Homeಕರ್ನಾಟಕಅಸ್ಪೃಶ್ಯತೆ ತಡೆಗೆ ಮುಂದಾದ ದಲಿತ ಹೋರಾಟಗಾರರು: ಮಧುಗಿರಿಯಲ್ಲೊಂದು ಆಶಾದಾಯಕ ಬೆಳವಣಿಗೆ

ಅಸ್ಪೃಶ್ಯತೆ ತಡೆಗೆ ಮುಂದಾದ ದಲಿತ ಹೋರಾಟಗಾರರು: ಮಧುಗಿರಿಯಲ್ಲೊಂದು ಆಶಾದಾಯಕ ಬೆಳವಣಿಗೆ

- Advertisement -
- Advertisement -

ಕೆಲವು ದಿನಗಳ ಹಿಂದಷ್ಟೇ ಮಧುಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ದಲಿತರಿಗೆ ಸಾರ್ವಜನಿಕ ರುದ್ರಭೂಮಿಯಲ್ಲಿ ಶವ ಸಂಸ್ಕಾರಕ್ಕೆ ಅಡ್ಡಿ ಮಾಡಿದ್ದರು. ಘಟನೆ ಹೊರ ಬೀಳುತ್ತಿದ್ದಂತೆಯೇ ದಲಿತ ಒಕ್ಕೂಟವು ಸ್ಥಳಕ್ಕೆ ತೆರಳಿತ್ತು. ಅಧಿಕಾರಿಗಳ ಗಮನಕ್ಕೆ ತಂದುದ್ದಲ್ಲದೇ, ತಾಲೂಕು ಅಧಿಕಾರಿಗಳ ಜೊತೆ ಗ್ರಾಮಕ್ಕೆ ಧಾವಿಸಿ ಬಂದು ಅಸ್ಪೃಶ್ಯತೆ ಆಚರಣೆ ಮಾಡಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿತ್ತು. ನಂತರ ಸಾರ್ವಜನಿಕ ರುದ್ರಭೂಮಿಯಲ್ಲಿ ದಲಿತ ಹೆಣ್ಣುಮಗಳ ಶವ ಸಂಸ್ಕಾರಕ್ಕೆ ಅವಕಾಶ ಮಾಡಿಕೊಟ್ಟಿದ್ದರು.

ಇದರ ಬೆನ್ನಲ್ಲೇ ಅದೇ ಗ್ರಾಮದಲ್ಲಿ ದಲಿತರಿಗೆ ಕ್ಷೌರ ಮಾಡುವುದಿಲ್ಲ ಎಂಬ ಸುದ್ದಿ ಹೊರಬಿದ್ದಿದ್ದು ಘಟನೆ ದಲಿತ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಹಾಗಾಗಿ ದಲಿತ ಸಂಘಟನೆಗಳು ತಾಲ್ಲೂಕು ದಂಡಾಧಿಕಾರಿಗಳ ಜೊತೆಗೆ ಮತ್ತೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿ ಸಮಸ್ಯೆ ಇತ್ಯರ್ಥಗೊಳಿಸಲು ಪ್ರಯತ್ನಿಸಿದ್ದಾರೆ.

ತಹಸೀಲ್ದಾರ್ ನಂದೀಶ್ ರವರು ಕ್ಷೌರಿಕನು ಅಂಗಡಿಯನ್ನು ಎರಡು ದಿನಗಳಿಂದ ಬಂದ್ ಮಾಡಿರುವುದು ಗಮನಿಸಿ ಅತನಿಗೆ ದೂರವಾಣಿ ಕರೆ ಮಾಡಿ ಕೂಡಲೇ ಅಂಗಡಿ ಬಳಿ ಬರಲಿಲ್ಲವೆಂದರೆ ನಿನ್ನ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ತಕ್ಷಣವೇ ಕ್ಷೌರಿಕ ಲಕ್ಷ್ಮಿ ನಾರಾಯಣಪ್ಪ ದಂಡಾಧಿಕಾರಿಗಳ ಬಳಿ ಬಂದು ಕ್ಷಮೆಯಾಚಿಸಿ ನಾನು ಎಲ್ಲ ಸಮುದಾಯದವರಿಗೂ ಕ್ಷೌರ ಮಾಡಲು ಸಿದ್ಧನಿದ್ದು ಈ ಗ್ರಾಮದ ಪೂಜಾರಪ್ಪ ಮತ್ತು ಮೆಂಬರ್ ರಾಯಪ್ಪ ಎನ್ನುವವರು ದಲಿತರಿಗೆ ಕ್ಷೌರ ಮಾಡಕೂಡದೆಂದು ನನಗೆ ಹೆದರಿಸಿದ್ದರು. ಇದರಿಂದ ನಾನು ದಲಿತರಿಗೆ ಕ್ಷೌರ ಮಾಡುತ್ತಿರಲಿಲ್ಲ. ಬೇರೆ ಹಳ್ಳಿಗಳಲ್ಲಿ ನಾನು ದಲಿತರಿಗೂ ಸಹ ಕಟಿಂಗ್ ಶೇವಿಂಗ್ ಮಾಡುತ್ತಿದ್ದೆ ಎಂದು ಘಟನೆಯನ್ನು ವಿವರಿಸಿದ್ದಾರೆ.

ಇದನ್ನು ಆಲಿಸಿದ ತಹಸೀಲ್ದಾರರು ಅಂತವರ ವಿರುದ್ಧ ದೂರು ಪಡೆದು ಅಟ್ರಾಸಿಟಿ ಕೇಸ್ ದಾಖಲಿಸಲಾಗುವುದು. ನಾಳೆಯಿಂದ ದಲಿತರಿಗೆ ಕ್ಷೌರ ಮಾಡಲಿಲ್ಲವೆಂದರೆ ನಿನ್ನ ಅಂಗಡಿಯನ್ನು ಶಾಶ್ವತವಾಗಿ ಮುಚ್ಚಿಸಿ ಅಟ್ರಾಸಿಟಿ ಕೇಸ್ ದಾಖಲಿಸಲಾಗುವುದು ಎಂದು ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ. ಅಷ್ಟೇ ಅಲ್ಲದೇ ಸ್ಥಳದಲ್ಲಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿಚಂದ್ರನ್ ಗೆ ನಾಳೆ ಇದೇ ಅಂಗಡಿಯಲ್ಲಿ ದಲಿತರಿಗೆ ಕ್ಷೌರ ಮಾಡಿಸಿ ಅದರ ಫೋಟೋ ಸಮೇತ ದಾಖಲೆ ನೀಡಬೇಕು ಎಂದು ಕಟ್ಟುನಿಟ್ಟಾಗಿ ಆದೇಶ ನೀಡಿದ್ದಾರೆ. ಮತ್ತೆ ಇಂತಹ ಘಟನೆಗಳು ನಡೆಯದಂತೆ ಈ ಗ್ರಾಮದಲ್ಲಿ ಅಸ್ಪೃಶ್ಯತಾ ಆಚರಣೆ ಅರಿವು ಕಾರ್ಯಕ್ರಮದಡಿಯಲ್ಲಿ ಬೀದಿ ನಾಟಕಗಳ ಮೂಲಕ ಜನರಿಗೆ ಅರಿವು ಮೂಡಿಸಬೇಕೆಂದು ತಿಳಿಸಿದ್ದಾರೆ.

ಭೀಮ್ ಆರ್ಮಿ ದಕ್ಷಿಣ ವಿಭಾಗೀಯ ರಾಜ್ಯಾಧ್ಯಕ್ಷ ಜೆಟ್ಟಿಅಗ್ರಹಾರ ನಾಗರಾಜು ಮಾತನಾಡಿ, ಈ ಹಿನ್ನೆಲೆಯಲ್ಲಿ ದಲಿತರು ಮತ್ತು ಸವರ್ಣೀಯರ ಮದ್ಯದಲ್ಲಿ ಯಾವುದೇ ಭೇದ ಭಾವವಿಲ್ಲವೆಂಬ ಸಂದೇಶವನ್ನು ಇಡೀ ಗ್ರಾಮಕ್ಕೆ ಸಾರುವುದು ಅಧಿಕಾರಿಗಳ ಜವಾಬ್ದಾರಿಯಾಗಿದ್ದು ಅಸ್ಪೃಶ್ಯತೆ ಆಚರಣೆ ಮಾಡುವುದಿಲ್ಲವೆಂಬ ಪ್ರತಿಜ್ಞಾವಿಧಿಯನ್ನು ಇತರೆ ಮೇಲ್ವರ್ಗದವರಿಗೆ ಬೋಧಿಸುವ ಮೂಲಕ ಅರಿವು ಮೂಡಿಸುವ ಕೆಲಸ ಮಾಡಬೇಕೆಂದು ಅಗ್ರಹಿಸಿದರು.

ಆದಿಜಾಂಬವ ಮಹಾಸಭಾ ಅಧ್ಯಕ್ಷ ಮಹರಾಜು ಘಟನೆಯನ್ನು ಖಂಡಿಸಿ ಮಾತನಾಡಿ, ಇಂದು ಸಹ ಅನೇಕ ಗ್ರಾಮಗಳಲ್ಲಿ ದೇವಾಸ್ಥನ , ಹೋಟೆಲ್ ಹಾಗೂ ಮನೆಗಳಿಗೆ ಪ್ರವೇಶವಿಲ್ಲವಾಗಿದೆ. ಇಂದು ಬಹುತೇಕ ದಲಿತರು ಅಸ್ಪೃಶ್ಯತೆಯ ಭೀಕರತೆಗೆ ಮಾನಸಿಕವಾಗಿ ನೊಂದು ಪಟ್ಟಣ ಸೇರುತ್ತಿದ್ದಾರೆ. ಕೆಲವು ಜನರು ಅಸ್ಪೃಶ್ಯತೆ ಇಲ್ಲವೇ ಇಲ್ಲ ಎಂದು ವಾದಿಸುವ ಬದಲು ವಾಸ್ತವಾಂಶವನ್ನು ಅರ್ಥಮಾಡಿಕೊಂಡು ಸಮ ಸಮಾಜಕ್ಕೆ ಪ್ರತಿಯೊಬ್ಬರು ಪಣತೊಟ್ಟು ಆಂದೋಲನ ರೂಪದಲ್ಲಿ ಮನಸ್ಸು ಬದಲಾವಣೆ ಮಾಡಿದರಷ್ಟೇ ಉತ್ತಮ ಸಮಾಜ ಕಾಣಲು ಸಾಧ್ಯ ಎಂದಿದ್ದಾರೆ.

ಘಟನಾ ಸ್ಥಳದಲ್ಲಿ ಮಧುಗಿರಿ ಪಿಎಸ್‍ಐ ರವೀಂದ್ರ, ತಾಲ್ಲೂಕು ಸಮಾಜ ಕಲ್ಯಾಣಧಿಕಾರಿ ಕೃಷ್ಣಮೂರ್ತಿ, ಸರ್ಕಾರಿ ನೌಕರರ ಸಂಘದ ಖಜಾಂಚಿ ಚಿಕ್ಕರಂಗಪ್ಪ (ಚಿಕ್ರಿ), ಭೀಮ್ ಆರ್ಮಿ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ್ ಮೂರ್ತಿ, ಗಂಜಲಗುಂಟೆ ಗ್ರಾಪಂ ಅಧ್ಯಕ್ಷ ಜಿ.ಎನ್. ನಾಗರಾಜು, ಪಿಡಿಓ ರವಿಚಂದ್ರನ್, ಮಣೆಗಾರ ಸಂಘದ ತಾಲೂಕು ಅಧ್ಯಕ್ಷ ಶಂಕರಪ್ಪ , ಪೇದೆ ನಟರಾಜು, ದಲಿತಪರ ಸಂಘಟನೆಯ ಮುಖಂಡರು ಹಾಗೂ ಗ್ರಾಮಸ್ಥರು ಇದ್ದರು.

ಕ್ಷೌರ, ಶವ ಸಂಸ್ಕಾರಕ್ಕೆ ಶ್ಮಶಾನ ಇವು ಎಲ್ಲಾ ಜನವರ್ಗಗಳಿಗೂ ಮೂಲಭೂತವಾಗಿ ಸಿಗಬೇಕಾದ ಸೌಲಭ್ಯಗಳು. ಆದರೆ ಅವುಗಳಿಗಾಗಿ ದಲಿತರು ಇನ್ನೂ ಹೋರಾಟ ಮಾಡಬೇಕಾಗಿರುವುದು ನಮ್ಮ ದೇಶದ ದುರಂತ. ಆಧುನಿಕ ಕಾಲದಲ್ಲಿಯೂ ಅಸ್ಪೃಶ್ಯತೆ ಮುಂದುವರೆಯುತ್ತಿರುವುದು ಅಕ್ಷಮ್ಯ ಅಪರಾಧ. ಇಲ್ಲಿನ ದಲಿತ ಹೋರಾಟಗಾರರ ಮಧ್ಯಪ್ರವೇಶ ಮತ್ತು ಸೂಕ್ಷ್ಮ ತಹಶೀಲ್ದಾರ್ ರವರಿಂದ ಮಧುಗಿರಿಯ ಈ ಘಟನೆ ಸದ್ಯಕ್ಕೆ ಸುಖಾಂತ್ಯ ಕಂಡಿದೆ. ಆದರೆ ದೇಶದ ಇನ್ನೂ ಲಕ್ಷಾಂತರ ಗ್ರಾಮಗಳಲ್ಲಿ ಅಸ್ಪೃಶ್ಯತೆ ಕೊನೆಗೊಳ್ಳುವುದು ಯಾವಾಗ ಎಂದು ದಲಿತ ಯುವಜನರು ಪ್ರಶ್ನಿಸುತ್ತಿದ್ದಾರೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...