Homeಕರ್ನಾಟಕಅಸ್ಪೃಶ್ಯತೆ ತಡೆಗೆ ಮುಂದಾದ ದಲಿತ ಹೋರಾಟಗಾರರು: ಮಧುಗಿರಿಯಲ್ಲೊಂದು ಆಶಾದಾಯಕ ಬೆಳವಣಿಗೆ

ಅಸ್ಪೃಶ್ಯತೆ ತಡೆಗೆ ಮುಂದಾದ ದಲಿತ ಹೋರಾಟಗಾರರು: ಮಧುಗಿರಿಯಲ್ಲೊಂದು ಆಶಾದಾಯಕ ಬೆಳವಣಿಗೆ

- Advertisement -
- Advertisement -

ಕೆಲವು ದಿನಗಳ ಹಿಂದಷ್ಟೇ ಮಧುಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ದಲಿತರಿಗೆ ಸಾರ್ವಜನಿಕ ರುದ್ರಭೂಮಿಯಲ್ಲಿ ಶವ ಸಂಸ್ಕಾರಕ್ಕೆ ಅಡ್ಡಿ ಮಾಡಿದ್ದರು. ಘಟನೆ ಹೊರ ಬೀಳುತ್ತಿದ್ದಂತೆಯೇ ದಲಿತ ಒಕ್ಕೂಟವು ಸ್ಥಳಕ್ಕೆ ತೆರಳಿತ್ತು. ಅಧಿಕಾರಿಗಳ ಗಮನಕ್ಕೆ ತಂದುದ್ದಲ್ಲದೇ, ತಾಲೂಕು ಅಧಿಕಾರಿಗಳ ಜೊತೆ ಗ್ರಾಮಕ್ಕೆ ಧಾವಿಸಿ ಬಂದು ಅಸ್ಪೃಶ್ಯತೆ ಆಚರಣೆ ಮಾಡಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿತ್ತು. ನಂತರ ಸಾರ್ವಜನಿಕ ರುದ್ರಭೂಮಿಯಲ್ಲಿ ದಲಿತ ಹೆಣ್ಣುಮಗಳ ಶವ ಸಂಸ್ಕಾರಕ್ಕೆ ಅವಕಾಶ ಮಾಡಿಕೊಟ್ಟಿದ್ದರು.

ಇದರ ಬೆನ್ನಲ್ಲೇ ಅದೇ ಗ್ರಾಮದಲ್ಲಿ ದಲಿತರಿಗೆ ಕ್ಷೌರ ಮಾಡುವುದಿಲ್ಲ ಎಂಬ ಸುದ್ದಿ ಹೊರಬಿದ್ದಿದ್ದು ಘಟನೆ ದಲಿತ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಹಾಗಾಗಿ ದಲಿತ ಸಂಘಟನೆಗಳು ತಾಲ್ಲೂಕು ದಂಡಾಧಿಕಾರಿಗಳ ಜೊತೆಗೆ ಮತ್ತೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿ ಸಮಸ್ಯೆ ಇತ್ಯರ್ಥಗೊಳಿಸಲು ಪ್ರಯತ್ನಿಸಿದ್ದಾರೆ.

ತಹಸೀಲ್ದಾರ್ ನಂದೀಶ್ ರವರು ಕ್ಷೌರಿಕನು ಅಂಗಡಿಯನ್ನು ಎರಡು ದಿನಗಳಿಂದ ಬಂದ್ ಮಾಡಿರುವುದು ಗಮನಿಸಿ ಅತನಿಗೆ ದೂರವಾಣಿ ಕರೆ ಮಾಡಿ ಕೂಡಲೇ ಅಂಗಡಿ ಬಳಿ ಬರಲಿಲ್ಲವೆಂದರೆ ನಿನ್ನ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ತಕ್ಷಣವೇ ಕ್ಷೌರಿಕ ಲಕ್ಷ್ಮಿ ನಾರಾಯಣಪ್ಪ ದಂಡಾಧಿಕಾರಿಗಳ ಬಳಿ ಬಂದು ಕ್ಷಮೆಯಾಚಿಸಿ ನಾನು ಎಲ್ಲ ಸಮುದಾಯದವರಿಗೂ ಕ್ಷೌರ ಮಾಡಲು ಸಿದ್ಧನಿದ್ದು ಈ ಗ್ರಾಮದ ಪೂಜಾರಪ್ಪ ಮತ್ತು ಮೆಂಬರ್ ರಾಯಪ್ಪ ಎನ್ನುವವರು ದಲಿತರಿಗೆ ಕ್ಷೌರ ಮಾಡಕೂಡದೆಂದು ನನಗೆ ಹೆದರಿಸಿದ್ದರು. ಇದರಿಂದ ನಾನು ದಲಿತರಿಗೆ ಕ್ಷೌರ ಮಾಡುತ್ತಿರಲಿಲ್ಲ. ಬೇರೆ ಹಳ್ಳಿಗಳಲ್ಲಿ ನಾನು ದಲಿತರಿಗೂ ಸಹ ಕಟಿಂಗ್ ಶೇವಿಂಗ್ ಮಾಡುತ್ತಿದ್ದೆ ಎಂದು ಘಟನೆಯನ್ನು ವಿವರಿಸಿದ್ದಾರೆ.

ಇದನ್ನು ಆಲಿಸಿದ ತಹಸೀಲ್ದಾರರು ಅಂತವರ ವಿರುದ್ಧ ದೂರು ಪಡೆದು ಅಟ್ರಾಸಿಟಿ ಕೇಸ್ ದಾಖಲಿಸಲಾಗುವುದು. ನಾಳೆಯಿಂದ ದಲಿತರಿಗೆ ಕ್ಷೌರ ಮಾಡಲಿಲ್ಲವೆಂದರೆ ನಿನ್ನ ಅಂಗಡಿಯನ್ನು ಶಾಶ್ವತವಾಗಿ ಮುಚ್ಚಿಸಿ ಅಟ್ರಾಸಿಟಿ ಕೇಸ್ ದಾಖಲಿಸಲಾಗುವುದು ಎಂದು ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ. ಅಷ್ಟೇ ಅಲ್ಲದೇ ಸ್ಥಳದಲ್ಲಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿಚಂದ್ರನ್ ಗೆ ನಾಳೆ ಇದೇ ಅಂಗಡಿಯಲ್ಲಿ ದಲಿತರಿಗೆ ಕ್ಷೌರ ಮಾಡಿಸಿ ಅದರ ಫೋಟೋ ಸಮೇತ ದಾಖಲೆ ನೀಡಬೇಕು ಎಂದು ಕಟ್ಟುನಿಟ್ಟಾಗಿ ಆದೇಶ ನೀಡಿದ್ದಾರೆ. ಮತ್ತೆ ಇಂತಹ ಘಟನೆಗಳು ನಡೆಯದಂತೆ ಈ ಗ್ರಾಮದಲ್ಲಿ ಅಸ್ಪೃಶ್ಯತಾ ಆಚರಣೆ ಅರಿವು ಕಾರ್ಯಕ್ರಮದಡಿಯಲ್ಲಿ ಬೀದಿ ನಾಟಕಗಳ ಮೂಲಕ ಜನರಿಗೆ ಅರಿವು ಮೂಡಿಸಬೇಕೆಂದು ತಿಳಿಸಿದ್ದಾರೆ.

ಭೀಮ್ ಆರ್ಮಿ ದಕ್ಷಿಣ ವಿಭಾಗೀಯ ರಾಜ್ಯಾಧ್ಯಕ್ಷ ಜೆಟ್ಟಿಅಗ್ರಹಾರ ನಾಗರಾಜು ಮಾತನಾಡಿ, ಈ ಹಿನ್ನೆಲೆಯಲ್ಲಿ ದಲಿತರು ಮತ್ತು ಸವರ್ಣೀಯರ ಮದ್ಯದಲ್ಲಿ ಯಾವುದೇ ಭೇದ ಭಾವವಿಲ್ಲವೆಂಬ ಸಂದೇಶವನ್ನು ಇಡೀ ಗ್ರಾಮಕ್ಕೆ ಸಾರುವುದು ಅಧಿಕಾರಿಗಳ ಜವಾಬ್ದಾರಿಯಾಗಿದ್ದು ಅಸ್ಪೃಶ್ಯತೆ ಆಚರಣೆ ಮಾಡುವುದಿಲ್ಲವೆಂಬ ಪ್ರತಿಜ್ಞಾವಿಧಿಯನ್ನು ಇತರೆ ಮೇಲ್ವರ್ಗದವರಿಗೆ ಬೋಧಿಸುವ ಮೂಲಕ ಅರಿವು ಮೂಡಿಸುವ ಕೆಲಸ ಮಾಡಬೇಕೆಂದು ಅಗ್ರಹಿಸಿದರು.

ಆದಿಜಾಂಬವ ಮಹಾಸಭಾ ಅಧ್ಯಕ್ಷ ಮಹರಾಜು ಘಟನೆಯನ್ನು ಖಂಡಿಸಿ ಮಾತನಾಡಿ, ಇಂದು ಸಹ ಅನೇಕ ಗ್ರಾಮಗಳಲ್ಲಿ ದೇವಾಸ್ಥನ , ಹೋಟೆಲ್ ಹಾಗೂ ಮನೆಗಳಿಗೆ ಪ್ರವೇಶವಿಲ್ಲವಾಗಿದೆ. ಇಂದು ಬಹುತೇಕ ದಲಿತರು ಅಸ್ಪೃಶ್ಯತೆಯ ಭೀಕರತೆಗೆ ಮಾನಸಿಕವಾಗಿ ನೊಂದು ಪಟ್ಟಣ ಸೇರುತ್ತಿದ್ದಾರೆ. ಕೆಲವು ಜನರು ಅಸ್ಪೃಶ್ಯತೆ ಇಲ್ಲವೇ ಇಲ್ಲ ಎಂದು ವಾದಿಸುವ ಬದಲು ವಾಸ್ತವಾಂಶವನ್ನು ಅರ್ಥಮಾಡಿಕೊಂಡು ಸಮ ಸಮಾಜಕ್ಕೆ ಪ್ರತಿಯೊಬ್ಬರು ಪಣತೊಟ್ಟು ಆಂದೋಲನ ರೂಪದಲ್ಲಿ ಮನಸ್ಸು ಬದಲಾವಣೆ ಮಾಡಿದರಷ್ಟೇ ಉತ್ತಮ ಸಮಾಜ ಕಾಣಲು ಸಾಧ್ಯ ಎಂದಿದ್ದಾರೆ.

ಘಟನಾ ಸ್ಥಳದಲ್ಲಿ ಮಧುಗಿರಿ ಪಿಎಸ್‍ಐ ರವೀಂದ್ರ, ತಾಲ್ಲೂಕು ಸಮಾಜ ಕಲ್ಯಾಣಧಿಕಾರಿ ಕೃಷ್ಣಮೂರ್ತಿ, ಸರ್ಕಾರಿ ನೌಕರರ ಸಂಘದ ಖಜಾಂಚಿ ಚಿಕ್ಕರಂಗಪ್ಪ (ಚಿಕ್ರಿ), ಭೀಮ್ ಆರ್ಮಿ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ್ ಮೂರ್ತಿ, ಗಂಜಲಗುಂಟೆ ಗ್ರಾಪಂ ಅಧ್ಯಕ್ಷ ಜಿ.ಎನ್. ನಾಗರಾಜು, ಪಿಡಿಓ ರವಿಚಂದ್ರನ್, ಮಣೆಗಾರ ಸಂಘದ ತಾಲೂಕು ಅಧ್ಯಕ್ಷ ಶಂಕರಪ್ಪ , ಪೇದೆ ನಟರಾಜು, ದಲಿತಪರ ಸಂಘಟನೆಯ ಮುಖಂಡರು ಹಾಗೂ ಗ್ರಾಮಸ್ಥರು ಇದ್ದರು.

ಕ್ಷೌರ, ಶವ ಸಂಸ್ಕಾರಕ್ಕೆ ಶ್ಮಶಾನ ಇವು ಎಲ್ಲಾ ಜನವರ್ಗಗಳಿಗೂ ಮೂಲಭೂತವಾಗಿ ಸಿಗಬೇಕಾದ ಸೌಲಭ್ಯಗಳು. ಆದರೆ ಅವುಗಳಿಗಾಗಿ ದಲಿತರು ಇನ್ನೂ ಹೋರಾಟ ಮಾಡಬೇಕಾಗಿರುವುದು ನಮ್ಮ ದೇಶದ ದುರಂತ. ಆಧುನಿಕ ಕಾಲದಲ್ಲಿಯೂ ಅಸ್ಪೃಶ್ಯತೆ ಮುಂದುವರೆಯುತ್ತಿರುವುದು ಅಕ್ಷಮ್ಯ ಅಪರಾಧ. ಇಲ್ಲಿನ ದಲಿತ ಹೋರಾಟಗಾರರ ಮಧ್ಯಪ್ರವೇಶ ಮತ್ತು ಸೂಕ್ಷ್ಮ ತಹಶೀಲ್ದಾರ್ ರವರಿಂದ ಮಧುಗಿರಿಯ ಈ ಘಟನೆ ಸದ್ಯಕ್ಕೆ ಸುಖಾಂತ್ಯ ಕಂಡಿದೆ. ಆದರೆ ದೇಶದ ಇನ್ನೂ ಲಕ್ಷಾಂತರ ಗ್ರಾಮಗಳಲ್ಲಿ ಅಸ್ಪೃಶ್ಯತೆ ಕೊನೆಗೊಳ್ಳುವುದು ಯಾವಾಗ ಎಂದು ದಲಿತ ಯುವಜನರು ಪ್ರಶ್ನಿಸುತ್ತಿದ್ದಾರೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...