೊಡುಗೆ ದೊರಕುತ್ತದೆ!

ವಾಣಿಜ್ಯ ವ್ಯವಹಾರವು ನ್ಯಾಯಸಮ್ಮತವಾಗಿಯೇ ನಡೆಯಬೇಕು. ಏಕೆಂದರೆ ಸೃಷ್ಟಿಯ ವ್ಯವಹಾರಗಳಲ್ಲಿ ತಾರತಮ್ಯವಿಲ್ಲ. ಅದೇರೀತಿ ನ್ಯಾಯದ ಪ್ರಜ್ಞೆಯಿಂದ ಆರ್ಥಿಕ ವ್ಯವಹಾರಗಳೂ ನಡೆಯಬೇಕು. ಆರ್ಥಿಕತೆಯೂ ಕೆಲವು ಜನರ ಕೈಯೊಡೆತನದಲ್ಲಿರದೇ ಸಹಜೀವಿಗಳೆಲ್ಲ ಸರಣಿಯಲ್ಲಿ ವ್ಯಾಪ್ತವಾಗಿ ಪ್ರಾಪ್ತಿಯಲ್ಲಿರಬೇಕು. ರಸ್ಕಿನ್ ಹೇಳುವಂತೆ ಯಾರುಯಾರನ್ನೂ ಕಡೆಯಾಗಿ ನೋಡಬಾರದು, ಯಾರು ಯಾರಿಗೂ ಗುಲಾಮರಾಗಿರಕೂಡದು. ಕೆಲವು ಜನರ ಕೈಯೊಡೆತನದಲ್ಲಿರುವ ಸಂಪತ್ತು ಹಲವು ಜನರನ್ನು ಬಡತನಕ್ಕೆ ದೂಡುತ್ತದೆ.

ರಸ್ಕಿನ್ ಧ್ವನಿಸುವುದಿಷ್ಟೇ, ಜೀವನಕ್ಕೆ ಆಧಾರವಾಗುವುದೋ ಅದೇ ಮೌಲ್ಯ. ಹಣ, ಬೆಲೆ, ಉತ್ಪಾದನೆ ಯಾವುದಾದರೂ ಜೀವಿಗಳ ಜೀವನಕ್ಕೆ ಆಧಾರವಾಗುವುದಾದರೆ ಮಾತ್ರವೇ ಅವು ಮೌಲ್ಯ. ಉಪಯೋಗಿಸದ ಸಂಪತ್ತನ್ನು ಶೇಖರಿಸಿಟ್ಟುಕೊಳ್ಳುವುದು ಸಿರಿವಂತಿಕೆಯ ರೋಗ. ಉತ್ಪಾದನೆಗಳು ಹಣವನ್ನು ಸೃಷ್ಟಿಸುವ ಆಧಾರದಲ್ಲಾಗದೇ ಬಳಕೆಯ ಆಧಾರದಲ್ಲಾದರೆ ಅದು ಉಪಯುಕ್ತ ಮತ್ತು ಮೌಲ್ಯಾಧಾರಿತವಾದ ಪ್ರಗತಿ.

ರಸ್ಕಿನ್‍ರವರ ಆರ್ಥಿಕ ತತ್ವ, ಜೀವನಕ್ಕೆ ಹೊರತಾದ ಸಂಪತ್ತಿಲ್ಲ. ಪ್ರೀತಿ, ಆನಂದ, ಅಭಿಮಾನ ಎಲ್ಲವನ್ನೂ ಒಳಗೊಳ್ಳುವ ಶಕ್ತಿಯೇ ಜೀವನವಾಗಿರುವಾಗ ದೇಶದ ಸರ್ಕಾರವೂ ಕೂಡಾ ಘನತೆಯ ಮತ್ತು ಸಂತೋಷದ ಮನುಷ್ಯರನ್ನು ತನ್ನ ನೆಲದಲ್ಲಿ ರೂಪಿಸಬೇಕು. ಇತರರ ಮರ್ಜಿಯಲ್ಲಿ ದೈನೇಸಿಯಿಂದ ಬದುಕುವಂತಹ ಪರಾವಲಂಬಿಗಳನ್ನಾಗಿ ಮಾಡುವುದಲ್ಲ.

ಇದೇ ರಸ್ಕಿನ್ನನ್ನಿಂದ ಗಾಂಧೀಜಿ ಗ್ರಹಿಸಿದ ಸರ್ವೋದಯ ತತ್ವ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...