Homeಮುಖಪುಟಉತ್ತರ ಪ್ರದೇಶದ ಪತ್ರಕರ್ತ ರಾಕೇಶ್ ಸಿಂಗ್ ಹತ್ಯೆ ಪ್ರಕರಣ, ಮೂವರ ಬಂಧನ

ಉತ್ತರ ಪ್ರದೇಶದ ಪತ್ರಕರ್ತ ರಾಕೇಶ್ ಸಿಂಗ್ ಹತ್ಯೆ ಪ್ರಕರಣ, ಮೂವರ ಬಂಧನ

ಆರೋಪಿ ಕೇಶವಾನಂದ್ ಮಿಶ್ರಾ ಅವರ ತಾಯಿ ಹಳ್ಳಿಯ ಮುಖ್ಯಸ್ಥರಾಗಿದ್ದು, ಹಣವನ್ನು ಅಕ್ರಮವಾಗಿ ಬಳಸುತ್ತಿರುವುದನ್ನು ಪತ್ರಕರ್ತ ರಾಕೇಶ್ ಸಿಂಗ್ ಬಹಿರಂಗಪಡಿಸಿದ್ದರು.

- Advertisement -
- Advertisement -

ಉತ್ತರ ಪ್ರದೇಶದ ಬಲರಾಂಪುರದಲ್ಲಿ ನಡೆದಿದ್ದ 35 ವರ್ಷದ ಪತ್ರಕರ್ತ ಮತ್ತು ಆತನ ಸ್ನೇಹಿತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಬಲರಾಂಪುರ ಪೊಲೀಸರು ತಿಳಿಸಿದ್ದಾರೆ.

ಪತ್ರಕರ್ತ ರಾಕೇಶ್ ಸಿಂಗ್ ಮತ್ತು ಅವರ ಸ್ನೇಹಿತ ಪಿಂಟು ಸಾಹು ಅವರನ್ನು ಬಹದ್ದೂರ್‌ಪುರ ಕ್ರಾಸಿಂಗ್ ಬಳಿ ಕೊಲೆ ಮಾಡಲಾಗಿತ್ತು. ಆರೋಪಿಗಳಾದ ಲಲಿತ್ ಮಿಶ್ರಾ, ಕೇಶವಾನಂದ್ ಮಿಶ್ರಾ ಅಲಿಯಾಸ್ ರಿಂಕು ಮತ್ತು ಅಕ್ರಮ್ ಅಲಿ ಅವರನ್ನು ಬಂಧಿಸಲಾಗಿದೆ. ಈ ಮೂವರು ತಮ್ಮ ಅಪರಾಧವನ್ನು ಒಪ್ಪಿಕೊಂಡಿದ್ದಾರೆ   ಎಂದು ಬಲರಾಂಪುರದ ಪೊಲೀಸ್ ವರಿಷ್ಠಾಧಿಕಾರಿ ದೇವರಂಜನ್ ವರ್ಮಾ ತಿಳಿಸಿದ್ದಾರೆ.

ಆರೋಪಿ ಕೇಶವಾನಂದ್ ಮಿಶ್ರಾ ಅವರ ತಾಯಿ ಹಳ್ಳಿಯ ಮುಖ್ಯಸ್ಥರಾಗಿದ್ದು, ಹಳ್ಳಿಯ ಹಣವನ್ನು ಅಕ್ರಮವಾಗಿ ಬಳಸುತ್ತಿರುವುದನ್ನು ಪತ್ರಕರ್ತ ರಾಕೇಶ್ ಸಿಂಗ್ ಬಹಿರಂಗಪಡಿಸಿದ್ದಾರೆ ಎಂದು ದೇವರಂಜನ್ ವರ್ಮಾ ಹೇಳಿದ್ದಾರೆ.

ಈ ಘಟನೆಯಿಂದ ದ್ವೇಷ ಸಾಧಿಸುತ್ತಿದ್ದ ಆರೋಪಿಗಳು, ಮಾತುಕತೆಯ ನೆಪದಲ್ಲಿ ಪತ್ರಕರ್ತರ ಮನೆಗೆ ಹೋಗಿದ್ದಾರೆ. ನಂತರ ಆರೋಪಿಗಳು ರಾಕೇಶ್ ಸಿಂಗ್ ಮತ್ತು ಅವರ ಸ್ನೇಹಿತ ಪಿಂಟು ಸಾಹುರನ್ನು ಮದ್ಯ ಸೇವಿಸುವಂತೆ ಮಾಡಿ, ತದನಂತರ ಹತ್ಯೆ ಮಾಡಿದ್ದಾರೆ ಎಂದು ಎಸ್‌ಪಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕೃಷಿ ಕಾಯ್ದೆ ರದ್ದುಗೊಳಿಸದಿದ್ದರೆ ಎನ್‌ಡಿಎ ತೊರೆಯುತ್ತೇವೆ: ಅಮಿತ್ ಶಾಗೆ ಪತ್ರ ಬರೆದ ಬಿಜೆಪಿಯ ಮತ್ತೊಂದು…

ಹತ್ಯೆ ಮಾಡಿದ ನಂತರ ಮನೆಯನ್ನು ಸುಟ್ಟುಹಾಕಲು ಆಲ್ಕೋಹಾಲ್ ಆಧಾರಿತ ಸ್ಯಾನಿಟೈಸರ್ ಅನ್ನು ಬಳಸಲಾಗಿದ್ದು, ಇದರಿಂದಾಗಿ ಕೊಲೆ  ಆಕಸ್ಮಿಕ ಅಪಘಾತದಂತೆ ಕಾಣುತ್ತದೆ ಎಂದು ಆರೋಪಿಗಳು ಯೋಜನೆ ಹಾಕಿಕೊಂಡಿದ್ದು.

“ರಾಸಾಯನಿಕ ಬಳಸಿ ಮನೆ ಸುಡಲು, ಲಲಿತ್ ಮಿಶ್ರಾ ಮತ್ತು ಕೇಶವಾನಂದ್ ಮಿಶ್ರಾ ಈ ರೀತಿಯ ಘಟನೆಗಳನ್ನು ನಿರ್ವಹಿಸುವಲ್ಲಿ ಪರಿಣತರಾಗಿರುವ ಅಕ್ರಮ್ ಅಲಿ ಸಹಾಯ ಪಡೆದಿದ್ದರು” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಬಲರಾಂಪುರ ಜಿಲ್ಲಾಡಳಿತ ಪತ್ರಕರ್ತನ ಪತ್ನಿಗೆ ಪರಿಹಾರವಾಗಿ 5 ಲಕ್ಷ ರೂಪಾಯಿಯ ಚೆಕ್ ಹಸ್ತಾಂತರಿಸಿತ್ತು. ಚೆಕ್ ಅನ್ನು ಸಂತ್ರಸ್ತ ಕುಟುಂಬಕ್ಕೆ ಶಾಸಕ ಪಾಲ್ತುರಾಮ್ ನೀಡಿದ್ದಾರೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪತ್ರಕರ್ತ ರಾಕೇಶ್ ಸಿಂಗ್ ಪತ್ನಿ ವಿಶಾ ಸಿಂಗ್ ಅವರಿಗೆ ಉದ್ಯೋಗ ನೀಡುವುದಾಗಿ ಬಲರಾಂಪುರ್ ಚಿನಿ ಮಿಲ್ಸ್‌ನ ಆಡಳಿತವು ಜಿಲ್ಲಾಡಳಿತಕ್ಕೆ ಭರವಸೆ ನೀಡಿದೆ. ಜೊತೆಗೆ ಹೆಣ್ಣುಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದಾಗಿ ಆಡಳಿತ ಹೇಳಿದೆ.


ಇದನ್ನೂ ಓದಿ: ರೈತರ ಪರವಾಗಿ ನಿಲ್ಲುವುದನ್ನೇ ರಾಜಕಾರಣವೆನ್ನುವುದಾದರೆ, ಹೌದು ನಾವು ತಪ್ಪಿತಸ್ಥರೇ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....