Homeದಲಿತ್ ಫೈಲ್ಸ್ದಲಿತರ ಮದುವೆಗೆ ಕಲ್ಯಾಣ ಮಂಟಪ ನೀಡದೆ ಅಸ್ಪೃಶ್ಯತೆ ಆಚರಣೆ: ದೂರು - ಪ್ರತಿಭಟನೆ

ದಲಿತರ ಮದುವೆಗೆ ಕಲ್ಯಾಣ ಮಂಟಪ ನೀಡದೆ ಅಸ್ಪೃಶ್ಯತೆ ಆಚರಣೆ: ದೂರು – ಪ್ರತಿಭಟನೆ

- Advertisement -
- Advertisement -

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ವೆಂಕಟರಮಣ ದೇವಸ್ಥಾನದಲ್ಲಿ ಪರಿಶಿಷ್ಟ ಜಾತಿ ಸಮುದಾಯದವರ ಮದುವೆಗೆ ಕಲ್ಯಾಣ ಮಂಟಪ ನೀಡದೆ ಅಸ್ಪೃಶ್ಯತೆ ಆಚರಿಸಲಾಗಿದೆ ಎಂದು ಆರೋಪಿಸಿ ದೂರು ದಾಖಲಾಗಿದ್ದು, ತಹಶೀಲ್ದಾರ್ ಕಚೇರಿ ಎದುರು ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಗುಡಿಬಂಡೆ ತಾಲ್ಲೂಕಿನ ಬ್ರಾಹ್ಮಣರಹಳ್ಳಿಯ ಪರಿಶಿಷ್ಟ ಜಾತಿ ಸಮುದಾಯದ ವೆಂಕಟರಾಯಪ್ಪನವರ ಪುತ್ರಿ ವೆಂಕಟಲಕ್ಷ್ಮಿ ಮತ್ತು ಬಾಗೇಪಲ್ಲಿಯ ಮಹೇಶ್ ಎಂಬುವವರ ನಡುವೆ ನವೆಂಬರ್ 3ರಂದು ವಿವಾಹ ನಿಶ್ಚಯವಾಗಿತ್ತು. ಅದಕ್ಕೂ 15 ದಿನ ಮೊದಲೇ ವೆಂಕಟಲಕ್ಷ್ಮಿಯ ಸಹೋದರ ಆವುಲಕೊಂಡಪ್ಪ ಎಂಬುವವರು ಗುಡಿಬಂಡೆಯ ವೆಂಕಟರಮಣ ದೇವಾಲಯ ಸಮಿತಿಯ ಕಾರ್ಯದರ್ಶಿ ಮಾಚಾವಲಹಳ್ಳಿ ವೆಂಕಟರಾಯಪ್ಪನವರ ಬಳಿ ತೆರಳಿ ನನ್ನ ತಂಗಿಯ ವಿವಾಹಕ್ಕೆ ದೇವಾಲಯ ಕಲ್ಯಾಣ ಮಂಟಪ್ಪವನ್ನು ಬಾಡಿಗೆಗೆ ನೀಡಬೇಕೆಂದು ಮನವಿ ಮಾಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆದರೆ ಟ್ರಸ್ಟ್ ಕಾರ್ಯದರ್ಶಿ ಮಾಚಾವಲಹಳ್ಳಿ ವೆಂಕಟರಾಯಪ್ಪರವರು ಅಂದು ಬೇರೆ ಮದುವೆ ನಿಗಧಿಯಾಗಿದೆ ಎಂದು ಸುಳ್ಳು ಹೇಳಿರುತ್ತಾರೆ. ವೆಂಕಟಲಕ್ಷ್ಮಿ ಮತ್ತು ಮಹೇಶ್ ಮದುವೆಯ ಲಗ್ನ ಪತ್ರಿಕೆಯಲ್ಲಿ ಅದೇ ಕಲ್ಯಾಣ ಮಂಟಪದ ಹೆಸರು ಸಹ ಮುದ್ರಿಸಿರುತ್ತಾರೆ. ಆದರೆ ಅಂದು ದೇವಾಲಯ ಬೀಗ ಹಾಕಿ ದಲಿತರ ಮದುವೆಗೆ ಅವಕಾಶ ನೀಡಿಲ್ಲ. ಅನಿವಾರ್ಯವಾಗಿ ದೇವಾಲಯದ ಹೊರಗೆ ಮದುವೆ ಮಾಡಲಾಗಿದೆ ಎಂದು ತಹಶೀಲ್ದಾರ್‌ರವರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

ಸದರಿ ದೇವಸ್ಥಾನವು ಮುಜರಾಯಿ ಇಲಾಖೆಗೆ ಸೇರಿದ್ದು, ಎಲ್ಲಾ ಜಾತಿಯವರಿಗೂ ಬಳಕೆಯ ಹಕ್ಕಿದೆ ಎಂದು ಕಾನೂನು ಹೇಳುತ್ತದೆ. ಆದರೂ ನವೆಂಬರ್ 3 ರಂದು ಬೇರೆ ಯಾವುದೇ ಮದುವೆ ಇಲ್ಲದಿದ್ದರೂ ಸಹ ಉದ್ದೇಶಪೂರ್ವಕವಾಗಿ ದಲಿತರ ಮದುವೆಗೆ ಅವಕಾಶ ನೀಡದೆ ಅಸ್ಪೃಶ್ಯತೆ ಆಚರಿಸಲಾಗಿದೆ ಎಂದು ವಧುವಿನ ಸಹೋದರ ಆವುಲಕೊಂಡಪ್ಪ ತಹಶೀಲ್ದಾರ್‌ರವರಿಗೆ ದೂರು ನೀಡಿದ್ದಾರೆ.

ದೂರು ಸ್ವೀಕರಿಸಿರುವ ತಹಶೀಲ್ದಾರ್‌ ಸಿಗ್ಬತ್ ಉಲ್ಲಾರವರು, “ದೂರು ಪರಿಶೀಲಿಸಿದಾಗ ಮೇಲ್ನೋಟಕ್ಕೆ ತಪ್ಪು ನಡೆದಿರುವುದು ಕಂಡುಬಂದಿದೆ. ಹಾಗಾಗಿ ಟ್ರಸ್ಟ್ ಕಾರ್ಯದರ್ಶಿ ಮಾಚಾವಲಹಳ್ಳಿ ವೆಂಕಟರಾಯಪ್ಪನವರಿಗೆ ಕಾರಣ ಕೇಳಿ ನೋಟಿಸ್ ಕಳಿಸಲಾಗಿದೆ. ಅವರಿಂದ ಮಾಹಿತಿ ಬಂದ ನಂತರ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ದಲಿತ ಸಂಘರ್ಷ ಸಮಿತಿಯ ಮುಖಂಡರು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮತ್ತು ಗುಡಿಬಂಡೆ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳಿಗೂ ಸಹ ದೂರು ಸಲ್ಲಿಸಿದ್ದಾರೆ. ಆನಂತರ ಆರೋಪಿಗಳ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಮತ್ತು ಅಸ್ಪೃಶ್ಯತೆ ಆಚರಣೆ ನಿಲ್ಲಿಸಬೇಕು ಎಂದು ಆಗ್ರಹಿಸಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ದಸಂಸ ಮುಖಂಡರಾದ ಜಿ.ವಿ ಗಂಗಪ್ಪ, ಗುಡಿಬಂಡೆ ತಾಲ್ಲೂಕು ಸಂಚಾಲಕ ರಮಣ, ಇಸ್ಕೂಲಪ್ಪ, ಆದಿನಾರಾಯಣ, ನರಸಿಂಹಮೂರ್ತಿ, ಅಮರಾವತಿ, ಗಂಗರಾಜು, C. ಮುನಿಯಪ್ಪ, M. ವೆಂಕಟ ರಾಯಪ್ಪ ಉಪಸ್ಥಿತರಿದ್ದರು.

ಇದನ್ನೂ ಓದಿ; ಬೆಂಗಳೂರು: ದೇವಾಲಯಗಳಲ್ಲಿ ಚಪ್ಪಲಿ ಕಾಯುವ ಕೆಲಸ ಪರಿಶಿಷ್ಟರಿಗೆ ಮೀಸಲು; ವಿರೋಧದ ಬಳಿಕ ಟೆಂಡರ್‌ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಲಿತರು ಕಲ್ಯಾಣ ಮಂಟಪದಲ್ಲಿ ಮದುವೆ ಆಗುವಂತಿಲ್ಲ ತಪ್ಪು. . ಪಕ್ಕದಲ್ಲಿ ಕುಳಿತರೆ ತಪ್ಪು. ಪ್ರೇಮ ವಿವಾಹ ತಪ್ಪು.ಸಂಭ್ರಮ ಆಚರಣೆ ಮಾಡಿದರೆ ತಪ್ಪು. ಶಾಲೆಯಲ್ಲಿ ಅಡಿಗೆ ಮಾಡಿದರೆ ತಪ್ಪು……..!

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...