Homeದಲಿತ್ ಫೈಲ್ಸ್ದಲಿತರ ಮದುವೆಗೆ ಕಲ್ಯಾಣ ಮಂಟಪ ನೀಡದೆ ಅಸ್ಪೃಶ್ಯತೆ ಆಚರಣೆ: ದೂರು - ಪ್ರತಿಭಟನೆ

ದಲಿತರ ಮದುವೆಗೆ ಕಲ್ಯಾಣ ಮಂಟಪ ನೀಡದೆ ಅಸ್ಪೃಶ್ಯತೆ ಆಚರಣೆ: ದೂರು – ಪ್ರತಿಭಟನೆ

- Advertisement -
- Advertisement -

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ವೆಂಕಟರಮಣ ದೇವಸ್ಥಾನದಲ್ಲಿ ಪರಿಶಿಷ್ಟ ಜಾತಿ ಸಮುದಾಯದವರ ಮದುವೆಗೆ ಕಲ್ಯಾಣ ಮಂಟಪ ನೀಡದೆ ಅಸ್ಪೃಶ್ಯತೆ ಆಚರಿಸಲಾಗಿದೆ ಎಂದು ಆರೋಪಿಸಿ ದೂರು ದಾಖಲಾಗಿದ್ದು, ತಹಶೀಲ್ದಾರ್ ಕಚೇರಿ ಎದುರು ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಗುಡಿಬಂಡೆ ತಾಲ್ಲೂಕಿನ ಬ್ರಾಹ್ಮಣರಹಳ್ಳಿಯ ಪರಿಶಿಷ್ಟ ಜಾತಿ ಸಮುದಾಯದ ವೆಂಕಟರಾಯಪ್ಪನವರ ಪುತ್ರಿ ವೆಂಕಟಲಕ್ಷ್ಮಿ ಮತ್ತು ಬಾಗೇಪಲ್ಲಿಯ ಮಹೇಶ್ ಎಂಬುವವರ ನಡುವೆ ನವೆಂಬರ್ 3ರಂದು ವಿವಾಹ ನಿಶ್ಚಯವಾಗಿತ್ತು. ಅದಕ್ಕೂ 15 ದಿನ ಮೊದಲೇ ವೆಂಕಟಲಕ್ಷ್ಮಿಯ ಸಹೋದರ ಆವುಲಕೊಂಡಪ್ಪ ಎಂಬುವವರು ಗುಡಿಬಂಡೆಯ ವೆಂಕಟರಮಣ ದೇವಾಲಯ ಸಮಿತಿಯ ಕಾರ್ಯದರ್ಶಿ ಮಾಚಾವಲಹಳ್ಳಿ ವೆಂಕಟರಾಯಪ್ಪನವರ ಬಳಿ ತೆರಳಿ ನನ್ನ ತಂಗಿಯ ವಿವಾಹಕ್ಕೆ ದೇವಾಲಯ ಕಲ್ಯಾಣ ಮಂಟಪ್ಪವನ್ನು ಬಾಡಿಗೆಗೆ ನೀಡಬೇಕೆಂದು ಮನವಿ ಮಾಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆದರೆ ಟ್ರಸ್ಟ್ ಕಾರ್ಯದರ್ಶಿ ಮಾಚಾವಲಹಳ್ಳಿ ವೆಂಕಟರಾಯಪ್ಪರವರು ಅಂದು ಬೇರೆ ಮದುವೆ ನಿಗಧಿಯಾಗಿದೆ ಎಂದು ಸುಳ್ಳು ಹೇಳಿರುತ್ತಾರೆ. ವೆಂಕಟಲಕ್ಷ್ಮಿ ಮತ್ತು ಮಹೇಶ್ ಮದುವೆಯ ಲಗ್ನ ಪತ್ರಿಕೆಯಲ್ಲಿ ಅದೇ ಕಲ್ಯಾಣ ಮಂಟಪದ ಹೆಸರು ಸಹ ಮುದ್ರಿಸಿರುತ್ತಾರೆ. ಆದರೆ ಅಂದು ದೇವಾಲಯ ಬೀಗ ಹಾಕಿ ದಲಿತರ ಮದುವೆಗೆ ಅವಕಾಶ ನೀಡಿಲ್ಲ. ಅನಿವಾರ್ಯವಾಗಿ ದೇವಾಲಯದ ಹೊರಗೆ ಮದುವೆ ಮಾಡಲಾಗಿದೆ ಎಂದು ತಹಶೀಲ್ದಾರ್‌ರವರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

ಸದರಿ ದೇವಸ್ಥಾನವು ಮುಜರಾಯಿ ಇಲಾಖೆಗೆ ಸೇರಿದ್ದು, ಎಲ್ಲಾ ಜಾತಿಯವರಿಗೂ ಬಳಕೆಯ ಹಕ್ಕಿದೆ ಎಂದು ಕಾನೂನು ಹೇಳುತ್ತದೆ. ಆದರೂ ನವೆಂಬರ್ 3 ರಂದು ಬೇರೆ ಯಾವುದೇ ಮದುವೆ ಇಲ್ಲದಿದ್ದರೂ ಸಹ ಉದ್ದೇಶಪೂರ್ವಕವಾಗಿ ದಲಿತರ ಮದುವೆಗೆ ಅವಕಾಶ ನೀಡದೆ ಅಸ್ಪೃಶ್ಯತೆ ಆಚರಿಸಲಾಗಿದೆ ಎಂದು ವಧುವಿನ ಸಹೋದರ ಆವುಲಕೊಂಡಪ್ಪ ತಹಶೀಲ್ದಾರ್‌ರವರಿಗೆ ದೂರು ನೀಡಿದ್ದಾರೆ.

ದೂರು ಸ್ವೀಕರಿಸಿರುವ ತಹಶೀಲ್ದಾರ್‌ ಸಿಗ್ಬತ್ ಉಲ್ಲಾರವರು, “ದೂರು ಪರಿಶೀಲಿಸಿದಾಗ ಮೇಲ್ನೋಟಕ್ಕೆ ತಪ್ಪು ನಡೆದಿರುವುದು ಕಂಡುಬಂದಿದೆ. ಹಾಗಾಗಿ ಟ್ರಸ್ಟ್ ಕಾರ್ಯದರ್ಶಿ ಮಾಚಾವಲಹಳ್ಳಿ ವೆಂಕಟರಾಯಪ್ಪನವರಿಗೆ ಕಾರಣ ಕೇಳಿ ನೋಟಿಸ್ ಕಳಿಸಲಾಗಿದೆ. ಅವರಿಂದ ಮಾಹಿತಿ ಬಂದ ನಂತರ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ದಲಿತ ಸಂಘರ್ಷ ಸಮಿತಿಯ ಮುಖಂಡರು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮತ್ತು ಗುಡಿಬಂಡೆ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳಿಗೂ ಸಹ ದೂರು ಸಲ್ಲಿಸಿದ್ದಾರೆ. ಆನಂತರ ಆರೋಪಿಗಳ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಮತ್ತು ಅಸ್ಪೃಶ್ಯತೆ ಆಚರಣೆ ನಿಲ್ಲಿಸಬೇಕು ಎಂದು ಆಗ್ರಹಿಸಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ದಸಂಸ ಮುಖಂಡರಾದ ಜಿ.ವಿ ಗಂಗಪ್ಪ, ಗುಡಿಬಂಡೆ ತಾಲ್ಲೂಕು ಸಂಚಾಲಕ ರಮಣ, ಇಸ್ಕೂಲಪ್ಪ, ಆದಿನಾರಾಯಣ, ನರಸಿಂಹಮೂರ್ತಿ, ಅಮರಾವತಿ, ಗಂಗರಾಜು, C. ಮುನಿಯಪ್ಪ, M. ವೆಂಕಟ ರಾಯಪ್ಪ ಉಪಸ್ಥಿತರಿದ್ದರು.

ಇದನ್ನೂ ಓದಿ; ಬೆಂಗಳೂರು: ದೇವಾಲಯಗಳಲ್ಲಿ ಚಪ್ಪಲಿ ಕಾಯುವ ಕೆಲಸ ಪರಿಶಿಷ್ಟರಿಗೆ ಮೀಸಲು; ವಿರೋಧದ ಬಳಿಕ ಟೆಂಡರ್‌ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಲಿತರು ಕಲ್ಯಾಣ ಮಂಟಪದಲ್ಲಿ ಮದುವೆ ಆಗುವಂತಿಲ್ಲ ತಪ್ಪು. . ಪಕ್ಕದಲ್ಲಿ ಕುಳಿತರೆ ತಪ್ಪು. ಪ್ರೇಮ ವಿವಾಹ ತಪ್ಪು.ಸಂಭ್ರಮ ಆಚರಣೆ ಮಾಡಿದರೆ ತಪ್ಪು. ಶಾಲೆಯಲ್ಲಿ ಅಡಿಗೆ ಮಾಡಿದರೆ ತಪ್ಪು……..!

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....