Homeಪುಸ್ತಕ ವಿಮರ್ಶೆಗಾಂಧೀಜಿಗೆ ಪ್ರಭಾವ ಬೀರಿದ ಪುಸ್ತಕ ಜಾನ್ ರಸ್ಕಿನ್‌ರ ’ಅನ್‍ಟು ದಿಸ್ ಲಾಸ್ಟ್’ ಬಗ್ಗೆ

ಗಾಂಧೀಜಿಗೆ ಪ್ರಭಾವ ಬೀರಿದ ಪುಸ್ತಕ ಜಾನ್ ರಸ್ಕಿನ್‌ರ ’ಅನ್‍ಟು ದಿಸ್ ಲಾಸ್ಟ್’ ಬಗ್ಗೆ

- Advertisement -
- Advertisement -

ಗಾಂಧೀಜಿಗೆ ಸರ್ವೋದಯವಾಗಿ ಕಂಡ ಜಾನ್ ರಸ್ಕಿನ್ ಅವರ ಅನ್ಟು ದಿಸ್ ಲಾಸ್ಟ್ ಶಿರೋಬರಹದ ಬೇರು ಬೈಬಲ್ಲಿನ ಒಬ್ಬ ಉದಾರ ಮನದ ಮಾಲಿಕನ ದೃಷ್ಟಾಂತದಲ್ಲಿದೆ. ಸ್ವರ್ಗ ಸಾಮ್ರಾಜ್ಯದ ರೂಪಕವನ್ನು ಅರ್ಥೈಸಲು ಯೇಸು ಹೇಳುವ ಕತೆ.

ದ್ರಾಕ್ಷಿತೋಟದ ಯಜಮಾನ ಕೂಲಿಯಾಳುಗಳಿಗೆ ದಿನಕ್ಕೆ ಒಂದು ಬೆಳ್ಳಿ ನಾಣ್ಯದಂತೆ ಗೊತ್ತು ಮಾಡಿ ಕೆಲಸಕ್ಕೆ ಕಳುಹಿಸುತ್ತಾನೆ. ತೋಟದೊಡೆಯ ಕೆಲಸವಿಲ್ಲದೇ ಇರುವ ಇತರರನ್ನೂ ಕಂಡು ತಡವಾಗಿದ್ದರೂ ಅವರನ್ನೂ ಕೂಲಿಗೆ ಕಳುಹಿಸುತ್ತಾನೆ. ಅದೇ ರೀತಿಯಲ್ಲಿ ಇನ್ನೂ ದಿನದ ಕೊನೆಯ ಭಾಗದಲ್ಲಿ ಬಂದು ಸೇರಿಕೊಂಡವರಿಗೆಲ್ಲಾ ಕೆಲಸಕ್ಕೆ ಸೇರಿಸಿಕೊಳ್ಳುತ್ತಾನೆ. ಸಂಜೆ ಎಲ್ಲರೂ ಹೊರಡುವಾಗ ಎಲ್ಲರಿಗೂ ಸಮನಾಗಿ ಒಂದು ಬೆಳ್ಳಿ ನಾಣ್ಯದ ಕೂಲಿಯೇ ಸಿಗುತ್ತದೆ. ಮೊದಲು ಕೆಲಸಕ್ಕೆ ಬಂದವರು ಮೊದಲು, ನಡುವೆ ಮತ್ತು ಕೊನೆಗೆ ಬಂದವರೆಲ್ಲರಿಗೂ ಒಂದೇ ಸರಿಸಮ ಕೂಲಿ ಎಂದು ಗೊಣಗಿದಾಗ ತೋಟದೊಡೆಯ ಹೇಳುತ್ತಾನೆ.

“ನಿನಗೆ ಅನ್ಯಾಯ ಮಾಡಲಿಲ್ಲ. ಒಪ್ಪಂದದ ಪ್ರಕಾರ ನಿನಗೆ ನಿನ್ನ ಬೆಳ್ಳಿನಾಣ್ಯ ಸಿಕ್ಕಿದೆ. ನಿನಗೆ ಕೊಟ್ಟಷ್ಟನ್ನು ಈ ಕಟ್ಟಕಡೆಯವನಿಗೂ ಕೊಡುವುದು ನನ್ನ ಇಷ್ಟ. ನನ್ನ ಔದಾರ್ಯ ಕಂಡು ನಿನಗೇಕೆ ಅಸೂಯೆ?”

ಈ ಕಟ್ಟ ಕಡೆಯವನಿಗೆ ಎನ್ನುವುದೇ “ಅನ್ ಟು ದಿಸ್ ಲಾಸ್ಟ್.”

ನ್ಯಾಯ ಮತ್ತು ಪ್ರಾಮಾಣಿಕತೆಗಳೆಂಬ ಮೌಲ್ಯಾಧಾರದಲ್ಲಿ ಸಂಪತ್ತನ್ನು ವ್ಯಾಖ್ಯಾನಿಸುವ ರಸ್ಕಿನ್ ಗಾಂಧಿ ಮತ್ತು ಟಾಲ್‌ ಸ್ಟಾಯ್‌ ಒಳಗೊಂಡಂತೆ ಅನೇಕಾನೇಕರನ್ನು ತಮ್ಮ ಬರಹದ ಮೂಲಕ ಪ್ರಭಾವಿಸಿದ್ದರು. ಹಾಗೆಯೇ ಅವರನ್ನು ಬಂಡವಾಳಶಾಹಿಯನ್ನು ಪ್ರತಿನಿಧಿಸುವವರು ವಿರೋಧಿಸುತ್ತಿದ್ದರು. ಸೃಷ್ಟಿಯ ಸಂರಚನೆಯಲ್ಲಿ ಕೈಗಾರಿಕೆಗಳ ಆಡಳಿತಯಂತ್ರಗಳು ಮತ್ತು ಬಂಡವಾಳಶಾಹಿಯು ಹೇಗೆ ಅಮಾನ್ಯವಾಗುತ್ತದೆ ಎಂಬ ಅರಿವನ್ನೂ ಈ ಕೃತಿಯಲ್ಲಿ ಉಸುರಿದ್ದರು.

ಎಲ್ಲಾ ಕೆಲಸಗಳನ್ನೂ ಗೌರವಿಸುತ್ತಾ ಕೊಟ್ಟೆಲ್ಲಾ ಕೆಲಸಗಳಿಗೆ ಸಮವಾಗಿ ಸಂದಾಯ ಮಾಡಬೇಕೆನ್ನುವ ರಸ್ಕಿನ್ ಪ್ರತಿಯೊಬ್ಬರನ್ನೂ ಕುಶಲಿಗಳನ್ನಾಗಿ, ವಿದ್ಯಾವಂತರನ್ನಾಗಿ ರೂಪಿಸುವುದು ಸರಕಾರದ ಕೆಲಸವೆನ್ನುತ್ತಾರೆ. ಅವರ ಆದರ್ಶವೆಂದರೆ; ಯಜಮಾನನು ತನ್ನ ಮಗನನ್ನು ವಿದ್ಯಾವಂತನನ್ನಾಗಿ, ಹಣವಂತನನ್ನಾಗಿ ಆಸ್ಥೆಯಿಂದ ರೂಪಿಸುವಂತೆ ತನ್ನ ಕೆಲಸಗಾರರನ್ನೂ ರೂಪಿಸಬೇಕು.

ಮತ್ತೊಬ್ಬರನ್ನು ಬಳಸಿಕೊಳ್ಳುತ್ತಾ ತಾನು ಸಿರಿವಂತನಾಗುವುದು ಪಾಪದ ಕೆಲಸ. ಅದು ಸರಕಾರದ ಆರ್ಥಿಕತೆಗೂ ಅನ್ಯಾಯ. ತನ್ನ ನೆರೆಯವನನ್ನು ಬಡತನಕ್ಕೆ ದೂಡುತ್ತಾ ತನ್ನನ್ನು ಶ್ರೀಮಂತಗೊಳಿಸಿಕೊಳ್ಳುವ ಯಾವುದೇ ವಿಧಾನ ಅನ್ಯಾಯ. ತಾನೊಬ್ಬ ಸಿರಿವಂತನಾಗಿ ಬಡ ಸಮಾಜದಲ್ಲಿರುವುದು ಮೌಲ್ಯಹೀನ. ಹಾಗಾಗಿ ಸಂಪತ್ತು ಎಂಬುದು ನ್ಯಾಯದ ಆಧಾರದಲ್ಲಿರಬೇಕು. ಇತರರ ದುಡಿಮೆಯಿಂದ ತಾನು ಶ್ರೀಮಂತನಾಗುವುದು ಶೀಲವಲ್ಲ.

ರಾಷ್ಟ್ರೀಯ ಸಂಪತ್ತೆನ್ನುವುದು ಕೆಲವು ಜನರ ಒಟ್ಟುಗೂಡಿಸಿದ ಸಂಪತ್ತಾಗಬಾರದು. ರಾಷ್ಟ್ರದ ಎಲ್ಲಾ ಜನರ ವಿದ್ಯಾರ್ಹತೆ, ಪ್ರತಿಭೆ, ದುಡಿಮೆಗಳಿಂದ ಕ್ರೋಢೀಕರಿಸಿರುವಂತಹ ಸಂಪತ್ತಾಗಬೇಕು. ವ್ಯಕ್ತಿಗತವಾಗಿ ಶ್ರೀಮಂತರಾಗಿರುವವರಿಂದ ಸಮಾಜಕ್ಕೆ ಎಂತಹ ಕೊಡುಗೆ ದೊರಕುತ್ತದೆ!

ವಾಣಿಜ್ಯ ವ್ಯವಹಾರವು ನ್ಯಾಯಸಮ್ಮತವಾಗಿಯೇ ನಡೆಯಬೇಕು. ಏಕೆಂದರೆ ಸೃಷ್ಟಿಯ ವ್ಯವಹಾರಗಳಲ್ಲಿ ತಾರತಮ್ಯವಿಲ್ಲ. ಅದೇರೀತಿ ನ್ಯಾಯದ ಪ್ರಜ್ಞೆಯಿಂದ ಆರ್ಥಿಕ ವ್ಯವಹಾರಗಳೂ ನಡೆಯಬೇಕು. ಆರ್ಥಿಕತೆಯೂ ಕೆಲವು ಜನರ ಕೈಯೊಡೆತನದಲ್ಲಿರದೇ ಸಹಜೀವಿಗಳೆಲ್ಲ ಸರಣಿಯಲ್ಲಿ ವ್ಯಾಪ್ತವಾಗಿ ಪ್ರಾಪ್ತಿಯಲ್ಲಿರಬೇಕು. ರಸ್ಕಿನ್ ಹೇಳುವಂತೆ ಯಾರುಯಾರನ್ನೂ ಕಡೆಯಾಗಿ ನೋಡಬಾರದು, ಯಾರು ಯಾರಿಗೂ ಗುಲಾಮರಾಗಿರಕೂಡದು. ಕೆಲವು ಜನರ ಕೈಯೊಡೆತನದಲ್ಲಿರುವ ಸಂಪತ್ತು ಹಲವು ಜನರನ್ನು ಬಡತನಕ್ಕೆ ದೂಡುತ್ತದೆ.

ರಸ್ಕಿನ್ ಧ್ವನಿಸುವುದಿಷ್ಟೇ, ಜೀವನಕ್ಕೆ ಆಧಾರವಾಗುವುದೋ ಅದೇ ಮೌಲ್ಯ. ಹಣ, ಬೆಲೆ, ಉತ್ಪಾದನೆ ಯಾವುದಾದರೂ ಜೀವಿಗಳ ಜೀವನಕ್ಕೆ ಆಧಾರವಾಗುವುದಾದರೆ ಮಾತ್ರವೇ ಅವು ಮೌಲ್ಯ. ಉಪಯೋಗಿಸದ ಸಂಪತ್ತನ್ನು ಶೇಖರಿಸಿಟ್ಟುಕೊಳ್ಳುವುದು ಸಿರಿವಂತಿಕೆಯ ರೋಗ. ಉತ್ಪಾದನೆಗಳು ಹಣವನ್ನು ಸೃಷ್ಟಿಸುವ ಆಧಾರದಲ್ಲಾಗದೇ ಬಳಕೆಯ ಆಧಾರದಲ್ಲಾದರೆ ಅದು ಉಪಯುಕ್ತ ಮತ್ತು ಮೌಲ್ಯಾಧಾರಿತವಾದ ಪ್ರಗತಿ.

ರಸ್ಕಿನ್‍ರವರ ಆರ್ಥಿಕ ತತ್ವ, ಜೀವನಕ್ಕೆ ಹೊರತಾದ ಸಂಪತ್ತಿಲ್ಲ. ಪ್ರೀತಿ, ಆನಂದ, ಅಭಿಮಾನ ಎಲ್ಲವನ್ನೂ ಒಳಗೊಳ್ಳುವ ಶಕ್ತಿಯೇ ಜೀವನವಾಗಿರುವಾಗ ದೇಶದ ಸರ್ಕಾರವೂ ಕೂಡಾ ಘನತೆಯ ಮತ್ತು ಸಂತೋಷದ ಮನುಷ್ಯರನ್ನು ತನ್ನ ನೆಲದಲ್ಲಿ ರೂಪಿಸಬೇಕು. ಇತರರ ಮರ್ಜಿಯಲ್ಲಿ ದೈನೇಸಿಯಿಂದ ಬದುಕುವಂತಹ ಪರಾವಲಂಬಿಗಳನ್ನಾಗಿ ಮಾಡುವುದಲ್ಲ.

ಇದೇ ರಸ್ಕಿನ್ನನ್ನಿಂದ ಗಾಂಧೀಜಿ ಗ್ರಹಿಸಿದ ಸರ್ವೋದಯ ತತ್ವ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...