Homeಕರ್ನಾಟಕರಾಜ್ಯದಲ್ಲಿ ಜೀವಂತವಾಗಿರುವ ಅಸ್ಪೃಷ್ಯತೆ ಆಚರಣೆ: ಸದನಕ್ಕೆ ವರದಿ ನೀಡಿದ ಸಮಿತಿ

ರಾಜ್ಯದಲ್ಲಿ ಜೀವಂತವಾಗಿರುವ ಅಸ್ಪೃಷ್ಯತೆ ಆಚರಣೆ: ಸದನಕ್ಕೆ ವರದಿ ನೀಡಿದ ಸಮಿತಿ

- Advertisement -
- Advertisement -

ರಾಜ್ಯದಲ್ಲಿ ಅಸ್ಪೃಷ್ಯತೆ ಆಚರಣೆ ಇನ್ನೂ ಜೀವಂತವಾಗಿಯೇ ಇದೆ. ರಾಜ್ಯದ ಕೆಲವು ಗ್ರಾಮಗಳಲ್ಲಿ ದಲಿತರಿಗೆ ದೇವಸ್ಥಾನ, ಅಂಗನವಾಡಿಗಳಿಗೆ ಪ್ರವೇಶಕ್ಕೆ ನಿರಾಕರಿಸುವುದು, ಕುಡಿಯುವ ನೀರು, ಪಡಿತರ ಪಡೆಯಲು ಅಡ್ಡಿ ಪಡಿಸುವುದು ನಡೆಯುತ್ತಲೇ ಇದೆ. ಜಾತಿ ಕಾರಣಕ್ಕೆ ಈ ಅವಮಾನ, ದೌರ್ಜನ್ಯಗಳು ನಿರಂತವಾಗಿ ನಡೆಯುತ್ತಿದ್ದರೂ ಅವುಗಳಲ್ಲಿ ಕೆಲವು ಮಾತ್ರ ಬಯಲಾಗುತ್ತದೆ.

ಈ ಹಿಂದೆ ಬಿಜೆಪಿ ಶಾಸಕರಾಗಿದ್ದ ಗೂಳಿಹಟ್ಟಿ ಡಿ. ಶೇಖರ್ ಸದನದಲ್ಲಿ ಮಾತನಾಡುತ್ತಾ, ಹಲವು ಗ್ರಾಮಗಳಿಗೆ ದಲಿತ ಅಧಿಕಾರಿಗಳಿಗೆ ಪ್ರವೇಶವಿಲ್ಲ. ದಲಿತ ಎಂಬ ಕಾರಣಕ್ಕಾಗಿ ಊರ ಒಳಗಡೆ ಬಿಡುತ್ತಿಲ್ಲ ಎಂದು ಉನ್ನತ ಮಟ್ಟದ ಅಧಿಕಾರಿಗಳೇ ಅಳಲು ತೋಡಿಕೊಂಡಿದ್ದರು. ಅಷ್ಟು ಮಾತ್ರವಲ್ಲ ರಾಜಕಾರಣಿಗಳಿಗೂ ಪ್ರವೇಶ ನಿರಾಕರಣೆ ಮಾಡಿದ ಪ್ರಸಂಗಗಳು ನಡೆದಿವೆ ಎಂದು ಹೇಳಿಕೊಂಡಿದ್ದರು. ಇದಲ್ಲದೆ ಈ ಹಿಂದೆ ಹಲವು ದಲಿತ ಸಮುದಾಯದ ಶಾಸಕರು, ಸಚಿವರುಗಳು ಕೂಡ ಜಾತಿ ಕಾರಣಕ್ಕೆ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶಕ್ಕೆ ನಿರಾಕರಣೆಯಿಂದ ಅವಮಾನ ಅನುಭವಿಸಿದ ಉದಾಹರಣೆಗಳು ಕೂಡ ಇವೆ.

ಕರ್ನಾಟಕದ ಹಲವಾರು ಭಾಗಗಳಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ ಎಂದು ಶಾಸಕಾಂಗ ಸಮಿತಿಯು ತನ್ನ ವರದಿಯಲ್ಲಿ ಹೇಳಿದೆ. ಮಳವಳ್ಳಿ ಕಾಂಗ್ರೆಸ್ ಶಾಸಕ ಪಿ.ಎಂ.ನರೇಂದ್ರಸ್ವಾಮಿ ನೇತೃತ್ವದ ಪರಿಶಿಷ್ಟ ಜಾತಿ-ಪಂಗಡಗಳ ಕಲ್ಯಾಣ ಸಮಿತಿಯು ತನ್ನ ಮಧ್ಯಂತರ ವರದಿಯನ್ನು ವಿಧಾನಸಭೆಯಲ್ಲಿ ಬುಧವಾರ ಮಂಡಿಸಿದೆ. ಇಂದಿಗೂ ಹಲವಾರು ಸ್ಥಳಗಳಲ್ಲಿ ಅಸ್ಪೃಶ್ಯತೆ ಆಚರಣೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲಾಗಿಲ್ಲ ಎಂದು ಸಮಿತಿಯು ವರದಿಯಲ್ಲಿ ಉಲ್ಲೇಖಿಸಿದೆ.

ಶಾಸಕಾಂಗ ಸಮಿತಿಯು ತನ್ನ ವರದಿಯಲ್ಲಿ ಎಸ್ಸಿ-ಎಸ್ಟಿಗಳಿಗೆ ಮೀಸಲಿರಿಸಿದ 2.5 ಲಕ್ಷ ಕೋಟಿ ರೂಪಾಯಿಗಳ ಅನುದಾನದಲ್ಲಿ ಎಷ್ಟು ತಲುಪಿದೆ? ಮತ್ತು ಹಣವನ್ನು ಸರಿಯಾಗಿ ಬಳಸಲಾಗಿದೆಯಾ ಎಂಬುವುದನ್ನು ಖಚಿತಪಡಿಸಿಕೊಳ್ಳಲು ಹೊಸ ಕಾರ್ಯವಿಧಾನವನ್ನು ಜಾರಿಗೆ ತರುವಂತೆ ಕೋರಿದೆ.

ವರದಿಯ ಪ್ರಕಾರ ಕರ್ನಾಟಕದಲ್ಲಿ 1.8 ಕೋಟಿ ಎಸ್ಸಿ-ಎಸ್ಟಿ ಸಮುದಾಯದ ಜನರಿದ್ದಾರೆ. 2013ರಿಂದ ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ (SCSP-TSP) ಅಡಿಯಲ್ಲಿ SC/ST ಗಳಿಗೆ ಸರ್ಕಾರ 2.5 ಲಕ್ಷ ಕೋಟಿ ರೂ. ಅನುದಾನ ನೀಡುತ್ತಿದೆ. ಹಣ ಸಮುದಾಯದ ಜನರಿಗೆ ತಲುಪುತ್ತಿಲ್ಲ ಅಥವಾ ಬಳಕೆಯಾಗುತ್ತಿಲ್ಲ. ಹಣವನ್ನು ಸರಿಯಾಗಿ ಬಳಸಿಕೊಳ್ಳುವಂತೆ ನೋಡಿಕೊಳ್ಳಲು ಹೊಸ ಕಾರ್ಯವಿಧಾನ ರೂಪಿಸುವ ಅಗತ್ಯವಿದೆ ಎಂದು ವರದಿ ಹೇಳಿದೆ.

ಇದಲ್ಲದೆ ಸಮಿತಿಯು ನಕಲಿ ಎಸ್ಸಿ-ಎಸ್ಟಿ ಜಾತಿ ಪ್ರಮಾಣ ಪತ್ರಗಳ ಸಮಸ್ಯೆ ಅವ್ಯಾಹತವಾಗಿ ಮುಂದುವರಿದಿದ್ದು, 175 ತಹಶೀಲ್ದಾರ್‌ಗಳು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ಗಮನಿಸಿದೆ. ಕುರುಬರು, ಬ್ರಾಹ್ಮಣರು, ವೀರಶೈವರು, ಮುದಲಿಯಾರುಗಳು ಮತ್ತು ಇತರರು ಎಸ್ಸಿ-ಎಸ್ಟಿ ಪ್ರಮಾಣಪತ್ರಗಳನ್ನು ಪಡೆದುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಇದಲ್ಲದೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿ (ಕೆಆರ್‌ಇಐಎಸ್) ನಡೆಸುತ್ತಿರುವ ಶಾಲೆಗಳಲ್ಲಿ ಕಳೆದ ಐದು ವರ್ಷಗಳಲ್ಲಿ 92 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಸಮಿತಿಯು ಹೇಳಿದೆ. ಇದರಲ್ಲಿ 29 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಮತ್ತು ಮನೆಗೆ ಹೋಗುವಾಗ ನಿಗೂಢ ಪರಿಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ. ಈ ಸಾವುಗಳ ಬಗ್ಗೆ ಸರಿಯಾದ ತನಿಖೆ ನಡೆದಿಲ್ಲ ಎಂದು ನರೇಂದ್ರಸ್ವಾಮಿ ಹೇಳಿದ್ದಾರೆ.

ಕೆಆರ್‌ಇಐಎಸ್ ಅಧೀನದಲ್ಲಿನ ಶಾಲೆಗಳಲ್ಲಿ ಮಹಿಳಾ ವಾರ್ಡನ್‌ಗಳು ಕೊರತೆ ಇದ್ದು ಸಮಿತಿಯು ಕೆಆರ್‌ಇಐಎಸ್ ಶಾಲೆಗಳಲ್ಲಿ ಬಾಲಕಿಯರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಪ್ರತಿ ಶಾಲೆಗೆ ಮಹಿಳಾ ಹೋಂಗಾರ್ಡ್‌ಗಳನ್ನು ನೇಮಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದೆ.

ಸಮಾಜ ಕಲ್ಯಾಣ ಇಲಾಖೆಯು ನಡೆಸುತ್ತಿರುವ ಹಲವಾರು ವಸತಿ ನಿಲಯಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು ಅವುಗಳು ಭಯಾನಕ ಸ್ಥಿತಿಯಲ್ಲಿವೆ. ಸರಿಯಾದ ಶೌಚಾಲಯಗಳು ಮತ್ತು ಸ್ನಾನಗೃಹಗಳಿಲ್ಲದೆ ವಿದ್ಯಾರ್ಥಿಗಳಿಗೆ ಬಯಲಿನಲ್ಲಿ ಸ್ನಾನ ಮಾಡಲು ಒತ್ತಾಯಿಸಲಾಗುತ್ತಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ಇದಲ್ಲದೆ ಮದ್ಯದಂಗಡಿಗಳ ಪರವಾನಗಿಗಳನ್ನು ನೀಡಲು ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಜನರಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು. ಹೊಸ ಸಿಎಲ್-2, ಸಿಎಲ್-7, ಸಿಎಲ್‌-9 ಮತ್ತು ಸಿಎಲ್-11 ಮದ್ಯದಂಗಡಿಗಳ ಪರವಾನಗಿಯಲ್ಲಿ ಪರಿಶಿಷ್ಟರಿಗೆ ಮೀಸಲಾತಿ ನೀಡಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.

ಇದನ್ನು ಓದಿ: ಬಾಬರಿ ಮಸೀದಿ ಧ್ವಂಸಕ್ಕೆ 31 ವರ್ಷ: ಅಜೆಂಡಾ ಯಶಸ್ವಿಗೊಳಿಸುವತ್ತ ಬಿಜೆಪಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...