Homeಪುಸ್ತಕ ವಿಮರ್ಶೆಗಾಂಧೀಜಿಗೆ ಪ್ರಭಾವ ಬೀರಿದ ಪುಸ್ತಕ ಜಾನ್ ರಸ್ಕಿನ್‌ರ ’ಅನ್‍ಟು ದಿಸ್ ಲಾಸ್ಟ್’ ಬಗ್ಗೆ

ಗಾಂಧೀಜಿಗೆ ಪ್ರಭಾವ ಬೀರಿದ ಪುಸ್ತಕ ಜಾನ್ ರಸ್ಕಿನ್‌ರ ’ಅನ್‍ಟು ದಿಸ್ ಲಾಸ್ಟ್’ ಬಗ್ಗೆ

- Advertisement -
- Advertisement -

ಗಾಂಧೀಜಿಗೆ ಸರ್ವೋದಯವಾಗಿ ಕಂಡ ಜಾನ್ ರಸ್ಕಿನ್ ಅವರ ಅನ್ಟು ದಿಸ್ ಲಾಸ್ಟ್ ಶಿರೋಬರಹದ ಬೇರು ಬೈಬಲ್ಲಿನ ಒಬ್ಬ ಉದಾರ ಮನದ ಮಾಲಿಕನ ದೃಷ್ಟಾಂತದಲ್ಲಿದೆ. ಸ್ವರ್ಗ ಸಾಮ್ರಾಜ್ಯದ ರೂಪಕವನ್ನು ಅರ್ಥೈಸಲು ಯೇಸು ಹೇಳುವ ಕತೆ.

ದ್ರಾಕ್ಷಿತೋಟದ ಯಜಮಾನ ಕೂಲಿಯಾಳುಗಳಿಗೆ ದಿನಕ್ಕೆ ಒಂದು ಬೆಳ್ಳಿ ನಾಣ್ಯದಂತೆ ಗೊತ್ತು ಮಾಡಿ ಕೆಲಸಕ್ಕೆ ಕಳುಹಿಸುತ್ತಾನೆ. ತೋಟದೊಡೆಯ ಕೆಲಸವಿಲ್ಲದೇ ಇರುವ ಇತರರನ್ನೂ ಕಂಡು ತಡವಾಗಿದ್ದರೂ ಅವರನ್ನೂ ಕೂಲಿಗೆ ಕಳುಹಿಸುತ್ತಾನೆ. ಅದೇ ರೀತಿಯಲ್ಲಿ ಇನ್ನೂ ದಿನದ ಕೊನೆಯ ಭಾಗದಲ್ಲಿ ಬಂದು ಸೇರಿಕೊಂಡವರಿಗೆಲ್ಲಾ ಕೆಲಸಕ್ಕೆ ಸೇರಿಸಿಕೊಳ್ಳುತ್ತಾನೆ. ಸಂಜೆ ಎಲ್ಲರೂ ಹೊರಡುವಾಗ ಎಲ್ಲರಿಗೂ ಸಮನಾಗಿ ಒಂದು ಬೆಳ್ಳಿ ನಾಣ್ಯದ ಕೂಲಿಯೇ ಸಿಗುತ್ತದೆ. ಮೊದಲು ಕೆಲಸಕ್ಕೆ ಬಂದವರು ಮೊದಲು, ನಡುವೆ ಮತ್ತು ಕೊನೆಗೆ ಬಂದವರೆಲ್ಲರಿಗೂ ಒಂದೇ ಸರಿಸಮ ಕೂಲಿ ಎಂದು ಗೊಣಗಿದಾಗ ತೋಟದೊಡೆಯ ಹೇಳುತ್ತಾನೆ.

“ನಿನಗೆ ಅನ್ಯಾಯ ಮಾಡಲಿಲ್ಲ. ಒಪ್ಪಂದದ ಪ್ರಕಾರ ನಿನಗೆ ನಿನ್ನ ಬೆಳ್ಳಿನಾಣ್ಯ ಸಿಕ್ಕಿದೆ. ನಿನಗೆ ಕೊಟ್ಟಷ್ಟನ್ನು ಈ ಕಟ್ಟಕಡೆಯವನಿಗೂ ಕೊಡುವುದು ನನ್ನ ಇಷ್ಟ. ನನ್ನ ಔದಾರ್ಯ ಕಂಡು ನಿನಗೇಕೆ ಅಸೂಯೆ?”

ಈ ಕಟ್ಟ ಕಡೆಯವನಿಗೆ ಎನ್ನುವುದೇ “ಅನ್ ಟು ದಿಸ್ ಲಾಸ್ಟ್.”

ನ್ಯಾಯ ಮತ್ತು ಪ್ರಾಮಾಣಿಕತೆಗಳೆಂಬ ಮೌಲ್ಯಾಧಾರದಲ್ಲಿ ಸಂಪತ್ತನ್ನು ವ್ಯಾಖ್ಯಾನಿಸುವ ರಸ್ಕಿನ್ ಗಾಂಧಿ ಮತ್ತು ಟಾಲ್‌ ಸ್ಟಾಯ್‌ ಒಳಗೊಂಡಂತೆ ಅನೇಕಾನೇಕರನ್ನು ತಮ್ಮ ಬರಹದ ಮೂಲಕ ಪ್ರಭಾವಿಸಿದ್ದರು. ಹಾಗೆಯೇ ಅವರನ್ನು ಬಂಡವಾಳಶಾಹಿಯನ್ನು ಪ್ರತಿನಿಧಿಸುವವರು ವಿರೋಧಿಸುತ್ತಿದ್ದರು. ಸೃಷ್ಟಿಯ ಸಂರಚನೆಯಲ್ಲಿ ಕೈಗಾರಿಕೆಗಳ ಆಡಳಿತಯಂತ್ರಗಳು ಮತ್ತು ಬಂಡವಾಳಶಾಹಿಯು ಹೇಗೆ ಅಮಾನ್ಯವಾಗುತ್ತದೆ ಎಂಬ ಅರಿವನ್ನೂ ಈ ಕೃತಿಯಲ್ಲಿ ಉಸುರಿದ್ದರು.

ಎಲ್ಲಾ ಕೆಲಸಗಳನ್ನೂ ಗೌರವಿಸುತ್ತಾ ಕೊಟ್ಟೆಲ್ಲಾ ಕೆಲಸಗಳಿಗೆ ಸಮವಾಗಿ ಸಂದಾಯ ಮಾಡಬೇಕೆನ್ನುವ ರಸ್ಕಿನ್ ಪ್ರತಿಯೊಬ್ಬರನ್ನೂ ಕುಶಲಿಗಳನ್ನಾಗಿ, ವಿದ್ಯಾವಂತರನ್ನಾಗಿ ರೂಪಿಸುವುದು ಸರಕಾರದ ಕೆಲಸವೆನ್ನುತ್ತಾರೆ. ಅವರ ಆದರ್ಶವೆಂದರೆ; ಯಜಮಾನನು ತನ್ನ ಮಗನನ್ನು ವಿದ್ಯಾವಂತನನ್ನಾಗಿ, ಹಣವಂತನನ್ನಾಗಿ ಆಸ್ಥೆಯಿಂದ ರೂಪಿಸುವಂತೆ ತನ್ನ ಕೆಲಸಗಾರರನ್ನೂ ರೂಪಿಸಬೇಕು.

ಮತ್ತೊಬ್ಬರನ್ನು ಬಳಸಿಕೊಳ್ಳುತ್ತಾ ತಾನು ಸಿರಿವಂತನಾಗುವುದು ಪಾಪದ ಕೆಲಸ. ಅದು ಸರಕಾರದ ಆರ್ಥಿಕತೆಗೂ ಅನ್ಯಾಯ. ತನ್ನ ನೆರೆಯವನನ್ನು ಬಡತನಕ್ಕೆ ದೂಡುತ್ತಾ ತನ್ನನ್ನು ಶ್ರೀಮಂತಗೊಳಿಸಿಕೊಳ್ಳುವ ಯಾವುದೇ ವಿಧಾನ ಅನ್ಯಾಯ. ತಾನೊಬ್ಬ ಸಿರಿವಂತನಾಗಿ ಬಡ ಸಮಾಜದಲ್ಲಿರುವುದು ಮೌಲ್ಯಹೀನ. ಹಾಗಾಗಿ ಸಂಪತ್ತು ಎಂಬುದು ನ್ಯಾಯದ ಆಧಾರದಲ್ಲಿರಬೇಕು. ಇತರರ ದುಡಿಮೆಯಿಂದ ತಾನು ಶ್ರೀಮಂತನಾಗುವುದು ಶೀಲವಲ್ಲ.

ರಾಷ್ಟ್ರೀಯ ಸಂಪತ್ತೆನ್ನುವುದು ಕೆಲವು ಜನರ ಒಟ್ಟುಗೂಡಿಸಿದ ಸಂಪತ್ತಾಗಬಾರದು. ರಾಷ್ಟ್ರದ ಎಲ್ಲಾ ಜನರ ವಿದ್ಯಾರ್ಹತೆ, ಪ್ರತಿಭೆ, ದುಡಿಮೆಗಳಿಂದ ಕ್ರೋಢೀಕರಿಸಿರುವಂತಹ ಸಂಪತ್ತಾಗಬೇಕು. ವ್ಯಕ್ತಿಗತವಾಗಿ ಶ್ರೀಮಂತರಾಗಿರುವವರಿಂದ ಸಮಾಜಕ್ಕೆ ಎಂತಹ ಕೊಡುಗೆ ದೊರಕುತ್ತದೆ!

ವಾಣಿಜ್ಯ ವ್ಯವಹಾರವು ನ್ಯಾಯಸಮ್ಮತವಾಗಿಯೇ ನಡೆಯಬೇಕು. ಏಕೆಂದರೆ ಸೃಷ್ಟಿಯ ವ್ಯವಹಾರಗಳಲ್ಲಿ ತಾರತಮ್ಯವಿಲ್ಲ. ಅದೇರೀತಿ ನ್ಯಾಯದ ಪ್ರಜ್ಞೆಯಿಂದ ಆರ್ಥಿಕ ವ್ಯವಹಾರಗಳೂ ನಡೆಯಬೇಕು. ಆರ್ಥಿಕತೆಯೂ ಕೆಲವು ಜನರ ಕೈಯೊಡೆತನದಲ್ಲಿರದೇ ಸಹಜೀವಿಗಳೆಲ್ಲ ಸರಣಿಯಲ್ಲಿ ವ್ಯಾಪ್ತವಾಗಿ ಪ್ರಾಪ್ತಿಯಲ್ಲಿರಬೇಕು. ರಸ್ಕಿನ್ ಹೇಳುವಂತೆ ಯಾರುಯಾರನ್ನೂ ಕಡೆಯಾಗಿ ನೋಡಬಾರದು, ಯಾರು ಯಾರಿಗೂ ಗುಲಾಮರಾಗಿರಕೂಡದು. ಕೆಲವು ಜನರ ಕೈಯೊಡೆತನದಲ್ಲಿರುವ ಸಂಪತ್ತು ಹಲವು ಜನರನ್ನು ಬಡತನಕ್ಕೆ ದೂಡುತ್ತದೆ.

ರಸ್ಕಿನ್ ಧ್ವನಿಸುವುದಿಷ್ಟೇ, ಜೀವನಕ್ಕೆ ಆಧಾರವಾಗುವುದೋ ಅದೇ ಮೌಲ್ಯ. ಹಣ, ಬೆಲೆ, ಉತ್ಪಾದನೆ ಯಾವುದಾದರೂ ಜೀವಿಗಳ ಜೀವನಕ್ಕೆ ಆಧಾರವಾಗುವುದಾದರೆ ಮಾತ್ರವೇ ಅವು ಮೌಲ್ಯ. ಉಪಯೋಗಿಸದ ಸಂಪತ್ತನ್ನು ಶೇಖರಿಸಿಟ್ಟುಕೊಳ್ಳುವುದು ಸಿರಿವಂತಿಕೆಯ ರೋಗ. ಉತ್ಪಾದನೆಗಳು ಹಣವನ್ನು ಸೃಷ್ಟಿಸುವ ಆಧಾರದಲ್ಲಾಗದೇ ಬಳಕೆಯ ಆಧಾರದಲ್ಲಾದರೆ ಅದು ಉಪಯುಕ್ತ ಮತ್ತು ಮೌಲ್ಯಾಧಾರಿತವಾದ ಪ್ರಗತಿ.

ರಸ್ಕಿನ್‍ರವರ ಆರ್ಥಿಕ ತತ್ವ, ಜೀವನಕ್ಕೆ ಹೊರತಾದ ಸಂಪತ್ತಿಲ್ಲ. ಪ್ರೀತಿ, ಆನಂದ, ಅಭಿಮಾನ ಎಲ್ಲವನ್ನೂ ಒಳಗೊಳ್ಳುವ ಶಕ್ತಿಯೇ ಜೀವನವಾಗಿರುವಾಗ ದೇಶದ ಸರ್ಕಾರವೂ ಕೂಡಾ ಘನತೆಯ ಮತ್ತು ಸಂತೋಷದ ಮನುಷ್ಯರನ್ನು ತನ್ನ ನೆಲದಲ್ಲಿ ರೂಪಿಸಬೇಕು. ಇತರರ ಮರ್ಜಿಯಲ್ಲಿ ದೈನೇಸಿಯಿಂದ ಬದುಕುವಂತಹ ಪರಾವಲಂಬಿಗಳನ್ನಾಗಿ ಮಾಡುವುದಲ್ಲ.

ಇದೇ ರಸ್ಕಿನ್ನನ್ನಿಂದ ಗಾಂಧೀಜಿ ಗ್ರಹಿಸಿದ ಸರ್ವೋದಯ ತತ್ವ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...