Homeಮುಖಪುಟಉತ್ತರ ಪ್ರದೇಶ: ದಲಿತ ಯುವಕನೊಂದಿಗೆ ಸಂಬಂಧ ಹೊಂದಿದ್ದಾಳೆಂದು ತನ್ನ ಅಕ್ಕನನ್ನೇ ಕೊಲೆಗೈದ ಅಪ್ರಾಪ್ತ ಬಾಲಕ

ಉತ್ತರ ಪ್ರದೇಶ: ದಲಿತ ಯುವಕನೊಂದಿಗೆ ಸಂಬಂಧ ಹೊಂದಿದ್ದಾಳೆಂದು ತನ್ನ ಅಕ್ಕನನ್ನೇ ಕೊಲೆಗೈದ ಅಪ್ರಾಪ್ತ ಬಾಲಕ

- Advertisement -
- Advertisement -

15 ವರ್ಷದ ಬಾಲಕಿಯೊಬ್ಬಳು ದಲಿತ ಯುವಕನೊಂದಿಗೆ ಸಂಬಂಧ ಹೊಂದಿದ್ದಾಳೆ ಎನ್ನುವ ಕಾರಣಕ್ಕೆ ಆಕೆಯನ್ನು ಅವರ ತಮ್ಮನೇ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.

ಈ ಘಟನೆ ಆಗಸ್ಟ್ 25ರಂದು ನಡೆದಿದ್ದು, ಮರುದಿನ 14 ವರ್ಷದ ಬಾಲಕ ಪೊಲೀಸರ ಮುಂದೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪ್ರಾಪ್ತ ಬಾಲಕಿಯು ಒಬಿಸಿ ವರ್ಗಕ್ಕೆ ಸೇರಿದವಳಾಗಿದ್ದು, ದಲಿತ ಹುಡುಗನೊಂದಿಗಿನ ಸಂಬಂಧವನ್ನು ಆಕೆಯ ಮನೆಯವರು ವಿರೋಧಿಸಿದ್ದರು ಎಂದು ತಿಳಿದುಬಂದಿದೆ.

”ಶುಕ್ರವಾರ ರಾತ್ರಿ, ತನ್ನ ಸಹೋದರಿ ದಲಿತ ಯುವಕರೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿರುವುದನ್ನು ನೋಡಿದ್ದೇನೆ ಎಂದು ಬಾಲಕ ತನ್ನ ಕುಟುಂಬ ಸದಸ್ಯರಿಗೆ ತಿಳಿಸಿದ್ದಾನೆ. ಕುಟುಂಬದ ಸದಸ್ಯರು ಹುಡುಗಿಯನ್ನು ಪ್ರಶ್ನಿಸಿದ್ದಾರೆ, ಅವಳು ತನ್ನ ಬಳಿ ಯಾವುದೇ ಸೆಲ್‌ಫೋನ್ ಇಲ್ಲ ಎಂದು ಹೇಳಿದ್ದಾಳೆ. ನಂತರ ಹುಡುಗಿಯ ತಾಯಿ ಅವಳ ಬಟ್ಟೆಗಳಲ್ಲಿ ಹುಡುಕಿ ಮೊಬೈಲ್‌ನ್ನು ಕಿತ್ತುಕೊಂಡಿದ್ದಾರೆ. ಆನಂತರ ಕುಟುಂಬದ ಸದಸ್ಯರು ಆಕೆಯ ಕೈಗಳನ್ನು ಕಟ್ಟಿ ಥಳಿಸಲು ಆರಂಭಿಸಿದ್ದಾರೆ. ಆಕೆಯ ಸಹೋದರರು ಕೊಡಲಿ ಮತ್ತು ಸುತ್ತಿಗೆಯಿಂದ ಹೊಡೆದಿದ್ದಾರೆ ಎಂದು” ಎಂದು ಸ್ಥಳೀಯ ಪೋಲೀಸ್ ಉಸ್ತುವಾರಿ ಸ್ಟೇಷನ್ ಹೌಸ್ ಹೇಳಿದ್ದಾರೆ.

ಮರುದಿನ ಬೆಳಗ್ಗೆ ಅಪ್ರಾಪ್ತ ಸಹೋದರ ಪೊಲೀಸ್ ಠಾಣೆಗೆ ಬಂದು ತನ್ನ ಅಕ್ಕನನ್ನು ಕೊಂದಿರುವುದಾಗಿ ಹೇಳಿದ್ದಾನೆ. ಪೊಲೀಸ್ ತಂಡವು ಬಾಲಕಿಯ ಮನೆಗೆ ತೆರಳಿ ಶವವನ್ನು ಪರೀಕ್ಷಗೆ ಕಳುಹಿಸಿದ್ದಾರೆ. ಕುಟುಂಬದ ಇತರ ಮೂವರು ಸದಸ್ಯರು – ಬಾಲಕನ ತಂದೆ, ತಾಯಿ ಮತ್ತು 19 ವರ್ಷದ ಸಹೋದರನನ್ನು ಸಹ ಪೊಲೀಸರು ಬಂಧಿಸಿದ್ದಾರೆ.

”ಬಾಲಕನ ತಂದೆ ಮತ್ತು ಹಿರಿಯ ಸಹೋದರ ತಪ್ಪೊಪ್ಪಿಕೊಂಡಿದ್ದಾರೆ. ಅಪ್ರಾಪ್ತ ಬಾಲಕನನ್ನು ಬಾಲನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗುವುದು” ಎಂದು ಪೊಲೀಸ್ ವರಿಷ್ಠಾಧಿಕಾರಿ ಬ್ರಿಜೇಶ್ ಕುಮಾರ್ ಶ್ರೀವಾಸ್ತವ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...