Homeಕರ್ನಾಟಕಅಸ್ಪೃಶ್ಯತೆ ತಡೆಗೆ ಮುಂದಾದ ದಲಿತ ಹೋರಾಟಗಾರರು: ಮಧುಗಿರಿಯಲ್ಲೊಂದು ಆಶಾದಾಯಕ ಬೆಳವಣಿಗೆ

ಅಸ್ಪೃಶ್ಯತೆ ತಡೆಗೆ ಮುಂದಾದ ದಲಿತ ಹೋರಾಟಗಾರರು: ಮಧುಗಿರಿಯಲ್ಲೊಂದು ಆಶಾದಾಯಕ ಬೆಳವಣಿಗೆ

- Advertisement -
- Advertisement -

ಕೆಲವು ದಿನಗಳ ಹಿಂದಷ್ಟೇ ಮಧುಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ದಲಿತರಿಗೆ ಸಾರ್ವಜನಿಕ ರುದ್ರಭೂಮಿಯಲ್ಲಿ ಶವ ಸಂಸ್ಕಾರಕ್ಕೆ ಅಡ್ಡಿ ಮಾಡಿದ್ದರು. ಘಟನೆ ಹೊರ ಬೀಳುತ್ತಿದ್ದಂತೆಯೇ ದಲಿತ ಒಕ್ಕೂಟವು ಸ್ಥಳಕ್ಕೆ ತೆರಳಿತ್ತು. ಅಧಿಕಾರಿಗಳ ಗಮನಕ್ಕೆ ತಂದುದ್ದಲ್ಲದೇ, ತಾಲೂಕು ಅಧಿಕಾರಿಗಳ ಜೊತೆ ಗ್ರಾಮಕ್ಕೆ ಧಾವಿಸಿ ಬಂದು ಅಸ್ಪೃಶ್ಯತೆ ಆಚರಣೆ ಮಾಡಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿತ್ತು. ನಂತರ ಸಾರ್ವಜನಿಕ ರುದ್ರಭೂಮಿಯಲ್ಲಿ ದಲಿತ ಹೆಣ್ಣುಮಗಳ ಶವ ಸಂಸ್ಕಾರಕ್ಕೆ ಅವಕಾಶ ಮಾಡಿಕೊಟ್ಟಿದ್ದರು.

ಇದರ ಬೆನ್ನಲ್ಲೇ ಅದೇ ಗ್ರಾಮದಲ್ಲಿ ದಲಿತರಿಗೆ ಕ್ಷೌರ ಮಾಡುವುದಿಲ್ಲ ಎಂಬ ಸುದ್ದಿ ಹೊರಬಿದ್ದಿದ್ದು ಘಟನೆ ದಲಿತ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಹಾಗಾಗಿ ದಲಿತ ಸಂಘಟನೆಗಳು ತಾಲ್ಲೂಕು ದಂಡಾಧಿಕಾರಿಗಳ ಜೊತೆಗೆ ಮತ್ತೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿ ಸಮಸ್ಯೆ ಇತ್ಯರ್ಥಗೊಳಿಸಲು ಪ್ರಯತ್ನಿಸಿದ್ದಾರೆ.

ತಹಸೀಲ್ದಾರ್ ನಂದೀಶ್ ರವರು ಕ್ಷೌರಿಕನು ಅಂಗಡಿಯನ್ನು ಎರಡು ದಿನಗಳಿಂದ ಬಂದ್ ಮಾಡಿರುವುದು ಗಮನಿಸಿ ಅತನಿಗೆ ದೂರವಾಣಿ ಕರೆ ಮಾಡಿ ಕೂಡಲೇ ಅಂಗಡಿ ಬಳಿ ಬರಲಿಲ್ಲವೆಂದರೆ ನಿನ್ನ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ತಕ್ಷಣವೇ ಕ್ಷೌರಿಕ ಲಕ್ಷ್ಮಿ ನಾರಾಯಣಪ್ಪ ದಂಡಾಧಿಕಾರಿಗಳ ಬಳಿ ಬಂದು ಕ್ಷಮೆಯಾಚಿಸಿ ನಾನು ಎಲ್ಲ ಸಮುದಾಯದವರಿಗೂ ಕ್ಷೌರ ಮಾಡಲು ಸಿದ್ಧನಿದ್ದು ಈ ಗ್ರಾಮದ ಪೂಜಾರಪ್ಪ ಮತ್ತು ಮೆಂಬರ್ ರಾಯಪ್ಪ ಎನ್ನುವವರು ದಲಿತರಿಗೆ ಕ್ಷೌರ ಮಾಡಕೂಡದೆಂದು ನನಗೆ ಹೆದರಿಸಿದ್ದರು. ಇದರಿಂದ ನಾನು ದಲಿತರಿಗೆ ಕ್ಷೌರ ಮಾಡುತ್ತಿರಲಿಲ್ಲ. ಬೇರೆ ಹಳ್ಳಿಗಳಲ್ಲಿ ನಾನು ದಲಿತರಿಗೂ ಸಹ ಕಟಿಂಗ್ ಶೇವಿಂಗ್ ಮಾಡುತ್ತಿದ್ದೆ ಎಂದು ಘಟನೆಯನ್ನು ವಿವರಿಸಿದ್ದಾರೆ.

ಇದನ್ನು ಆಲಿಸಿದ ತಹಸೀಲ್ದಾರರು ಅಂತವರ ವಿರುದ್ಧ ದೂರು ಪಡೆದು ಅಟ್ರಾಸಿಟಿ ಕೇಸ್ ದಾಖಲಿಸಲಾಗುವುದು. ನಾಳೆಯಿಂದ ದಲಿತರಿಗೆ ಕ್ಷೌರ ಮಾಡಲಿಲ್ಲವೆಂದರೆ ನಿನ್ನ ಅಂಗಡಿಯನ್ನು ಶಾಶ್ವತವಾಗಿ ಮುಚ್ಚಿಸಿ ಅಟ್ರಾಸಿಟಿ ಕೇಸ್ ದಾಖಲಿಸಲಾಗುವುದು ಎಂದು ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ. ಅಷ್ಟೇ ಅಲ್ಲದೇ ಸ್ಥಳದಲ್ಲಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿಚಂದ್ರನ್ ಗೆ ನಾಳೆ ಇದೇ ಅಂಗಡಿಯಲ್ಲಿ ದಲಿತರಿಗೆ ಕ್ಷೌರ ಮಾಡಿಸಿ ಅದರ ಫೋಟೋ ಸಮೇತ ದಾಖಲೆ ನೀಡಬೇಕು ಎಂದು ಕಟ್ಟುನಿಟ್ಟಾಗಿ ಆದೇಶ ನೀಡಿದ್ದಾರೆ. ಮತ್ತೆ ಇಂತಹ ಘಟನೆಗಳು ನಡೆಯದಂತೆ ಈ ಗ್ರಾಮದಲ್ಲಿ ಅಸ್ಪೃಶ್ಯತಾ ಆಚರಣೆ ಅರಿವು ಕಾರ್ಯಕ್ರಮದಡಿಯಲ್ಲಿ ಬೀದಿ ನಾಟಕಗಳ ಮೂಲಕ ಜನರಿಗೆ ಅರಿವು ಮೂಡಿಸಬೇಕೆಂದು ತಿಳಿಸಿದ್ದಾರೆ.

ಭೀಮ್ ಆರ್ಮಿ ದಕ್ಷಿಣ ವಿಭಾಗೀಯ ರಾಜ್ಯಾಧ್ಯಕ್ಷ ಜೆಟ್ಟಿಅಗ್ರಹಾರ ನಾಗರಾಜು ಮಾತನಾಡಿ, ಈ ಹಿನ್ನೆಲೆಯಲ್ಲಿ ದಲಿತರು ಮತ್ತು ಸವರ್ಣೀಯರ ಮದ್ಯದಲ್ಲಿ ಯಾವುದೇ ಭೇದ ಭಾವವಿಲ್ಲವೆಂಬ ಸಂದೇಶವನ್ನು ಇಡೀ ಗ್ರಾಮಕ್ಕೆ ಸಾರುವುದು ಅಧಿಕಾರಿಗಳ ಜವಾಬ್ದಾರಿಯಾಗಿದ್ದು ಅಸ್ಪೃಶ್ಯತೆ ಆಚರಣೆ ಮಾಡುವುದಿಲ್ಲವೆಂಬ ಪ್ರತಿಜ್ಞಾವಿಧಿಯನ್ನು ಇತರೆ ಮೇಲ್ವರ್ಗದವರಿಗೆ ಬೋಧಿಸುವ ಮೂಲಕ ಅರಿವು ಮೂಡಿಸುವ ಕೆಲಸ ಮಾಡಬೇಕೆಂದು ಅಗ್ರಹಿಸಿದರು.

ಆದಿಜಾಂಬವ ಮಹಾಸಭಾ ಅಧ್ಯಕ್ಷ ಮಹರಾಜು ಘಟನೆಯನ್ನು ಖಂಡಿಸಿ ಮಾತನಾಡಿ, ಇಂದು ಸಹ ಅನೇಕ ಗ್ರಾಮಗಳಲ್ಲಿ ದೇವಾಸ್ಥನ , ಹೋಟೆಲ್ ಹಾಗೂ ಮನೆಗಳಿಗೆ ಪ್ರವೇಶವಿಲ್ಲವಾಗಿದೆ. ಇಂದು ಬಹುತೇಕ ದಲಿತರು ಅಸ್ಪೃಶ್ಯತೆಯ ಭೀಕರತೆಗೆ ಮಾನಸಿಕವಾಗಿ ನೊಂದು ಪಟ್ಟಣ ಸೇರುತ್ತಿದ್ದಾರೆ. ಕೆಲವು ಜನರು ಅಸ್ಪೃಶ್ಯತೆ ಇಲ್ಲವೇ ಇಲ್ಲ ಎಂದು ವಾದಿಸುವ ಬದಲು ವಾಸ್ತವಾಂಶವನ್ನು ಅರ್ಥಮಾಡಿಕೊಂಡು ಸಮ ಸಮಾಜಕ್ಕೆ ಪ್ರತಿಯೊಬ್ಬರು ಪಣತೊಟ್ಟು ಆಂದೋಲನ ರೂಪದಲ್ಲಿ ಮನಸ್ಸು ಬದಲಾವಣೆ ಮಾಡಿದರಷ್ಟೇ ಉತ್ತಮ ಸಮಾಜ ಕಾಣಲು ಸಾಧ್ಯ ಎಂದಿದ್ದಾರೆ.

ಘಟನಾ ಸ್ಥಳದಲ್ಲಿ ಮಧುಗಿರಿ ಪಿಎಸ್‍ಐ ರವೀಂದ್ರ, ತಾಲ್ಲೂಕು ಸಮಾಜ ಕಲ್ಯಾಣಧಿಕಾರಿ ಕೃಷ್ಣಮೂರ್ತಿ, ಸರ್ಕಾರಿ ನೌಕರರ ಸಂಘದ ಖಜಾಂಚಿ ಚಿಕ್ಕರಂಗಪ್ಪ (ಚಿಕ್ರಿ), ಭೀಮ್ ಆರ್ಮಿ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ್ ಮೂರ್ತಿ, ಗಂಜಲಗುಂಟೆ ಗ್ರಾಪಂ ಅಧ್ಯಕ್ಷ ಜಿ.ಎನ್. ನಾಗರಾಜು, ಪಿಡಿಓ ರವಿಚಂದ್ರನ್, ಮಣೆಗಾರ ಸಂಘದ ತಾಲೂಕು ಅಧ್ಯಕ್ಷ ಶಂಕರಪ್ಪ , ಪೇದೆ ನಟರಾಜು, ದಲಿತಪರ ಸಂಘಟನೆಯ ಮುಖಂಡರು ಹಾಗೂ ಗ್ರಾಮಸ್ಥರು ಇದ್ದರು.

ಕ್ಷೌರ, ಶವ ಸಂಸ್ಕಾರಕ್ಕೆ ಶ್ಮಶಾನ ಇವು ಎಲ್ಲಾ ಜನವರ್ಗಗಳಿಗೂ ಮೂಲಭೂತವಾಗಿ ಸಿಗಬೇಕಾದ ಸೌಲಭ್ಯಗಳು. ಆದರೆ ಅವುಗಳಿಗಾಗಿ ದಲಿತರು ಇನ್ನೂ ಹೋರಾಟ ಮಾಡಬೇಕಾಗಿರುವುದು ನಮ್ಮ ದೇಶದ ದುರಂತ. ಆಧುನಿಕ ಕಾಲದಲ್ಲಿಯೂ ಅಸ್ಪೃಶ್ಯತೆ ಮುಂದುವರೆಯುತ್ತಿರುವುದು ಅಕ್ಷಮ್ಯ ಅಪರಾಧ. ಇಲ್ಲಿನ ದಲಿತ ಹೋರಾಟಗಾರರ ಮಧ್ಯಪ್ರವೇಶ ಮತ್ತು ಸೂಕ್ಷ್ಮ ತಹಶೀಲ್ದಾರ್ ರವರಿಂದ ಮಧುಗಿರಿಯ ಈ ಘಟನೆ ಸದ್ಯಕ್ಕೆ ಸುಖಾಂತ್ಯ ಕಂಡಿದೆ. ಆದರೆ ದೇಶದ ಇನ್ನೂ ಲಕ್ಷಾಂತರ ಗ್ರಾಮಗಳಲ್ಲಿ ಅಸ್ಪೃಶ್ಯತೆ ಕೊನೆಗೊಳ್ಳುವುದು ಯಾವಾಗ ಎಂದು ದಲಿತ ಯುವಜನರು ಪ್ರಶ್ನಿಸುತ್ತಿದ್ದಾರೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...