Homeಕರ್ನಾಟಕಅಸ್ಪೃಶ್ಯತೆ ತಡೆಗೆ ಮುಂದಾದ ದಲಿತ ಹೋರಾಟಗಾರರು: ಮಧುಗಿರಿಯಲ್ಲೊಂದು ಆಶಾದಾಯಕ ಬೆಳವಣಿಗೆ

ಅಸ್ಪೃಶ್ಯತೆ ತಡೆಗೆ ಮುಂದಾದ ದಲಿತ ಹೋರಾಟಗಾರರು: ಮಧುಗಿರಿಯಲ್ಲೊಂದು ಆಶಾದಾಯಕ ಬೆಳವಣಿಗೆ

- Advertisement -
- Advertisement -

ಕೆಲವು ದಿನಗಳ ಹಿಂದಷ್ಟೇ ಮಧುಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ದಲಿತರಿಗೆ ಸಾರ್ವಜನಿಕ ರುದ್ರಭೂಮಿಯಲ್ಲಿ ಶವ ಸಂಸ್ಕಾರಕ್ಕೆ ಅಡ್ಡಿ ಮಾಡಿದ್ದರು. ಘಟನೆ ಹೊರ ಬೀಳುತ್ತಿದ್ದಂತೆಯೇ ದಲಿತ ಒಕ್ಕೂಟವು ಸ್ಥಳಕ್ಕೆ ತೆರಳಿತ್ತು. ಅಧಿಕಾರಿಗಳ ಗಮನಕ್ಕೆ ತಂದುದ್ದಲ್ಲದೇ, ತಾಲೂಕು ಅಧಿಕಾರಿಗಳ ಜೊತೆ ಗ್ರಾಮಕ್ಕೆ ಧಾವಿಸಿ ಬಂದು ಅಸ್ಪೃಶ್ಯತೆ ಆಚರಣೆ ಮಾಡಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿತ್ತು. ನಂತರ ಸಾರ್ವಜನಿಕ ರುದ್ರಭೂಮಿಯಲ್ಲಿ ದಲಿತ ಹೆಣ್ಣುಮಗಳ ಶವ ಸಂಸ್ಕಾರಕ್ಕೆ ಅವಕಾಶ ಮಾಡಿಕೊಟ್ಟಿದ್ದರು.

ಇದರ ಬೆನ್ನಲ್ಲೇ ಅದೇ ಗ್ರಾಮದಲ್ಲಿ ದಲಿತರಿಗೆ ಕ್ಷೌರ ಮಾಡುವುದಿಲ್ಲ ಎಂಬ ಸುದ್ದಿ ಹೊರಬಿದ್ದಿದ್ದು ಘಟನೆ ದಲಿತ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಹಾಗಾಗಿ ದಲಿತ ಸಂಘಟನೆಗಳು ತಾಲ್ಲೂಕು ದಂಡಾಧಿಕಾರಿಗಳ ಜೊತೆಗೆ ಮತ್ತೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿ ಸಮಸ್ಯೆ ಇತ್ಯರ್ಥಗೊಳಿಸಲು ಪ್ರಯತ್ನಿಸಿದ್ದಾರೆ.

ತಹಸೀಲ್ದಾರ್ ನಂದೀಶ್ ರವರು ಕ್ಷೌರಿಕನು ಅಂಗಡಿಯನ್ನು ಎರಡು ದಿನಗಳಿಂದ ಬಂದ್ ಮಾಡಿರುವುದು ಗಮನಿಸಿ ಅತನಿಗೆ ದೂರವಾಣಿ ಕರೆ ಮಾಡಿ ಕೂಡಲೇ ಅಂಗಡಿ ಬಳಿ ಬರಲಿಲ್ಲವೆಂದರೆ ನಿನ್ನ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ತಕ್ಷಣವೇ ಕ್ಷೌರಿಕ ಲಕ್ಷ್ಮಿ ನಾರಾಯಣಪ್ಪ ದಂಡಾಧಿಕಾರಿಗಳ ಬಳಿ ಬಂದು ಕ್ಷಮೆಯಾಚಿಸಿ ನಾನು ಎಲ್ಲ ಸಮುದಾಯದವರಿಗೂ ಕ್ಷೌರ ಮಾಡಲು ಸಿದ್ಧನಿದ್ದು ಈ ಗ್ರಾಮದ ಪೂಜಾರಪ್ಪ ಮತ್ತು ಮೆಂಬರ್ ರಾಯಪ್ಪ ಎನ್ನುವವರು ದಲಿತರಿಗೆ ಕ್ಷೌರ ಮಾಡಕೂಡದೆಂದು ನನಗೆ ಹೆದರಿಸಿದ್ದರು. ಇದರಿಂದ ನಾನು ದಲಿತರಿಗೆ ಕ್ಷೌರ ಮಾಡುತ್ತಿರಲಿಲ್ಲ. ಬೇರೆ ಹಳ್ಳಿಗಳಲ್ಲಿ ನಾನು ದಲಿತರಿಗೂ ಸಹ ಕಟಿಂಗ್ ಶೇವಿಂಗ್ ಮಾಡುತ್ತಿದ್ದೆ ಎಂದು ಘಟನೆಯನ್ನು ವಿವರಿಸಿದ್ದಾರೆ.

ಇದನ್ನು ಆಲಿಸಿದ ತಹಸೀಲ್ದಾರರು ಅಂತವರ ವಿರುದ್ಧ ದೂರು ಪಡೆದು ಅಟ್ರಾಸಿಟಿ ಕೇಸ್ ದಾಖಲಿಸಲಾಗುವುದು. ನಾಳೆಯಿಂದ ದಲಿತರಿಗೆ ಕ್ಷೌರ ಮಾಡಲಿಲ್ಲವೆಂದರೆ ನಿನ್ನ ಅಂಗಡಿಯನ್ನು ಶಾಶ್ವತವಾಗಿ ಮುಚ್ಚಿಸಿ ಅಟ್ರಾಸಿಟಿ ಕೇಸ್ ದಾಖಲಿಸಲಾಗುವುದು ಎಂದು ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ. ಅಷ್ಟೇ ಅಲ್ಲದೇ ಸ್ಥಳದಲ್ಲಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿಚಂದ್ರನ್ ಗೆ ನಾಳೆ ಇದೇ ಅಂಗಡಿಯಲ್ಲಿ ದಲಿತರಿಗೆ ಕ್ಷೌರ ಮಾಡಿಸಿ ಅದರ ಫೋಟೋ ಸಮೇತ ದಾಖಲೆ ನೀಡಬೇಕು ಎಂದು ಕಟ್ಟುನಿಟ್ಟಾಗಿ ಆದೇಶ ನೀಡಿದ್ದಾರೆ. ಮತ್ತೆ ಇಂತಹ ಘಟನೆಗಳು ನಡೆಯದಂತೆ ಈ ಗ್ರಾಮದಲ್ಲಿ ಅಸ್ಪೃಶ್ಯತಾ ಆಚರಣೆ ಅರಿವು ಕಾರ್ಯಕ್ರಮದಡಿಯಲ್ಲಿ ಬೀದಿ ನಾಟಕಗಳ ಮೂಲಕ ಜನರಿಗೆ ಅರಿವು ಮೂಡಿಸಬೇಕೆಂದು ತಿಳಿಸಿದ್ದಾರೆ.

ಭೀಮ್ ಆರ್ಮಿ ದಕ್ಷಿಣ ವಿಭಾಗೀಯ ರಾಜ್ಯಾಧ್ಯಕ್ಷ ಜೆಟ್ಟಿಅಗ್ರಹಾರ ನಾಗರಾಜು ಮಾತನಾಡಿ, ಈ ಹಿನ್ನೆಲೆಯಲ್ಲಿ ದಲಿತರು ಮತ್ತು ಸವರ್ಣೀಯರ ಮದ್ಯದಲ್ಲಿ ಯಾವುದೇ ಭೇದ ಭಾವವಿಲ್ಲವೆಂಬ ಸಂದೇಶವನ್ನು ಇಡೀ ಗ್ರಾಮಕ್ಕೆ ಸಾರುವುದು ಅಧಿಕಾರಿಗಳ ಜವಾಬ್ದಾರಿಯಾಗಿದ್ದು ಅಸ್ಪೃಶ್ಯತೆ ಆಚರಣೆ ಮಾಡುವುದಿಲ್ಲವೆಂಬ ಪ್ರತಿಜ್ಞಾವಿಧಿಯನ್ನು ಇತರೆ ಮೇಲ್ವರ್ಗದವರಿಗೆ ಬೋಧಿಸುವ ಮೂಲಕ ಅರಿವು ಮೂಡಿಸುವ ಕೆಲಸ ಮಾಡಬೇಕೆಂದು ಅಗ್ರಹಿಸಿದರು.

ಆದಿಜಾಂಬವ ಮಹಾಸಭಾ ಅಧ್ಯಕ್ಷ ಮಹರಾಜು ಘಟನೆಯನ್ನು ಖಂಡಿಸಿ ಮಾತನಾಡಿ, ಇಂದು ಸಹ ಅನೇಕ ಗ್ರಾಮಗಳಲ್ಲಿ ದೇವಾಸ್ಥನ , ಹೋಟೆಲ್ ಹಾಗೂ ಮನೆಗಳಿಗೆ ಪ್ರವೇಶವಿಲ್ಲವಾಗಿದೆ. ಇಂದು ಬಹುತೇಕ ದಲಿತರು ಅಸ್ಪೃಶ್ಯತೆಯ ಭೀಕರತೆಗೆ ಮಾನಸಿಕವಾಗಿ ನೊಂದು ಪಟ್ಟಣ ಸೇರುತ್ತಿದ್ದಾರೆ. ಕೆಲವು ಜನರು ಅಸ್ಪೃಶ್ಯತೆ ಇಲ್ಲವೇ ಇಲ್ಲ ಎಂದು ವಾದಿಸುವ ಬದಲು ವಾಸ್ತವಾಂಶವನ್ನು ಅರ್ಥಮಾಡಿಕೊಂಡು ಸಮ ಸಮಾಜಕ್ಕೆ ಪ್ರತಿಯೊಬ್ಬರು ಪಣತೊಟ್ಟು ಆಂದೋಲನ ರೂಪದಲ್ಲಿ ಮನಸ್ಸು ಬದಲಾವಣೆ ಮಾಡಿದರಷ್ಟೇ ಉತ್ತಮ ಸಮಾಜ ಕಾಣಲು ಸಾಧ್ಯ ಎಂದಿದ್ದಾರೆ.

ಘಟನಾ ಸ್ಥಳದಲ್ಲಿ ಮಧುಗಿರಿ ಪಿಎಸ್‍ಐ ರವೀಂದ್ರ, ತಾಲ್ಲೂಕು ಸಮಾಜ ಕಲ್ಯಾಣಧಿಕಾರಿ ಕೃಷ್ಣಮೂರ್ತಿ, ಸರ್ಕಾರಿ ನೌಕರರ ಸಂಘದ ಖಜಾಂಚಿ ಚಿಕ್ಕರಂಗಪ್ಪ (ಚಿಕ್ರಿ), ಭೀಮ್ ಆರ್ಮಿ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ್ ಮೂರ್ತಿ, ಗಂಜಲಗುಂಟೆ ಗ್ರಾಪಂ ಅಧ್ಯಕ್ಷ ಜಿ.ಎನ್. ನಾಗರಾಜು, ಪಿಡಿಓ ರವಿಚಂದ್ರನ್, ಮಣೆಗಾರ ಸಂಘದ ತಾಲೂಕು ಅಧ್ಯಕ್ಷ ಶಂಕರಪ್ಪ , ಪೇದೆ ನಟರಾಜು, ದಲಿತಪರ ಸಂಘಟನೆಯ ಮುಖಂಡರು ಹಾಗೂ ಗ್ರಾಮಸ್ಥರು ಇದ್ದರು.

ಕ್ಷೌರ, ಶವ ಸಂಸ್ಕಾರಕ್ಕೆ ಶ್ಮಶಾನ ಇವು ಎಲ್ಲಾ ಜನವರ್ಗಗಳಿಗೂ ಮೂಲಭೂತವಾಗಿ ಸಿಗಬೇಕಾದ ಸೌಲಭ್ಯಗಳು. ಆದರೆ ಅವುಗಳಿಗಾಗಿ ದಲಿತರು ಇನ್ನೂ ಹೋರಾಟ ಮಾಡಬೇಕಾಗಿರುವುದು ನಮ್ಮ ದೇಶದ ದುರಂತ. ಆಧುನಿಕ ಕಾಲದಲ್ಲಿಯೂ ಅಸ್ಪೃಶ್ಯತೆ ಮುಂದುವರೆಯುತ್ತಿರುವುದು ಅಕ್ಷಮ್ಯ ಅಪರಾಧ. ಇಲ್ಲಿನ ದಲಿತ ಹೋರಾಟಗಾರರ ಮಧ್ಯಪ್ರವೇಶ ಮತ್ತು ಸೂಕ್ಷ್ಮ ತಹಶೀಲ್ದಾರ್ ರವರಿಂದ ಮಧುಗಿರಿಯ ಈ ಘಟನೆ ಸದ್ಯಕ್ಕೆ ಸುಖಾಂತ್ಯ ಕಂಡಿದೆ. ಆದರೆ ದೇಶದ ಇನ್ನೂ ಲಕ್ಷಾಂತರ ಗ್ರಾಮಗಳಲ್ಲಿ ಅಸ್ಪೃಶ್ಯತೆ ಕೊನೆಗೊಳ್ಳುವುದು ಯಾವಾಗ ಎಂದು ದಲಿತ ಯುವಜನರು ಪ್ರಶ್ನಿಸುತ್ತಿದ್ದಾರೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...