Homeದಲಿತ್ ಫೈಲ್ಸ್ದಲಿತರ ಮದುವೆಗೆ ಕಲ್ಯಾಣ ಮಂಟಪ ನೀಡದೆ ಅಸ್ಪೃಶ್ಯತೆ ಆಚರಣೆ: ದೂರು - ಪ್ರತಿಭಟನೆ

ದಲಿತರ ಮದುವೆಗೆ ಕಲ್ಯಾಣ ಮಂಟಪ ನೀಡದೆ ಅಸ್ಪೃಶ್ಯತೆ ಆಚರಣೆ: ದೂರು – ಪ್ರತಿಭಟನೆ

- Advertisement -
- Advertisement -

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ವೆಂಕಟರಮಣ ದೇವಸ್ಥಾನದಲ್ಲಿ ಪರಿಶಿಷ್ಟ ಜಾತಿ ಸಮುದಾಯದವರ ಮದುವೆಗೆ ಕಲ್ಯಾಣ ಮಂಟಪ ನೀಡದೆ ಅಸ್ಪೃಶ್ಯತೆ ಆಚರಿಸಲಾಗಿದೆ ಎಂದು ಆರೋಪಿಸಿ ದೂರು ದಾಖಲಾಗಿದ್ದು, ತಹಶೀಲ್ದಾರ್ ಕಚೇರಿ ಎದುರು ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಗುಡಿಬಂಡೆ ತಾಲ್ಲೂಕಿನ ಬ್ರಾಹ್ಮಣರಹಳ್ಳಿಯ ಪರಿಶಿಷ್ಟ ಜಾತಿ ಸಮುದಾಯದ ವೆಂಕಟರಾಯಪ್ಪನವರ ಪುತ್ರಿ ವೆಂಕಟಲಕ್ಷ್ಮಿ ಮತ್ತು ಬಾಗೇಪಲ್ಲಿಯ ಮಹೇಶ್ ಎಂಬುವವರ ನಡುವೆ ನವೆಂಬರ್ 3ರಂದು ವಿವಾಹ ನಿಶ್ಚಯವಾಗಿತ್ತು. ಅದಕ್ಕೂ 15 ದಿನ ಮೊದಲೇ ವೆಂಕಟಲಕ್ಷ್ಮಿಯ ಸಹೋದರ ಆವುಲಕೊಂಡಪ್ಪ ಎಂಬುವವರು ಗುಡಿಬಂಡೆಯ ವೆಂಕಟರಮಣ ದೇವಾಲಯ ಸಮಿತಿಯ ಕಾರ್ಯದರ್ಶಿ ಮಾಚಾವಲಹಳ್ಳಿ ವೆಂಕಟರಾಯಪ್ಪನವರ ಬಳಿ ತೆರಳಿ ನನ್ನ ತಂಗಿಯ ವಿವಾಹಕ್ಕೆ ದೇವಾಲಯ ಕಲ್ಯಾಣ ಮಂಟಪ್ಪವನ್ನು ಬಾಡಿಗೆಗೆ ನೀಡಬೇಕೆಂದು ಮನವಿ ಮಾಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆದರೆ ಟ್ರಸ್ಟ್ ಕಾರ್ಯದರ್ಶಿ ಮಾಚಾವಲಹಳ್ಳಿ ವೆಂಕಟರಾಯಪ್ಪರವರು ಅಂದು ಬೇರೆ ಮದುವೆ ನಿಗಧಿಯಾಗಿದೆ ಎಂದು ಸುಳ್ಳು ಹೇಳಿರುತ್ತಾರೆ. ವೆಂಕಟಲಕ್ಷ್ಮಿ ಮತ್ತು ಮಹೇಶ್ ಮದುವೆಯ ಲಗ್ನ ಪತ್ರಿಕೆಯಲ್ಲಿ ಅದೇ ಕಲ್ಯಾಣ ಮಂಟಪದ ಹೆಸರು ಸಹ ಮುದ್ರಿಸಿರುತ್ತಾರೆ. ಆದರೆ ಅಂದು ದೇವಾಲಯ ಬೀಗ ಹಾಕಿ ದಲಿತರ ಮದುವೆಗೆ ಅವಕಾಶ ನೀಡಿಲ್ಲ. ಅನಿವಾರ್ಯವಾಗಿ ದೇವಾಲಯದ ಹೊರಗೆ ಮದುವೆ ಮಾಡಲಾಗಿದೆ ಎಂದು ತಹಶೀಲ್ದಾರ್‌ರವರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

ಸದರಿ ದೇವಸ್ಥಾನವು ಮುಜರಾಯಿ ಇಲಾಖೆಗೆ ಸೇರಿದ್ದು, ಎಲ್ಲಾ ಜಾತಿಯವರಿಗೂ ಬಳಕೆಯ ಹಕ್ಕಿದೆ ಎಂದು ಕಾನೂನು ಹೇಳುತ್ತದೆ. ಆದರೂ ನವೆಂಬರ್ 3 ರಂದು ಬೇರೆ ಯಾವುದೇ ಮದುವೆ ಇಲ್ಲದಿದ್ದರೂ ಸಹ ಉದ್ದೇಶಪೂರ್ವಕವಾಗಿ ದಲಿತರ ಮದುವೆಗೆ ಅವಕಾಶ ನೀಡದೆ ಅಸ್ಪೃಶ್ಯತೆ ಆಚರಿಸಲಾಗಿದೆ ಎಂದು ವಧುವಿನ ಸಹೋದರ ಆವುಲಕೊಂಡಪ್ಪ ತಹಶೀಲ್ದಾರ್‌ರವರಿಗೆ ದೂರು ನೀಡಿದ್ದಾರೆ.

ದೂರು ಸ್ವೀಕರಿಸಿರುವ ತಹಶೀಲ್ದಾರ್‌ ಸಿಗ್ಬತ್ ಉಲ್ಲಾರವರು, “ದೂರು ಪರಿಶೀಲಿಸಿದಾಗ ಮೇಲ್ನೋಟಕ್ಕೆ ತಪ್ಪು ನಡೆದಿರುವುದು ಕಂಡುಬಂದಿದೆ. ಹಾಗಾಗಿ ಟ್ರಸ್ಟ್ ಕಾರ್ಯದರ್ಶಿ ಮಾಚಾವಲಹಳ್ಳಿ ವೆಂಕಟರಾಯಪ್ಪನವರಿಗೆ ಕಾರಣ ಕೇಳಿ ನೋಟಿಸ್ ಕಳಿಸಲಾಗಿದೆ. ಅವರಿಂದ ಮಾಹಿತಿ ಬಂದ ನಂತರ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ದಲಿತ ಸಂಘರ್ಷ ಸಮಿತಿಯ ಮುಖಂಡರು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮತ್ತು ಗುಡಿಬಂಡೆ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳಿಗೂ ಸಹ ದೂರು ಸಲ್ಲಿಸಿದ್ದಾರೆ. ಆನಂತರ ಆರೋಪಿಗಳ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಮತ್ತು ಅಸ್ಪೃಶ್ಯತೆ ಆಚರಣೆ ನಿಲ್ಲಿಸಬೇಕು ಎಂದು ಆಗ್ರಹಿಸಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ದಸಂಸ ಮುಖಂಡರಾದ ಜಿ.ವಿ ಗಂಗಪ್ಪ, ಗುಡಿಬಂಡೆ ತಾಲ್ಲೂಕು ಸಂಚಾಲಕ ರಮಣ, ಇಸ್ಕೂಲಪ್ಪ, ಆದಿನಾರಾಯಣ, ನರಸಿಂಹಮೂರ್ತಿ, ಅಮರಾವತಿ, ಗಂಗರಾಜು, C. ಮುನಿಯಪ್ಪ, M. ವೆಂಕಟ ರಾಯಪ್ಪ ಉಪಸ್ಥಿತರಿದ್ದರು.

ಇದನ್ನೂ ಓದಿ; ಬೆಂಗಳೂರು: ದೇವಾಲಯಗಳಲ್ಲಿ ಚಪ್ಪಲಿ ಕಾಯುವ ಕೆಲಸ ಪರಿಶಿಷ್ಟರಿಗೆ ಮೀಸಲು; ವಿರೋಧದ ಬಳಿಕ ಟೆಂಡರ್‌ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಲಿತರು ಕಲ್ಯಾಣ ಮಂಟಪದಲ್ಲಿ ಮದುವೆ ಆಗುವಂತಿಲ್ಲ ತಪ್ಪು. . ಪಕ್ಕದಲ್ಲಿ ಕುಳಿತರೆ ತಪ್ಪು. ಪ್ರೇಮ ವಿವಾಹ ತಪ್ಪು.ಸಂಭ್ರಮ ಆಚರಣೆ ಮಾಡಿದರೆ ತಪ್ಪು. ಶಾಲೆಯಲ್ಲಿ ಅಡಿಗೆ ಮಾಡಿದರೆ ತಪ್ಪು……..!

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...