Homeಮುಖಪುಟಯುಪಿ-2022: ಅಖಿಲೇಶ್‌ ವಿರುದ್ಧ ಅಭ್ಯರ್ಥಿಗಳನ್ನು ಕಣಕ್ಕಿಳಿಸದ ಕಾಂಗ್ರೆಸ್!

ಯುಪಿ-2022: ಅಖಿಲೇಶ್‌ ವಿರುದ್ಧ ಅಭ್ಯರ್ಥಿಗಳನ್ನು ಕಣಕ್ಕಿಳಿಸದ ಕಾಂಗ್ರೆಸ್!

- Advertisement -
- Advertisement -

ರಾಜಕೀಯ ಸೌಜನ್ಯವನ್ನು ಉಲ್ಲೇಖಿಸಿ ಕಾಂಗ್ರೆಸ್‌ ಪಕ್ಷವು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಪ್ರಗತಿಶೀಲ ಸಮಾಜವಾದಿ ಪಕ್ಷದ ಅಧ್ಯಕ್ಷ ಶಿವಪಾಲ್ ಯಾದವ್ ಸ್ಪರ್ಧಿಸುತ್ತಿರುವ ಯುಪಿಯ ಕರ್ಹಾಲ್ (ಮೈನ್‌ಪುರಿ) ಮತ್ತು ಜಸ್ವಂತ್ ನಗರ (ಇಟಾವಾ) ಕ್ಷೇತ್ರಗಳಿಂದ ಯಾವುದೆ ನಾಮಪತ್ರವನ್ನು ಸಲ್ಲಿಸಲಿಲ್ಲ.

ಈ ಎರಡು ಕ್ಷೇತ್ರಗಳಲ್ಲಿ ಮೂರನೇ ಹಂತದಲ್ಲಿ ಮತದಾನ ನಡೆಯಲಿದ್ದು, ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಮಂಗಳವಾರ ಕೊನೆಯ ದಿನವಾಗಿತ್ತು. ಮೂರನೇ ಹಂತದ ಮತದಾನ ಫೆಬ್ರವರಿ 20 ರಂದು ನಡೆಯಲಿದೆ.

ಇದನ್ನೂ ಓದಿ: ಯುಪಿ ಚುನಾವಣೆ: BJP ಜೊತೆ ಮೈತ್ರಿ ವಿಫಲ; JDUನಲ್ಲಿ ಹೆಚ್ಚುತ್ತಿರುವ ಆಂತರಿಕ ಬಿರುಕು!

ಯುಪಿಯಲ್ಲಿ ಕಳೆದ ಕೆಲವು ಚುನಾವಣೆಗಳಲ್ಲಿ ಎರಡು ಪಕ್ಷಗಳು ಇತರ ಪಕ್ಷದ ರಾಷ್ಟ್ರೀಯ ನಾಯಕರ ವಿರುದ್ಧ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರಲಿಲ್ಲ. 2019 ರ ಲೋಕಸಭಾ ಚುನಾವಣೆಯಲ್ಲಿ, ರಾಹುಲ್ ಗಾಂಧಿ ಮತ್ತು ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಸ್ಪರ್ಧಿಸಿದ್ದ ಅಮೇಥಿ ಮತ್ತು ರಾಯ್ ಬರೇಲಿ ಕ್ಷೇತ್ರಗಳಿಂದ ಎಸ್‌ಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರಲಿಲ್ಲ.

ಕರ್ಹಾಲ್ ಕ್ಷೇತ್ರದಿಂದ ಜ್ಞಾನವತಿ ಯಾದವ್ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸುವುದಾಗಿ ಪಕ್ಷವು ಈ ಹಿಂದೆ ಘೋಷಿಸಿತ್ತು. ಆದರೆ ಅಖಿಲೇಶ್‌ ಅವರು ಅಲ್ಲಿಂದ ಸ್ಪರ್ಧಿಸುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷವು ಘೋಷಿಸಿದ ನಂತರ ಕಾಂಗ್ರೆಸ್‌ ತನ್ನ ಸ್ಪರ್ಧಿಯನ್ನು ಹಿಂದೆ ಸರಿಸಿದೆ. ಕಾಂಗ್ರೆಸ್ ಜಸ್ವಂತ್ ನಗರದಿಂದ ಯಾವುದೇ ಅಭ್ಯರ್ಥಿಯನ್ನು ಘೋಷಿಸಿರಲಿಲ್ಲ, ಈ ಕ್ಷೇತ್ರದಲ್ಲಿ ಅಲ್ಲಿ ಶಿವಪಾಲ್ ಎಸ್‌ಪಿ ಟಿಕೆಟ್‌ನಲ್ಲಿ ಸ್ಪರ್ಧಿಸಲಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ: ಬಿಜೆಪಿ ಮೈತ್ರಿ ಆಹ್ವಾನ ತಿರಸ್ಕರಿಸಿದ RLD ಮುಖ್ಯಸ್ಥ ಜಯಂತ್ ಚೌಧರಿ

ಮೈನ್‌ಪುರಿಯ ಕಾಂಗ್ರೆಸ್‌ ಸಂಯೋಜಕ ಮನೀಷ್ ಶಾ, ಇತರ ಪಕ್ಷಕ್ಕೆ ಗೌರವ ನೀಡುವ ಸಲುವಾಗಿ ಕಾಂಗ್ರೆಸ್ ಪಕ್ಷವು ಈ ಕ್ಷೇತ್ರಗಳನ್ನು ತೊರೆಯಲಿದೆ ಎಂದು ಖಚಿತಪಡಿಸಿದ್ದಾರೆ. “ನಾವು ಇಲ್ಲಿಂದ ನಾಮಪತ್ರ ಸಲ್ಲಿಸಬಾರದು ಎಂದು ನಮಗೆ ಹೈಕಮಾಂಡ್‌ನಿಂದ ಸೂಚನೆ ಬಂದಿದೆ. ಹೀಗಾಗಿ ನಾವು ಹಾಗೆ ಮಾಡಿದ್ದೇವೆ. ಇದು ರಾಜಕೀಯ ಸೌಜನ್ಯದ ಭಾಗವಾಗಿದೆ” ಮನೀಷ್‌ ಶಾ ಹೇಳಿದ್ದಾರೆ.

ಎಸ್‌ಪಿ ರಾಷ್ಟ್ರೀಯ ವಕ್ತಾರ ರಾಜೇಂದ್ರ ಚೌಧರಿ ಕೂಡ ಇದನ್ನು “ರಾಜಕೀಯ ಸೌಜನ್ಯ” ಎಂದು ಕರೆದಿದ್ದಾರೆ. “ಈ ಹಿಂದೆಯೂ ಇದು ಸಂಭವಿಸಿದೆ. ಎರಡೂ ಪಕ್ಷಗಳು ಜಾತ್ಯಾತೀತ ಶಕ್ತಿಯಾಗಿದ್ದು, ಬಿಜೆಪಿಯ ವಿರೋಧಿಗಳಾಗಿದ್ದೇವೆ. ಹಾಗಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರುವುದು ರಾಜಕೀಯ ಸೌಜನ್ಯದ ಭಾಗವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮೌನಕ್ಕೆ ಶರಣಾದ ಯುಪಿ ಮತದಾರರು, ಆತಂಕದಲ್ಲಿ ಅಭ್ಯರ್ಥಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...