Homeಕರ್ನಾಟಕರಾಜ್ಯದಲ್ಲಿ ಜೀವಂತವಾಗಿರುವ ಅಸ್ಪೃಷ್ಯತೆ ಆಚರಣೆ: ಸದನಕ್ಕೆ ವರದಿ ನೀಡಿದ ಸಮಿತಿ

ರಾಜ್ಯದಲ್ಲಿ ಜೀವಂತವಾಗಿರುವ ಅಸ್ಪೃಷ್ಯತೆ ಆಚರಣೆ: ಸದನಕ್ಕೆ ವರದಿ ನೀಡಿದ ಸಮಿತಿ

- Advertisement -
- Advertisement -

ರಾಜ್ಯದಲ್ಲಿ ಅಸ್ಪೃಷ್ಯತೆ ಆಚರಣೆ ಇನ್ನೂ ಜೀವಂತವಾಗಿಯೇ ಇದೆ. ರಾಜ್ಯದ ಕೆಲವು ಗ್ರಾಮಗಳಲ್ಲಿ ದಲಿತರಿಗೆ ದೇವಸ್ಥಾನ, ಅಂಗನವಾಡಿಗಳಿಗೆ ಪ್ರವೇಶಕ್ಕೆ ನಿರಾಕರಿಸುವುದು, ಕುಡಿಯುವ ನೀರು, ಪಡಿತರ ಪಡೆಯಲು ಅಡ್ಡಿ ಪಡಿಸುವುದು ನಡೆಯುತ್ತಲೇ ಇದೆ. ಜಾತಿ ಕಾರಣಕ್ಕೆ ಈ ಅವಮಾನ, ದೌರ್ಜನ್ಯಗಳು ನಿರಂತವಾಗಿ ನಡೆಯುತ್ತಿದ್ದರೂ ಅವುಗಳಲ್ಲಿ ಕೆಲವು ಮಾತ್ರ ಬಯಲಾಗುತ್ತದೆ.

ಈ ಹಿಂದೆ ಬಿಜೆಪಿ ಶಾಸಕರಾಗಿದ್ದ ಗೂಳಿಹಟ್ಟಿ ಡಿ. ಶೇಖರ್ ಸದನದಲ್ಲಿ ಮಾತನಾಡುತ್ತಾ, ಹಲವು ಗ್ರಾಮಗಳಿಗೆ ದಲಿತ ಅಧಿಕಾರಿಗಳಿಗೆ ಪ್ರವೇಶವಿಲ್ಲ. ದಲಿತ ಎಂಬ ಕಾರಣಕ್ಕಾಗಿ ಊರ ಒಳಗಡೆ ಬಿಡುತ್ತಿಲ್ಲ ಎಂದು ಉನ್ನತ ಮಟ್ಟದ ಅಧಿಕಾರಿಗಳೇ ಅಳಲು ತೋಡಿಕೊಂಡಿದ್ದರು. ಅಷ್ಟು ಮಾತ್ರವಲ್ಲ ರಾಜಕಾರಣಿಗಳಿಗೂ ಪ್ರವೇಶ ನಿರಾಕರಣೆ ಮಾಡಿದ ಪ್ರಸಂಗಗಳು ನಡೆದಿವೆ ಎಂದು ಹೇಳಿಕೊಂಡಿದ್ದರು. ಇದಲ್ಲದೆ ಈ ಹಿಂದೆ ಹಲವು ದಲಿತ ಸಮುದಾಯದ ಶಾಸಕರು, ಸಚಿವರುಗಳು ಕೂಡ ಜಾತಿ ಕಾರಣಕ್ಕೆ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶಕ್ಕೆ ನಿರಾಕರಣೆಯಿಂದ ಅವಮಾನ ಅನುಭವಿಸಿದ ಉದಾಹರಣೆಗಳು ಕೂಡ ಇವೆ.

ಕರ್ನಾಟಕದ ಹಲವಾರು ಭಾಗಗಳಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ ಎಂದು ಶಾಸಕಾಂಗ ಸಮಿತಿಯು ತನ್ನ ವರದಿಯಲ್ಲಿ ಹೇಳಿದೆ. ಮಳವಳ್ಳಿ ಕಾಂಗ್ರೆಸ್ ಶಾಸಕ ಪಿ.ಎಂ.ನರೇಂದ್ರಸ್ವಾಮಿ ನೇತೃತ್ವದ ಪರಿಶಿಷ್ಟ ಜಾತಿ-ಪಂಗಡಗಳ ಕಲ್ಯಾಣ ಸಮಿತಿಯು ತನ್ನ ಮಧ್ಯಂತರ ವರದಿಯನ್ನು ವಿಧಾನಸಭೆಯಲ್ಲಿ ಬುಧವಾರ ಮಂಡಿಸಿದೆ. ಇಂದಿಗೂ ಹಲವಾರು ಸ್ಥಳಗಳಲ್ಲಿ ಅಸ್ಪೃಶ್ಯತೆ ಆಚರಣೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲಾಗಿಲ್ಲ ಎಂದು ಸಮಿತಿಯು ವರದಿಯಲ್ಲಿ ಉಲ್ಲೇಖಿಸಿದೆ.

ಶಾಸಕಾಂಗ ಸಮಿತಿಯು ತನ್ನ ವರದಿಯಲ್ಲಿ ಎಸ್ಸಿ-ಎಸ್ಟಿಗಳಿಗೆ ಮೀಸಲಿರಿಸಿದ 2.5 ಲಕ್ಷ ಕೋಟಿ ರೂಪಾಯಿಗಳ ಅನುದಾನದಲ್ಲಿ ಎಷ್ಟು ತಲುಪಿದೆ? ಮತ್ತು ಹಣವನ್ನು ಸರಿಯಾಗಿ ಬಳಸಲಾಗಿದೆಯಾ ಎಂಬುವುದನ್ನು ಖಚಿತಪಡಿಸಿಕೊಳ್ಳಲು ಹೊಸ ಕಾರ್ಯವಿಧಾನವನ್ನು ಜಾರಿಗೆ ತರುವಂತೆ ಕೋರಿದೆ.

ವರದಿಯ ಪ್ರಕಾರ ಕರ್ನಾಟಕದಲ್ಲಿ 1.8 ಕೋಟಿ ಎಸ್ಸಿ-ಎಸ್ಟಿ ಸಮುದಾಯದ ಜನರಿದ್ದಾರೆ. 2013ರಿಂದ ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ (SCSP-TSP) ಅಡಿಯಲ್ಲಿ SC/ST ಗಳಿಗೆ ಸರ್ಕಾರ 2.5 ಲಕ್ಷ ಕೋಟಿ ರೂ. ಅನುದಾನ ನೀಡುತ್ತಿದೆ. ಹಣ ಸಮುದಾಯದ ಜನರಿಗೆ ತಲುಪುತ್ತಿಲ್ಲ ಅಥವಾ ಬಳಕೆಯಾಗುತ್ತಿಲ್ಲ. ಹಣವನ್ನು ಸರಿಯಾಗಿ ಬಳಸಿಕೊಳ್ಳುವಂತೆ ನೋಡಿಕೊಳ್ಳಲು ಹೊಸ ಕಾರ್ಯವಿಧಾನ ರೂಪಿಸುವ ಅಗತ್ಯವಿದೆ ಎಂದು ವರದಿ ಹೇಳಿದೆ.

ಇದಲ್ಲದೆ ಸಮಿತಿಯು ನಕಲಿ ಎಸ್ಸಿ-ಎಸ್ಟಿ ಜಾತಿ ಪ್ರಮಾಣ ಪತ್ರಗಳ ಸಮಸ್ಯೆ ಅವ್ಯಾಹತವಾಗಿ ಮುಂದುವರಿದಿದ್ದು, 175 ತಹಶೀಲ್ದಾರ್‌ಗಳು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ಗಮನಿಸಿದೆ. ಕುರುಬರು, ಬ್ರಾಹ್ಮಣರು, ವೀರಶೈವರು, ಮುದಲಿಯಾರುಗಳು ಮತ್ತು ಇತರರು ಎಸ್ಸಿ-ಎಸ್ಟಿ ಪ್ರಮಾಣಪತ್ರಗಳನ್ನು ಪಡೆದುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಇದಲ್ಲದೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿ (ಕೆಆರ್‌ಇಐಎಸ್) ನಡೆಸುತ್ತಿರುವ ಶಾಲೆಗಳಲ್ಲಿ ಕಳೆದ ಐದು ವರ್ಷಗಳಲ್ಲಿ 92 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಸಮಿತಿಯು ಹೇಳಿದೆ. ಇದರಲ್ಲಿ 29 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಮತ್ತು ಮನೆಗೆ ಹೋಗುವಾಗ ನಿಗೂಢ ಪರಿಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ. ಈ ಸಾವುಗಳ ಬಗ್ಗೆ ಸರಿಯಾದ ತನಿಖೆ ನಡೆದಿಲ್ಲ ಎಂದು ನರೇಂದ್ರಸ್ವಾಮಿ ಹೇಳಿದ್ದಾರೆ.

ಕೆಆರ್‌ಇಐಎಸ್ ಅಧೀನದಲ್ಲಿನ ಶಾಲೆಗಳಲ್ಲಿ ಮಹಿಳಾ ವಾರ್ಡನ್‌ಗಳು ಕೊರತೆ ಇದ್ದು ಸಮಿತಿಯು ಕೆಆರ್‌ಇಐಎಸ್ ಶಾಲೆಗಳಲ್ಲಿ ಬಾಲಕಿಯರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಪ್ರತಿ ಶಾಲೆಗೆ ಮಹಿಳಾ ಹೋಂಗಾರ್ಡ್‌ಗಳನ್ನು ನೇಮಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದೆ.

ಸಮಾಜ ಕಲ್ಯಾಣ ಇಲಾಖೆಯು ನಡೆಸುತ್ತಿರುವ ಹಲವಾರು ವಸತಿ ನಿಲಯಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು ಅವುಗಳು ಭಯಾನಕ ಸ್ಥಿತಿಯಲ್ಲಿವೆ. ಸರಿಯಾದ ಶೌಚಾಲಯಗಳು ಮತ್ತು ಸ್ನಾನಗೃಹಗಳಿಲ್ಲದೆ ವಿದ್ಯಾರ್ಥಿಗಳಿಗೆ ಬಯಲಿನಲ್ಲಿ ಸ್ನಾನ ಮಾಡಲು ಒತ್ತಾಯಿಸಲಾಗುತ್ತಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ಇದಲ್ಲದೆ ಮದ್ಯದಂಗಡಿಗಳ ಪರವಾನಗಿಗಳನ್ನು ನೀಡಲು ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಜನರಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು. ಹೊಸ ಸಿಎಲ್-2, ಸಿಎಲ್-7, ಸಿಎಲ್‌-9 ಮತ್ತು ಸಿಎಲ್-11 ಮದ್ಯದಂಗಡಿಗಳ ಪರವಾನಗಿಯಲ್ಲಿ ಪರಿಶಿಷ್ಟರಿಗೆ ಮೀಸಲಾತಿ ನೀಡಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.

ಇದನ್ನು ಓದಿ: ಬಾಬರಿ ಮಸೀದಿ ಧ್ವಂಸಕ್ಕೆ 31 ವರ್ಷ: ಅಜೆಂಡಾ ಯಶಸ್ವಿಗೊಳಿಸುವತ್ತ ಬಿಜೆಪಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...