Homeಪುಸ್ತಕ ವಿಮರ್ಶೆಗಾಂಧೀಜಿಗೆ ಪ್ರಭಾವ ಬೀರಿದ ಪುಸ್ತಕ ಜಾನ್ ರಸ್ಕಿನ್‌ರ ’ಅನ್‍ಟು ದಿಸ್ ಲಾಸ್ಟ್’ ಬಗ್ಗೆ

ಗಾಂಧೀಜಿಗೆ ಪ್ರಭಾವ ಬೀರಿದ ಪುಸ್ತಕ ಜಾನ್ ರಸ್ಕಿನ್‌ರ ’ಅನ್‍ಟು ದಿಸ್ ಲಾಸ್ಟ್’ ಬಗ್ಗೆ

- Advertisement -
- Advertisement -

ಗಾಂಧೀಜಿಗೆ ಸರ್ವೋದಯವಾಗಿ ಕಂಡ ಜಾನ್ ರಸ್ಕಿನ್ ಅವರ ಅನ್ಟು ದಿಸ್ ಲಾಸ್ಟ್ ಶಿರೋಬರಹದ ಬೇರು ಬೈಬಲ್ಲಿನ ಒಬ್ಬ ಉದಾರ ಮನದ ಮಾಲಿಕನ ದೃಷ್ಟಾಂತದಲ್ಲಿದೆ. ಸ್ವರ್ಗ ಸಾಮ್ರಾಜ್ಯದ ರೂಪಕವನ್ನು ಅರ್ಥೈಸಲು ಯೇಸು ಹೇಳುವ ಕತೆ.

ದ್ರಾಕ್ಷಿತೋಟದ ಯಜಮಾನ ಕೂಲಿಯಾಳುಗಳಿಗೆ ದಿನಕ್ಕೆ ಒಂದು ಬೆಳ್ಳಿ ನಾಣ್ಯದಂತೆ ಗೊತ್ತು ಮಾಡಿ ಕೆಲಸಕ್ಕೆ ಕಳುಹಿಸುತ್ತಾನೆ. ತೋಟದೊಡೆಯ ಕೆಲಸವಿಲ್ಲದೇ ಇರುವ ಇತರರನ್ನೂ ಕಂಡು ತಡವಾಗಿದ್ದರೂ ಅವರನ್ನೂ ಕೂಲಿಗೆ ಕಳುಹಿಸುತ್ತಾನೆ. ಅದೇ ರೀತಿಯಲ್ಲಿ ಇನ್ನೂ ದಿನದ ಕೊನೆಯ ಭಾಗದಲ್ಲಿ ಬಂದು ಸೇರಿಕೊಂಡವರಿಗೆಲ್ಲಾ ಕೆಲಸಕ್ಕೆ ಸೇರಿಸಿಕೊಳ್ಳುತ್ತಾನೆ. ಸಂಜೆ ಎಲ್ಲರೂ ಹೊರಡುವಾಗ ಎಲ್ಲರಿಗೂ ಸಮನಾಗಿ ಒಂದು ಬೆಳ್ಳಿ ನಾಣ್ಯದ ಕೂಲಿಯೇ ಸಿಗುತ್ತದೆ. ಮೊದಲು ಕೆಲಸಕ್ಕೆ ಬಂದವರು ಮೊದಲು, ನಡುವೆ ಮತ್ತು ಕೊನೆಗೆ ಬಂದವರೆಲ್ಲರಿಗೂ ಒಂದೇ ಸರಿಸಮ ಕೂಲಿ ಎಂದು ಗೊಣಗಿದಾಗ ತೋಟದೊಡೆಯ ಹೇಳುತ್ತಾನೆ.

“ನಿನಗೆ ಅನ್ಯಾಯ ಮಾಡಲಿಲ್ಲ. ಒಪ್ಪಂದದ ಪ್ರಕಾರ ನಿನಗೆ ನಿನ್ನ ಬೆಳ್ಳಿನಾಣ್ಯ ಸಿಕ್ಕಿದೆ. ನಿನಗೆ ಕೊಟ್ಟಷ್ಟನ್ನು ಈ ಕಟ್ಟಕಡೆಯವನಿಗೂ ಕೊಡುವುದು ನನ್ನ ಇಷ್ಟ. ನನ್ನ ಔದಾರ್ಯ ಕಂಡು ನಿನಗೇಕೆ ಅಸೂಯೆ?”

ಈ ಕಟ್ಟ ಕಡೆಯವನಿಗೆ ಎನ್ನುವುದೇ “ಅನ್ ಟು ದಿಸ್ ಲಾಸ್ಟ್.”

ನ್ಯಾಯ ಮತ್ತು ಪ್ರಾಮಾಣಿಕತೆಗಳೆಂಬ ಮೌಲ್ಯಾಧಾರದಲ್ಲಿ ಸಂಪತ್ತನ್ನು ವ್ಯಾಖ್ಯಾನಿಸುವ ರಸ್ಕಿನ್ ಗಾಂಧಿ ಮತ್ತು ಟಾಲ್‌ ಸ್ಟಾಯ್‌ ಒಳಗೊಂಡಂತೆ ಅನೇಕಾನೇಕರನ್ನು ತಮ್ಮ ಬರಹದ ಮೂಲಕ ಪ್ರಭಾವಿಸಿದ್ದರು. ಹಾಗೆಯೇ ಅವರನ್ನು ಬಂಡವಾಳಶಾಹಿಯನ್ನು ಪ್ರತಿನಿಧಿಸುವವರು ವಿರೋಧಿಸುತ್ತಿದ್ದರು. ಸೃಷ್ಟಿಯ ಸಂರಚನೆಯಲ್ಲಿ ಕೈಗಾರಿಕೆಗಳ ಆಡಳಿತಯಂತ್ರಗಳು ಮತ್ತು ಬಂಡವಾಳಶಾಹಿಯು ಹೇಗೆ ಅಮಾನ್ಯವಾಗುತ್ತದೆ ಎಂಬ ಅರಿವನ್ನೂ ಈ ಕೃತಿಯಲ್ಲಿ ಉಸುರಿದ್ದರು.

ಎಲ್ಲಾ ಕೆಲಸಗಳನ್ನೂ ಗೌರವಿಸುತ್ತಾ ಕೊಟ್ಟೆಲ್ಲಾ ಕೆಲಸಗಳಿಗೆ ಸಮವಾಗಿ ಸಂದಾಯ ಮಾಡಬೇಕೆನ್ನುವ ರಸ್ಕಿನ್ ಪ್ರತಿಯೊಬ್ಬರನ್ನೂ ಕುಶಲಿಗಳನ್ನಾಗಿ, ವಿದ್ಯಾವಂತರನ್ನಾಗಿ ರೂಪಿಸುವುದು ಸರಕಾರದ ಕೆಲಸವೆನ್ನುತ್ತಾರೆ. ಅವರ ಆದರ್ಶವೆಂದರೆ; ಯಜಮಾನನು ತನ್ನ ಮಗನನ್ನು ವಿದ್ಯಾವಂತನನ್ನಾಗಿ, ಹಣವಂತನನ್ನಾಗಿ ಆಸ್ಥೆಯಿಂದ ರೂಪಿಸುವಂತೆ ತನ್ನ ಕೆಲಸಗಾರರನ್ನೂ ರೂಪಿಸಬೇಕು.

ಮತ್ತೊಬ್ಬರನ್ನು ಬಳಸಿಕೊಳ್ಳುತ್ತಾ ತಾನು ಸಿರಿವಂತನಾಗುವುದು ಪಾಪದ ಕೆಲಸ. ಅದು ಸರಕಾರದ ಆರ್ಥಿಕತೆಗೂ ಅನ್ಯಾಯ. ತನ್ನ ನೆರೆಯವನನ್ನು ಬಡತನಕ್ಕೆ ದೂಡುತ್ತಾ ತನ್ನನ್ನು ಶ್ರೀಮಂತಗೊಳಿಸಿಕೊಳ್ಳುವ ಯಾವುದೇ ವಿಧಾನ ಅನ್ಯಾಯ. ತಾನೊಬ್ಬ ಸಿರಿವಂತನಾಗಿ ಬಡ ಸಮಾಜದಲ್ಲಿರುವುದು ಮೌಲ್ಯಹೀನ. ಹಾಗಾಗಿ ಸಂಪತ್ತು ಎಂಬುದು ನ್ಯಾಯದ ಆಧಾರದಲ್ಲಿರಬೇಕು. ಇತರರ ದುಡಿಮೆಯಿಂದ ತಾನು ಶ್ರೀಮಂತನಾಗುವುದು ಶೀಲವಲ್ಲ.

ರಾಷ್ಟ್ರೀಯ ಸಂಪತ್ತೆನ್ನುವುದು ಕೆಲವು ಜನರ ಒಟ್ಟುಗೂಡಿಸಿದ ಸಂಪತ್ತಾಗಬಾರದು. ರಾಷ್ಟ್ರದ ಎಲ್ಲಾ ಜನರ ವಿದ್ಯಾರ್ಹತೆ, ಪ್ರತಿಭೆ, ದುಡಿಮೆಗಳಿಂದ ಕ್ರೋಢೀಕರಿಸಿರುವಂತಹ ಸಂಪತ್ತಾಗಬೇಕು. ವ್ಯಕ್ತಿಗತವಾಗಿ ಶ್ರೀಮಂತರಾಗಿರುವವರಿಂದ ಸಮಾಜಕ್ಕೆ ಎಂತಹ ಕೊಡುಗೆ ದೊರಕುತ್ತದೆ!

ವಾಣಿಜ್ಯ ವ್ಯವಹಾರವು ನ್ಯಾಯಸಮ್ಮತವಾಗಿಯೇ ನಡೆಯಬೇಕು. ಏಕೆಂದರೆ ಸೃಷ್ಟಿಯ ವ್ಯವಹಾರಗಳಲ್ಲಿ ತಾರತಮ್ಯವಿಲ್ಲ. ಅದೇರೀತಿ ನ್ಯಾಯದ ಪ್ರಜ್ಞೆಯಿಂದ ಆರ್ಥಿಕ ವ್ಯವಹಾರಗಳೂ ನಡೆಯಬೇಕು. ಆರ್ಥಿಕತೆಯೂ ಕೆಲವು ಜನರ ಕೈಯೊಡೆತನದಲ್ಲಿರದೇ ಸಹಜೀವಿಗಳೆಲ್ಲ ಸರಣಿಯಲ್ಲಿ ವ್ಯಾಪ್ತವಾಗಿ ಪ್ರಾಪ್ತಿಯಲ್ಲಿರಬೇಕು. ರಸ್ಕಿನ್ ಹೇಳುವಂತೆ ಯಾರುಯಾರನ್ನೂ ಕಡೆಯಾಗಿ ನೋಡಬಾರದು, ಯಾರು ಯಾರಿಗೂ ಗುಲಾಮರಾಗಿರಕೂಡದು. ಕೆಲವು ಜನರ ಕೈಯೊಡೆತನದಲ್ಲಿರುವ ಸಂಪತ್ತು ಹಲವು ಜನರನ್ನು ಬಡತನಕ್ಕೆ ದೂಡುತ್ತದೆ.

ರಸ್ಕಿನ್ ಧ್ವನಿಸುವುದಿಷ್ಟೇ, ಜೀವನಕ್ಕೆ ಆಧಾರವಾಗುವುದೋ ಅದೇ ಮೌಲ್ಯ. ಹಣ, ಬೆಲೆ, ಉತ್ಪಾದನೆ ಯಾವುದಾದರೂ ಜೀವಿಗಳ ಜೀವನಕ್ಕೆ ಆಧಾರವಾಗುವುದಾದರೆ ಮಾತ್ರವೇ ಅವು ಮೌಲ್ಯ. ಉಪಯೋಗಿಸದ ಸಂಪತ್ತನ್ನು ಶೇಖರಿಸಿಟ್ಟುಕೊಳ್ಳುವುದು ಸಿರಿವಂತಿಕೆಯ ರೋಗ. ಉತ್ಪಾದನೆಗಳು ಹಣವನ್ನು ಸೃಷ್ಟಿಸುವ ಆಧಾರದಲ್ಲಾಗದೇ ಬಳಕೆಯ ಆಧಾರದಲ್ಲಾದರೆ ಅದು ಉಪಯುಕ್ತ ಮತ್ತು ಮೌಲ್ಯಾಧಾರಿತವಾದ ಪ್ರಗತಿ.

ರಸ್ಕಿನ್‍ರವರ ಆರ್ಥಿಕ ತತ್ವ, ಜೀವನಕ್ಕೆ ಹೊರತಾದ ಸಂಪತ್ತಿಲ್ಲ. ಪ್ರೀತಿ, ಆನಂದ, ಅಭಿಮಾನ ಎಲ್ಲವನ್ನೂ ಒಳಗೊಳ್ಳುವ ಶಕ್ತಿಯೇ ಜೀವನವಾಗಿರುವಾಗ ದೇಶದ ಸರ್ಕಾರವೂ ಕೂಡಾ ಘನತೆಯ ಮತ್ತು ಸಂತೋಷದ ಮನುಷ್ಯರನ್ನು ತನ್ನ ನೆಲದಲ್ಲಿ ರೂಪಿಸಬೇಕು. ಇತರರ ಮರ್ಜಿಯಲ್ಲಿ ದೈನೇಸಿಯಿಂದ ಬದುಕುವಂತಹ ಪರಾವಲಂಬಿಗಳನ್ನಾಗಿ ಮಾಡುವುದಲ್ಲ.

ಇದೇ ರಸ್ಕಿನ್ನನ್ನಿಂದ ಗಾಂಧೀಜಿ ಗ್ರಹಿಸಿದ ಸರ್ವೋದಯ ತತ್ವ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...