Homeಮುಖಪುಟಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ...

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

- Advertisement -
- Advertisement -

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ ಟೆಲಿವಿಷನ್ ರೇಟಿಂಗ್ ಪಾಯಿಂಟ್‌ಗಳ (ಟಿಆರ್‌ಪಿ) ಪ್ರಕಟಣೆಯನ್ನು ಸ್ಥಗಿತಗೊಳಿಸುವಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಬ್ರಾಡ್‌ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್‌ಗೆ (ಬಿಎಆರ್‌ಸಿ-ಬಾರ್ಕ್) ಶುಕ್ರವಾರ (ಮಾ.6) ನಿರ್ದೇಶನ ನೀಡಿದೆ.

ಇಸ್ರೇಲ್ ಮತ್ತು ಅಮೆರಿಕವು ಇರಾನ್ ಮೇಲೆ ನಡೆಸಿದ ದಾಳಿಯಿಂದ ಉಂಟಾದ ಉದ್ವಿಗ್ನತೆಯ ಕುರಿತಾದ ವರದಿಗಾರಿಕೆಯಲ್ಲಿ, ಸುದ್ದಿ ವಾಹಿನಿಗಳು ತೋರುತ್ತಿರುವ “ಉದ್ರೇಕಕಾರಿ ಮತ್ತು ಊಹಾತ್ಮಕ” ಧೋರಣೆಯ ಬಗ್ಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ತೀವ್ರ ಕಳವಳ ವ್ಯಕ್ತಪಡಿಸಿದೆ.

“ಇಸ್ರೇಲ್-ಇರಾನ್ ನಡುವಿನ ಸಂಘರ್ಷದ ಸಂದರ್ಭದಲ್ಲಿ, ಕೆಲವು ಸುದ್ದಿ ವಾಹಿನಿಗಳು ಅನಗತ್ಯವಾದ ಉದ್ರೇಕಕಾರಿ ಮತ್ತು ಊಹಾತ್ಮಕ ವಿಷಯಗಳನ್ನು ಬಿತ್ತರಿಸುತ್ತಿರುವುದನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಗಮನಿಸಿದೆ. ಇದು ಸಾರ್ವಜನಿಕರಲ್ಲಿ, ವಿಶೇಷವಾಗಿ ಪೀಡಿತ ಪ್ರದೇಶಗಳಲ್ಲಿ ವಾಸಿಸುತ್ತಿರುವವರಲ್ಲಿ ಅಥವಾ ಆ ಪ್ರದೇಶಗಳಲ್ಲಿ ಸ್ನೇಹಿತರು ಮತ್ತು ಕುಟುಂಬ ಸದಸ್ಯರನ್ನು ಹೊಂದಿರುವವರಲ್ಲಿ ಭೀತಿಯನ್ನು ಉಂಟುಮಾಡುವ ಸಾಧ್ಯತೆಯಿದೆ ಎಂದು ಸಚಿವಾಲಯವು ತನ್ನ ನಿರ್ದೇಶನದಲ್ಲಿ ತಿಳಿಸಿದೆ”

ಮುಂದುವರಿದು, “ಸಾರ್ವಜನಿಕ ಹಿತದೃಷ್ಟಿಯಿಂದ, ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಇದೀಗ ಬಾರ್ಕ್ ಸಂಸ್ಥೆಗೆ ಸುದ್ದಿ ದೂರದರ್ಶನ ವಾಹಿನಿಗಳ ರೇಟಿಂಗ್ (ಟಿಆರ್‌ಪಿ) ವರದಿ ಮಾಡುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಾಲ್ಕು (4) ವಾರಗಳ ಕಾಲ ಅಥವಾ ಮುಂದಿನ ಆದೇಶದವರೆಗೆ, ಇವೆರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ತಡೆಹಿಡಿಯುವಂತೆ ನಿರ್ದೇಶಿಸಿದೆ” ಎಂದು ಹೇಳಿದೆ.

ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಕ್ಲಿಪ್‌ ಒಂದರಲ್ಲಿ, “ಇರಾನ್ ತನ್ನಲ್ಲಿರುವ ಅಮೆರಿಕ ರಾಯಭಾರ ಕಚೇರಿಯಲ್ಲಿ 66 ಅಮೆರಿಕನ್ ಪ್ರಜೆಗಳನ್ನು ಒತ್ತೆಯಾಳಾಗಿ ಇರಿಸಿಕೊಂಡಿದೆ” ಎಂದು ಆಜ್ ತಕ್ (Aaj Tak) ವಾಹಿನಿಯ ನಿರೂಪಕಿ ಸುಳ್ಳು ಪ್ರತಿಪಾದನೆ ಮಾಡಿರುವುದು ಕಂಡುಬಂದಿದೆ. ಆ ಸಮಯದಲ್ಲಿ ಚರ್ಚೆಯಲ್ಲಿದ್ದ ಪ್ಯಾನಲಿಸ್ಟ್ ಒಬ್ಬರು, ಇರಾನ್‌ನಲ್ಲಿ ಅಮೆರಿಕದ ರಾಯಭಾರ ಕಚೇರಿಯೇ ಇಲ್ಲ ಎಂಬ ಸತ್ಯವನ್ನು ತಿಳಿಸುವ ಮೂಲಕ ನಿರೂಪಕಿಯನ್ನು ತಿದ್ದಿದ್ದಾರೆ. ಈ ತಪ್ಪಾದ ವರದಿಗಾಗಿ ನಿರೂಪಕಿ ನಂತರ ಕ್ಷಮೆಯಾಚಿಸಿದ್ದಾರೆ.

ಆಲ್ಟ್‌ ನ್ಯೂಸ್‌ನ ಫ್ಯಾಕ್ಟ್‌ ಚೆಕ್ಕರ್ ಮೊಹಮ್ಮದ್ ಝುಬೈರ್ ಅವರು ಆಜ್‌ತಕ್ ವಾಹಿನಿಯ ಸುಳ್ಳು ವರದಿಯ ವಿಡಿಯೋ ಕ್ಲಿಪ್ ಅನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. 

ಆಲ್ಟ್ ನ್ಯೂಸ್ ವರದಿಯ ಪ್ರಕಾರ, ಆಕಾಶದಿಂದ ಸ್ಫೋಟಕಗಳನ್ನು ಹೋಲುವ ವಸ್ತುಗಳು ಬೀಳುತ್ತಿರುವ 15 ಸೆಕೆಂಡುಗಳ ದೃಶ್ಯಾವಳಿಯು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇದು ದುಬೈ ಮೇಲೆ ಇರಾನ್ ನಡೆಸಿದ ದಾಳಿ ಎಂದು ನೆಟ್ಟಿಗರು ಪ್ರತಿಪಾದಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ದುಬೈ ಪೊಲೀಸರು, ಇಂತಹ ನಕಲಿ ವಿಡಿಯೋಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಅಧಿಕೃತ ಪ್ರಕಟಣೆಗಳಿಗೆ ವಿರುದ್ಧವಾದ ಅಥವಾ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುವ ವದಂತಿ ಹಾಗೂ ಸುಳ್ಳು ಮಾಹಿತಿಯನ್ನು ಹಂಚಿಕೊಳ್ಳುವುದು ಯುಎಇ ಕಾನೂನಿನ ಅಡಿಯಲ್ಲಿ ನಿಷೇಧಿಸಲಾಗಿದೆ ಎಂದು ಅವರು ಎಚ್ಚರಿಸಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...