Homeಕರ್ನಾಟಕರಾಜ್ಯದಲ್ಲಿ ಜೀವಂತವಾಗಿರುವ ಅಸ್ಪೃಷ್ಯತೆ ಆಚರಣೆ: ಸದನಕ್ಕೆ ವರದಿ ನೀಡಿದ ಸಮಿತಿ

ರಾಜ್ಯದಲ್ಲಿ ಜೀವಂತವಾಗಿರುವ ಅಸ್ಪೃಷ್ಯತೆ ಆಚರಣೆ: ಸದನಕ್ಕೆ ವರದಿ ನೀಡಿದ ಸಮಿತಿ

- Advertisement -
- Advertisement -

ರಾಜ್ಯದಲ್ಲಿ ಅಸ್ಪೃಷ್ಯತೆ ಆಚರಣೆ ಇನ್ನೂ ಜೀವಂತವಾಗಿಯೇ ಇದೆ. ರಾಜ್ಯದ ಕೆಲವು ಗ್ರಾಮಗಳಲ್ಲಿ ದಲಿತರಿಗೆ ದೇವಸ್ಥಾನ, ಅಂಗನವಾಡಿಗಳಿಗೆ ಪ್ರವೇಶಕ್ಕೆ ನಿರಾಕರಿಸುವುದು, ಕುಡಿಯುವ ನೀರು, ಪಡಿತರ ಪಡೆಯಲು ಅಡ್ಡಿ ಪಡಿಸುವುದು ನಡೆಯುತ್ತಲೇ ಇದೆ. ಜಾತಿ ಕಾರಣಕ್ಕೆ ಈ ಅವಮಾನ, ದೌರ್ಜನ್ಯಗಳು ನಿರಂತವಾಗಿ ನಡೆಯುತ್ತಿದ್ದರೂ ಅವುಗಳಲ್ಲಿ ಕೆಲವು ಮಾತ್ರ ಬಯಲಾಗುತ್ತದೆ.

ಈ ಹಿಂದೆ ಬಿಜೆಪಿ ಶಾಸಕರಾಗಿದ್ದ ಗೂಳಿಹಟ್ಟಿ ಡಿ. ಶೇಖರ್ ಸದನದಲ್ಲಿ ಮಾತನಾಡುತ್ತಾ, ಹಲವು ಗ್ರಾಮಗಳಿಗೆ ದಲಿತ ಅಧಿಕಾರಿಗಳಿಗೆ ಪ್ರವೇಶವಿಲ್ಲ. ದಲಿತ ಎಂಬ ಕಾರಣಕ್ಕಾಗಿ ಊರ ಒಳಗಡೆ ಬಿಡುತ್ತಿಲ್ಲ ಎಂದು ಉನ್ನತ ಮಟ್ಟದ ಅಧಿಕಾರಿಗಳೇ ಅಳಲು ತೋಡಿಕೊಂಡಿದ್ದರು. ಅಷ್ಟು ಮಾತ್ರವಲ್ಲ ರಾಜಕಾರಣಿಗಳಿಗೂ ಪ್ರವೇಶ ನಿರಾಕರಣೆ ಮಾಡಿದ ಪ್ರಸಂಗಗಳು ನಡೆದಿವೆ ಎಂದು ಹೇಳಿಕೊಂಡಿದ್ದರು. ಇದಲ್ಲದೆ ಈ ಹಿಂದೆ ಹಲವು ದಲಿತ ಸಮುದಾಯದ ಶಾಸಕರು, ಸಚಿವರುಗಳು ಕೂಡ ಜಾತಿ ಕಾರಣಕ್ಕೆ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶಕ್ಕೆ ನಿರಾಕರಣೆಯಿಂದ ಅವಮಾನ ಅನುಭವಿಸಿದ ಉದಾಹರಣೆಗಳು ಕೂಡ ಇವೆ.

ಕರ್ನಾಟಕದ ಹಲವಾರು ಭಾಗಗಳಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ ಎಂದು ಶಾಸಕಾಂಗ ಸಮಿತಿಯು ತನ್ನ ವರದಿಯಲ್ಲಿ ಹೇಳಿದೆ. ಮಳವಳ್ಳಿ ಕಾಂಗ್ರೆಸ್ ಶಾಸಕ ಪಿ.ಎಂ.ನರೇಂದ್ರಸ್ವಾಮಿ ನೇತೃತ್ವದ ಪರಿಶಿಷ್ಟ ಜಾತಿ-ಪಂಗಡಗಳ ಕಲ್ಯಾಣ ಸಮಿತಿಯು ತನ್ನ ಮಧ್ಯಂತರ ವರದಿಯನ್ನು ವಿಧಾನಸಭೆಯಲ್ಲಿ ಬುಧವಾರ ಮಂಡಿಸಿದೆ. ಇಂದಿಗೂ ಹಲವಾರು ಸ್ಥಳಗಳಲ್ಲಿ ಅಸ್ಪೃಶ್ಯತೆ ಆಚರಣೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲಾಗಿಲ್ಲ ಎಂದು ಸಮಿತಿಯು ವರದಿಯಲ್ಲಿ ಉಲ್ಲೇಖಿಸಿದೆ.

ಶಾಸಕಾಂಗ ಸಮಿತಿಯು ತನ್ನ ವರದಿಯಲ್ಲಿ ಎಸ್ಸಿ-ಎಸ್ಟಿಗಳಿಗೆ ಮೀಸಲಿರಿಸಿದ 2.5 ಲಕ್ಷ ಕೋಟಿ ರೂಪಾಯಿಗಳ ಅನುದಾನದಲ್ಲಿ ಎಷ್ಟು ತಲುಪಿದೆ? ಮತ್ತು ಹಣವನ್ನು ಸರಿಯಾಗಿ ಬಳಸಲಾಗಿದೆಯಾ ಎಂಬುವುದನ್ನು ಖಚಿತಪಡಿಸಿಕೊಳ್ಳಲು ಹೊಸ ಕಾರ್ಯವಿಧಾನವನ್ನು ಜಾರಿಗೆ ತರುವಂತೆ ಕೋರಿದೆ.

ವರದಿಯ ಪ್ರಕಾರ ಕರ್ನಾಟಕದಲ್ಲಿ 1.8 ಕೋಟಿ ಎಸ್ಸಿ-ಎಸ್ಟಿ ಸಮುದಾಯದ ಜನರಿದ್ದಾರೆ. 2013ರಿಂದ ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ (SCSP-TSP) ಅಡಿಯಲ್ಲಿ SC/ST ಗಳಿಗೆ ಸರ್ಕಾರ 2.5 ಲಕ್ಷ ಕೋಟಿ ರೂ. ಅನುದಾನ ನೀಡುತ್ತಿದೆ. ಹಣ ಸಮುದಾಯದ ಜನರಿಗೆ ತಲುಪುತ್ತಿಲ್ಲ ಅಥವಾ ಬಳಕೆಯಾಗುತ್ತಿಲ್ಲ. ಹಣವನ್ನು ಸರಿಯಾಗಿ ಬಳಸಿಕೊಳ್ಳುವಂತೆ ನೋಡಿಕೊಳ್ಳಲು ಹೊಸ ಕಾರ್ಯವಿಧಾನ ರೂಪಿಸುವ ಅಗತ್ಯವಿದೆ ಎಂದು ವರದಿ ಹೇಳಿದೆ.

ಇದಲ್ಲದೆ ಸಮಿತಿಯು ನಕಲಿ ಎಸ್ಸಿ-ಎಸ್ಟಿ ಜಾತಿ ಪ್ರಮಾಣ ಪತ್ರಗಳ ಸಮಸ್ಯೆ ಅವ್ಯಾಹತವಾಗಿ ಮುಂದುವರಿದಿದ್ದು, 175 ತಹಶೀಲ್ದಾರ್‌ಗಳು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ಗಮನಿಸಿದೆ. ಕುರುಬರು, ಬ್ರಾಹ್ಮಣರು, ವೀರಶೈವರು, ಮುದಲಿಯಾರುಗಳು ಮತ್ತು ಇತರರು ಎಸ್ಸಿ-ಎಸ್ಟಿ ಪ್ರಮಾಣಪತ್ರಗಳನ್ನು ಪಡೆದುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಇದಲ್ಲದೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿ (ಕೆಆರ್‌ಇಐಎಸ್) ನಡೆಸುತ್ತಿರುವ ಶಾಲೆಗಳಲ್ಲಿ ಕಳೆದ ಐದು ವರ್ಷಗಳಲ್ಲಿ 92 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಸಮಿತಿಯು ಹೇಳಿದೆ. ಇದರಲ್ಲಿ 29 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಮತ್ತು ಮನೆಗೆ ಹೋಗುವಾಗ ನಿಗೂಢ ಪರಿಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ. ಈ ಸಾವುಗಳ ಬಗ್ಗೆ ಸರಿಯಾದ ತನಿಖೆ ನಡೆದಿಲ್ಲ ಎಂದು ನರೇಂದ್ರಸ್ವಾಮಿ ಹೇಳಿದ್ದಾರೆ.

ಕೆಆರ್‌ಇಐಎಸ್ ಅಧೀನದಲ್ಲಿನ ಶಾಲೆಗಳಲ್ಲಿ ಮಹಿಳಾ ವಾರ್ಡನ್‌ಗಳು ಕೊರತೆ ಇದ್ದು ಸಮಿತಿಯು ಕೆಆರ್‌ಇಐಎಸ್ ಶಾಲೆಗಳಲ್ಲಿ ಬಾಲಕಿಯರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಪ್ರತಿ ಶಾಲೆಗೆ ಮಹಿಳಾ ಹೋಂಗಾರ್ಡ್‌ಗಳನ್ನು ನೇಮಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದೆ.

ಸಮಾಜ ಕಲ್ಯಾಣ ಇಲಾಖೆಯು ನಡೆಸುತ್ತಿರುವ ಹಲವಾರು ವಸತಿ ನಿಲಯಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು ಅವುಗಳು ಭಯಾನಕ ಸ್ಥಿತಿಯಲ್ಲಿವೆ. ಸರಿಯಾದ ಶೌಚಾಲಯಗಳು ಮತ್ತು ಸ್ನಾನಗೃಹಗಳಿಲ್ಲದೆ ವಿದ್ಯಾರ್ಥಿಗಳಿಗೆ ಬಯಲಿನಲ್ಲಿ ಸ್ನಾನ ಮಾಡಲು ಒತ್ತಾಯಿಸಲಾಗುತ್ತಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ಇದಲ್ಲದೆ ಮದ್ಯದಂಗಡಿಗಳ ಪರವಾನಗಿಗಳನ್ನು ನೀಡಲು ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಜನರಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು. ಹೊಸ ಸಿಎಲ್-2, ಸಿಎಲ್-7, ಸಿಎಲ್‌-9 ಮತ್ತು ಸಿಎಲ್-11 ಮದ್ಯದಂಗಡಿಗಳ ಪರವಾನಗಿಯಲ್ಲಿ ಪರಿಶಿಷ್ಟರಿಗೆ ಮೀಸಲಾತಿ ನೀಡಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.

ಇದನ್ನು ಓದಿ: ಬಾಬರಿ ಮಸೀದಿ ಧ್ವಂಸಕ್ಕೆ 31 ವರ್ಷ: ಅಜೆಂಡಾ ಯಶಸ್ವಿಗೊಳಿಸುವತ್ತ ಬಿಜೆಪಿ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯರಿಗೆ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು: ಸುರ್ಜೇವಾಲ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ...